AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ಕಾಮಿಡಿ ಶೋ ನೋಡಿ ನಕ್ಕು ನಕ್ಕು ಮೂರ್ಛೆ ತಪ್ಪಿ ಬಿದ್ದ ವ್ಯಕ್ತಿ; ಆಸ್ಪತ್ರೆಗೆ ದಾಖಲು

ಡಾ.ಸುಧೀರ್ ಕುಮಾರ್ ಹೇಳುವಂತೆ "ಇತರ ಆರೋಗ್ಯ ಸಮಸ್ಯೆಯನ್ನು ಅಂದರೆ ಲೋ ಬಿಪಿ ಮುಂತಾದವು ಹೊರತುಪಡಿಸಿ ಏಕಾಏಕಿ ಕುಸಿದು ಬಿದ್ದರೆ ಅದನ್ನು ಸಿಂಕೋಪ್ ಎಂದು ಕರೆಯಲಾಗುತ್ತದೆ. ಸಿಂಕೋಪ್ ಎನ್ನುವುದು ಹಠಾತ್ ಸ್ಥಿತಿಯಾಗಿದ್ದು, ಒಬ್ಬ ವ್ಯಕ್ತಿಯು ಮೂರ್ಛೆ ಹೋಗುತ್ತಾನೆ ಮತ್ತು ಅವನು ಪ್ರಜ್ಞೆ ಮರಳಿದ ತಕ್ಷಣ ಚೇತರಿಸಿಕೊಳ್ಳುತ್ತಾನೆ."

Viral News: ಕಾಮಿಡಿ ಶೋ ನೋಡಿ ನಕ್ಕು ನಕ್ಕು ಮೂರ್ಛೆ ತಪ್ಪಿ ಬಿದ್ದ ವ್ಯಕ್ತಿ; ಆಸ್ಪತ್ರೆಗೆ ದಾಖಲು
ಅಕ್ಷತಾ ವರ್ಕಾಡಿ
|

Updated on:Jun 01, 2024 | 3:06 PM

Share

ಹೈದರಾಬಾದ್‌ನಲ್ಲಿ 53 ವರ್ಷದ ವ್ಯಕ್ತಿಯೊಬ್ಬ  ಟಿವಿಯಲ್ಲಿ ಕಾಮಿಡಿ ಶೋ ನೋಡಿ ನಕ್ಕು ನಕ್ಕು ಮೂರ್ಛೆ ತಪ್ಪಿ ಬಿದ್ದು ಆಸ್ಪತ್ರೆಗೆ ದಾಖಲಾಗಿದ್ದಾನೆ. ಕಾರ್ಯಕ್ರಮ ಸಾಕಷ್ಟು ಹಾಸ್ಯಸ್ಪದವಾಗಿದ್ದರಿಂದ ಸಾಕಷ್ಟು ನಕ್ಕು ನಕ್ಕು ಸುಸ್ತಾಗಿ ಕುಳಿತಲ್ಲೇ ಕುಸಿದು ಬಿದ್ದಿದ್ದು, ತಕ್ಷಣ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಖ್ಯಾತ ನರರೋಗ ತಜ್ಞ ಡಾ.ಸುಧೀರ್ ಕುಮಾರ್ ಅವರ ಪ್ರಕಾರ, ತನ್ನ ಕುಟುಂಬದೊಂದಿಗೆ ಮನೆಯಲ್ಲಿ ಟಿವಿ ನೋಡುತ್ತಾ ಸಮಯ ಕಳೆಯುತ್ತಿದ್ದ ವ್ಯಕ್ತಿ, ಇದ್ದಕ್ಕಿದ್ದಂತೆ ಕುರ್ಚಿಯ ಮೇಲೆ ಬಿದ್ದು ಪ್ರಜ್ಞಾಹೀನರಾಗಿದ್ದಾರೆ. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆತಂದಿದ್ದು ಈಗ ಗುಣಮುಖರಾಗಿದ್ದಾರೆ ಎಂದು ಹೇಳಿದ್ದಾರೆ.

ಇತರ ಆರೋಗ್ಯ ಸಮಸ್ಯೆಯನ್ನು ಅಂದರೆ ಲೋ ಬಿಪಿ ಮುಂತಾದವು ಹೊರತುಪಡಿಸಿ ಏಕಾಏಕಿ ಕುಸಿದು ಬಿದ್ದರೆ ಅದನ್ನು ಸಿಂಕೋಪ್ ಎಂದು ಕರೆಯಲಾಗುತ್ತದೆ ಎಂದು ಡಾ.ಸುಧೀರ್ ಕುಮಾರ್ ಹೇಳಿದ್ದಾರೆ. ಸಿಂಕೋಪ್ ಎನ್ನುವುದು ಹಠಾತ್ ಸ್ಥಿತಿಯಾಗಿದ್ದು, ಒಬ್ಬ ವ್ಯಕ್ತಿಯು ಒದ್ದಾಡಲು ಪ್ರಾರಂಭಿಸುತ್ತಾನೆ ಮತ್ತು ಮೂರ್ಛೆ ಹೋಗುತ್ತಾನೆ ಮತ್ತು ಅವನು ಪ್ರಜ್ಞೆ ಮರಳಿದ ತಕ್ಷಣ ಚೇತರಿಸಿಕೊಳ್ಳುತ್ತಾನೆ ಎಂದು ಅವರು ಹೇಳಿದ್ದಾರೆ.

ದೀರ್ಘಕಾಲದ ನಗು ಹೈಪರ್ವೆನ್ಟಿಲೇಷನ್ ಅನ್ನು ಉಂಟುಮಾಡಬಹುದು, ಇದು ರಕ್ತದಲ್ಲಿನ ಇಂಗಾಲದ ಡೈಆಕ್ಸೈಡ್ ಮತ್ತು ಆಮ್ಲಜನಕದ ಸಮತೋಲನವನ್ನು ಬದಲಾಯಿಸುತ್ತದೆ, ಸಂಭಾವ್ಯವಾಗಿ ರಕ್ತನಾಳಗಳ ಸಂಕೋಚನಕ್ಕೆ ಕಾರಣವಾಗುತ್ತದೆ ಮತ್ತು ಮೆದುಳಿಗೆ ರಕ್ತದ ಹರಿವು ಕಡಿಮೆಯಾಗುತ್ತದೆ. ಇದು ಹೃದಯ ಬಡಿತ ಮತ್ತು ರಕ್ತದೊತ್ತಡದಲ್ಲಿ ಇಳಿಕೆಗೆ ಕಾರಣವಾಗುತ್ತದೆ.

ಇದನ್ನೂ ಓದಿ: ಬೇಯಿಸಿದ ಮೊಟ್ಟೆ ಸಿಪ್ಪೆಯನ್ನು ಹೀಗೂ ತೆಗೆಯಬಹುದು, ಇಲ್ಲಿದೆ ವಿಡಿಯೋ

ಇದರ ಹೊರತಾಗಿ ವಿವಿಧ ಕಾರಣಗಳಿಗಾಗಿ ವಿವಿಧ ಜನರಿಗೆ ಮೂರ್ಛೆ ಸಂಭವಿಸಬಹುದು. ಆದರೆ ಇದು ಪದೇ ಪದೇ ಸಂಭವಿಸಿದರೆ, ಇದು ಹೃದಯ ಅಥವಾ ರಕ್ತನಾಳದ ಸಮಸ್ಯೆಯ ಸಂಕೇತವಾಗಿರಬಹುದು ಎಂದು ಡಾ.ಸುಧೀರ್ ಕುಮಾರ್ ಎಚ್ಚರಿಸುತ್ತಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:05 pm, Sat, 1 June 24

Follow Us
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ