AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Post: ಇದು ಸಪ್ತ ಶೆಡ್ಡಿನಾಚೆ ಎಲ್ಲೋ ಸೈಡ್‌-D ಕಥೆ, ಮತ್ತೆ ಟ್ರೋಲ್‌ ಆದ್ರು ದರ್ಶನ್‌-ಪವಿತ್ರ 

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ ಸೇರಿದಂತೆ ನಾಲ್ವರು ಆರೋಪಿಗಳನ್ನು ಕೋರ್ಟ್‌ ಮೂರನೇ ಬಾರಿಗೆ ಪೊಲೀಸ್‌ ಕಸ್ಟಡಿಗೆ ಒಪ್ಪಿಸಿದರೆ, ಪವಿತ್ರ ಗೌಡ ಮತ್ತು ಇತರೆ  ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಈ ಒಂದು ಸಂದರ್ಭಕ್ಕೆ  ಸಪ್ತ ಸಾಗರದಾಚೆ ಎಲ್ಲೋ ಸಿನಿಮಾದ ಸನ್ನಿವೇಶವೊಂದನ್ನು ಲಿಂಕ್‌ ಮಾಡಿ ಇದು “ಸಪ್ತ ಶೆಡ್ಡಿನಾಚೆ ಎಲ್ಲೋ ಸೈಡ್‌-D” ಕಥೆ ಎಂದು ಇದೀಗ ದರ್ಶನ್‌ ಮತ್ತು ಪವಿತ್ರ ಅವರನ್ನು ಟ್ರೋಲ್‌ ಮಾಡಲಾಗುತ್ತಿದೆ. ಈ ಕುರಿತ ಪೋಸ್ಟ್‌ ಒಂದು ಇದೀಗ ಸಖತ್‌ ವೈರಲ್‌ ಆಗುತ್ತಿದೆ.

Viral Post: ಇದು ಸಪ್ತ ಶೆಡ್ಡಿನಾಚೆ ಎಲ್ಲೋ ಸೈಡ್‌-D ಕಥೆ, ಮತ್ತೆ ಟ್ರೋಲ್‌ ಆದ್ರು ದರ್ಶನ್‌-ಪವಿತ್ರ 
ವೈರಲ್​ ಪೋಸ್ಟ್​​
ಮಾಲಾಶ್ರೀ ಅಂಚನ್​
| Edited By: |

Updated on: Jun 21, 2024 | 5:59 PM

Share

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌ ಸೇರಿ 11 ಜನರನ್ನು ಬಂಧಿಸಲಾಗಿತ್ತು. ಅಂದಿನಿಂದ ನಿನ್ನೆ (ಜೂನ್‌ 20) ವರೆಗೂ ಅವರೆಲ್ಲರೂ ಪೋಲಿಸ್‌ ಕಸ್ಟಡಿಯಲ್ಲಿದ್ದು,  ನಿನ್ನೆ ಆರೋಪಿಗಳೆಲ್ಲರನ್ನೂ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ವಿಚಾರಣೆಯ ಬಳಿಕ ಎ-2 ಆರೋಪಿ ದರ್ಶನ್‌ ಸೇರಿ ನಾಲ್ವರು ಆರೋಪಿಗಳನ್ನು ಕೋರ್ಟ್‌  ಮೂರನೇ ಬಾರಿಗೆ ಪೊಲೀಸ್‌ ಕಸ್ಟಡಿಗೆ ಒಪ್ಪಿಸಿದೆ. ಇನ್ನೂ ಎ-1 ಆರೋಪಿ ಪವಿತ್ರ ಗೌಡ ಸೇರಿದಂತೆ ಇತರೆ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಇದೀಗ ಈ ಸಂದರ್ಭಕ್ಕೆ ಸಪ್ತಸಾಗರದಾಚೆ ಎಲ್ಲೋ ಸಿನಿಮಾದ ಸನ್ನಿವೇಶವೊಂದನ್ನು ಲಿಂಕ್‌ ಮಾಡಿ ಇದು “ಸಪ್ತ ಶೆಡ್ಡಿನಾಚೆ ಎಲ್ಲೋ ಸೈಡ್‌ D” ಕಥೆ ಎಂದು ಟ್ರೋಲಿಗರು ದರ್ಶನ್‌ ಮತ್ತು ಪವಿತ್ರ ಅವರನ್ನು ಟ್ರೋಲ್‌ ಮಾಡುತ್ತಿದ್ದಾರೆ.

ನಟ ರಕ್ಷಿತ್‌ ಶೆಟ್ಟಿ ಹಾಗೂ ರುಕ್ಮಿಣಿ ವಸಂತ್‌ ನಟನೆಯ ʼಸಪ್ತ ಸಾಗರದಾಚೆ ಎಲ್ಲೋ ಸೈಡ್‌ ಎʼ ಮತ್ತು ʼಸಪ್ತ ಸಾಗರದಾಚೆ ಎಲ್ಲೋ ಸೈಡ್‌ ಬಿʼ ಸಿನಿಮಾ ಹಿಟ್‌ ಆಗಿತ್ತು. ಈ ಸಿನಿಮಾದಲ್ಲಿ  ಜೈಲಿನಲ್ಲಿದ್ದ ನಾಯಕ ಮತ್ತು ನಾಯಕಿ ದೂರವಾಗುವ ಒಂದು ಸನ್ನಿವೇಶವಿದೆ. ಈ ಸನ್ನಿವೇಶವನ್ನು ಇಟ್ಟುಕೊಂಡು ಇದೀಗ  ದರ್ಶನ್‌ ಮತ್ತು ಪವಿತ್ರ ಅವರನ್ನು ಟ್ರೋಲಿಗರು ಟ್ರೋಲ್‌ ಮಾಡುತ್ತಿದ್ದಾರೆ.

ಈ ಕುರಿತ ಪೋಸ್ಟ್‌ ಒಂದನ್ನು @SidNeregal ಎಂಬ ಎಕ್ಸ್‌ ಖಾತೆಯಲ್ಲಿ ಹಂಚಿಕೊಳ್ಳಲಾಗಿದ್ದು, “ಸಪ್ತ ಸಾಗರದಾಚೆ ಎಲ್ಲೋ ಪವಿತ್ರ ಅಕ್ಕ” ಎಂಬ ತಮಾಷೆಯ ಶೀರ್ಷಿಕೆಯನ್ನು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ವಿಶ್ವ ಯೋಗ ದಿನದಂದು ಲಡಾಖ್‌ ಹಿಮ ಶಿಖರದಲ್ಲಿ ಭಾರತೀಯ ಯೋಧರ ಯೋಗಾಸನ

ಒಂದು ದಿನದ ಹಿಂದೆ ಹಂಚಿಕೊಳ್ಳಲಾದ ಈ ಪೋಸ್ಟ್‌ 1 ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಇದು  “ಸಪ್ತ ಶೆಡ್ಡಿನಾಚೆ ಎಲ್ಲೋ ಸೈಡ್‌ D” ಕಥೆ ಎಂದು ನೆಟ್ಟಿಗರು ತಮಾಷೆಯ ಕಾಮೆಂಟ್‌ಗಳನ್ನು ಬರೆದುಕೊಂಡಿದ್ದಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!