AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾನು ಗೆದ್ದರೆ ವಿಮಾನ ನಿಲ್ದಾಣ, ಮಹಿಳೆಯರಿಗೆ ಮೇಕಪ್ ಕಿಟ್, ವೈಫೈ ಉಚಿತ​’

Sarpanch Manifesto : ನಾನಂತೂ ಈ ಹಳ್ಳಿಗೆ ಶಿಫ್ಟ್​ ಆಗ್ತೀನಿ ಎನ್ನುತ್ತಿದ್ದಾರೆ ಐಎಫ್​ಎಸ್​ ಅಧಿಕಾರಿ ಅರುಣ್​ ಗೋಥ್ರಾ. ಈಗಲೇ ಶಿಫ್ಟ್ ಆಗಿಬಿಡೋಣ, ತಡವಾದರೆ ವೀಸಾ ಬೇಕಾಗಬಹುದು ಎನ್ನುತ್ತಿದ್ದಾರೆ ನೆಟ್ಟಿಗರು. ನೀವೂ ಶಿಫ್ಟ್ ಆಗುತ್ತೀರೋ ಹೇಗೆ?

‘ನಾನು ಗೆದ್ದರೆ ವಿಮಾನ ನಿಲ್ದಾಣ, ಮಹಿಳೆಯರಿಗೆ ಮೇಕಪ್ ಕಿಟ್, ವೈಫೈ ಉಚಿತ​’
ಇವರೇ ಆ ಅಭ್ಯರ್ಥಿ!
TV9 Web
| Edited By: ಶ್ರೀದೇವಿ ಕಳಸದ|

Updated on:Oct 11, 2022 | 5:09 PM

Share

Trending : ‘ನಾನು ಈ ಚುನಾವಣೆಯಲ್ಲಿ ಗೆದ್ದು ಬಂದರೆ, ಈ ಗ್ರಾಮಕ್ಕೆ ಮೂರು ವಿಮಾನ ನಿಲ್ದಾಣಗಳು, ಹೆಣ್ಣುಮಕ್ಕಳಿಗೆ ಉಚಿತ ಮೇಕಪ್​ ಕಿಟ್, ಪ್ರತೀ ಕುಟುಂಬಕ್ಕೆ ಉಚಿತ ಬೈಕು, ವೈಫೈ, ಪೆಟ್ರೋಲ್​ ಬೆಲೆಯಲ್ಲಿ ಪ್ರತೀ ಲೀಟರ್​ಗೆ ರೂ.20 ಇಳಿಕೆ, ಜಿಎಸ್​ಟಿ ರದ್ದು ಇಷ್ಟೆಲ್ಲ ಸೌಕರ್ಯಗಳನ್ನು ಕಲ್ಪಿಸುತ್ತೇನೆ’ ಹರಿಯಾಣಾದ ಸಿರ್ಸಾದ್​ ಗ್ರಾಮದ ಸರ್ಪಂಚ್ ಹುದ್ದೆಗೆ ಸ್ಪರ್ಧಿಸಿರುವ ಅಭ್ಯರ್ಥಿಯೊಬ್ಬರ ಚುನಾವಣೆ ಪ್ರಣಾಳಿಕೆ ಇದು. ಐಪಿಎಸ್​ ಅಧಿಕಾರಿ ಅರುಣ್ ಬೋಥ್ರಾ ಈ ಕರಪತ್ರವನ್ನು ಟ್ವೀಟ್ ಮಾಡುತ್ತಿದ್ದಂತೆ ಇದೀಗ ವೈರಲ್ ಆಗುತ್ತಿದೆ. ‘ನಾನು ಈ ಗ್ರಾಮಕ್ಕೆ ಶಿಫ್ಟ್​ ಅಗುತ್ತಿದ್ದೇನೆ’ ಎಂಬ ವ್ಯಂಗ್ಯದ ಒಕ್ಕಣೆ ಬರೆದಿದ್ದಾರೆ ಅರುಣ್.

ಸರ್ಪಂಚ್ ಚುನಾವಣೆಗೆ ಸ್ಪರ್ಧಿಸಿ, ಚುನಾವಣೆಯ ಈ ಅದ್ಭುತ ಪ್ರಣಾಳಿಕೆ ಪಟ್ಟಿಯನ್ನು ಬಿಡುಗಡೆ ಮಾಡಿದವರು ಜೈಕರಣ್​ ಲಾಥ್ವಾಲ್​ ಎಂಬುವವರು. ನೆಟ್ಟಿಗರು ಈ ಪ್ರಣಾಳಿಕೆ ಪಟ್ಟಿಯನ್ನು ಹಂಚಿಕೊಂಡು ವಿಧವಿಧದಲ್ಲಿ ಪ್ರತಿಕ್ರಿಯಿಸುತ್ತಿದ್ದಾರೆ. ‘ಈ ಗ್ರಾಮಕ್ಕೆ ಶಾಶ್ವತವಾಗಿ ಶಿಫ್ಟ್​ ಆಗಬೇಕೆ, ಬೇಡವೆ? ಎಂಬ ಬಗ್ಗೆ ಗೊಂದಲಕ್ಕೆ ಒಳಗಾಗಿದ್ದೇನೆ’ ಎಂದು ಒಬ್ಬರು ಪ್ರತಿಕ್ರಿಯಿಸಿದ್ದಾರೆ. ‘ನಾನೂ ಈ ಹಳ್ಳಿಗೆ ಶಿಫ್ಟ್​ ಆಗಬೇಕು, ದಯವಿಟ್ಟು ಹಳ್ಳಿಯ ಹೆಸರು ಹೇಳಿ’ ಎಂದಿದ್ದಾರೆ ಮತ್ತೊಬ್ಬರು. ‘ಅರುಣ್ ಬೋಥ್ರಾ ಅವರೊಂದಿಗೆ ನಾನು ಈ ಹಳ್ಳಿಗೆ ಶಿಫ್ಟ್​ ಆಗುತ್ತಿದ್ದೇನೆ’ ಎಂದು ಮಗದೊಬ್ಬರು ತಮಾಷೆ ಮಾಡಿದ್ದಾರೆ. ‘ಆಮೇಲಾದರೆ ವೀಸಾ ಬೇಕಾಗಬಹುದು. ಈಗಲೇ ಶಿಫ್ಟ್​ ಆಗುವುದು ಒಳ್ಳೆಯದು ನಡೆಯಿರಿ’ ಎಂದು ಇನ್ನೂ ಒಬ್ಬರು ಹಾಸ್ಯ ಮಾಡಿದ್ದಾರೆ.

ನೀವೇನಂತೀರಿ? ಇಷ್ಟೆಲ್ಲ ಉಚಿತವಾಗಿ ಸಿಗುವಾಗ ಈ ಹಳ್ಳಿಗೆ ಶಿಫ್ಟ್ ಆಗುವುದು ಒಳಿತಲ್ಲವೆ? ಅದರಲ್ಲೂ ಒಂದು ಹಳ್ಳಿಗೆ ಮೂರು ವಿಮಾನ ನಿಲ್ದಾಣಗಳು! ನಡೆಯಿರಿ ಮತ್ತೆ…

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 4:56 pm, Tue, 11 October 22

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ