AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video : ಚಿರತೆಯೊಂದಿಗೆ ಸೆಲ್ಫೀ ತೆಗೆದುಕೊಂಡ ಗೈಡ್​, ಕೋಪಗೊಂಡ ನೆಟ್ಟಿಗರು

Selfie with Leopard : ಎಂಥ ಅಪಾಯಕಾರಿ ವಿಡಿಯೋ ಇದು ಅಂತ ಕೆಲವರು, ಈತನ ಶೌರ್ಯ ಮೆಚ್ಚಲೇಬೇಕು ಅಂತ ಇನ್ನೂ ಕೆಲವರು. ಏನಂತೀರಿ ನೀವಿದಕ್ಕೆ?

Viral Video : ಚಿರತೆಯೊಂದಿಗೆ ಸೆಲ್ಫೀ ತೆಗೆದುಕೊಂಡ ಗೈಡ್​, ಕೋಪಗೊಂಡ ನೆಟ್ಟಿಗರು
ಚಿರತೆಯೊಂದಿಗೆ ಸೆಲ್ಫೀ ತೆಗೆದುಕೊಳ್ಳುತ್ತಿರುವ ಸಫಾರಿ ಗೈಡ್
TV9 Web
| Edited By: |

Updated on: Sep 24, 2022 | 10:20 AM

Share

Viral Video : ಅಳಿವಿನಂಚಿನಲ್ಲಿರುವ ಚಿರತೆಗಳ ವಿಷಯ ಕಳೆದ ಕೆಲ ದಿನಗಳಿಂದ ಸಾಮಾಜಿಕ ಜಾಲತಾಣದಲ್ಲಿ  ಚರ್ಚೆಯಲ್ಲಿದೆ. ಹೀಗಿರುವಾಗಲೇ ಚಿರತೆಯ ವಿಡಿಯೋ ಒಂದು ನೆಟ್ಟಿಗರ ಗಮನ ಸೆಳೆದಿದೆ. ಐಎಫ್‌ಎಸ್ ಅಧಿಕಾರಿ ಕ್ಲೆಮೆಂಟ್ ಬೆನ್ ಟ್ವಿಟರ್‌ನಲ್ಲಿ ಈ ವಿಡಿಯೋ ಹಂಚಿಕೊಂಡಿದ್ದಾರೆ. ಈ ವಾಹನ ಕಾಡಿನಲ್ಲಿ ಸಫಾರಿಗೆ ಹೊರಟಿದೆ. ಇದರ ತುಂಬಾ ಪ್ರವಾಸಿಗರಿದ್ಧಾರೆ. ಮಧ್ಯೆ  ಚಿರತೆಯೊಂದು ಅಡ್ಡ ಬರುತ್ತದೆ. ಕೆಲ ಸೆಕೆಂಡುಗಳಲ್ಲಿ ವಾಹನದ ಮೇಲೆ ಹಾರುತ್ತದೆ ಚಿರತೆ. ಪ್ರವಾಸಿಗರು ಭಯಭೀತರಾಗುತ್ತಾರೆ. ಸನ್​ ರೂಫ್​ನಿಂದ ಇಣುಕಿದಾಗಲಂತೂ ಜೀವವೇ ಬಾಯಿಗೆ ಬಂದಂತಾಗುತ್ತದೆ. ಅಂಥದ್ದರಲ್ಲಿ ಸಫಾರಿ ಗೈಡ್​ ಎದ್ದುನಿಂತು ಚಿರತೆಯೊಂದಿಗೆ ಸೆಲ್ಫಿ ತೆಗೆದುಕೊಳ್ಳಲಾರಂಭಿಸುತ್ತಾನೆ.

ನೋಡಿದ ಯಾರಿಗೂ ಇದು ಎಂಥ ಅಪಾಯಕಾರಿ ಸ್ಥಿತಿ ಅನ್ನಿಸದೇ ಇರದು. ಇನ್ನು ಹೀಗೆ ವಾಹನಗಳನ್ನು ಏರಿದ ಚಿರತೆಗಳು ಕೆಳಗಿಳಿಯಲು ಸಾಮಾನ್ಯವಾಗಿ ಸಾಕಷ್ಟು ಸಮಯವನ್ನು ತೆಗೆದುಕೊಳ್ಳುತ್ತವೆ. ಆದರೆ ಇಲ್ಲಿ ಈ ಚಿರತೆ ಎಷ್ಟು ಸಮಯ ತೆಗೆದುಕೊಂಡಿತು ಎನ್ನುವುದು ತಿಳಿದುಬಂದಿಲ್ಲ. ಸೆಲ್ಫೀ ತೆಗೆದುಕೊಂಡ ನಂತರ ಈ ವಿಡಿಯೋ ಥಟ್ಟನೆ ಮುಗಿದುಬಿಡುತ್ತದೆ.  78,000ಕ್ಕೂ ಹೆಚ್ಚು ವೀಕ್ಷಣೆಗಳನ್ನು ಮತ್ತು ಅನೇಕ ರೀತಿಯ ಪ್ರತಿಕ್ರಿಯೆಗಳನ್ನು ಈ ವಿಡಿಯೋ ಪಡೆದಿದೆ.

ಸಫಾರಿ ಗೈಡ್​ನ ಶೌರ್ಯಕ್ಕೆ ನೆಟ್ಟಿಗರು ಬೆರಗಾಗಿದ್ದಾರಾದರೂ ಬಹಳಷ್ಟು ಜನರು ಈ ನಡೆ ಅಪಾಯಕಾರಿ ಎಂದಿದ್ದಾರೆ.

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್