AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video : ಚಿರತೆಯೊಂದಿಗೆ ಸೆಲ್ಫೀ ತೆಗೆದುಕೊಂಡ ಗೈಡ್​, ಕೋಪಗೊಂಡ ನೆಟ್ಟಿಗರು

Selfie with Leopard : ಎಂಥ ಅಪಾಯಕಾರಿ ವಿಡಿಯೋ ಇದು ಅಂತ ಕೆಲವರು, ಈತನ ಶೌರ್ಯ ಮೆಚ್ಚಲೇಬೇಕು ಅಂತ ಇನ್ನೂ ಕೆಲವರು. ಏನಂತೀರಿ ನೀವಿದಕ್ಕೆ?

Viral Video : ಚಿರತೆಯೊಂದಿಗೆ ಸೆಲ್ಫೀ ತೆಗೆದುಕೊಂಡ ಗೈಡ್​, ಕೋಪಗೊಂಡ ನೆಟ್ಟಿಗರು
ಚಿರತೆಯೊಂದಿಗೆ ಸೆಲ್ಫೀ ತೆಗೆದುಕೊಳ್ಳುತ್ತಿರುವ ಸಫಾರಿ ಗೈಡ್
TV9 Web
| Edited By: ಶ್ರೀದೇವಿ ಕಳಸದ|

Updated on: Sep 24, 2022 | 10:20 AM

Share

Viral Video : ಅಳಿವಿನಂಚಿನಲ್ಲಿರುವ ಚಿರತೆಗಳ ವಿಷಯ ಕಳೆದ ಕೆಲ ದಿನಗಳಿಂದ ಸಾಮಾಜಿಕ ಜಾಲತಾಣದಲ್ಲಿ  ಚರ್ಚೆಯಲ್ಲಿದೆ. ಹೀಗಿರುವಾಗಲೇ ಚಿರತೆಯ ವಿಡಿಯೋ ಒಂದು ನೆಟ್ಟಿಗರ ಗಮನ ಸೆಳೆದಿದೆ. ಐಎಫ್‌ಎಸ್ ಅಧಿಕಾರಿ ಕ್ಲೆಮೆಂಟ್ ಬೆನ್ ಟ್ವಿಟರ್‌ನಲ್ಲಿ ಈ ವಿಡಿಯೋ ಹಂಚಿಕೊಂಡಿದ್ದಾರೆ. ಈ ವಾಹನ ಕಾಡಿನಲ್ಲಿ ಸಫಾರಿಗೆ ಹೊರಟಿದೆ. ಇದರ ತುಂಬಾ ಪ್ರವಾಸಿಗರಿದ್ಧಾರೆ. ಮಧ್ಯೆ  ಚಿರತೆಯೊಂದು ಅಡ್ಡ ಬರುತ್ತದೆ. ಕೆಲ ಸೆಕೆಂಡುಗಳಲ್ಲಿ ವಾಹನದ ಮೇಲೆ ಹಾರುತ್ತದೆ ಚಿರತೆ. ಪ್ರವಾಸಿಗರು ಭಯಭೀತರಾಗುತ್ತಾರೆ. ಸನ್​ ರೂಫ್​ನಿಂದ ಇಣುಕಿದಾಗಲಂತೂ ಜೀವವೇ ಬಾಯಿಗೆ ಬಂದಂತಾಗುತ್ತದೆ. ಅಂಥದ್ದರಲ್ಲಿ ಸಫಾರಿ ಗೈಡ್​ ಎದ್ದುನಿಂತು ಚಿರತೆಯೊಂದಿಗೆ ಸೆಲ್ಫಿ ತೆಗೆದುಕೊಳ್ಳಲಾರಂಭಿಸುತ್ತಾನೆ.

ನೋಡಿದ ಯಾರಿಗೂ ಇದು ಎಂಥ ಅಪಾಯಕಾರಿ ಸ್ಥಿತಿ ಅನ್ನಿಸದೇ ಇರದು. ಇನ್ನು ಹೀಗೆ ವಾಹನಗಳನ್ನು ಏರಿದ ಚಿರತೆಗಳು ಕೆಳಗಿಳಿಯಲು ಸಾಮಾನ್ಯವಾಗಿ ಸಾಕಷ್ಟು ಸಮಯವನ್ನು ತೆಗೆದುಕೊಳ್ಳುತ್ತವೆ. ಆದರೆ ಇಲ್ಲಿ ಈ ಚಿರತೆ ಎಷ್ಟು ಸಮಯ ತೆಗೆದುಕೊಂಡಿತು ಎನ್ನುವುದು ತಿಳಿದುಬಂದಿಲ್ಲ. ಸೆಲ್ಫೀ ತೆಗೆದುಕೊಂಡ ನಂತರ ಈ ವಿಡಿಯೋ ಥಟ್ಟನೆ ಮುಗಿದುಬಿಡುತ್ತದೆ.  78,000ಕ್ಕೂ ಹೆಚ್ಚು ವೀಕ್ಷಣೆಗಳನ್ನು ಮತ್ತು ಅನೇಕ ರೀತಿಯ ಪ್ರತಿಕ್ರಿಯೆಗಳನ್ನು ಈ ವಿಡಿಯೋ ಪಡೆದಿದೆ.

ಸಫಾರಿ ಗೈಡ್​ನ ಶೌರ್ಯಕ್ಕೆ ನೆಟ್ಟಿಗರು ಬೆರಗಾಗಿದ್ದಾರಾದರೂ ಬಹಳಷ್ಟು ಜನರು ಈ ನಡೆ ಅಪಾಯಕಾರಿ ಎಂದಿದ್ದಾರೆ.

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Follow Us
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ
ಲಿಂಗನಮಕ್ಕಿ ಡ್ಯಾಮ್ ಹಿನ್ನೀರು ಇಳಿಕೆ: ನಿಂತಿದ್ದ ಲಾಂಚ್ ಮತ್ತೆ ಶುರು
ಲಿಂಗನಮಕ್ಕಿ ಡ್ಯಾಮ್ ಹಿನ್ನೀರು ಇಳಿಕೆ: ನಿಂತಿದ್ದ ಲಾಂಚ್ ಮತ್ತೆ ಶುರು
ಪೈಪ್ ಲೈನ್ ಕಾಮಗಾರಿ: ಗುಂಡಿಗೆ ಸಿಲುಕಿದ BMTC ಬಸ್, ಸಂಚಾರಕ್ಕೆ ಅಡ್ಡಿ
ಪೈಪ್ ಲೈನ್ ಕಾಮಗಾರಿ: ಗುಂಡಿಗೆ ಸಿಲುಕಿದ BMTC ಬಸ್, ಸಂಚಾರಕ್ಕೆ ಅಡ್ಡಿ