AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಲಿಂಗ ವಿವಾಹ; ಮೇಕಪ್ ಮಾಡಲು ಬಂದ ಯುವತಿಯನ್ನೇ ಪ್ರೀತಿಸಿ ಮದುವೆಯಾದ ನಟಿ

ಗುರುಗ್ರಾಮದ ಯುವತಿಯೊಬ್ಬಳು ಫತೇಹಾಬಾದ್‌ನ ಯುವತಿಯನ್ನು ಮದುವೆಯಾಗಿದ್ದಾಳೆ. ಈ ವಿವಾಹದಲ್ಲಿ ಗುರುಗ್ರಾಮದ ಅಂಜು ಶರ್ಮಾ ಅವರು ವರನಂತೆ ಹಾಗೂ ಫತೇಹಾಬಾದ್‌ನ ಕವಿತಾ ಟಪ್ಪೂ ವಧುವಿನಂತೆ ಬಟ್ಟೆ ತೊಟ್ಟು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಸದ್ಯ ಇವರ ಮದುವೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗಿದೆ.

ಸಲಿಂಗ ವಿವಾಹ; ಮೇಕಪ್ ಮಾಡಲು ಬಂದ ಯುವತಿಯನ್ನೇ ಪ್ರೀತಿಸಿ ಮದುವೆಯಾದ ನಟಿ
Same Gender Marriage
ಅಕ್ಷತಾ ವರ್ಕಾಡಿ
|

Updated on: Jun 27, 2024 | 10:47 AM

Share

ಹರಿಯಾಣ: ಸುಪ್ರೀಂಕೋರ್ಟ್‌ ವಿಶೇಷ ವಿವಾಹ ಕಾಯಿದೆಯಡಿಯಲ್ಲಿ ಸಲಿಂಗ ವಿವಾಹದ ಕುರಿತು ಕಾನೂನು ಮಾನ್ಯತೆ ಇಲ್ಲ ಎಂದು ತಿಳಿಸಿದ್ದರೂ ಸಲಿಂಗ ಪ್ರೇಮ, ಮದುವೆ ಪ್ರಕರಣಗಳು ಕಡಿಮೆಯಾಗಿಲ್ಲ. ಇದೀಗ ಹರಿಯಾಣದ ಗುರುಗ್ರಾಮ್‌ನಲ್ಲಿ ನಡೆದ ಸಲಿಂಗಿ ಮದುವೆಯೊಂದು ಚರ್ಚೆಯ ವಿಷಯವಾಗಿದೆ. ಗುರುಗ್ರಾಮದ ಯುವತಿಯೊಬ್ಬಳು ಫತೇಹಾಬಾದ್‌ನ ಯುವತಿಯನ್ನು ಮದುವೆಯಾಗಿದ್ದಾಳೆ. ಈ ಮದುವೆಗೆ ಪ್ರಾರಂಭದಲ್ಲಿ ಎರಡೂ ಕಡೆಯ ಕೆಲವು ಕುಟುಂಬಸ್ಥರು ವಿರೋಧ ವ್ಯಕ್ತಪಡಿಸಿದ್ದು, ಬಳಿಕ ಇಬ್ಬರ ಕುಟುಂಬವೂ ಸಮ್ಮತಿ ನೀಡಿ, ಬಂಧು-ಬಳಗದ ಸಮ್ಮುಖದಲ್ಲಿ ಸಲಿಂಗಿಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಗುರುಗ್ರಾಮದ ಮದನ್‌ಪುರಿ ಪ್ರದೇಶದ ಪಂಚಾಯತ್ ಧರ್ಮಶಾಲೆಯಲ್ಲಿ ಇಬ್ಬರು ಯುವತಿಯರು ವಿವಾಹವಾಗಿದ್ದಾರೆ. ಈ ಸಂಬಂಧ ಗುರುಗ್ರಾಮದ ಅಂಜು ಶರ್ಮಾ ಅವರು ಪತಿಯಾಗಿ ದಾಂಪತ್ಯ ಜೀವನ ನಡೆಸುತ್ತಿದ್ದರೆ, ಫತೇಹಾಬಾದ್‌ನ ಕವಿತಾ ಟಪ್ಪೂ ಪತ್ನಿಯಾಗಿ ಇಡೀ ಮನೆಯನ್ನು ನೋಡಿಕೊಳ್ಳುತ್ತಿದ್ದಾರೆ.

View this post on Instagram

A post shared by K.T SHARMA (@kavitatappu)

ಅಂಜು ಶರ್ಮಾ ಹೇಳುವಂತೆ “ಕವಿತಾಳ ಪೋಷಕರು ತೀರಿಹೋಗಿದ್ದಾರೆ. ಆಕೆಯ ತಂಗಿಗೆ ಮದುವೆಯಾಗಿದೆ. ನಮ್ಮ ಮದುವೆ ಆಕೆಯ ಸೋದರ ಮಾವನಿಗೆ ತಿಳಿದಾಗ ಆತ ಮದುವೆಗೆ ಬರಲು ನಿರಾಕರಿಸಿದ್ದ. ಆದ್ದರಿಂದ ಮದುವೆಗೆ ಆಯ್ದ ಕೆಲವರನ್ನು ಮಾತ್ರ ಆಹ್ವಾನಿಸಲಾಗಿತ್ತು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಡಬ್ಬಗಳ ಮುಚ್ಚಳ ಬಿಗಿಯಾಗಿ ಮುಚ್ಚುತ್ತಾನೆಂದು ಪತಿಗೆ ಡಿವೋರ್ಸ್​​​​ ಕೊಟ್ಟ ಮಹಿಳೆ

ಅಂಜು ಶರ್ಮಾ ಅವರು ಟಿವಿ ಕಲಾವಿದೆ, ಕೋವಿಡ್ ಅವಧಿಯಲ್ಲಿ ಕಾರ್ಯಕ್ರಮವೊಂದರ ಶೂಟಿಂಗ್ ವೇಳೆ ಕವಿತಾ ಟಪ್ಪೂ ಮೇಕಪ್​​ ಆರ್ಟಿಸ್ಟ್​​​ ಆಗಿ ಬಂದಿದ್ದಾರೆ. ಈ ಸಮಯದಲ್ಲಿ ಇಬ್ಬರ ಪರಿಚಯವಾಗಿದೆ. ಆ ಸಮಯದಲ್ಲಿ ಕವಿತಾ ಸುಮಾರು 40 ದಿನಗಳ ಕಾಲ ಅಂಜು ಜೊತೆಗೆದ್ದಳು. ಈ ಸಮಯದಲ್ಲಿ ಇವರಿಬ್ಬರ ನಡುವೆ ಪರಸ್ಪರ ಪ್ರೀತಿ ಚಿಗುರಿದೆ. ಇದೀಗ ನಾಲ್ಕು ವರ್ಷಗಳ ಪ್ರೀತಿಯ ಬಳಿಕ ಮದುವೆಯಾಗಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್