AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಸೀದಿ ಉತ್ಖನನ ವೇಳೆ ರಾಮ-ಸೀತಾ ವಿಗ್ರಹ ಪತ್ತೆ, ದೇವಾಲಯ ನಿರ್ಮಾಣಕ್ಕೆ ಹಿಂದೂಗಳ ಆಗ್ರಹ

ಮಧ್ಯಪ್ರದೇಶದ ಸಾಗರ್‌ನ ಮಸೀದಿಯೊಂದರ ಉತ್ಖನನದಲ್ಲಿ ಸೀತಾ-ರಾಮ ವಿಗ್ರಹಗಳು ಕಂಡುಬಂದಿವೆ. ಈ ಸ್ಥಳದಲ್ಲಿ ಹಿಂದೆ ದೇವಾಲಯವಿತ್ತು ಎಂದು ಹಿಂದೂ ಸಮುದಾಯವು ದೇವಾಲಯ ನಿರ್ಮಾಣಕ್ಕೆ ಆಗ್ರಹಿಸಿದೆ. ಘಟನೆ ಸ್ಥಳದಲ್ಲಿ ಹಿಂದೂ ಮುಖಂಡರು ಪೂಜೆ ಸಲ್ಲಿಸಲು ವೇದಿಕೆ ನಿರ್ಮಿಸಿದ್ದು, ಇದಕ್ಕೆ ಮುಸ್ಲಿಮರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಪರಿಸ್ಥಿತಿ ಉದ್ವಿಗ್ನಗೊಂಡಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ನಿಯೋಜನೆಗೊಂಡಿದ್ದಾರೆ. ಈ ವಿಚಾರ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ.

ಮಸೀದಿ ಉತ್ಖನನ ವೇಳೆ ರಾಮ-ಸೀತಾ ವಿಗ್ರಹ ಪತ್ತೆ, ದೇವಾಲಯ ನಿರ್ಮಾಣಕ್ಕೆ ಹಿಂದೂಗಳ ಆಗ್ರಹ
ವೈರಲ್​​ ವಿಡಿಯೋ
ಅಕ್ಷಯ್​ ಪಲ್ಲಮಜಲು​​
|

Updated on: Nov 22, 2025 | 5:52 PM

Share

ಮಧ್ಯಪ್ರದೇಶದ (Madhya Pradesh) ಸಾಗರ್ ಎಂಬಲ್ಲಿ ಮಸೀದಿಯೊಂದರ ಉತ್ಖನನದ (Sagar mosque excavation) ವೇಳೆ ಸೀತಾ ಮತ್ತು ರಾಮನ ವಿಗ್ರಹಗಳು ಕಂಡುಬಂದಿವೆ. ಇದೀಗ ಈ ಸುದ್ದಿ ಎಲ್ಲ ಕಡೆ ವೈರಲ್​​ ಆಗಿದ್ದು, ಸ್ಥಳಕ್ಕೆ ಹಿಂದೂ ಸಮುದಾಯದ ಮುಖಂಡರು ಹಾಗೂ ಜನರುನ ಕೂಡ ಆಗಮಿಸಿದ್ದರು. ಸಾಗರ್‌ನ ಪಪ್ಪೆಟ್ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಸಂಸ್ಕೃತ ಬಚಾವೊ ಮಂಚ್‌ನ ನಾಯಕ ಈ ಬಗ್ಗೆ ವಿಡಿಯೋವೊಂದನ್ನು ಹಂಚಿಕೊಂಡಿದ್ದು, ಈ ಪ್ರದೇಶದಲ್ಲಿ ಒಂದು ಕಾಲದಲ್ಲಿ ದೇವಾಲಯವಿತ್ತು ಎಂಬುದು ಸಾಬೀತಾಗಿದೆ. ಈ ಸ್ಥಳದಲ್ಲಿ ಮತ್ತೆ ದೇವಾಲಯವನ್ನು ನಿರ್ಮಿಸಬೇಕು ಎಂಬುದು ಹಿಂದೂಗಳ ಬಯಕೆ ಇದೆ. ಇಲ್ಲಿ ಒಂದು ಕಾಲದಲ್ಲಿ ದೇವಾಲಯವಿತ್ತು. ನಂತರದಲ್ಲಿ ಅದನ್ನು ಮುಸ್ಲಿಂ ಸಮುದಾಯದವರು ಆಕ್ರಮಿಸಿಕೊಂಡಿದ್ದರು ಎಂದು ಹೇಳಿದ್ದಾರೆ.

ಈ ವಿಚಾರ ತಿಳಿದು ನೂರಾರು ಹಿಂದೂಗಳು ಸ್ಥಳಕ್ಕೆ ಧಾವಿಸಿದ್ದರು. ಇದೇ ವೇಳೆ ಮುಸ್ಲಿಂ ಸಮುದಾಯದ ನಾಯಕರು ಕೂಡ ಸ್ಥಳಕ್ಕೆ ಬಂದಿದ್ದು, ಪರಿಸ್ಥಿತಿ ಉದ್ವಿಗ್ನವಾಗಿತ್ತು. ಇನ್ನು ವಿಗ್ರಹಕ್ಕೆ  ಹಿಂದೂ ನಾಯಕರು ಪೂಜೆ ನೆರವೇರಿಸಿದರು . ಪೂಜೆ ಮಾಡಲು ಅಲ್ಲೇ ಒಂದು ಸಣ್ಣ ವೇದಿಕೆಯನ್ನು ಕೂಡ ನಿರ್ಮಿಸಿದ್ದರು. ಆದರೆ ಮುಸ್ಲಿಮರು ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದು, ಇದೀಗ ಈ ಘಟನೆ ಭಾರೀ ಗದ್ದಲಕ್ಕೆ ಕಾರಣವಾಗಿದೆ.

ಇದನ್ನೂ ಓದಿ: ಇಟಾಲಿಯನ್ ಕಾನ್ಸುಲ್ ಜನರಲ್ ಹೃದಯ ಗೆದ್ದ ಬೆಂಗಳೂರು ಮಸಾಲೆ ದೋಸೆ

ವೈರಲ್​​ ಪೋಸ್ಟ್​​ ಇಲ್ಲಿದೆ ನೋಡಿ:

ಇಲ್ಲಿರುವ ವೇದಿಕೆಯನ್ನು ತೆಗೆಯಬೇಕು ಎಂದು ಮುಸ್ಲಿಮರು ವಿರೋಧ ವ್ಯಕ್ತಪಡಿಸಿದ್ದು, ಹಿಂದೂ ನಾಯಕರು ಯಾವುದೇ ಕಾರಣಕ್ಕೂ ಈ ವೇದಿಕೆಯನ್ನು ತೆಗೆಯಲು ಬಿಡುವುದಿಲ್ಲ ಎಂದು ಹೇಳಿದ್ದಾರೆ. ಪರಿಸ್ಥಿತಿಯನ್ನು ನಿಭಾಯಿಸಲು ಪೊಲೀಸರು ಮಧ್ಯಪ್ರವೇಶಿಸಿ, ಯಾವುದೇ ಅಹಿತಕರ ಘಟನೆ ನಡೆಯದಂತೆ ಗ್ರಾಮದಲ್ಲಿ ಪೊಲೀಸ್​​​ ಸಿಬ್ಬಂದಿಗಳನ್ನು ನಿಯೋಜಿಸಿದ್ದಾರೆ. ಅಧಿಕಾರಿಗಳು ಪರಿಸ್ಥಿತಿಯನ್ನು ನಿಯಂತ್ರಿಸಲು ಮತ್ತು ಎರಡು ಸಮುದಾಯಗಳ ನಡುವೆ ಯಾವುದೇ ಘರ್ಷಣೆಯನ್ನು ತಡೆಯಲು ಪ್ರಯತ್ನಿಸುತ್ತಿದ್ದಾರೆ. ಈ ಬಗ್ಗೆ ಸೋಶಿಯಲ್​​ ಮೀಡಿಯಾದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

ವೈರಲ್​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮಲ್ಲಿಕಾರ್ಜುನ ಮುತ್ಯಾ ಪರ ಭಕ್ತರ ಸಭೆ, ಜಿಲ್ಲಾಡಳಿತಕ್ಕೆ 2 ದಿನ ಡೆಡ್​​ಲೈನ್
ಮಲ್ಲಿಕಾರ್ಜುನ ಮುತ್ಯಾ ಪರ ಭಕ್ತರ ಸಭೆ, ಜಿಲ್ಲಾಡಳಿತಕ್ಕೆ 2 ದಿನ ಡೆಡ್​​ಲೈನ್
ಜನಾರ್ದನ ರೆಡ್ಡಿಗೆ ಮತ್ತೆ 'ಗಣಿ' ಉರುಳು? 884 ಕೋಟಿ ನಷ್ಟ ವಸೂಲಿಗೆ ಆಗ್ರಹ
ಜನಾರ್ದನ ರೆಡ್ಡಿಗೆ ಮತ್ತೆ 'ಗಣಿ' ಉರುಳು? 884 ಕೋಟಿ ನಷ್ಟ ವಸೂಲಿಗೆ ಆಗ್ರಹ
ತಾನು ಕೆಲಸ ಮಾಡಿದ ಆಫೀಸಿಗೇ 91 ಲಕ್ಷ ರೂ. ಕನ್ನ! ಆರೋಪಿ ಕ್ಯಾಶಿಯರ್ ಅಂದರ್
ತಾನು ಕೆಲಸ ಮಾಡಿದ ಆಫೀಸಿಗೇ 91 ಲಕ್ಷ ರೂ. ಕನ್ನ! ಆರೋಪಿ ಕ್ಯಾಶಿಯರ್ ಅಂದರ್
ನಡುರಸ್ತೆಯಲ್ಲಿ ಇಬ್ಬರು ಕಾಲೇಜು ಹುಡುಗಿಯರಿಗೆ ಲಿಪ್​​​ ಕಿಸ್ ಮಾಡಿದ ಯುವಕ
ನಡುರಸ್ತೆಯಲ್ಲಿ ಇಬ್ಬರು ಕಾಲೇಜು ಹುಡುಗಿಯರಿಗೆ ಲಿಪ್​​​ ಕಿಸ್ ಮಾಡಿದ ಯುವಕ
ಸತ್ತವರ ಖಾತೆಗೆ ಪಾವತಿಯಾದ ಗೃಹಲಕ್ಷ್ಮೀ ಹಣ ವಾಪಸ್ ಪಡೆಯಲು ಸರ್ಕಾರ ನಿರ್ಧಾರ
ಸತ್ತವರ ಖಾತೆಗೆ ಪಾವತಿಯಾದ ಗೃಹಲಕ್ಷ್ಮೀ ಹಣ ವಾಪಸ್ ಪಡೆಯಲು ಸರ್ಕಾರ ನಿರ್ಧಾರ
ಕೋಲ್ಕತ್ತಾದಲ್ಲಿ 5.3 ತೀವ್ರತೆಯ ಭೂಕಂಪ
ಕೋಲ್ಕತ್ತಾದಲ್ಲಿ 5.3 ತೀವ್ರತೆಯ ಭೂಕಂಪ
ಪಿಸ್ತೂಲ್ ಇಟ್ಟುಕೊಂಡ ಬಂದ ಜೆಡಿಎಸ್ ಕಾರ್ಯಕರ್ತ, ವಿಡಿಯೋ ವೈರಲ್
ಪಿಸ್ತೂಲ್ ಇಟ್ಟುಕೊಂಡ ಬಂದ ಜೆಡಿಎಸ್ ಕಾರ್ಯಕರ್ತ, ವಿಡಿಯೋ ವೈರಲ್
ಅನಂತ್​​ ಕುಮಾರ್​​ ಹೆಗಡೆ ಮರಳಿ ರಾಜಕೀಯಕ್ಕೆ? ಶ್ರೀರಾಮುಲು ಹೇಳಿದ್ದಿಷ್ಟು
ಅನಂತ್​​ ಕುಮಾರ್​​ ಹೆಗಡೆ ಮರಳಿ ರಾಜಕೀಯಕ್ಕೆ? ಶ್ರೀರಾಮುಲು ಹೇಳಿದ್ದಿಷ್ಟು
ದೆಹಲಿ ಅಬಕಾರಿ ನೀತಿ ಹಗರಣ, ಸಿಬಿಐಗೆ ದೆಹಲಿ ನ್ಯಾಯಾಲಯ ತರಾಟೆ
ದೆಹಲಿ ಅಬಕಾರಿ ನೀತಿ ಹಗರಣ, ಸಿಬಿಐಗೆ ದೆಹಲಿ ನ್ಯಾಯಾಲಯ ತರಾಟೆ
ಸೋಷಿಯಲ್ ಮೀಡಿಯಾ ಗಿಮಿಕ್ ಮಾಡೋರೇ ಹುಷಾರ್: ಪೊಲೀಸ್ ಆಯುಕ್ತ ಖಡಕ್ ವಾರ್ನಿಂಗ್
ಸೋಷಿಯಲ್ ಮೀಡಿಯಾ ಗಿಮಿಕ್ ಮಾಡೋರೇ ಹುಷಾರ್: ಪೊಲೀಸ್ ಆಯುಕ್ತ ಖಡಕ್ ವಾರ್ನಿಂಗ್