AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಅಯ್ಯೋ ಇದು ಯಾರು? ಕನ್ನಡಿಯಲ್ಲಿ ತನ್ನ ಪ್ರತಿಬಿಂಬ ನೋಡಿ ಹೌಹಾರಿದ ಕರಡಿ

ಪ್ರಾಣಿಗಳು ಕನ್ನಡಿಯಲ್ಲಿ ತಮ್ಮ ಪ್ರತಿಬಿಂಬವನ್ನು ಕಂಡಾಗ  ಅವುಗಳಿಗೆ ಹೇಗೆ ಅನಿಸುತ್ತದೆ  ಹಾಗೂ ಅವುಗಳು ಹೇಗೆ ಪ್ರತಿಕ್ರಿಯಿಸಬಹುದು ಎಂದು ನೀವು ಎಂದಾದರೂ ನೋಡಿದ್ದೀರಾ? ಇತ್ತೀಚಿಗೆ ಇಂತಹದ್ದೊಂದು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಕರಡಿಯೊಂದು ತನ್ನ ಪ್ರತಿಬಿಂಬವನ್ನು ಕನ್ನಡಿಯಲ್ಲಿ ಕಂಡು ಬೆಚ್ಚಿಬಿದ್ದಿದೆ.  ಕರಡಿಯ  ಈ ಪ್ರತಿಕ್ರಿಯೆಯನ್ನು ಕಂಡು  ನೆಟ್ಟಿಗರು ಹೊಟ್ಟೆ ಹುಣ್ಣಾಗುವಂತೆ ನಕ್ಕಿದ್ದಾರೆ.   

Viral Video: ಅಯ್ಯೋ ಇದು ಯಾರು? ಕನ್ನಡಿಯಲ್ಲಿ ತನ್ನ ಪ್ರತಿಬಿಂಬ ನೋಡಿ ಹೌಹಾರಿದ ಕರಡಿ
ವೈರಲ್​​ ವಿಡಿಯೋ
ಮಾಲಾಶ್ರೀ ಅಂಚನ್​
| Edited By: |

Updated on: Dec 01, 2023 | 3:18 PM

Share

ಮನುಷ್ಯರಾದ ನಮಗೆ ಕನ್ನಡಿಯಲ್ಲಿ ನಮ್ಮ ಮುಖವನ್ನು ನಾವೇ ನೋಡುವುದೆಂದರೆ ತುಂಬಾ ಇಷ್ಟ. ಆದರೆ ಪ್ರಾಣಿಗಳು  ಕನ್ನಡಿಯಲ್ಲಿ ತಮ್ಮ ಪ್ರತಿಬಿಂಬವನ್ನು ಕಂಡರೆ   ಹೇಗಿರಬಹುದು ಊಹಿಸಿ.   ಖಂಡಿತವಾಗಿಯೂ ಇದು ಯಾವುದೋ  ಬೇರೆ ಪ್ರಾಣಿ ಇರಬಹುದು ಎಂದು  ಅವುಗಳು ಬೆಚ್ಚಿ ಬೀಳುವುದಂತೂ ನಿಜ.  ಅದೇ ರೀತಿ ಇಲ್ಲೊಂದು ಕರಡಿ ಕನ್ನಡಿಯಲ್ಲಿ ತನ್ನ ಮುಖವನ್ನು ಕಂಡು ಬೆಚ್ಚಿ ಬಿದ್ದು, ಇದಾವುದೋ ಬೇರೆ ಪ್ರಾಣಿ ಎಂದು ಭಾವಿಸಿ ಕನ್ನಡಿಯ ಮೇಲೆ ದಾಳಿ ಮಾಡಲು ಆರಂಭಿಸಿದೆ.  ಈ ಹಾಸ್ಯಮಯ  ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ಈ ವಿಡಿಯೋದಲ್ಲಿ  ಮುಗ್ಧ ಕರಡಿಯೊಂದು ಕನ್ನಡಿಯಲ್ಲಿ ತನ್ನ ಪ್ರತಿಬಿಂಬವನ್ನು ಕಂಡು ಇದಾವುದೋ ಬೇರೆ ಪ್ರಾಣಿ ಇರಬಹುದೆಂದು ಕೋಪಗೊಂಡು ಕನ್ನಡಿಯ ಮೇಲೆ ದಾಳಿ ಮಾಡುವುದನ್ನು ಕಾಣಬಹುದು.

ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ:

ಈ ವಿಡಿಯೋದಲ್ಲಿ ಕರಡಿಯೊಂದು ಕಾಡಿನಲ್ಲಿ ತನ್ನ ಪಾಡಿಗೆ ತಾನು ಓಡಾಡುತ್ತಿರುತ್ತದೆ. ಆ ಸಂದರ್ಭದಲ್ಲಿ  ಅದರ ಕಣ್ಣಿಗೆ ಕನ್ನಡಿಯೊಂದು  ಕಾಣಿಸುತ್ತದೆ. ಇದೇನಿದು ವಿಚಿತ್ರ ವಸ್ತು ಎಂದು ಅದರ ಬಳಿ ಬಂದಾಗ ಕನ್ನಡಿಯಲ್ಲಿ ತನ್ನ ಮುಖವನ್ನು ಕಂಡು ಕರಡಿ ಬೆಚ್ಚಿ ಬಿದ್ದಿದೆ.  ಮತ್ತು ಭಯದಿಂದ ಒಮ್ಮೆಲೆ ಜಿಗಿದು ಕನ್ನಡಿಯ ಹಿಂದೆ ಯಾರಿದ್ದಾರೆ ಎಂದು ನೊಡಲು  ಹೋಗುತ್ತದೆ. ಹಿಂದೆ ಯಾರು ಕಾಣದಿದ್ದಾಗ ಕನ್ನಡಿಯ ಮುಂದೆ ಬಂದು ಮತ್ತೊಮ್ಮೆ ತನ್ನನ್ನು ನೋಡಿ ಭಯಪಡುತ್ತದೆ. ತನ್ನ ಪ್ರತಿಬಿಂಬವನ್ನು ಕಂಡು ಇದಾವುದೋ ಬೇರೆ ಪ್ರಾಣಿಯೇ ಇರಬಹುದು ಎಂದು ಭಾವಿಸಿ ನನ್ನನ್ನೇ ಭಯಪಡಿಸುವೆಯಾ ನಿನ್ನ ಸೊಕ್ಕನ್ನಡಗಿಸುವೇ ಎಂದುಕೊಂಡು  ಕರಡಿ ಕೋಪದಿಂದ  ಕನ್ನಡಿಯ ಮೇಲೆ ದಾಳಿ ಮಾಡಲು ಆರಂಭಿಸುತ್ತದೆ.  ಕೊನೆಯಲ್ಲಿ  ಕನ್ನಡಿಯನ್ನೇ ನೆಲಕ್ಕುರುಳಿಸಿ ಪುಡಿ ಮಾಡಿಬಿಡುತ್ತದೆ.   ಕರಡಿಯ ಈ ಪ್ರತಿಕ್ರಿಯೆ ಕಾಣಲು ತುಂಬಾ ಹಾಸ್ಯಮಯವಾಗಿತ್ತು.

ಇದನ್ನೂ ಓದಿ: ಬೆಕ್ಕುಗಳ ಬಲೆಯಿಂದ ತಪ್ಪಿಸಿಕೊಳ್ಳಲು ಪುಟ್ಟ ಹಕ್ಕಿಯ ಸಖತ್ ಪ್ಲಾನ್ ನೋಡಿ, ಶಕ್ತಿಗಿಂತ ಯುಕ್ತಿ ಮೇಲು 

Nature is Amazing ಎಂಬ X  ಖಾತೆಯಲ್ಲಿ ಹಂಚಿಕೊಳ್ಳಲಾದ ಈ ವೀಡಿಯೋ 14.3 ಮಿಲಿಯನ್ ವೀಕ್ಷಣೆಗಳನ್ನು ಪಡೆದುಕೊಂಡಿದೆ.  ಹಾಗೂ   ಕನ್ನಡಿಯನ್ನು ಕಂಡು ಕರಡಿ ಪ್ರತಿಕ್ರಿಯಿಸಿದ ರೀತಿಯನ್ನು  ನೋಡಿ ಸಾಮಾಜಿಕ ಮಾಧ್ಯಮ  ಬಳಕೆದಾರರು ಹಾಸ್ಯಮಯವಾಗಿ ಕಮೆಂಟ್ ಮಾಡಿದ್ದಾರೆ.  ಒಬ್ಬ ಬಳಕೆದಾರರು ನೀವು ಸ್ವತಃ ನಿಮ್ಮನ್ನೇ ದ್ವೇಷಿಸಿದಾಗ ಹೀಗೆ ಇರುತ್ತೆ” ಎಂದು ತಮಾಷೆಯ ಕಮೆಂಟ್ ಬರೆದುಕೊಂಡಿದ್ದಾರೆ.  ಇನ್ನೊಬ್ಬ ಬಳಕೆದಾರರು ಪ್ರಾಣಿಗಳಿಗೆ ಹೆದರಿಕೆಯಾಗುವಂತ ಇಂತಹ ವಸ್ತುಗಳನ್ನು ಕಾಡಿನಲ್ಲಿ ಇಡಬಾರದು ಎಂದು ಹೇಳಿದ್ದಾರೆ. ಮತ್ತೊಬ್ಬ ಬಳಕೆದಾರರು ʼಈ ಕರಡಿ ತನ್ನನ್ನು ತಾನು ತುಂಬಾ ದ್ವೇಷಿಸುತ್ತಿರುವಂತಿದೆʼ ಎಂದು ಹೇಳಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಮಾಲಾಶ್ರೀ ಅಂಚನ್​
ಮಾಲಾಶ್ರೀ ಅಂಚನ್​

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ