AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಲಿಂಗ ವಿವಾಹ; ಮೇಕಪ್ ಮಾಡಲು ಬಂದ ಯುವತಿಯನ್ನೇ ಪ್ರೀತಿಸಿ ಮದುವೆಯಾದ ನಟಿ

ಗುರುಗ್ರಾಮದ ಯುವತಿಯೊಬ್ಬಳು ಫತೇಹಾಬಾದ್‌ನ ಯುವತಿಯನ್ನು ಮದುವೆಯಾಗಿದ್ದಾಳೆ. ಈ ವಿವಾಹದಲ್ಲಿ ಗುರುಗ್ರಾಮದ ಅಂಜು ಶರ್ಮಾ ಅವರು ವರನಂತೆ ಹಾಗೂ ಫತೇಹಾಬಾದ್‌ನ ಕವಿತಾ ಟಪ್ಪೂ ವಧುವಿನಂತೆ ಬಟ್ಟೆ ತೊಟ್ಟು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಸದ್ಯ ಇವರ ಮದುವೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗಿದೆ.

ಸಲಿಂಗ ವಿವಾಹ; ಮೇಕಪ್ ಮಾಡಲು ಬಂದ ಯುವತಿಯನ್ನೇ ಪ್ರೀತಿಸಿ ಮದುವೆಯಾದ ನಟಿ
Same Gender Marriage
ಅಕ್ಷತಾ ವರ್ಕಾಡಿ
|

Updated on: Jun 27, 2024 | 10:47 AM

Share

ಹರಿಯಾಣ: ಸುಪ್ರೀಂಕೋರ್ಟ್‌ ವಿಶೇಷ ವಿವಾಹ ಕಾಯಿದೆಯಡಿಯಲ್ಲಿ ಸಲಿಂಗ ವಿವಾಹದ ಕುರಿತು ಕಾನೂನು ಮಾನ್ಯತೆ ಇಲ್ಲ ಎಂದು ತಿಳಿಸಿದ್ದರೂ ಸಲಿಂಗ ಪ್ರೇಮ, ಮದುವೆ ಪ್ರಕರಣಗಳು ಕಡಿಮೆಯಾಗಿಲ್ಲ. ಇದೀಗ ಹರಿಯಾಣದ ಗುರುಗ್ರಾಮ್‌ನಲ್ಲಿ ನಡೆದ ಸಲಿಂಗಿ ಮದುವೆಯೊಂದು ಚರ್ಚೆಯ ವಿಷಯವಾಗಿದೆ. ಗುರುಗ್ರಾಮದ ಯುವತಿಯೊಬ್ಬಳು ಫತೇಹಾಬಾದ್‌ನ ಯುವತಿಯನ್ನು ಮದುವೆಯಾಗಿದ್ದಾಳೆ. ಈ ಮದುವೆಗೆ ಪ್ರಾರಂಭದಲ್ಲಿ ಎರಡೂ ಕಡೆಯ ಕೆಲವು ಕುಟುಂಬಸ್ಥರು ವಿರೋಧ ವ್ಯಕ್ತಪಡಿಸಿದ್ದು, ಬಳಿಕ ಇಬ್ಬರ ಕುಟುಂಬವೂ ಸಮ್ಮತಿ ನೀಡಿ, ಬಂಧು-ಬಳಗದ ಸಮ್ಮುಖದಲ್ಲಿ ಸಲಿಂಗಿಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಗುರುಗ್ರಾಮದ ಮದನ್‌ಪುರಿ ಪ್ರದೇಶದ ಪಂಚಾಯತ್ ಧರ್ಮಶಾಲೆಯಲ್ಲಿ ಇಬ್ಬರು ಯುವತಿಯರು ವಿವಾಹವಾಗಿದ್ದಾರೆ. ಈ ಸಂಬಂಧ ಗುರುಗ್ರಾಮದ ಅಂಜು ಶರ್ಮಾ ಅವರು ಪತಿಯಾಗಿ ದಾಂಪತ್ಯ ಜೀವನ ನಡೆಸುತ್ತಿದ್ದರೆ, ಫತೇಹಾಬಾದ್‌ನ ಕವಿತಾ ಟಪ್ಪೂ ಪತ್ನಿಯಾಗಿ ಇಡೀ ಮನೆಯನ್ನು ನೋಡಿಕೊಳ್ಳುತ್ತಿದ್ದಾರೆ.

View this post on Instagram

A post shared by K.T SHARMA (@kavitatappu)

ಅಂಜು ಶರ್ಮಾ ಹೇಳುವಂತೆ “ಕವಿತಾಳ ಪೋಷಕರು ತೀರಿಹೋಗಿದ್ದಾರೆ. ಆಕೆಯ ತಂಗಿಗೆ ಮದುವೆಯಾಗಿದೆ. ನಮ್ಮ ಮದುವೆ ಆಕೆಯ ಸೋದರ ಮಾವನಿಗೆ ತಿಳಿದಾಗ ಆತ ಮದುವೆಗೆ ಬರಲು ನಿರಾಕರಿಸಿದ್ದ. ಆದ್ದರಿಂದ ಮದುವೆಗೆ ಆಯ್ದ ಕೆಲವರನ್ನು ಮಾತ್ರ ಆಹ್ವಾನಿಸಲಾಗಿತ್ತು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಡಬ್ಬಗಳ ಮುಚ್ಚಳ ಬಿಗಿಯಾಗಿ ಮುಚ್ಚುತ್ತಾನೆಂದು ಪತಿಗೆ ಡಿವೋರ್ಸ್​​​​ ಕೊಟ್ಟ ಮಹಿಳೆ

ಅಂಜು ಶರ್ಮಾ ಅವರು ಟಿವಿ ಕಲಾವಿದೆ, ಕೋವಿಡ್ ಅವಧಿಯಲ್ಲಿ ಕಾರ್ಯಕ್ರಮವೊಂದರ ಶೂಟಿಂಗ್ ವೇಳೆ ಕವಿತಾ ಟಪ್ಪೂ ಮೇಕಪ್​​ ಆರ್ಟಿಸ್ಟ್​​​ ಆಗಿ ಬಂದಿದ್ದಾರೆ. ಈ ಸಮಯದಲ್ಲಿ ಇಬ್ಬರ ಪರಿಚಯವಾಗಿದೆ. ಆ ಸಮಯದಲ್ಲಿ ಕವಿತಾ ಸುಮಾರು 40 ದಿನಗಳ ಕಾಲ ಅಂಜು ಜೊತೆಗೆದ್ದಳು. ಈ ಸಮಯದಲ್ಲಿ ಇವರಿಬ್ಬರ ನಡುವೆ ಪರಸ್ಪರ ಪ್ರೀತಿ ಚಿಗುರಿದೆ. ಇದೀಗ ನಾಲ್ಕು ವರ್ಷಗಳ ಪ್ರೀತಿಯ ಬಳಿಕ ಮದುವೆಯಾಗಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ