AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾನು ಗೆದ್ದರೆ ವಿಮಾನ ನಿಲ್ದಾಣ, ಮಹಿಳೆಯರಿಗೆ ಮೇಕಪ್ ಕಿಟ್, ವೈಫೈ ಉಚಿತ​’

Sarpanch Manifesto : ನಾನಂತೂ ಈ ಹಳ್ಳಿಗೆ ಶಿಫ್ಟ್​ ಆಗ್ತೀನಿ ಎನ್ನುತ್ತಿದ್ದಾರೆ ಐಎಫ್​ಎಸ್​ ಅಧಿಕಾರಿ ಅರುಣ್​ ಗೋಥ್ರಾ. ಈಗಲೇ ಶಿಫ್ಟ್ ಆಗಿಬಿಡೋಣ, ತಡವಾದರೆ ವೀಸಾ ಬೇಕಾಗಬಹುದು ಎನ್ನುತ್ತಿದ್ದಾರೆ ನೆಟ್ಟಿಗರು. ನೀವೂ ಶಿಫ್ಟ್ ಆಗುತ್ತೀರೋ ಹೇಗೆ?

‘ನಾನು ಗೆದ್ದರೆ ವಿಮಾನ ನಿಲ್ದಾಣ, ಮಹಿಳೆಯರಿಗೆ ಮೇಕಪ್ ಕಿಟ್, ವೈಫೈ ಉಚಿತ​’
ಇವರೇ ಆ ಅಭ್ಯರ್ಥಿ!
TV9 Web
| Edited By: |

Updated on:Oct 11, 2022 | 5:09 PM

Share

Trending : ‘ನಾನು ಈ ಚುನಾವಣೆಯಲ್ಲಿ ಗೆದ್ದು ಬಂದರೆ, ಈ ಗ್ರಾಮಕ್ಕೆ ಮೂರು ವಿಮಾನ ನಿಲ್ದಾಣಗಳು, ಹೆಣ್ಣುಮಕ್ಕಳಿಗೆ ಉಚಿತ ಮೇಕಪ್​ ಕಿಟ್, ಪ್ರತೀ ಕುಟುಂಬಕ್ಕೆ ಉಚಿತ ಬೈಕು, ವೈಫೈ, ಪೆಟ್ರೋಲ್​ ಬೆಲೆಯಲ್ಲಿ ಪ್ರತೀ ಲೀಟರ್​ಗೆ ರೂ.20 ಇಳಿಕೆ, ಜಿಎಸ್​ಟಿ ರದ್ದು ಇಷ್ಟೆಲ್ಲ ಸೌಕರ್ಯಗಳನ್ನು ಕಲ್ಪಿಸುತ್ತೇನೆ’ ಹರಿಯಾಣಾದ ಸಿರ್ಸಾದ್​ ಗ್ರಾಮದ ಸರ್ಪಂಚ್ ಹುದ್ದೆಗೆ ಸ್ಪರ್ಧಿಸಿರುವ ಅಭ್ಯರ್ಥಿಯೊಬ್ಬರ ಚುನಾವಣೆ ಪ್ರಣಾಳಿಕೆ ಇದು. ಐಪಿಎಸ್​ ಅಧಿಕಾರಿ ಅರುಣ್ ಬೋಥ್ರಾ ಈ ಕರಪತ್ರವನ್ನು ಟ್ವೀಟ್ ಮಾಡುತ್ತಿದ್ದಂತೆ ಇದೀಗ ವೈರಲ್ ಆಗುತ್ತಿದೆ. ‘ನಾನು ಈ ಗ್ರಾಮಕ್ಕೆ ಶಿಫ್ಟ್​ ಅಗುತ್ತಿದ್ದೇನೆ’ ಎಂಬ ವ್ಯಂಗ್ಯದ ಒಕ್ಕಣೆ ಬರೆದಿದ್ದಾರೆ ಅರುಣ್.

ಸರ್ಪಂಚ್ ಚುನಾವಣೆಗೆ ಸ್ಪರ್ಧಿಸಿ, ಚುನಾವಣೆಯ ಈ ಅದ್ಭುತ ಪ್ರಣಾಳಿಕೆ ಪಟ್ಟಿಯನ್ನು ಬಿಡುಗಡೆ ಮಾಡಿದವರು ಜೈಕರಣ್​ ಲಾಥ್ವಾಲ್​ ಎಂಬುವವರು. ನೆಟ್ಟಿಗರು ಈ ಪ್ರಣಾಳಿಕೆ ಪಟ್ಟಿಯನ್ನು ಹಂಚಿಕೊಂಡು ವಿಧವಿಧದಲ್ಲಿ ಪ್ರತಿಕ್ರಿಯಿಸುತ್ತಿದ್ದಾರೆ. ‘ಈ ಗ್ರಾಮಕ್ಕೆ ಶಾಶ್ವತವಾಗಿ ಶಿಫ್ಟ್​ ಆಗಬೇಕೆ, ಬೇಡವೆ? ಎಂಬ ಬಗ್ಗೆ ಗೊಂದಲಕ್ಕೆ ಒಳಗಾಗಿದ್ದೇನೆ’ ಎಂದು ಒಬ್ಬರು ಪ್ರತಿಕ್ರಿಯಿಸಿದ್ದಾರೆ. ‘ನಾನೂ ಈ ಹಳ್ಳಿಗೆ ಶಿಫ್ಟ್​ ಆಗಬೇಕು, ದಯವಿಟ್ಟು ಹಳ್ಳಿಯ ಹೆಸರು ಹೇಳಿ’ ಎಂದಿದ್ದಾರೆ ಮತ್ತೊಬ್ಬರು. ‘ಅರುಣ್ ಬೋಥ್ರಾ ಅವರೊಂದಿಗೆ ನಾನು ಈ ಹಳ್ಳಿಗೆ ಶಿಫ್ಟ್​ ಆಗುತ್ತಿದ್ದೇನೆ’ ಎಂದು ಮಗದೊಬ್ಬರು ತಮಾಷೆ ಮಾಡಿದ್ದಾರೆ. ‘ಆಮೇಲಾದರೆ ವೀಸಾ ಬೇಕಾಗಬಹುದು. ಈಗಲೇ ಶಿಫ್ಟ್​ ಆಗುವುದು ಒಳ್ಳೆಯದು ನಡೆಯಿರಿ’ ಎಂದು ಇನ್ನೂ ಒಬ್ಬರು ಹಾಸ್ಯ ಮಾಡಿದ್ದಾರೆ.

ನೀವೇನಂತೀರಿ? ಇಷ್ಟೆಲ್ಲ ಉಚಿತವಾಗಿ ಸಿಗುವಾಗ ಈ ಹಳ್ಳಿಗೆ ಶಿಫ್ಟ್ ಆಗುವುದು ಒಳಿತಲ್ಲವೆ? ಅದರಲ್ಲೂ ಒಂದು ಹಳ್ಳಿಗೆ ಮೂರು ವಿಮಾನ ನಿಲ್ದಾಣಗಳು! ನಡೆಯಿರಿ ಮತ್ತೆ…

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 4:56 pm, Tue, 11 October 22

ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ