AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ಕಾಮಿಡಿ ಶೋ ನೋಡಿ ನಕ್ಕು ನಕ್ಕು ಮೂರ್ಛೆ ತಪ್ಪಿ ಬಿದ್ದ ವ್ಯಕ್ತಿ; ಆಸ್ಪತ್ರೆಗೆ ದಾಖಲು

ಡಾ.ಸುಧೀರ್ ಕುಮಾರ್ ಹೇಳುವಂತೆ "ಇತರ ಆರೋಗ್ಯ ಸಮಸ್ಯೆಯನ್ನು ಅಂದರೆ ಲೋ ಬಿಪಿ ಮುಂತಾದವು ಹೊರತುಪಡಿಸಿ ಏಕಾಏಕಿ ಕುಸಿದು ಬಿದ್ದರೆ ಅದನ್ನು ಸಿಂಕೋಪ್ ಎಂದು ಕರೆಯಲಾಗುತ್ತದೆ. ಸಿಂಕೋಪ್ ಎನ್ನುವುದು ಹಠಾತ್ ಸ್ಥಿತಿಯಾಗಿದ್ದು, ಒಬ್ಬ ವ್ಯಕ್ತಿಯು ಮೂರ್ಛೆ ಹೋಗುತ್ತಾನೆ ಮತ್ತು ಅವನು ಪ್ರಜ್ಞೆ ಮರಳಿದ ತಕ್ಷಣ ಚೇತರಿಸಿಕೊಳ್ಳುತ್ತಾನೆ."

Viral News: ಕಾಮಿಡಿ ಶೋ ನೋಡಿ ನಕ್ಕು ನಕ್ಕು ಮೂರ್ಛೆ ತಪ್ಪಿ ಬಿದ್ದ ವ್ಯಕ್ತಿ; ಆಸ್ಪತ್ರೆಗೆ ದಾಖಲು
ಅಕ್ಷತಾ ವರ್ಕಾಡಿ
|

Updated on:Jun 01, 2024 | 3:06 PM

Share

ಹೈದರಾಬಾದ್‌ನಲ್ಲಿ 53 ವರ್ಷದ ವ್ಯಕ್ತಿಯೊಬ್ಬ  ಟಿವಿಯಲ್ಲಿ ಕಾಮಿಡಿ ಶೋ ನೋಡಿ ನಕ್ಕು ನಕ್ಕು ಮೂರ್ಛೆ ತಪ್ಪಿ ಬಿದ್ದು ಆಸ್ಪತ್ರೆಗೆ ದಾಖಲಾಗಿದ್ದಾನೆ. ಕಾರ್ಯಕ್ರಮ ಸಾಕಷ್ಟು ಹಾಸ್ಯಸ್ಪದವಾಗಿದ್ದರಿಂದ ಸಾಕಷ್ಟು ನಕ್ಕು ನಕ್ಕು ಸುಸ್ತಾಗಿ ಕುಳಿತಲ್ಲೇ ಕುಸಿದು ಬಿದ್ದಿದ್ದು, ತಕ್ಷಣ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಖ್ಯಾತ ನರರೋಗ ತಜ್ಞ ಡಾ.ಸುಧೀರ್ ಕುಮಾರ್ ಅವರ ಪ್ರಕಾರ, ತನ್ನ ಕುಟುಂಬದೊಂದಿಗೆ ಮನೆಯಲ್ಲಿ ಟಿವಿ ನೋಡುತ್ತಾ ಸಮಯ ಕಳೆಯುತ್ತಿದ್ದ ವ್ಯಕ್ತಿ, ಇದ್ದಕ್ಕಿದ್ದಂತೆ ಕುರ್ಚಿಯ ಮೇಲೆ ಬಿದ್ದು ಪ್ರಜ್ಞಾಹೀನರಾಗಿದ್ದಾರೆ. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆತಂದಿದ್ದು ಈಗ ಗುಣಮುಖರಾಗಿದ್ದಾರೆ ಎಂದು ಹೇಳಿದ್ದಾರೆ.

ಇತರ ಆರೋಗ್ಯ ಸಮಸ್ಯೆಯನ್ನು ಅಂದರೆ ಲೋ ಬಿಪಿ ಮುಂತಾದವು ಹೊರತುಪಡಿಸಿ ಏಕಾಏಕಿ ಕುಸಿದು ಬಿದ್ದರೆ ಅದನ್ನು ಸಿಂಕೋಪ್ ಎಂದು ಕರೆಯಲಾಗುತ್ತದೆ ಎಂದು ಡಾ.ಸುಧೀರ್ ಕುಮಾರ್ ಹೇಳಿದ್ದಾರೆ. ಸಿಂಕೋಪ್ ಎನ್ನುವುದು ಹಠಾತ್ ಸ್ಥಿತಿಯಾಗಿದ್ದು, ಒಬ್ಬ ವ್ಯಕ್ತಿಯು ಒದ್ದಾಡಲು ಪ್ರಾರಂಭಿಸುತ್ತಾನೆ ಮತ್ತು ಮೂರ್ಛೆ ಹೋಗುತ್ತಾನೆ ಮತ್ತು ಅವನು ಪ್ರಜ್ಞೆ ಮರಳಿದ ತಕ್ಷಣ ಚೇತರಿಸಿಕೊಳ್ಳುತ್ತಾನೆ ಎಂದು ಅವರು ಹೇಳಿದ್ದಾರೆ.

ದೀರ್ಘಕಾಲದ ನಗು ಹೈಪರ್ವೆನ್ಟಿಲೇಷನ್ ಅನ್ನು ಉಂಟುಮಾಡಬಹುದು, ಇದು ರಕ್ತದಲ್ಲಿನ ಇಂಗಾಲದ ಡೈಆಕ್ಸೈಡ್ ಮತ್ತು ಆಮ್ಲಜನಕದ ಸಮತೋಲನವನ್ನು ಬದಲಾಯಿಸುತ್ತದೆ, ಸಂಭಾವ್ಯವಾಗಿ ರಕ್ತನಾಳಗಳ ಸಂಕೋಚನಕ್ಕೆ ಕಾರಣವಾಗುತ್ತದೆ ಮತ್ತು ಮೆದುಳಿಗೆ ರಕ್ತದ ಹರಿವು ಕಡಿಮೆಯಾಗುತ್ತದೆ. ಇದು ಹೃದಯ ಬಡಿತ ಮತ್ತು ರಕ್ತದೊತ್ತಡದಲ್ಲಿ ಇಳಿಕೆಗೆ ಕಾರಣವಾಗುತ್ತದೆ.

ಇದನ್ನೂ ಓದಿ: ಬೇಯಿಸಿದ ಮೊಟ್ಟೆ ಸಿಪ್ಪೆಯನ್ನು ಹೀಗೂ ತೆಗೆಯಬಹುದು, ಇಲ್ಲಿದೆ ವಿಡಿಯೋ

ಇದರ ಹೊರತಾಗಿ ವಿವಿಧ ಕಾರಣಗಳಿಗಾಗಿ ವಿವಿಧ ಜನರಿಗೆ ಮೂರ್ಛೆ ಸಂಭವಿಸಬಹುದು. ಆದರೆ ಇದು ಪದೇ ಪದೇ ಸಂಭವಿಸಿದರೆ, ಇದು ಹೃದಯ ಅಥವಾ ರಕ್ತನಾಳದ ಸಮಸ್ಯೆಯ ಸಂಕೇತವಾಗಿರಬಹುದು ಎಂದು ಡಾ.ಸುಧೀರ್ ಕುಮಾರ್ ಎಚ್ಚರಿಸುತ್ತಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:05 pm, Sat, 1 June 24

Follow Us
‘ಟಾಕ್ಸಿಕ್’ ಸಿನಿಮಾದ ಸ್ವಾಗತಕ್ಕೆ ಸಿಂಗಾರಗೊಂಡ ಗಾಂಧಿನಗರ; ವಿಡಿಯೋ ನೋಡಿ..
‘ಟಾಕ್ಸಿಕ್’ ಸಿನಿಮಾದ ಸ್ವಾಗತಕ್ಕೆ ಸಿಂಗಾರಗೊಂಡ ಗಾಂಧಿನಗರ; ವಿಡಿಯೋ ನೋಡಿ..
1 ಲಕ್ಷ ರೂ. ಬಾಡಿಗೆ, 10 ಸಾವಿರ ರೂ. ಮುಂಗಡಕ್ಕೆ ಜಿಬಿಎ ಆಜ್ಞೆ
1 ಲಕ್ಷ ರೂ. ಬಾಡಿಗೆ, 10 ಸಾವಿರ ರೂ. ಮುಂಗಡಕ್ಕೆ ಜಿಬಿಎ ಆಜ್ಞೆ
ಬೆಂಗಳೂರಿನ ಅವೆನ್ಯೂ ರಸ್ತೆಯಲ್ಲಿ ಫುಟ್‌ಪಾತ್ ತೆರವು ಅಭಿಯಾನ
ಬೆಂಗಳೂರಿನ ಅವೆನ್ಯೂ ರಸ್ತೆಯಲ್ಲಿ ಫುಟ್‌ಪಾತ್ ತೆರವು ಅಭಿಯಾನ
ಒಳ್ಳೆ ಪತಿಯಾಗುವುದು ಹೇಗೆ? ಚಿಕ್ಕಣ್ಣನಿಗೆ ಪಾಠ ಹೇಳಿದ್ದಾರಂತೆ ಯಶ್
ಒಳ್ಳೆ ಪತಿಯಾಗುವುದು ಹೇಗೆ? ಚಿಕ್ಕಣ್ಣನಿಗೆ ಪಾಠ ಹೇಳಿದ್ದಾರಂತೆ ಯಶ್
‘ಮದುವೆಗೆ ದರ್ಶನ್ ಅವರನ್ನು ಕರೆಯೋಕೆ ಆಗಲ್ಲ’: ಕಾರಣ ತಿಳಿಸಿದ ಚಿಕ್ಕಣ್ಣ
‘ಮದುವೆಗೆ ದರ್ಶನ್ ಅವರನ್ನು ಕರೆಯೋಕೆ ಆಗಲ್ಲ’: ಕಾರಣ ತಿಳಿಸಿದ ಚಿಕ್ಕಣ್ಣ
ಕರ್ನಾಟಕದಲ್ಲಿ ಕೆಜಿ ಈರುಳ್ಳಿ ದರ ಶೀಘ್ರವೇ 100 ರೂಪಾಯಿ?
ಕರ್ನಾಟಕದಲ್ಲಿ ಕೆಜಿ ಈರುಳ್ಳಿ ದರ ಶೀಘ್ರವೇ 100 ರೂಪಾಯಿ?
IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ಕೇಸ್​ಗೆ ಟ್ವಿಸ್ಟ್
IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ಕೇಸ್​ಗೆ ಟ್ವಿಸ್ಟ್
ಬಾಗಲಕೋಟೆ ಶ್ರೀ ಬನಶಂಕರಿ ದೇವಾಲಯದ ಮಹತ್ವ ಮತ್ತು ಐತಿಹಾಸಿಕ ಹಿನ್ನೆಲೆ
ಬಾಗಲಕೋಟೆ ಶ್ರೀ ಬನಶಂಕರಿ ದೇವಾಲಯದ ಮಹತ್ವ ಮತ್ತು ಐತಿಹಾಸಿಕ ಹಿನ್ನೆಲೆ
ಗುಡ್ ನ್ಯೂಸ್: ಶಿವರಾಮ ಕಾರಂತ ಬಡಾವಣೆ ನಿವೇಶನ ಹಂಚಿಕೆಗೆ ಡೇಟ್ ಫಿಕ್ಸ್​​
ಗುಡ್ ನ್ಯೂಸ್: ಶಿವರಾಮ ಕಾರಂತ ಬಡಾವಣೆ ನಿವೇಶನ ಹಂಚಿಕೆಗೆ ಡೇಟ್ ಫಿಕ್ಸ್​​
ಗದಗದ ಕೆಂಚಲಾಪೂರದಲ್ಲಿ ಸದ್ದಿಲ್ಲದೆ ಸರ್ಕಾರಿ ಕನ್ನಡ ಶಾಲೆಗೆ ಬೀಗ?
ಗದಗದ ಕೆಂಚಲಾಪೂರದಲ್ಲಿ ಸದ್ದಿಲ್ಲದೆ ಸರ್ಕಾರಿ ಕನ್ನಡ ಶಾಲೆಗೆ ಬೀಗ?