ಸಲಿಂಗ ವಿವಾಹ; ಮೇಕಪ್ ಮಾಡಲು ಬಂದ ಯುವತಿಯನ್ನೇ ಪ್ರೀತಿಸಿ ಮದುವೆಯಾದ ನಟಿ

ಗುರುಗ್ರಾಮದ ಯುವತಿಯೊಬ್ಬಳು ಫತೇಹಾಬಾದ್‌ನ ಯುವತಿಯನ್ನು ಮದುವೆಯಾಗಿದ್ದಾಳೆ. ಈ ವಿವಾಹದಲ್ಲಿ ಗುರುಗ್ರಾಮದ ಅಂಜು ಶರ್ಮಾ ಅವರು ವರನಂತೆ ಹಾಗೂ ಫತೇಹಾಬಾದ್‌ನ ಕವಿತಾ ಟಪ್ಪೂ ವಧುವಿನಂತೆ ಬಟ್ಟೆ ತೊಟ್ಟು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಸದ್ಯ ಇವರ ಮದುವೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗಿದೆ.

ಸಲಿಂಗ ವಿವಾಹ; ಮೇಕಪ್ ಮಾಡಲು ಬಂದ ಯುವತಿಯನ್ನೇ ಪ್ರೀತಿಸಿ ಮದುವೆಯಾದ ನಟಿ
Same Gender Marriage
Follow us
|

Updated on: Jun 27, 2024 | 10:47 AM

ಹರಿಯಾಣ: ಸುಪ್ರೀಂಕೋರ್ಟ್‌ ವಿಶೇಷ ವಿವಾಹ ಕಾಯಿದೆಯಡಿಯಲ್ಲಿ ಸಲಿಂಗ ವಿವಾಹದ ಕುರಿತು ಕಾನೂನು ಮಾನ್ಯತೆ ಇಲ್ಲ ಎಂದು ತಿಳಿಸಿದ್ದರೂ ಸಲಿಂಗ ಪ್ರೇಮ, ಮದುವೆ ಪ್ರಕರಣಗಳು ಕಡಿಮೆಯಾಗಿಲ್ಲ. ಇದೀಗ ಹರಿಯಾಣದ ಗುರುಗ್ರಾಮ್‌ನಲ್ಲಿ ನಡೆದ ಸಲಿಂಗಿ ಮದುವೆಯೊಂದು ಚರ್ಚೆಯ ವಿಷಯವಾಗಿದೆ. ಗುರುಗ್ರಾಮದ ಯುವತಿಯೊಬ್ಬಳು ಫತೇಹಾಬಾದ್‌ನ ಯುವತಿಯನ್ನು ಮದುವೆಯಾಗಿದ್ದಾಳೆ. ಈ ಮದುವೆಗೆ ಪ್ರಾರಂಭದಲ್ಲಿ ಎರಡೂ ಕಡೆಯ ಕೆಲವು ಕುಟುಂಬಸ್ಥರು ವಿರೋಧ ವ್ಯಕ್ತಪಡಿಸಿದ್ದು, ಬಳಿಕ ಇಬ್ಬರ ಕುಟುಂಬವೂ ಸಮ್ಮತಿ ನೀಡಿ, ಬಂಧು-ಬಳಗದ ಸಮ್ಮುಖದಲ್ಲಿ ಸಲಿಂಗಿಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಗುರುಗ್ರಾಮದ ಮದನ್‌ಪುರಿ ಪ್ರದೇಶದ ಪಂಚಾಯತ್ ಧರ್ಮಶಾಲೆಯಲ್ಲಿ ಇಬ್ಬರು ಯುವತಿಯರು ವಿವಾಹವಾಗಿದ್ದಾರೆ. ಈ ಸಂಬಂಧ ಗುರುಗ್ರಾಮದ ಅಂಜು ಶರ್ಮಾ ಅವರು ಪತಿಯಾಗಿ ದಾಂಪತ್ಯ ಜೀವನ ನಡೆಸುತ್ತಿದ್ದರೆ, ಫತೇಹಾಬಾದ್‌ನ ಕವಿತಾ ಟಪ್ಪೂ ಪತ್ನಿಯಾಗಿ ಇಡೀ ಮನೆಯನ್ನು ನೋಡಿಕೊಳ್ಳುತ್ತಿದ್ದಾರೆ.

View this post on Instagram

A post shared by K.T SHARMA (@kavitatappu)

ಅಂಜು ಶರ್ಮಾ ಹೇಳುವಂತೆ “ಕವಿತಾಳ ಪೋಷಕರು ತೀರಿಹೋಗಿದ್ದಾರೆ. ಆಕೆಯ ತಂಗಿಗೆ ಮದುವೆಯಾಗಿದೆ. ನಮ್ಮ ಮದುವೆ ಆಕೆಯ ಸೋದರ ಮಾವನಿಗೆ ತಿಳಿದಾಗ ಆತ ಮದುವೆಗೆ ಬರಲು ನಿರಾಕರಿಸಿದ್ದ. ಆದ್ದರಿಂದ ಮದುವೆಗೆ ಆಯ್ದ ಕೆಲವರನ್ನು ಮಾತ್ರ ಆಹ್ವಾನಿಸಲಾಗಿತ್ತು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಡಬ್ಬಗಳ ಮುಚ್ಚಳ ಬಿಗಿಯಾಗಿ ಮುಚ್ಚುತ್ತಾನೆಂದು ಪತಿಗೆ ಡಿವೋರ್ಸ್​​​​ ಕೊಟ್ಟ ಮಹಿಳೆ

ಅಂಜು ಶರ್ಮಾ ಅವರು ಟಿವಿ ಕಲಾವಿದೆ, ಕೋವಿಡ್ ಅವಧಿಯಲ್ಲಿ ಕಾರ್ಯಕ್ರಮವೊಂದರ ಶೂಟಿಂಗ್ ವೇಳೆ ಕವಿತಾ ಟಪ್ಪೂ ಮೇಕಪ್​​ ಆರ್ಟಿಸ್ಟ್​​​ ಆಗಿ ಬಂದಿದ್ದಾರೆ. ಈ ಸಮಯದಲ್ಲಿ ಇಬ್ಬರ ಪರಿಚಯವಾಗಿದೆ. ಆ ಸಮಯದಲ್ಲಿ ಕವಿತಾ ಸುಮಾರು 40 ದಿನಗಳ ಕಾಲ ಅಂಜು ಜೊತೆಗೆದ್ದಳು. ಈ ಸಮಯದಲ್ಲಿ ಇವರಿಬ್ಬರ ನಡುವೆ ಪರಸ್ಪರ ಪ್ರೀತಿ ಚಿಗುರಿದೆ. ಇದೀಗ ನಾಲ್ಕು ವರ್ಷಗಳ ಪ್ರೀತಿಯ ಬಳಿಕ ಮದುವೆಯಾಗಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ಪವಿತ್ರಾ ಗೌಡರ ಜಾಮೀನು ಪ್ರಕ್ರಿಯೆಯ ಬಗ್ಗೆ ವಕೀಲ ಹೇಳಿದ್ದಿಷ್ಟು?
ಪವಿತ್ರಾ ಗೌಡರ ಜಾಮೀನು ಪ್ರಕ್ರಿಯೆಯ ಬಗ್ಗೆ ವಕೀಲ ಹೇಳಿದ್ದಿಷ್ಟು?
ಜೈಲಿನಲ್ಲಿ ದರ್ಶನ್​ ಭೇಟಿಯ ಬಳಿಕ ರಕ್ಷಿತಾ-ಪ್ರೇಮ್ ಹೇಳಿದ್ದಿಷ್ಟು?
ಜೈಲಿನಲ್ಲಿ ದರ್ಶನ್​ ಭೇಟಿಯ ಬಳಿಕ ರಕ್ಷಿತಾ-ಪ್ರೇಮ್ ಹೇಳಿದ್ದಿಷ್ಟು?
ಪವಿತ್ರಾ ಗೌಡ ಭೇಟಿಯಾಗಲು ಜೈಲಿಗೆ ಬಂದ ವಕೀಲ ಮಾಧ್ಯಮಕ್ಕೆ ಉಪನ್ಯಾಸ ನೀಡಿದರು!
ಪವಿತ್ರಾ ಗೌಡ ಭೇಟಿಯಾಗಲು ಜೈಲಿಗೆ ಬಂದ ವಕೀಲ ಮಾಧ್ಯಮಕ್ಕೆ ಉಪನ್ಯಾಸ ನೀಡಿದರು!
ದರ್ಶನ್ ನನಗೆ ಚೀಲದ ತುಂಬ ಹಣ ಕಳಿಸಿದ್ದರು: ನಟ ಹರೀಶ್ ರಾಯ್
ದರ್ಶನ್ ನನಗೆ ಚೀಲದ ತುಂಬ ಹಣ ಕಳಿಸಿದ್ದರು: ನಟ ಹರೀಶ್ ರಾಯ್
ಅಮರನಾಥ ಗುಹೆಗೆ ಮೊದಲ ಬ್ಯಾಚ್​ನ 1100​​ ಭಕ್ತರಿಂದ ಯಾತ್ರೆ ಆರಂಭ
ಅಮರನಾಥ ಗುಹೆಗೆ ಮೊದಲ ಬ್ಯಾಚ್​ನ 1100​​ ಭಕ್ತರಿಂದ ಯಾತ್ರೆ ಆರಂಭ
ಸಿದ್ದರಾಮಯ್ಯ ಡೆಮೋಕ್ರ್ಯಾಟಿಕಲ್ಲೀ ನೇಮಕವಾಗಿರುವ ಸಿಎಂ: ಸಂತೋಷ್ ಲಾಡ್
ಸಿದ್ದರಾಮಯ್ಯ ಡೆಮೋಕ್ರ್ಯಾಟಿಕಲ್ಲೀ ನೇಮಕವಾಗಿರುವ ಸಿಎಂ: ಸಂತೋಷ್ ಲಾಡ್
ಸಾಲ ವಾಪಸ್​ ಕೇಳಿದ್ದಕ್ಕೆ ಬಟ್ಟೆ ಅಂಗಡಿಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ
ಸಾಲ ವಾಪಸ್​ ಕೇಳಿದ್ದಕ್ಕೆ ಬಟ್ಟೆ ಅಂಗಡಿಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ
ಚಿತ್ರದುರ್ಗದಲ್ಲಿ ವಿದ್ಯಾರ್ಥಿನಿಯರಿಗಿಲ್ಲ ಸುರಕ್ಷತೆ? ಪುಂಡ ಪೋಕರಿಗಳ ಕಾಟ
ಚಿತ್ರದುರ್ಗದಲ್ಲಿ ವಿದ್ಯಾರ್ಥಿನಿಯರಿಗಿಲ್ಲ ಸುರಕ್ಷತೆ? ಪುಂಡ ಪೋಕರಿಗಳ ಕಾಟ
ಬೆಂಗಳೂರಿಗೆ ಸರ್ಕ್ಯೂಲರ್ ರೇಲ್ವೇ ಯೋಜನೆ ಘೋಷಿಸಿದ ರೇಲ್ವೇ ಸಚಿವ ವಿ ಸೋಮಣ್ಣ
ಬೆಂಗಳೂರಿಗೆ ಸರ್ಕ್ಯೂಲರ್ ರೇಲ್ವೇ ಯೋಜನೆ ಘೋಷಿಸಿದ ರೇಲ್ವೇ ಸಚಿವ ವಿ ಸೋಮಣ್ಣ
ಉತ್ತರಾಖಂಡದಲ್ಲಿ ಪ್ರವಾಹ; ಗಂಗಾ ನದಿಯಲ್ಲಿ ತೇಲಿ ಹೋದ ಕಾರುಗಳು
ಉತ್ತರಾಖಂಡದಲ್ಲಿ ಪ್ರವಾಹ; ಗಂಗಾ ನದಿಯಲ್ಲಿ ತೇಲಿ ಹೋದ ಕಾರುಗಳು