AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಜಿಲ್ಲಾಸ್ಪತ್ರೆಯಲ್ಲಿ ರೋಗಿಗೆ ಇಂಜೆಕ್ಷನ್​ ಕೊಟ್ಟ ಸೆಕ್ಯೂರಿಟಿ ಗಾರ್ಡ್​; ಅಂಥ ಪರಿಸ್ಥಿತಿ ಏನಿತ್ತು ಎಂಬುದು ನೆಟ್ಟಿಗರ ಪ್ರಶ್ನೆ

ಆದರೆ ವಿಡಿಯೋ ನೋಡಿದವರು ಮಾತ್ರ ಅಚ್ಚರಿ ವ್ಯಕ್ತಪಡಿಸುತ್ತಿದ್ದಾರೆ. ಅಷ್ಟೊ ದೊಡ್ಡ, ಹಲವು ವೈದ್ಯಕೀಯ ಸಿಬ್ಬಂದಿಯಿರುವ ಆಸ್ಪತ್ರೆಯಲ್ಲಿ ಸೆಕ್ಯೂರಿಟಿ ಗಾರ್ಡ್​ ಇಂಜೆಕ್ಷನ್​ ಕೊಟ್ಟಿದ್ದೇಕೆ ಎಂದು ಪ್ರಶ್ನಿಸುತ್ತಿದ್ದಾರೆ.

Video: ಜಿಲ್ಲಾಸ್ಪತ್ರೆಯಲ್ಲಿ ರೋಗಿಗೆ ಇಂಜೆಕ್ಷನ್​ ಕೊಟ್ಟ ಸೆಕ್ಯೂರಿಟಿ ಗಾರ್ಡ್​;  ಅಂಥ ಪರಿಸ್ಥಿತಿ ಏನಿತ್ತು ಎಂಬುದು ನೆಟ್ಟಿಗರ ಪ್ರಶ್ನೆ
ಒಡಿಶಾದಲ್ಲಿ ರೋಗಿಗೆ ಇಂಜೆಕ್ಷನ್​ ಕೊಟ್ಟ ಸೆಕ್ಯೂರಿಟಿ ಗಾರ್ಡ್​
TV9 Web
| Edited By: |

Updated on: Sep 11, 2021 | 4:01 PM

Share

ಅಂಗುಲ್​: ಅನಾರೋಗ್ಯವೆಂದು ಆಸ್ಪತ್ರೆಗೆ ಬಂದ ರೋಗಿಗೆ ಆ ಹಾಸ್ಪಿಟಲ್​​ನ ಸೆಕ್ಯೂರಿಟಿ ಗಾರ್ಡ್​ ಇಂಜೆಕ್ಷನ್​ ಕೊಟ್ಟಿದ್ದಾರೆ. ಈ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾಗಳಲ್ಲಿ ಸಿಕ್ಕಾಪಟೆ ವೈರಲ್​ ಆಗುತ್ತಿದೆ. ಈ ಘಟನೆ ನಡೆದದ್ದು ಓಡಿಶಾದ ಅಂಗುಲ್​ ಜಿಲ್ಲಾ ಪ್ರಧಾನ ಆಸ್ಪತ್ರೆಯಲ್ಲಿ. ಅಲ್ಲಿ ವೈದ್ಯರು, ಪ್ಯಾರಾಮೆಡಿಕಲ್​ ಸಿಬ್ಬಂದಿ ಇದ್ದಾಗ್ಯೂ ಕೂಡ ಸೆಕ್ಯೂರಿಟಿ ಗಾರ್ಡ್​ ಇಂಜೆಕ್ಷನ್​ ನೀಡಿದ್ದಾರೆ.

ವಿಡಿಯೋ ವೈರಲ್​ ಆದ ಬೆನ್ನಲ್ಲೇ ಸ್ಥಳೀಯ ಮಾಧ್ಯಮವೊಂದು ಆಸ್ಪತ್ರೆಯ ಎಡಿಎಂಒ ಮಾನಸ್​ ರಂಜನ್​ ಬಿಸ್ವಾಲ್​​ ಅವರನ್ನು ಮಾತನಾಡಿಸಿದೆ. ಹೀಗೆ ಸೆಕ್ಯೂರಿಟಿ ಗಾರ್ಡ್ ಇಂಜೆಕ್ಷನ್​ ನೀಡಿದ್ದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಯಾಕೆ ಹೀಗಾಯಿತು ಎಂದು ಪರಿಶೀಲಿಸಿ, ಸಂಬಂಧಪಟ್ಟವರ ವಿರುದ್ಧ ತನಿಖೆ ಕೈಗೊಳ್ಳಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ.

ಆದರೆ ವಿಡಿಯೋ ನೋಡಿದವರು ಮಾತ್ರ ಅಚ್ಚರಿ ವ್ಯಕ್ತಪಡಿಸುತ್ತಿದ್ದಾರೆ. ಅಷ್ಟೊ ದೊಡ್ಡ ಆಸ್ಪತ್ರೆ. ಅಲ್ಲಿ ಇರುವುದು ಒಬ್ಬರೇ ವೈದ್ಯರೂ ಅಲ್ಲ. ಬೇರೆ ವೈದ್ಯರಿದ್ದಾರೆ. ನರ್ಸ್​ಗಳಿರುತ್ತಾರೆ. ಪ್ಯಾರಾ ಮೆಡಿಕಲ್​ ಸಿಬ್ಬಂದಿಯೂ ಇದ್ದಾರೆ. ಅಷ್ಟೆಲ್ಲ ಆದರೂ ಸೆಕ್ಯೂರಿಟಿ ಗಾರ್ಡ್​ ಇಂಜೆಕ್ಷನ್​ ನೀಡುವ ಸಂದರ್ಭ ಎದುರಾಗಲು ಕಾರಣವಾದರೂ ಏನು ಎಂದು ಪ್ರಶ್ನೆ ಮಾಡುತ್ತಿದ್ದಾರೆ. ಈ ಮಧ್ಯೆ ಆಗಸ್ಟ್​ 29ರಂದು ಒಡಿಶಾ ಸರ್ಕಾರ ಒಂದು ಸುತ್ತೋಲೆ ಹೊರಡಿಸಿದ್ದು, ಅದರಲ್ಲಿ ರಾಜ್ಯದ ಯಾವುದೇ ಸರ್ಕಾರಿ ಆಸ್ಪತ್ರೆಗಳಲ್ಲೂ, ವೈದ್ಯಕೀಯ ವೃತ್ತಿಗೆ ಸಂಬಂಧಿತವಲ್ಲದ ಸಿಬ್ಬಂದಿಯನ್ನು , ರೋಗಿಗಳ ಚಿಕಿತ್ಸೆಗೆ ಬಳಸಿಕೊಳ್ಳುವಂತಿಲ್ಲ ಎಂದು ಹೇಳಿತ್ತು.

ಇದನ್ನೂ ಓದಿ: Motorola: ಮೋಟೋರೊಲಾ ಕಂಪೆನಿಂದ ಹೊಸ ಏರ್​ ಚಾರ್ಜರ್​: ಇದರಲ್ಲಿದೆ ನೀವು ಊಹಿಸಲಾಗದ ಫೀಚರ್ಸ್

Follow Us
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​