AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್​ಗೆ ದೃಷ್ಟಿ ತೆಗೆದು ಪದ್ಮಶ್ರೀ ಪ್ರಶಸ್ತಿಯನ್ನು ಸ್ವೀಕರಿಸಿದ ಜೋಗತಿ ಮಂಜಮ್ಮ; ವಿಡಿಯೋ ಫುಲ್ ವೈರಲ್

ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರ ಕೈಯಿಂದ ಪ್ರಶಸ್ತಿಯನ್ನು ಪಡೆಯುವ ಮೊದಲು ಜೋಗತಿ ಮಂಜಮ್ಮ ರಾಷ್ಟ್ರಪತಿಗೆ ದೃಷ್ಟಿ ತೆಗೆದಿದ್ದಾರೆ. ಸದ್ಯ ಈ ದೃಶ್ಯ ವೈರಲ್ ಆಗಿದೆ.

ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್​ಗೆ ದೃಷ್ಟಿ ತೆಗೆದು ಪದ್ಮಶ್ರೀ ಪ್ರಶಸ್ತಿಯನ್ನು ಸ್ವೀಕರಿಸಿದ ಜೋಗತಿ ಮಂಜಮ್ಮ; ವಿಡಿಯೋ ಫುಲ್ ವೈರಲ್
ಪದ್ಮಶ್ರೀ ಪ್ರಶಸ್ತಿಯನ್ನು ಸ್ವೀಕರಿಸಿದ ಜೋಗತಿ ಮಂಜಮ್ಮ
TV9 Web
| Edited By: sandhya thejappa|

Updated on:Nov 10, 2021 | 1:15 PM

Share

ಜಾನಪದ ಕ್ಷೇತ್ರಕ್ಕೆ ಕೊಡುಗೆ ನೀಡಿರುವ ಜೋಗತಿ ಮಂಜಮ್ಮ (Jogati Manjamma) ಪದ್ಮಶ್ರೀ ಪ್ರಶಸ್ತಿಯನ್ನು (Padma Shri Award) ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ರಾಮ್ ​ನಾಥ್ ಕೋವಿಂದ್ ಅವರ ಕೈಯಿಂದ ಪ್ರಶಸ್ತಿಯನ್ನು ಪಡೆಯುವ ಮೊದಲು ಜೋಗತಿ ಮಂಜಮ್ಮ ರಾಷ್ಟ್ರಪತಿಗೆ ದೃಷ್ಟಿ ತೆಗೆದಿದ್ದಾರೆ. ಜೋಗತಿ ಮಂಜಮ್ಮ ರಾಷ್ಟ್ರಪತಿ ಕೈಯಿಂದ ಪ್ರಶಸ್ತಿಯನ್ನು ಸ್ವೀಕರಿಸುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ಸದ್ಯ ವೈರಲ್ ಆಗಿದೆ.

ಕರ್ನಾಟಕ ಜಾನಪದ ಅಕಾಡೆಮಿಯ ಮೊದಲ ತೃತೀಯ ಲಿಂಗಿ ಅಧ್ಯಕ್ಷೆ ಮಂಜಮ್ಮ ಜೋಗತಿ ಅವರು ಜಾನಪದ ಕ್ಷೇತ್ರದಲ್ಲಿ ಸಾಧನೆಗೈದಿದ್ದಾರೆ. ಇವರ ಕೊಡುಗೆಯನ್ನು ಗುರುತಿಸಿ ಮಂಗಳವಾರ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಮಂಜಮ್ಮ ಜೋಗತಿಯವರಿಗೆ ಪ್ರಶಸ್ತಿ ಪ್ರದಾನ ಮಾಡಿದರು. ಪ್ರಶಸ್ತಿ ಪಡೆಯುವ ಮುನ್ನಾ ರಾಷ್ಟ್ರಪತಿ ಬಳಿ ಹೋದ ಮಂಜಮ್ಮ ತನ್ನ ಸೀರೆ ಸರಗಿನಿಂದ ರಾಮ್ ನಾಥ್ ಕೋವಿಂದ್​ಗೆ ದೃಷ್ಟಿ ತೆಗೆದಿದ್ದಾರೆ.

ರಾಮ್ ನಾಥ್ ಕೋವಿಂದ್​ಗೆ ಮಂಜಮ್ಮ ಜೋಗತಿ ಅವರು ದೃಷ್ಟಿ ತೆಗೆಯುತ್ತಿದ್ದಂತೆ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಇತರರು ಜೋರಾಗಿ ಚಪ್ಪಾಳೆ ತಟ್ಟಿದರು.

ಜೋಗತಿ ಮಂಜಮ್ಮ ಬಗ್ಗೆ ಜೋಗತಿ ಮಂಜಮ್ಮ ಜಾನಪದ ನೃತ್ಯಗಾರ್ತಿ. ಜೋಗತಿ ನೃತ್ಯ, ಜನಪದ ಹಾಡುಗಳು ಸೇರಿದಂತೆ ಹಲವಾರು ಕಲಾ ಪ್ರಕಾರಗಳನ್ನು ಕರಗತ ಮಾಡಿಕೊಂಡಿದ್ದಾರೆ. ಬಳ್ಳಾರಿ ಸಮೀಪದ ಹಳ್ಳಿಯೊಂದರಲ್ಲಿ ಮಂಜುನಾಥ ಶೆಟ್ಟಿಯಾಗಿ ಜನಿಸಿದ  ಜೋಗತಿ ಮಂಜಮ್ಮ 10ನೇ ತರಗತಿ ಬಳಿಕ ಹೆಣ್ಣಾಗಿ ಗುರುತಿಸಿಕೊಳ್ಳುತ್ತಾರೆ. ಸಮಾಜದಲ್ಲಿ ಹತ್ತು ಹಲವು ಸವಾಲುಗಳನ್ನು ಎದುರಿಸಿದ ಸಾಧಿಸಿದ ಮಂಜಮ್ಮನವರಿಗೆ ಹಲವು ಪ್ರಶಸ್ತಿಗಳು ಲಭಿಸಿವೆ. ಜಾನಪದ ಕ್ಷೇತ್ರಕ್ಕೆ ಇವರ ಕೊಡುಗೆಯನ್ನು ಗುರುತಿಸಿ ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷೆಯರನ್ನಾಗಿ ಮಾಡಲಾಗಿದೆ.

ಇದನ್ನೂ ಓದಿ

Viral Video: ಮದುವೆ ದಿನ ಅಪ್ಪನ ಜೊತೆಗೆ ವೇದಿಕೆಯ ಮೇಲೆ ಕುಣಿದ ಮಗಳು; ಹೃದಯಸ್ಪರ್ಶಿ ವಿಡಿಯೊ ವೈರಲ್

Viral Video: ಯುವತಿ ಚರಂಡಿ ಬಳಿ ನಿಂತು ಸ್ಟಂಟ್ ಮಾಡೋಕೆ ಹೋಗಿ ಆಗಿದ್ದೇ ಬೇರೆ! ಏನಾಯ್ತು ಅನ್ನೋದನ್ನಾ ವಿಡಿಯೊದಲ್ಲೇ ನೋಡಿ

Published On - 1:00 pm, Wed, 10 November 21

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ