Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Photo: ಮೊಸಳೆಯ ಗಾತ್ರವನ್ನು ಹೋಲುವ ವಿಶಿಷ್ಟ ಜಾತಿಯ ಹಲ್ಲಿ ಪತ್ತೆ

ವಿಜ್ಞಾನಿಗಳು ಮೆಕ್ಸಿಕೋದಲ್ಲಿ ಮೊಸಳೆಯಷ್ಟು ಗಾತ್ರವುಳ್ಳ ವಿಶಿಷ್ಟವಾದ ಹಲ್ಲಿಯನ್ನು ಪತ್ತೆಹಚ್ಚಿದ್ದಾರೆ. ಶೋಧದ ವೇಳೆ ಈ ಜೀವಿಯನ್ನು ಕಂಡು ವಿಜ್ಞಾನಿಗಳೂ ಬೆಚ್ಚಿಬಿದ್ದಿದ್ದಾರೆ. ಸದ್ಯ ಈ ವಿಶಿಷ್ಟ ಜಾತಿಯ ಹಲ್ಲಿ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗುತ್ತಿದೆ.

Viral Photo: ಮೊಸಳೆಯ ಗಾತ್ರವನ್ನು ಹೋಲುವ ವಿಶಿಷ್ಟ ಜಾತಿಯ ಹಲ್ಲಿ ಪತ್ತೆ
Alligator-like lizardImage Credit source: Pixabay
Follow us
ಅಕ್ಷತಾ ವರ್ಕಾಡಿ
|

Updated on: Jan 09, 2024 | 10:43 AM

ಮೆಕ್ಸಿಕೋದಲ್ಲಿ ಕಂಡುಬಂದ ಮೊಸಳೆಯ ಗಾತ್ರವನ್ನು ಹೋಲುವ ವಿಶಿಷ್ಟ ಜಾತಿಯ ಹಲ್ಲಿ ಇತ್ತೀಚಿನ ದಿನಗಳಲ್ಲಿ ಭಾರೀ ಚರ್ಚೆಯಲ್ಲಿದೆ. ವಾಸ್ತವವಾಗಿ, ವಿಜ್ಞಾನಿಗಳು ದಕ್ಷಿಣ ಮೆಕ್ಸಿಕೋದ ಮರದ ಮೇಲ್ಭಾಗದಲ್ಲಿ ಮೊಸಳೆಯಂತಹ ಗಾತ್ರದವುಳ್ಳ ಜೀವಿಯನ್ನು ಪತ್ತೆ ಹಚ್ಚಿದ್ದಾರೆ. ಈ ಹೊಸ ಜಾತಿಗೆ ಅಬ್ರೋನಿಯಾ ಕ್ಯುನೆಮಿಕಾ ಅಥವಾ ಕೊಪಿಲಾ ಅರ್ಬೊರಿಯಲ್ ಅಲಿಗೇಟರ್ ಲಿಸರ್ಡ್​​ ಎಂದು ಹೆಸರಿಸಲಾಗಿದೆ. ವಿಜ್ಞಾನಿಗಳ ಪ್ರಕಾರ, ಈ ಹಲ್ಲಿ ಸುಮಾರು 9.8 ಇಂಚುಗಳಷ್ಟು ಉದ್ದವಿದ್ದು, ಅದರ ದೇಹವು ಹಳದಿ-ಕಂದು ಬಣ್ಣದ ಚಿಪ್ಪುಗಳಿವೆ. ಜೊತೆಗೆ ಗಾಢ ಕಂದು ಬಣ್ಣದ ಚುಕ್ಕೆಗಳನ್ನು ಕಾಣಬಹುದು. ಈ ಜೀವಿಯ ಕಣ್ಣು ತಿಳಿ ಹಳದಿ ಮತ್ತು ಕಪ್ಪು ಕಲೆಗಳನ್ನು ಹೊಂದಿರುತ್ತವೆ ಎಂದು ಸಂಶೋಧಕರು ತಿಳಿಸಿದ್ದಾರೆ.

PLOS One ಜರ್ನಲ್‌ನಲ್ಲಿ ಪ್ರಕಟವಾದ ಅಧ್ಯಯನದ ಪ್ರಕಾರ, 2014 ರಲ್ಲಿ ಈ ಹಲ್ಲಿಯ ‘ಚಿತ್ರಗಳು’ ಬೆಳಕಿಗೆ ಬಂದ ನಂತರ, ಸಂಶೋಧಕರು 2015 ಮತ್ತು 2022 ರ ನಡುವೆ ಹುಡುಕಾಟ ನಡೆಸಿ ಹಲ್ಲಿಯಂತಹ ‘ಅಸ್ಪಷ್ಟ’ ಜೀವಿಗಳನ್ನು ಕಂಡುಹುಡುಕಿದ್ದಾರೆ. ಮಿಯಾಮಿ ಹೆರಾಲ್ಡ್ ವರದಿಯ ಪ್ರಕಾರ, ಈ ಹಲ್ಲಿಯನ್ನು ಹುಡುಕಲು ಸಂಶೋಧಕರು ಸುಮಾರು 20 ಮರಗಳನ್ನು ಏರಿ 350 ಗಂಟೆಗಳ ಕಾಲ ಹುಡುಕಾಟ ನಡೆಸಿದ್ದಾರೆ.

ಇದನ್ನೂ ಓದಿ: ಬರ್ಡ್ ಮ್ಯಾನ್ ಸುಮೇಧ್ ವಾಘಮಾರೆ ಜತೆ ವಿಶೇಷ ವಿಡಿಯೋ ಹಂಚಿಕೊಂಡ ಸಚಿನ್

ಈ ವಿಶಿಷ್ಟ ಹಲ್ಲಿ ಎಲ್ಲಿ ಕಂಡುಬಂದಿದೆ?

ವರದಿಗಳ ಪ್ರಕಾರ, ಸಂಶೋಧಕರು ಈ ಮೊಸಳೆಯಂತಹ ಹಲ್ಲಿಯನ್ನು ಮೆಕ್ಸಿಕೋ ನಗರದ ಆಗ್ನೇಯಕ್ಕೆ 700 ಕಿಲೋಮೀಟರ್ ದೂರದಲ್ಲಿರುವ ಚಿಯಾಪಾಸ್‌ನಲ್ಲಿರುವ ಕೋಪಿಲಾ ನಗರದಲ್ಲಿ ಪತ್ತೆ ಹಚ್ಚಿದ್ದಾರೆ.ಆದಾಗ್ಯೂ, ಅದರ ಸುರಕ್ಷತೆಗಾಗಿ ಈ ಹೊಸ ಜಾತಿಯ ಬಗ್ಗೆ ನಿಖರವಾದ ಸ್ಥಳವನ್ನು ಬಹಿರಂಗಪಡಿಸಿಲ್ಲ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿ ಹೊಡೆದು ಹಾರಿ ಬಿದ್ದ ಯುವಕ
ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿ ಹೊಡೆದು ಹಾರಿ ಬಿದ್ದ ಯುವಕ
ಸತೀಶ್ ಜಾರಕಿಹೊಳಿಗೆ ವಯಸ್ಸು 62 ಆದರೂ ಕ್ರೀಡಾಪಟುವಿನಂಥ ಪರ್ಸನಾಲಿಟಿ
ಸತೀಶ್ ಜಾರಕಿಹೊಳಿಗೆ ವಯಸ್ಸು 62 ಆದರೂ ಕ್ರೀಡಾಪಟುವಿನಂಥ ಪರ್ಸನಾಲಿಟಿ
ಅಜಯ್ ರಾವ್ ಓದಿದ್ದು ಎಸ್​ಎಸ್​ಎಲ್​ಸಿ ತನಕ ಮಾತ್ರ; ಅಚ್ಚರಿ ವಿಷಯ ಹೇಳಿದ ನಟ
ಅಜಯ್ ರಾವ್ ಓದಿದ್ದು ಎಸ್​ಎಸ್​ಎಲ್​ಸಿ ತನಕ ಮಾತ್ರ; ಅಚ್ಚರಿ ವಿಷಯ ಹೇಳಿದ ನಟ
ಒಬ್ಬ ಸಿಬ್ಬಂದಿ ತಪ್ಪಿನಿಂದ 20,000 ಶಿಕ್ಷಕರು ನೋವಿಗೀಡಾಗಿದ್ದಾರೆ: ಪ್ರಸನ್ನ
ಒಬ್ಬ ಸಿಬ್ಬಂದಿ ತಪ್ಪಿನಿಂದ 20,000 ಶಿಕ್ಷಕರು ನೋವಿಗೀಡಾಗಿದ್ದಾರೆ: ಪ್ರಸನ್ನ
ಪ್ರತಿಭಟನೆ ಕಾರಣ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್
ಪ್ರತಿಭಟನೆ ಕಾರಣ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್
ನಾವು 75 ಲಕ್ಷ ಇದ್ರೂ 7 ಜನ ಮಾತ್ರ ಶಾಸಕರಿದ್ದೇವೆ: ಸಿಎಂ ಇಬ್ರಾಹಿಂ ಬೇಸರ
ನಾವು 75 ಲಕ್ಷ ಇದ್ರೂ 7 ಜನ ಮಾತ್ರ ಶಾಸಕರಿದ್ದೇವೆ: ಸಿಎಂ ಇಬ್ರಾಹಿಂ ಬೇಸರ
ಉಡುಪಿ, ತಿರುಪತಿಗೆ ಮುಸ್ಲಿಮರನ್ನ ಸೇರಿಸಿಕೊಳ್ಳುತ್ತೀರಾ? ಇಬ್ರಾಹಿಂ ಪ್ರಶ್ನೆ
ಉಡುಪಿ, ತಿರುಪತಿಗೆ ಮುಸ್ಲಿಮರನ್ನ ಸೇರಿಸಿಕೊಳ್ಳುತ್ತೀರಾ? ಇಬ್ರಾಹಿಂ ಪ್ರಶ್ನೆ
ಹೃಷಿಕೇಶದಲ್ಲಿ ರಿವರ್ ರಾಫ್ಟಿಂಗ್ ವೇಳೆ ಗಂಗಾ ನದಿಯಲ್ಲಿ ಮುಳುಗಿದ ಯುವಕ
ಹೃಷಿಕೇಶದಲ್ಲಿ ರಿವರ್ ರಾಫ್ಟಿಂಗ್ ವೇಳೆ ಗಂಗಾ ನದಿಯಲ್ಲಿ ಮುಳುಗಿದ ಯುವಕ
ಲಿಂಗಾಯತ ಸಚಿವರೆಲ್ಲ ಚರ್ಚೆಗೆ ಪೂರ್ವಸಿದ್ಧತೆ ಮಾಡಿಕೊಂಡಿದ್ದೆವು: ಪಾಟೀಲ್
ಲಿಂಗಾಯತ ಸಚಿವರೆಲ್ಲ ಚರ್ಚೆಗೆ ಪೂರ್ವಸಿದ್ಧತೆ ಮಾಡಿಕೊಂಡಿದ್ದೆವು: ಪಾಟೀಲ್
ನನ್ನನ್ನು ರಾಜಕೀಯವಾಗಿ ಬೆಳೆಸಿದ್ದು ಡಿಕೆ ಶಿವಕುಮಾರ್: ಸೋಮಶೇಖರ್
ನನ್ನನ್ನು ರಾಜಕೀಯವಾಗಿ ಬೆಳೆಸಿದ್ದು ಡಿಕೆ ಶಿವಕುಮಾರ್: ಸೋಮಶೇಖರ್