AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಶ್ಚಿತಾರ್ಥ ಮಾಡಿಕೊಂಡ ಸಲಿಂಗಿ ವೈದ್ಯೆಯರು: ವೈರಲ್​ ಆದ ಎಂಗೇಜ್​ಮೆಂಟ್​​ ಫೋಟೋಗಳು

ಇದೀಗ ನಿಶ್ಚಿತಾರ್ಥ ಮಾಡಿಕೊಂಡ ಸಲಿಂಗಿ ಜೋಡಿ ಸದ್ಯದಲ್ಲೇ ಗೋವಾದಲ್ಲಿ ಹಸೆಮಣೆ ಏರಲಿದ್ದಾರೆ. ಬೆಂಗಾಲಿ ಮತ್ತು ಪಂಜಾಬ್​ ಸಂಪ್ರದಾಯದಂತೆ  ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಅವರ ಮದುವೆ ಸಮಾರಂಭಕ್ಕೆ  ಸಿವಿಲ್​ ಯೂನಿಯನ್​ ಎಂದು ಕರೆದಿದ್ದಾರೆ.

ನಿಶ್ಚಿತಾರ್ಥ ಮಾಡಿಕೊಂಡ ಸಲಿಂಗಿ ವೈದ್ಯೆಯರು: ವೈರಲ್​ ಆದ ಎಂಗೇಜ್​ಮೆಂಟ್​​ ಫೋಟೋಗಳು
ಸುರಭಿ ಮಿತ್ರ ಮತ್ತು ಪರೋಮಿತಾ ಮುಖರ್ಜಿ
TV9 Web
| Edited By: |

Updated on:Jan 11, 2022 | 11:03 AM

Share

ನಾಗ್ಪುರ: ಇತ್ತೀಚಿನ ದಿನಗಳಲ್ಲಿ ಸಲಿಂಗಿಗಳು ಮದುವೆಯಾಗುತ್ತಿರುವ ಘಟನೆಗಳು ಏರಿಕೆಯಾಗುತ್ತಿವೆ. ಕಳೆದ ತಿಂಗಳು ಹೈದ್ರಾಬಾದ್​ನಲ್ಲಿ ಸುಪ್ರಿಯೊ ಚಕ್ರವರ್ತಿ ಮತ್ತು ಅಭಯ್​ ದಂಗ್​ ಎನ್ನುವ ಸಲಿಂಗಿಗಳು ಮದುವೆಯಾಗಿ ದೇಶದಾದ್ಯಂತ ಸುದ್ದಿಯಾಗಿದ್ದರು. ಇದೀಗ  ನಾಗ್ಪುರದ ಮಹಿಳಾ ಸಲಿಂಗಿ ವೈದ್ಯರಿಬ್ಬರು ಹಸೆಮಣೆ ಏರಲು ಸಿದ್ಧರಾಗಿದ್ದಾರೆ. ನಿಶ್ಚಿತಾರ್ಥ ಮಾಡಿಕೊಂಡ ಜೋಡಿ ಫೋಟೊಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಡಾ. ಸುರಭಿ ಮಿತ್ರ ಮತ್ತು ಡಾ. ಪರೋಮಿತ ಮುಖರ್ಜಿ ನಿಶ್ಚಿತಾರ್ಥ ಮಾಡಿಕೊಂಡ ಸಲಿಂಗಿ ವೈದ್ಯರು. ಇದೀಗ ಅವರ ಫೋಟೋಗಳು ಸಿಕ್ಕಾಪಟ್ಟೆ ವೈರಲ್​ ಆಗಿದೆ.

ಸದ್ಯ ಈ ಸಲಿಂಗಿ ವೈದ್ಯ ಜೋಡಿಯ ಲವ್​ ಸ್ಟೋರಿ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ತಮ್ಮ ಪ್ರೀತಿಯ ಕತೆಯ ಬಗ್ಗೆ ಸುರಭಿ ಹೇಳಿಕೊಂಡಿದ್ದಾರೆ. ಸುರಭಿ ಮತ್ತು ಪರೋಮಿತ ಮೊದಲು ಭೇಟಿಯಾಗಿದ್ದು ಕೋಲ್ಕತ್ತಾದ ಕಾನ್ಫರೆನ್ಸ್​ ಒಂದರಲ್ಲಿ. ಸುರಭಿ  ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿದ್ದರು. ಆಗ ಪರೋಮಿತ ಸುರಭಿಯನ್ನು ನೋಡಿದ್ದರು. ನಂತರ ಇನ್ಸ್ಟಾಗ್ರಾಮ್​ ಮೂಲಕ  ಇಬ್ಬರ  ಸ್ನೇಹ ಮುಂದುವರೆದಿತ್ತು. ಪರೋಮಿತ ಅವರಿಗೆ ಇದು ಕೇವಲ ಆಕರ್ಷಣೆಯಾಗಿ ಕಾಣಿಸಿತ್ತು. ಈ ವೇಳೆ ಸುರಭಿ ಮತ್ತು ಪರೋಮಿತ ತಮ್ಮ ಇತರ ಸ್ನೇಹಿತರೊಂದಿಗೆ ಗೋವಾಕ್ಕೆ ತೆರಳಿದ್ದರು. ಆಗ ಸುರಭಿ  ತಮ್ಮ ಪ್ರೇಮ ನಿವೇದನೆ ಮಾಡಿದ್ದರು. ಆ ಬಳಿಕ ನಡೆದಿದ್ದು ಇತಿಹಾಸ ಎನ್ನುತ್ತಾರೆ ಸುರಭಿ.

ಇದೀಗ ನಿಶ್ಚಿತಾರ್ಥ ಮಾಡಿಕೊಂಡ ಸಲಿಂಗಿ ಜೋಡಿ ಸದ್ಯದಲ್ಲೇ ಗೋವಾದಲ್ಲಿ ಹಸೆಮಣೆ ಏರಲಿದ್ದಾರೆ. ಬೆಂಗಾಲಿ ಮತ್ತು ಪಂಜಾಬ್​ ಸಂಪ್ರದಾಯದಂತೆ  ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಅವರ ಮದುವೆ ಸಮಾರಂಭಕ್ಕೆ  ಸಿವಿಲ್​ ಯೂನಿಯನ್​ ಎಂದು ಕರೆದಿದ್ದಾರೆ. ಇವರ ಲವ್​ ಸ್ಟೋರಿಗೆ ನೆಟ್ಟಿಗರು ಅಚ್ಚರಿ ವ್ಯಕ್ತಪಡಿಸಿದ್ದಾರೆ. ಇವರ ನಿಶ್ಚಿತಾರ್ಥದ ಫೋಟೋಗಳು ಸಖತ್​ ವೈರಲ್​ ಆಗಿದೆ.

ಇದನ್ನೂ ಓದಿ:

ಅಫ್ಘಾನಿಸ್ತಾನ: ತಾಲಿಬಾನಿಗಳಿಂದ ಪಾರಾಗಿ 4 ತಿಂಗಳ ಬಳಿಕ ಹೆತ್ತವರನ್ನು ಸೇರಿದ ಮಗು

Published On - 10:33 am, Tue, 11 January 22

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ