AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯೂನಿಫಾರಂ ಧರಿಸಿ ಬಸ್​ನೊಳಗೆ ಬಿಯರ್ ಕುಡಿದ ಶಾಲಾ ವಿದ್ಯಾರ್ಥಿಗಳ ವಿಡಿಯೋ ವೈರಲ್

ಈ ಘಟನೆ ಶಾಲೆಯ ಹೊರಗೆ ನಡೆದಿರುವುದರಿಂದ, ಪೊಲೀಸರು ಇದರ ಬಗ್ಗೆ ವಿಚಾರಣೆ ನಡೆಸುತ್ತಿದ್ದಾರೆ. ಪೊಲೀಸರ ವಿಚಾರಣೆ ಮುಗಿದ ನಂತರ, ನಾವು ಸೂಕ್ತ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಶಿಕ್ಷಣಾಧಿಕಾರಿ ತಿಳಿಸಿದ್ದಾರೆ. 

ಯೂನಿಫಾರಂ ಧರಿಸಿ ಬಸ್​ನೊಳಗೆ ಬಿಯರ್ ಕುಡಿದ ಶಾಲಾ ವಿದ್ಯಾರ್ಥಿಗಳ ವಿಡಿಯೋ ವೈರಲ್
ಬಸ್​ನೊಳಗೆ ಬಿಯರ್ ಕುಡಿದ ವಿದ್ಯಾರ್ಥಿಗಳು
TV9 Web
| Edited By: |

Updated on:Mar 24, 2022 | 4:16 PM

Share

ಚೆನ್ನೈ: ತಮಿಳುನಾಡಿನ ಚೆಂಗಲ್ಪಟ್ಟು ಜಿಲ್ಲೆಯಲ್ಲಿ ಚಲಿಸುತ್ತಿದ್ದ ಬಸ್ಸಿನೊಳಗೆ ಶಾಲಾ ವಿದ್ಯಾರ್ಥಿಗಳು (School Students) ಆಲ್ಕೋಹಾಲ್ ಸೇವಿಸುತ್ತಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ (Social Media) ವೈರಲ್ ಆಗಿದೆ. ಈ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್​ಲೋಡ್ ಮಾಡಲಾಗಿದ್ದು, ಅದೇ ಬಸ್​ನಲ್ಲಿದ್ದ ವಿದ್ಯಾರ್ಥಿಯೊಬ್ಬರು ಈ ವಿಡಿಯೋವನ್ನು ರೆಕಾರ್ಡ್ ಮಾಡಿದ್ದಾರೆ ಎನ್ನಲಾಗಿದೆ. ಶಾಲೆಯ ಯೂನಿಫಾರಂ ಧರಿಸಿ ಬಸ್​ನೊಳಗೆ ಹುಡುಗಿಯರು ಮತ್ತು ಹುಡುಗರ ಗುಂಪು ಬಿಯರ್ ಬಾಟಲಿಯನ್ನು ಓಪನ್ ಮಾಡಿ ಕುಡಿಯುತ್ತಿರುವುದನ್ನು ವಿಡಿಯೋದಲ್ಲಿ ನೋಡಬಹುದು. ಈ ರೀತಿ ಬಸ್​ನಲ್ಲಿ ಮದ್ಯ ಸೇವಿಸಿದ ಎಲ್ಲಾ ವಿದ್ಯಾರ್ಥಿಗಳು ಚೆಂಗಲ್ಪಟ್ಟುವಿನ ಸರ್ಕಾರಿ ಶಾಲೆಯವರು ಎನ್ನಲಾಗಿದೆ.

ಮೊದಲು ಇದು ಹಳೆಯ ವಿಡಿಯೋ ಎಂದು ಭಾವಿಸಲಾಗಿತ್ತು. ಆದರೆ, ಇದು ಮಂಗಳವಾರ ನಡೆದಿರುವ ಘಟನೆ ಎಂದು ತಿಳಿದುಬಂದಿದೆ. ವಿದ್ಯಾರ್ಥಿಗಳು ತಮ್ಮ ಶಾಲಾ ಸಮವಸ್ತ್ರದಲ್ಲಿ ತಿರುಕಝುಕುಂದ್ರಂನಿಂದ ತಾಚೂರ್‌ಗೆ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದರು. ಈ ಘಟನೆಯನ್ನು ಅಧಿಕಾರಿಗಳು ಗಮನಿಸಿದ್ದು, ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ ಎಂದು ಜಿಲ್ಲಾ ಶಿಕ್ಷಣಾಧಿಕಾರಿ ತಿಳಿಸಿದ್ದಾರೆ.

ಈ ಘಟನೆ ಶಾಲೆಯ ಹೊರಗೆ ನಡೆದಿರುವುದರಿಂದ, ಪೊಲೀಸರು ಇದರ ಬಗ್ಗೆ ವಿಚಾರಣೆ ನಡೆಸುತ್ತಿದ್ದಾರೆ. ಪೊಲೀಸರ ವಿಚಾರಣೆ ಮುಗಿದ ನಂತರ, ನಾವು ಸೂಕ್ತ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಶಿಕ್ಷಣಾಧಿಕಾರಿ ತಿಳಿಸಿದ್ದಾರೆ.

ಇದಕ್ಕೂ ಮೊದಲು 2017ರಲ್ಲಿ ಕರ್ನಾಟಕದ ತುಮಕೂರು ಜಿಲ್ಲೆಯ ಸರ್ಕಾರಿ ಶಾಲೆಯೊಂದರ ಶಾಲಾ ಶಿಕ್ಷಕರು ಶಾಲಾ ಪ್ರವಾಸದ ವೇಳೆ ನೀರು ಕೇಳಿದಾಗ ವಿದ್ಯಾರ್ಥಿಗಳಿಗೆ ಮದ್ಯ ನೀಡಿದ್ದರು. ಆ ವಿದ್ಯಾರ್ಥಿಗಳು 8, 9 ಮತ್ತು 10ನೇ ತರಗತಿಯವರಾಗಿದ್ದು, ಶಾಲಾ ಮುಖ್ಯೋಪಾಧ್ಯಾಯರು ಮತ್ತು ಇಬ್ಬರು ಶಿಕ್ಷಕರು ಮದ್ಯ ಸೇವಿಸಿದ್ದರು. ಎಲ್ಲಾ ಮೂವರು ಆರೋಪಿ ಅಧ್ಯಾಪಕರನ್ನು ಅಮಾನತುಗೊಳಿಸಲಾಗಿತ್ತು.

ಇದನ್ನೂ ಓದಿ: Shocking News: ಹೆಂಡತಿ ಮಟನ್ ಕರಿ ಮಾಡದಿದ್ದಕ್ಕೆ 6 ಬಾರಿ ಪೊಲೀಸರಿಗೆ ಫೋನ್ ಮಾಡಿ ಕಾಟ ಕೊಟ್ಟ ಗಂಡ!

Shocking News: 5 ವರ್ಷಗಳಿಂದ ಅಪ್ಪ, ಅಣ್ಣ, ಅಜ್ಜನಿಂದಲೇ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ!

Published On - 4:14 pm, Thu, 24 March 22

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ