AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾನು ಗೆದ್ದರೆ ವಿಮಾನ ನಿಲ್ದಾಣ, ಮಹಿಳೆಯರಿಗೆ ಮೇಕಪ್ ಕಿಟ್, ವೈಫೈ ಉಚಿತ​’

Sarpanch Manifesto : ನಾನಂತೂ ಈ ಹಳ್ಳಿಗೆ ಶಿಫ್ಟ್​ ಆಗ್ತೀನಿ ಎನ್ನುತ್ತಿದ್ದಾರೆ ಐಎಫ್​ಎಸ್​ ಅಧಿಕಾರಿ ಅರುಣ್​ ಗೋಥ್ರಾ. ಈಗಲೇ ಶಿಫ್ಟ್ ಆಗಿಬಿಡೋಣ, ತಡವಾದರೆ ವೀಸಾ ಬೇಕಾಗಬಹುದು ಎನ್ನುತ್ತಿದ್ದಾರೆ ನೆಟ್ಟಿಗರು. ನೀವೂ ಶಿಫ್ಟ್ ಆಗುತ್ತೀರೋ ಹೇಗೆ?

‘ನಾನು ಗೆದ್ದರೆ ವಿಮಾನ ನಿಲ್ದಾಣ, ಮಹಿಳೆಯರಿಗೆ ಮೇಕಪ್ ಕಿಟ್, ವೈಫೈ ಉಚಿತ​’
ಇವರೇ ಆ ಅಭ್ಯರ್ಥಿ!
TV9 Web
| Edited By: |

Updated on:Oct 11, 2022 | 5:09 PM

Share

Trending : ‘ನಾನು ಈ ಚುನಾವಣೆಯಲ್ಲಿ ಗೆದ್ದು ಬಂದರೆ, ಈ ಗ್ರಾಮಕ್ಕೆ ಮೂರು ವಿಮಾನ ನಿಲ್ದಾಣಗಳು, ಹೆಣ್ಣುಮಕ್ಕಳಿಗೆ ಉಚಿತ ಮೇಕಪ್​ ಕಿಟ್, ಪ್ರತೀ ಕುಟುಂಬಕ್ಕೆ ಉಚಿತ ಬೈಕು, ವೈಫೈ, ಪೆಟ್ರೋಲ್​ ಬೆಲೆಯಲ್ಲಿ ಪ್ರತೀ ಲೀಟರ್​ಗೆ ರೂ.20 ಇಳಿಕೆ, ಜಿಎಸ್​ಟಿ ರದ್ದು ಇಷ್ಟೆಲ್ಲ ಸೌಕರ್ಯಗಳನ್ನು ಕಲ್ಪಿಸುತ್ತೇನೆ’ ಹರಿಯಾಣಾದ ಸಿರ್ಸಾದ್​ ಗ್ರಾಮದ ಸರ್ಪಂಚ್ ಹುದ್ದೆಗೆ ಸ್ಪರ್ಧಿಸಿರುವ ಅಭ್ಯರ್ಥಿಯೊಬ್ಬರ ಚುನಾವಣೆ ಪ್ರಣಾಳಿಕೆ ಇದು. ಐಪಿಎಸ್​ ಅಧಿಕಾರಿ ಅರುಣ್ ಬೋಥ್ರಾ ಈ ಕರಪತ್ರವನ್ನು ಟ್ವೀಟ್ ಮಾಡುತ್ತಿದ್ದಂತೆ ಇದೀಗ ವೈರಲ್ ಆಗುತ್ತಿದೆ. ‘ನಾನು ಈ ಗ್ರಾಮಕ್ಕೆ ಶಿಫ್ಟ್​ ಅಗುತ್ತಿದ್ದೇನೆ’ ಎಂಬ ವ್ಯಂಗ್ಯದ ಒಕ್ಕಣೆ ಬರೆದಿದ್ದಾರೆ ಅರುಣ್.

ಸರ್ಪಂಚ್ ಚುನಾವಣೆಗೆ ಸ್ಪರ್ಧಿಸಿ, ಚುನಾವಣೆಯ ಈ ಅದ್ಭುತ ಪ್ರಣಾಳಿಕೆ ಪಟ್ಟಿಯನ್ನು ಬಿಡುಗಡೆ ಮಾಡಿದವರು ಜೈಕರಣ್​ ಲಾಥ್ವಾಲ್​ ಎಂಬುವವರು. ನೆಟ್ಟಿಗರು ಈ ಪ್ರಣಾಳಿಕೆ ಪಟ್ಟಿಯನ್ನು ಹಂಚಿಕೊಂಡು ವಿಧವಿಧದಲ್ಲಿ ಪ್ರತಿಕ್ರಿಯಿಸುತ್ತಿದ್ದಾರೆ. ‘ಈ ಗ್ರಾಮಕ್ಕೆ ಶಾಶ್ವತವಾಗಿ ಶಿಫ್ಟ್​ ಆಗಬೇಕೆ, ಬೇಡವೆ? ಎಂಬ ಬಗ್ಗೆ ಗೊಂದಲಕ್ಕೆ ಒಳಗಾಗಿದ್ದೇನೆ’ ಎಂದು ಒಬ್ಬರು ಪ್ರತಿಕ್ರಿಯಿಸಿದ್ದಾರೆ. ‘ನಾನೂ ಈ ಹಳ್ಳಿಗೆ ಶಿಫ್ಟ್​ ಆಗಬೇಕು, ದಯವಿಟ್ಟು ಹಳ್ಳಿಯ ಹೆಸರು ಹೇಳಿ’ ಎಂದಿದ್ದಾರೆ ಮತ್ತೊಬ್ಬರು. ‘ಅರುಣ್ ಬೋಥ್ರಾ ಅವರೊಂದಿಗೆ ನಾನು ಈ ಹಳ್ಳಿಗೆ ಶಿಫ್ಟ್​ ಆಗುತ್ತಿದ್ದೇನೆ’ ಎಂದು ಮಗದೊಬ್ಬರು ತಮಾಷೆ ಮಾಡಿದ್ದಾರೆ. ‘ಆಮೇಲಾದರೆ ವೀಸಾ ಬೇಕಾಗಬಹುದು. ಈಗಲೇ ಶಿಫ್ಟ್​ ಆಗುವುದು ಒಳ್ಳೆಯದು ನಡೆಯಿರಿ’ ಎಂದು ಇನ್ನೂ ಒಬ್ಬರು ಹಾಸ್ಯ ಮಾಡಿದ್ದಾರೆ.

ನೀವೇನಂತೀರಿ? ಇಷ್ಟೆಲ್ಲ ಉಚಿತವಾಗಿ ಸಿಗುವಾಗ ಈ ಹಳ್ಳಿಗೆ ಶಿಫ್ಟ್ ಆಗುವುದು ಒಳಿತಲ್ಲವೆ? ಅದರಲ್ಲೂ ಒಂದು ಹಳ್ಳಿಗೆ ಮೂರು ವಿಮಾನ ನಿಲ್ದಾಣಗಳು! ನಡೆಯಿರಿ ಮತ್ತೆ…

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 4:56 pm, Tue, 11 October 22

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್