AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಇದು ಮದರಸಾ ಅಲ್ಲ, ಕಾಲೇಜು’ ಗಡ್ಡ ಬಿಟ್ಟ ವಿದ್ಯಾರ್ಥಿಯನ್ನು ಹೊರದಬ್ಬಿದ ಪ್ರಾಂಶುಪಾಲ

"ಇದು ಮದರಸಾ ಅಲ್ಲ,ಕಾಲೇಜು. ಯಾವುದೇ ಪಂಗಡದ ಮಗುವಾಗಿದ್ದರೂ ಗಡ್ಡ ಬೆಳೆಸಿ ವಿದ್ಯಾಸಂಸ್ಥೆಗೆ ಬರಬಾರದು" ಎಂದು ಪ್ರಾಂಶುಪಾಲರು ಹೇಳಿದ್ದರು. ಇದರಿಂದ ಕೋಪಗೊಂಡ ವಿದ್ಯಾರ್ಥಿಯ ಹಿರಿಯ ಸಹೋದರ ಜಾತಿ ಆಧಾರದ ಮೇಲೆ ನಿಂದಿಸಿದ್ದಾರೆ ಎಂದು ಪ್ರಾಂಶುಪಾಲರ ವಿರುದ್ಧ ಬರೇಲಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಮತ್ತು ಮುಖ್ಯಮಂತ್ರಿ ಪೋರ್ಟಲ್‌ಗೆ ದೂರು ನೀಡಿದ್ದಾರೆ.

'ಇದು ಮದರಸಾ ಅಲ್ಲ, ಕಾಲೇಜು'  ಗಡ್ಡ ಬಿಟ್ಟ ವಿದ್ಯಾರ್ಥಿಯನ್ನು  ಹೊರದಬ್ಬಿದ ಪ್ರಾಂಶುಪಾಲ
ಸಾಂದರ್ಭಿಕ ಚಿತ್ರ
ಅಕ್ಷತಾ ವರ್ಕಾಡಿ
|

Updated on: Aug 03, 2024 | 5:32 PM

Share

ಉತ್ತರಪ್ರದೇಶ: ವಿದ್ಯಾರ್ಥಿಯೊಬ್ಬ ಗಡ್ಡ ಬಿಟ್ಟುಕೊಂಡು ಕಾಲೇಜಿಗೆ ಬಂದಿದ್ದಕ್ಕೆ ಆತನನ್ನು ಕಾಲೇಜಿನಿಂದ ಪ್ರಾಂಶುಪಾಲರು ಹೊರಹಾಕಿರುವ ಘಟನೆ ಉತ್ತರಪ್ರದೇಶದ ಬರೇಲಿಯಲ್ಲಿ ನಡೆದಿದೆ. ಇದಲ್ಲದೇ ವಿದ್ಯಾರ್ಥಿಯನ್ನು ಜಾತಿ ಆಧಾರದ ಮೇಲೆ ಅಂದರೆ ‘ಇದು ಮದರಸಾ ಅಲ್ಲ, ಕಾಲೇಜು’ ಎಂದು ನಿಂದಿಸಿರುವುದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಈ ಪ್ರಕರಣದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಇದೀಗ ವಿದ್ಯಾರ್ಥಿಯ ಹಿರಿಯ ಸಹೋದರ ಪ್ರಾಂಶುಪಾಲರ ವಿರುದ್ಧ ಬರೇಲಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಮತ್ತು ಮುಖ್ಯಮಂತ್ರಿ ಪೋರ್ಟಲ್‌ಗೆ ದೂರು ನೀಡಿದ್ದಾರೆ.

ಆಜಾದ್ ನೌರಂಗ್ ಇಂಟರ್ ಕಾಲೇಜ್ ಸೈಂಥಲ್ ನಲ್ಲಿ ವಿದ್ಯಾರ್ಥಿ ಫರ್ಮಾನ್ ಅಲಿ ಓದುತ್ತಿದ್ದು, ಕೆಲ ದಿನಗಳ ಹಿಂದೆ ಫರ್ಮಾನ್ ಅಲಿಗೆ ಗಡ್ಡ ಬೋಳಿಸಿಕೊಂಡು ಬರುವಂತೆ ಪ್ರಾಂಶುಪಾಲರು ಹೇಳಿದ್ದಾರೆ. ಆದರೆ ಗಡ್ಡ ಬೋಳಿಸಿಕೊಂಡಿಲ್ಲ ಎಂಬ ಕಾರಣಕ್ಕೆ ವಿದ್ಯಾರ್ಥಿ ಫರ್ಮಾನ್ ಅಲಿಗೆ ಶಾಲೆಗೆ ಬರದಂತೆ ಪ್ರಾಂಶುಪಾಲರು ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ರಸ್ತೆಯುದ್ದಕ್ಕೂ ಲಿಪ್ ಕಿಸ್​​ ಮಾಡುತ್ತಾ ಬೈಕಿನಲ್ಲಿ ಜಾಲಿ ರೈಡ್​​​ ಹೊರಟ ಜೋಡಿ; ವಿಡಿಯೋ ವೈರಲ್​​​​

“ಇದು ಮದರಸಾ ಅಲ್ಲ,ಕಾಲೇಜು. ಯಾವುದೇ ಪಂಗಡದ ಮಗುವಾಗಿದ್ದರೂ ಗಡ್ಡ ಬೆಳೆಸಿ ಶಾಲೆಗೆ ಬರಬಾರದು ಎಂಬ ಸರ್ಕಾರಿ ಆದೇಶವಿದೆ” ಎಂದು ಪ್ರಾಂಶುಪಾಲರು ಹೇಳಿದ್ದರು. ಇದರಿಂದ ಕೋಪಗೊಂಡ ವಿದ್ಯಾರ್ಥಿಯ ಸಹೋದರ “ಇಂಟರ್ ಕಾಲೇಜಿನ ಪ್ರಾಂಶುಪಾಲ ಹುದ್ದೆಯಲ್ಲಿರುವ ರಾಮ್ ಅಚಲ್ ಖಾರ್ವಾರ್ ಅವರ ಈ ನಡವಳಿಕೆ ತಾರತಮ್ಯ ಮತ್ತು ಸಾಮಾಜಿಕ ಸಾಮರಸ್ಯವನ್ನು ಹದಗೆಡಿಸುತ್ತದೆ” ಎಂದು ಇಡೀ ವಿಷಯದ ಬಗ್ಗೆ ಡಿಎಂ ಮತ್ತು ಮುಖ್ಯಮಂತ್ರಿ ಪೋರ್ಟಲ್‌ನಲ್ಲಿ ದೂರು ನೀಡಿದ್ದಾರೆ ಎಂದು ವರದಿಯಾಗಿದೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ