AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಭಾಷ್​ ಚಂದ್ರ ಬೋಸ್ ​125ನೇ ಜನ್ಮದಿನ; ಮರಳಿನ ಕಲಾಕೃತಿ ಮೂಲಕ ಸ್ಮರಿಸಿದ ಕಲಾವಿದ ಸುದರ್ಶನ್​ ಪಟ್ನಾಯಕ್​

ಅಂತಾರಾಷ್ಟ್ರೀಯ ಮರಳು ಚಿತ್ರ ಕಲಾವಿದ (Sand Artist) ಸುದರ್ಶನ್​ ಪಟ್ನಾಯಕ್​​ ಮರಳಿನ ಶಿಲ್ಪ ನಿರ್ಮಿಸಿ ವಿಶೇಷವಾಗಿ ಸ್ವಾತಂತ್ರ ಹೋರಾಟಗಾರರನ್ನು ಸ್ಮರಿಸಿದ್ದಾರೆ.

ಸುಭಾಷ್​ ಚಂದ್ರ ಬೋಸ್ ​125ನೇ ಜನ್ಮದಿನ; ಮರಳಿನ ಕಲಾಕೃತಿ ಮೂಲಕ ಸ್ಮರಿಸಿದ ಕಲಾವಿದ ಸುದರ್ಶನ್​ ಪಟ್ನಾಯಕ್​
ಮರಳಿನ ಕಲಾಕೃತಿ
TV9 Web
| Edited By: |

Updated on: Jan 23, 2022 | 4:45 PM

Share

ನೇತಾಜಿ ಸುಭಾಷ್​ ಚಂದ್ರ ಬೋಸ್ (Subhas Chandra Bose)  ಅವರ 125ನೇ ಜನ್ಮದಿನವಾದ ಇಂದು ಪ್ರಧಾನಿ, ರಾಷ್ಟ್ರಪತಿ ಸೇರಿದಂತೆ ದೇಶದ ಜನತೆ  ಅವರನ್ನು ಸ್ಮರಿಸಿದ್ದಾರೆ. ಈ ನಡುವೆ ಅಂತಾರಾಷ್ಟ್ರೀಯ ಮರಳು ಚಿತ್ರ ಕಲಾವಿದ (Sand Artist) ಸುದರ್ಶನ್​ ಪಟ್ನಾಯಕ್​​ ಮರಳಿನ ಶಿಲ್ಪ ನಿರ್ಮಿಸಿ ವಿಶೇಷವಾಗಿ ಸ್ವಾತಂತ್ರ ಹೋರಾಟಗಾರರನ್ನು ಸ್ಮರಿಸಿದ್ದಾರೆ. ಮರಳಿನ ಮೂಲಕ ನೇತಾಜಿ ಸುಭಾಷ್​ ಚಂದ್ರ ಬೋಸ್​ ಅವರ ಕಲಾಕೃತಿಯನ್ನು ನಿರ್ಮಿಸಿ ಗಮನ ಸೆಳೆದಿದ್ದಾರೆ. ಸುದರ್ಶನ್​​ ಅವರು ಇಂದು ದೆಹಲಿಯ ಇಂಡಿಯಾ ಗೇಟ್​​ ಬಳಿ ಉದ್ಘಾಟನೆಯಾದ ನೇತಾಜಿ ಸುಭಾಷ್​ ಚಂದ್ರ ಬೀಸ್​​ ಅವರ ಹೋಲೋಗ್ರಾಮ್ (Hologram)​ ಪ್ರತಿಮೆಯನ್ನು ಮರಳಿನ ಮೂಲಕ ಚಿತ್ರಿಸಿದ್ದಾರೆ.

ಈ ಕುರಿತು ಅಂತಾರಾಷ್ಟ್ರೀಯ ಮರಳು ಕಲಾವಿದ ಸುದರ್ಶನ್​ ಪಟ್ನಾಯಕ್​ ಅವರು ಟ್ವಿಟರ್​ನಲ್ಲಿ ಹಂಚಿಕೊಂಡಿದ್ದು ನೇತಾಜಿ ಸುಭಾಷ್​ ಚಂದ್ರ ಬೋಸ್​ ಅವರ 125ನೇ ಜನ್ಮದಿನದ ಪ್ರಯುಕ್ತ 7 ಅಡಿ ಎತ್ತರದ ಪ್ರತಿಮೆಯನ್ನು ಪೂರಿ ಬೀಚ್​ ದಡದಲ್ಲಿ ರಚಿಸಲಾಯಿತು ಎಂದು ಬರೆದುಕೊಂಡಿದ್ದಾರೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಸುದರ್ಶನ ಅವರ ಕೈಚಳಕದಲ್ಲಿ ಮೂಡಿಬಂದ ನೇತಾಜಿ ಸುಭಾಷ್​ಚಂದ್ರ ಬೋಸ್​ ಅವರ ಪ್ರತಿಮೆ ವೈರಲ್ ಆಗಿದೆ.

ಸುಭಾಸ್​ ಚಂದ್ರ ಬೋಸ್​ ಅವರ 125ನೇ ಜನ್ಮದಿನದ ಅಂಗವಾಗಿ ಇಂಡಿಯಾ ಗೇಟ್​ ಬಳಿ ಗ್ರಾನೈಟ್​ ಪ್ರತಿಮೆಯನ್ನು ಉದ್ಘಾಟಿಸಲಾಯಿತು.  ಈ ಪ್ರತಿಮೆ 28 ಅಡಿ ಎತ್ತರ ಮತ್ತು ಆರು ಅಡಿ ಅಗಲವಿದೆ. ಅದನ್ನು ಇಂದು ಪ್ರಧಾನಿ ಮೋದಿ ಉದ್ಘಾಟಿಸಿದ್ದಾರೆ. ಇಂದು ದೇಶದ ಸ್ವಾತಂತ್ರ್ಯ ಹೋರಾಟಗಾರ ಸುಭಾಷ್​ ಚಂದ್ರ ಬೋಸ್​ ಅವರನ್ನು ಇಡೀ ದೇಶ ನೆನಪಿಸಿಕೊಂಡಿದೆ. ಪರಾಕ್ರಮ ದಿನವೆಂದು ಆಚರಿಸಿದೆ. ಪ್ರಧಾನಿ ಮೋದಿ, ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಸೇರಿದಂತೆ ಹಲವು ಗಣ್ಯರು ನಮನ ಸಲ್ಲಿದ್ದಾರೆ.

ಇದನ್ನೂ ಓದಿ:

Republic Day 2022: ಇಂದು ಪ್ರಧಾನಿ ಮೋದಿಯಿಂದ ನೇತಾಜಿ ಸುಭಾಷ್​ ಚಂದ್ರ ಬೋಸ್​ರ ಹೊಲೋಗ್ರಾಮ್​ ಪ್ರತಿಮೆ ಅನಾವರಣ

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ