AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಇದು ಮದರಸಾ ಅಲ್ಲ, ಕಾಲೇಜು’ ಗಡ್ಡ ಬಿಟ್ಟ ವಿದ್ಯಾರ್ಥಿಯನ್ನು ಹೊರದಬ್ಬಿದ ಪ್ರಾಂಶುಪಾಲ

"ಇದು ಮದರಸಾ ಅಲ್ಲ,ಕಾಲೇಜು. ಯಾವುದೇ ಪಂಗಡದ ಮಗುವಾಗಿದ್ದರೂ ಗಡ್ಡ ಬೆಳೆಸಿ ವಿದ್ಯಾಸಂಸ್ಥೆಗೆ ಬರಬಾರದು" ಎಂದು ಪ್ರಾಂಶುಪಾಲರು ಹೇಳಿದ್ದರು. ಇದರಿಂದ ಕೋಪಗೊಂಡ ವಿದ್ಯಾರ್ಥಿಯ ಹಿರಿಯ ಸಹೋದರ ಜಾತಿ ಆಧಾರದ ಮೇಲೆ ನಿಂದಿಸಿದ್ದಾರೆ ಎಂದು ಪ್ರಾಂಶುಪಾಲರ ವಿರುದ್ಧ ಬರೇಲಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಮತ್ತು ಮುಖ್ಯಮಂತ್ರಿ ಪೋರ್ಟಲ್‌ಗೆ ದೂರು ನೀಡಿದ್ದಾರೆ.

'ಇದು ಮದರಸಾ ಅಲ್ಲ, ಕಾಲೇಜು'  ಗಡ್ಡ ಬಿಟ್ಟ ವಿದ್ಯಾರ್ಥಿಯನ್ನು  ಹೊರದಬ್ಬಿದ ಪ್ರಾಂಶುಪಾಲ
ಸಾಂದರ್ಭಿಕ ಚಿತ್ರ
ಅಕ್ಷತಾ ವರ್ಕಾಡಿ
|

Updated on: Aug 03, 2024 | 5:32 PM

Share

ಉತ್ತರಪ್ರದೇಶ: ವಿದ್ಯಾರ್ಥಿಯೊಬ್ಬ ಗಡ್ಡ ಬಿಟ್ಟುಕೊಂಡು ಕಾಲೇಜಿಗೆ ಬಂದಿದ್ದಕ್ಕೆ ಆತನನ್ನು ಕಾಲೇಜಿನಿಂದ ಪ್ರಾಂಶುಪಾಲರು ಹೊರಹಾಕಿರುವ ಘಟನೆ ಉತ್ತರಪ್ರದೇಶದ ಬರೇಲಿಯಲ್ಲಿ ನಡೆದಿದೆ. ಇದಲ್ಲದೇ ವಿದ್ಯಾರ್ಥಿಯನ್ನು ಜಾತಿ ಆಧಾರದ ಮೇಲೆ ಅಂದರೆ ‘ಇದು ಮದರಸಾ ಅಲ್ಲ, ಕಾಲೇಜು’ ಎಂದು ನಿಂದಿಸಿರುವುದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಈ ಪ್ರಕರಣದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಇದೀಗ ವಿದ್ಯಾರ್ಥಿಯ ಹಿರಿಯ ಸಹೋದರ ಪ್ರಾಂಶುಪಾಲರ ವಿರುದ್ಧ ಬರೇಲಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಮತ್ತು ಮುಖ್ಯಮಂತ್ರಿ ಪೋರ್ಟಲ್‌ಗೆ ದೂರು ನೀಡಿದ್ದಾರೆ.

ಆಜಾದ್ ನೌರಂಗ್ ಇಂಟರ್ ಕಾಲೇಜ್ ಸೈಂಥಲ್ ನಲ್ಲಿ ವಿದ್ಯಾರ್ಥಿ ಫರ್ಮಾನ್ ಅಲಿ ಓದುತ್ತಿದ್ದು, ಕೆಲ ದಿನಗಳ ಹಿಂದೆ ಫರ್ಮಾನ್ ಅಲಿಗೆ ಗಡ್ಡ ಬೋಳಿಸಿಕೊಂಡು ಬರುವಂತೆ ಪ್ರಾಂಶುಪಾಲರು ಹೇಳಿದ್ದಾರೆ. ಆದರೆ ಗಡ್ಡ ಬೋಳಿಸಿಕೊಂಡಿಲ್ಲ ಎಂಬ ಕಾರಣಕ್ಕೆ ವಿದ್ಯಾರ್ಥಿ ಫರ್ಮಾನ್ ಅಲಿಗೆ ಶಾಲೆಗೆ ಬರದಂತೆ ಪ್ರಾಂಶುಪಾಲರು ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ರಸ್ತೆಯುದ್ದಕ್ಕೂ ಲಿಪ್ ಕಿಸ್​​ ಮಾಡುತ್ತಾ ಬೈಕಿನಲ್ಲಿ ಜಾಲಿ ರೈಡ್​​​ ಹೊರಟ ಜೋಡಿ; ವಿಡಿಯೋ ವೈರಲ್​​​​

“ಇದು ಮದರಸಾ ಅಲ್ಲ,ಕಾಲೇಜು. ಯಾವುದೇ ಪಂಗಡದ ಮಗುವಾಗಿದ್ದರೂ ಗಡ್ಡ ಬೆಳೆಸಿ ಶಾಲೆಗೆ ಬರಬಾರದು ಎಂಬ ಸರ್ಕಾರಿ ಆದೇಶವಿದೆ” ಎಂದು ಪ್ರಾಂಶುಪಾಲರು ಹೇಳಿದ್ದರು. ಇದರಿಂದ ಕೋಪಗೊಂಡ ವಿದ್ಯಾರ್ಥಿಯ ಸಹೋದರ “ಇಂಟರ್ ಕಾಲೇಜಿನ ಪ್ರಾಂಶುಪಾಲ ಹುದ್ದೆಯಲ್ಲಿರುವ ರಾಮ್ ಅಚಲ್ ಖಾರ್ವಾರ್ ಅವರ ಈ ನಡವಳಿಕೆ ತಾರತಮ್ಯ ಮತ್ತು ಸಾಮಾಜಿಕ ಸಾಮರಸ್ಯವನ್ನು ಹದಗೆಡಿಸುತ್ತದೆ” ಎಂದು ಇಡೀ ವಿಷಯದ ಬಗ್ಗೆ ಡಿಎಂ ಮತ್ತು ಮುಖ್ಯಮಂತ್ರಿ ಪೋರ್ಟಲ್‌ನಲ್ಲಿ ದೂರು ನೀಡಿದ್ದಾರೆ ಎಂದು ವರದಿಯಾಗಿದೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಕೊಡಗು-ಕೇರಳ ಗಡಿಯಲ್ಲಿ ಲಂಚಾವತಾರ? ಚೆಕ್‌ಪೋಸ್ಟ್‌ ವಿಡಿಯೋ ವೈರಲ್
ಕೊಡಗು-ಕೇರಳ ಗಡಿಯಲ್ಲಿ ಲಂಚಾವತಾರ? ಚೆಕ್‌ಪೋಸ್ಟ್‌ ವಿಡಿಯೋ ವೈರಲ್
ಮನೆಯ ಮುಂದೆ ಪಾರ್ಕ್ ಮಾಡಿದ್ದ ಆಟೋದ ಚಕ್ರ ಕಳವು
ಮನೆಯ ಮುಂದೆ ಪಾರ್ಕ್ ಮಾಡಿದ್ದ ಆಟೋದ ಚಕ್ರ ಕಳವು