AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಸಪ್ತಸಾಗರದಾಚೆ ಎಲ್ಲೋ; ಸುನಿಧಿ ಗಣೇಶ್ ಹಾಡಿರುವ ಟೈಟಲ್ ಟ್ರ್ಯಾಕ್​ ವೈರಲ್

Kannada Cinema: ಸಪ್ತಸಾಗರದಾಚೆ ಎಲ್ಲೋ ಟೈಟಲ್​ ಟ್ರ್ಯಾಕ್​ನ ಹಾಡನ್ನು ಧನಂಜಯ್​ ರಂಜನ್​ ಬರೆದಿದ್ದಾರೆ. ಚರಣ್​ ರಾಜ್​ ಸಂಗೀತ ಸಂಯೋಜಿಸಿದ್ದು, ಕಪಿಲ್​ ಕಪಿಲನ್​ ಹಾಡಿದ್ದಾರೆ. ಹಿಂದೂಸ್ತಾನಿ ಶಾಸ್ತ್ರೀಯ ಗಾಯಕಿ ಸುನಿಧಿ ಗಣೇಶ ಈ ಹಾಡನ್ನು ಹಾಡಿದ್ದು ಅದೀಗ ವೈರಲ್ ಆಗುತ್ತಿದೆ. ಈತನಕ ಈ ಗಾಯಕಿ ಎಲ್ಲಿ ಅವಿತಿದ್ದರು? ಎಂದು ನೆಟ್ಟಿಗರು ಅಚ್ಚರಿಗೆ ಒಳಗಾಗಿದ್ದಾರೆ.

Viral Video: ಸಪ್ತಸಾಗರದಾಚೆ ಎಲ್ಲೋ; ಸುನಿಧಿ ಗಣೇಶ್ ಹಾಡಿರುವ ಟೈಟಲ್ ಟ್ರ್ಯಾಕ್​ ವೈರಲ್
1. ಗಾಯಕಿ ಸುನಿಧಿ ಗಣೇಶ. 2. ಸಪ್ತಸಾಗರದಾಚೆ ಎಲ್ಲೋ ಸಿನೆಮಾದ ನಾಯಕ ರಕ್ಷಿತ ಶೆಟ್ಟಿ ಮತ್ತು ರುಕ್ಮಿಣಿ ವಸಂತ
ಶ್ರೀದೇವಿ ಕಳಸದ
ಶ್ರೀದೇವಿ ಕಳಸದ|

Updated on:Sep 05, 2023 | 4:33 PM

Share

Kannada Cinema: ಬೆಂಗಳೂರಿನಲ್ಲಿದ್ದರೂ ಕರಾವಳಿಯ ನೀಲಸಮುದ್ರವನ್ನೇ ಧ್ಯಾನಿಸುವ ಕನಸುಕಂಗಳ ಹುಡುಗಿ ಪ್ರಿಯಾ (Rukmini Vasanth) ಮತ್ತು ಅವಳ ಕನಸುಗಳನ್ನು ನನಸು ಮಾಡಲೆಂದೇ ಬದುಕುತ್ತಿರುವ ಮನು (Rakshit Shetty). ಇವರಿಬ್ಬರ ಪ್ರೇಮಕಥೆಯೇ ‘ಸಪ್ತಸಾಗರದಾಚೆ ಎಲ್ಲೋ’. ಈ ಸಿನೆಮಾದ ಟೈಟಲ್ ಟ್ರ್ಯಾಕ್​ ಕೇಳಿದ ಯಾರೂ ಗುನುಗದೇ ಇರಲಾರರು, ಅಂಥ ನವಿರಾದ ಆಕರ್ಷಣೆ ಇದಕ್ಕಿದೆ. ಚರಣ್​ರಾಜ್ ಸಂಗೀತ ನಿರ್ದೇಶನ ಮತ್ತು ಕಪಿಲ್​ ಕಪಿಲನ್ ಅವರ ಕಂಠ ಈ ಹಾಡಿಗಿದೆ. ಸೆ. 15ರಂದು ಬಿಡುಗಡೆಯಾಗಲಿರುವ ಮೇಘನಾ ರಾಜ್​ ಅಭಿನಯದ ‘ತತ್ಸಮ ತದ್ಭವ’ ಸಿನೆಮಾದಲ್ಲಿ ‘ದೂರಿ ಲಾಲಿ’ ಹಾಡಿರುವ ಸುನಿಧಿ ಗಣೇಶ್​ ಇದೀಗ ಸಪ್ತಸಾಗರದಾಚೆ ಎಲ್ಲೋ ಸಿನೆಮಾದ ಟ್ರ್ಯಾಕ್​ ಹಾಡಿ ಇನ್​ಸ್ಟಾಗ್ರಾಂನಲ್ಲಿ ಅಪ್​ಲೋಡ್ ಮಾಡಿದ್ದಾರೆ. ಇವರ ಸುಮಧುರವಾದ ಧ್ವನಿ ನೆಟ್ಟಿಗರನ್ನು ಬಹುವಾಗಿ ಸೆಳೆಯುತ್ತಿದೆ.

ಇದನ್ನೂ ಓದಿ : Viral Video: ಅದು ವಿದ್ವಾನ್​ ಬಾತುಕೋಳಿಯವರ ಬೀಟ್​ಬಾಕ್ಸ್​​; ಎಡಿಟಿಂಗ್​ ವೇಳೆ ಗೊತ್ತಾದ ಸತ್ಯ 

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ಸುನಿಧಿ ಗಣೇಶ ಹಿಂದೂಸ್ತಾನಿ ಶಾಸ್ತ್ರೀಯ ಕಲಾವಿದೆ. ಪಂ. ಪರಮೇಶ್ವರ ಹೆಗಡೆ ಅವರ ಶಿಷ್ಯೆ. ಶಾಸ್ತ್ರೀಯ, ಲಘು ಶಾಸ್ತ್ರೀಯ, ಸುಗಮ ಮತ್ತು ಸಿನೆಮಾ ಸಂಗೀತಕ್ಕೂ ಒಗ್ಗುವಂಥ ದನಿಬಾನಿ ಇವರದಾಗಿದೆ. ‘ನೀನಿಲ್ಲದೇ’ ಎನ್ನುವ ಆಲ್ಬಂನಲ್ಲಿ ಇವರ ಭಾವಪೂರ್ಣ ಧ್ವನಿ ಅಡಕವಾಗಿದೆ. ಸಂಗೀತಕ್ಕೆ ಸಂಬಂಧಿಸಿದ ರಿಯಾಲಿಟಿ ಷೋಗಳಲ್ಲಿ ಭಾಗವಹಿಸಿದ ಅನುಭವ ಇವರಿಗಿದೆ.  ಆಗಾಗ ಇನ್​ಸ್ಟಾಗ್ರಾಂನಲ್ಲಿ ಕನ್ನಡ, ಹಿಂದೀ ಸಿನೆಮಾ ಗೀತೆಗಳ ವಿಡಿಯೋ ಅಪ್​ಲೋಡ್ ಮಾಡಿ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರರಾಗುತ್ತಿರುತ್ತಾರೆ.

ಸುನಿಧಿ ಗಣೇಶ ಹಾಡಿರುವ ಸಪ್ತಸಾಗರದಾಚೆ ಎಲ್ಲೋ

ಸಪ್ತಸಾಗರದಾಚೆ ಎಲ್ಲೋ ಸಿನೆಮಾದ ನಾಯಕಿ ರುಕ್ಮಿಣಿ ವಸಂತ್ ಈ ರೀಲ್​ಗೆ ‘ಬ್ಯೂಟಿಫುಲ್​’ ಎಂದು ಪ್ರತಿಕ್ರಿಯಿಸಿದ್ದು, ರುಕ್ಮಿಣಿ ಅವರ ಅಭಿಮಾನಿಗಳ ದಂಡು ಆ ಪ್ರತಿಕ್ರಿಯೆಯ ಕೆಳಗೆ ‘ಐ ಲವ್​ ಯೂ’ ಎಂದು ಪ್ರೀತಿ ಅಭಿಮಾನದ ತೊರೆಯನ್ನೇ ಹರಿಸಿದೆ. ಸುನಿಧಿಯವರ ಮಾಧುರ್ಯಕ್ಕೆ ಮಾರುಹೋದ ಅನೇಕರು, ನಿಮಗೆ ಸಂಗೀತದಲ್ಲಿ ಉಜ್ವಲ ಭವಿಷ್ಯವಿದೆ ಎಂದು ಹಾರೈಸಿದ್ದಾರೆ.

ಸುನಿಧಿ ಗಣೇಶ ಪ್ರಸ್ತುತ ಪಡಿಸಿದ ‘ಬಾನ ತೊರೆದು ನೀಲಿ’

ಸುನಿಧಿ ಇತ್ತೀಚೆಗೆ ಹಾಡಿರುವ ‘ಬಾನ ತೊರೆದು ನೀಲಿ ಮರೆಯಾಯಿತೇತಕೇ’ ಹಾಡನ್ನು ಸುಮಾರು 1.5 ಲಕ್ಷ ಜನರು ಲೈಕ್ ಮಾಡಿದ್ದಾರೆ. ನಿಮ್ಮ ಹಾಡುಗಾರಿಕೆ ಅನುಭವಿಸುವುದೇ ಒಂದು ಆನಂದ ಎಂದು ಪ್ರತಿಕ್ರಿಯಿಸಿದ್ದಾರೆ ಒಬ್ಬರು. ‘ಬಿಸಿಲು ಕುದುರೆಯೊಂದು’ ಹಾಡನ್ನು ಹಾಡಿ ಎಂದು ಹೇಳಿದ್ದಾರೆ ಮತ್ತೊಬ್ಬರು.

ಈ ಹಾಡುಗಳನ್ನು ಕೇಳಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Published On - 2:49 pm, Tue, 5 September 23

Follow Us
Shridevi Kalasad
Shridevi Kalasad

ಶ್ರೀದೇವಿ ಕಳಸದ : ಮುಖ್ಯ ಉಪಸಂಪಾದಕಿ. ವಿಜಯ ಕರ್ನಾಟಕ, ಸುವರ್ಣ ನ್ಯೂಸ್, ಪ್ರಜಾವಾಣಿ ಮತ್ತು ವಿವಿಧ ಮಾಧ್ಯಮ ಸಂಸ್ಥೆಗಳು ಸೇರಿದಂತೆ ಒಟ್ಟು 16 ವರ್ಷಗಳ ಅನುಭವ. ಸಂಗೀತ, ಸಾಹಿತ್ಯ ಮತ್ತು ಲಲಿತ ಕಲೆಗಳಲ್ಲಿ ವಿಶೇಷ ಆಸಕ್ತಿ.

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!