AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ಕಾಮಿಡಿ ಶೋ ನೋಡಿ ನಕ್ಕು ನಕ್ಕು ಮೂರ್ಛೆ ತಪ್ಪಿ ಬಿದ್ದ ವ್ಯಕ್ತಿ; ಆಸ್ಪತ್ರೆಗೆ ದಾಖಲು

ಡಾ.ಸುಧೀರ್ ಕುಮಾರ್ ಹೇಳುವಂತೆ "ಇತರ ಆರೋಗ್ಯ ಸಮಸ್ಯೆಯನ್ನು ಅಂದರೆ ಲೋ ಬಿಪಿ ಮುಂತಾದವು ಹೊರತುಪಡಿಸಿ ಏಕಾಏಕಿ ಕುಸಿದು ಬಿದ್ದರೆ ಅದನ್ನು ಸಿಂಕೋಪ್ ಎಂದು ಕರೆಯಲಾಗುತ್ತದೆ. ಸಿಂಕೋಪ್ ಎನ್ನುವುದು ಹಠಾತ್ ಸ್ಥಿತಿಯಾಗಿದ್ದು, ಒಬ್ಬ ವ್ಯಕ್ತಿಯು ಮೂರ್ಛೆ ಹೋಗುತ್ತಾನೆ ಮತ್ತು ಅವನು ಪ್ರಜ್ಞೆ ಮರಳಿದ ತಕ್ಷಣ ಚೇತರಿಸಿಕೊಳ್ಳುತ್ತಾನೆ."

Viral News: ಕಾಮಿಡಿ ಶೋ ನೋಡಿ ನಕ್ಕು ನಕ್ಕು ಮೂರ್ಛೆ ತಪ್ಪಿ ಬಿದ್ದ ವ್ಯಕ್ತಿ; ಆಸ್ಪತ್ರೆಗೆ ದಾಖಲು
ಅಕ್ಷತಾ ವರ್ಕಾಡಿ
|

Updated on:Jun 01, 2024 | 3:06 PM

Share

ಹೈದರಾಬಾದ್‌ನಲ್ಲಿ 53 ವರ್ಷದ ವ್ಯಕ್ತಿಯೊಬ್ಬ  ಟಿವಿಯಲ್ಲಿ ಕಾಮಿಡಿ ಶೋ ನೋಡಿ ನಕ್ಕು ನಕ್ಕು ಮೂರ್ಛೆ ತಪ್ಪಿ ಬಿದ್ದು ಆಸ್ಪತ್ರೆಗೆ ದಾಖಲಾಗಿದ್ದಾನೆ. ಕಾರ್ಯಕ್ರಮ ಸಾಕಷ್ಟು ಹಾಸ್ಯಸ್ಪದವಾಗಿದ್ದರಿಂದ ಸಾಕಷ್ಟು ನಕ್ಕು ನಕ್ಕು ಸುಸ್ತಾಗಿ ಕುಳಿತಲ್ಲೇ ಕುಸಿದು ಬಿದ್ದಿದ್ದು, ತಕ್ಷಣ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಖ್ಯಾತ ನರರೋಗ ತಜ್ಞ ಡಾ.ಸುಧೀರ್ ಕುಮಾರ್ ಅವರ ಪ್ರಕಾರ, ತನ್ನ ಕುಟುಂಬದೊಂದಿಗೆ ಮನೆಯಲ್ಲಿ ಟಿವಿ ನೋಡುತ್ತಾ ಸಮಯ ಕಳೆಯುತ್ತಿದ್ದ ವ್ಯಕ್ತಿ, ಇದ್ದಕ್ಕಿದ್ದಂತೆ ಕುರ್ಚಿಯ ಮೇಲೆ ಬಿದ್ದು ಪ್ರಜ್ಞಾಹೀನರಾಗಿದ್ದಾರೆ. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆತಂದಿದ್ದು ಈಗ ಗುಣಮುಖರಾಗಿದ್ದಾರೆ ಎಂದು ಹೇಳಿದ್ದಾರೆ.

ಇತರ ಆರೋಗ್ಯ ಸಮಸ್ಯೆಯನ್ನು ಅಂದರೆ ಲೋ ಬಿಪಿ ಮುಂತಾದವು ಹೊರತುಪಡಿಸಿ ಏಕಾಏಕಿ ಕುಸಿದು ಬಿದ್ದರೆ ಅದನ್ನು ಸಿಂಕೋಪ್ ಎಂದು ಕರೆಯಲಾಗುತ್ತದೆ ಎಂದು ಡಾ.ಸುಧೀರ್ ಕುಮಾರ್ ಹೇಳಿದ್ದಾರೆ. ಸಿಂಕೋಪ್ ಎನ್ನುವುದು ಹಠಾತ್ ಸ್ಥಿತಿಯಾಗಿದ್ದು, ಒಬ್ಬ ವ್ಯಕ್ತಿಯು ಒದ್ದಾಡಲು ಪ್ರಾರಂಭಿಸುತ್ತಾನೆ ಮತ್ತು ಮೂರ್ಛೆ ಹೋಗುತ್ತಾನೆ ಮತ್ತು ಅವನು ಪ್ರಜ್ಞೆ ಮರಳಿದ ತಕ್ಷಣ ಚೇತರಿಸಿಕೊಳ್ಳುತ್ತಾನೆ ಎಂದು ಅವರು ಹೇಳಿದ್ದಾರೆ.

ದೀರ್ಘಕಾಲದ ನಗು ಹೈಪರ್ವೆನ್ಟಿಲೇಷನ್ ಅನ್ನು ಉಂಟುಮಾಡಬಹುದು, ಇದು ರಕ್ತದಲ್ಲಿನ ಇಂಗಾಲದ ಡೈಆಕ್ಸೈಡ್ ಮತ್ತು ಆಮ್ಲಜನಕದ ಸಮತೋಲನವನ್ನು ಬದಲಾಯಿಸುತ್ತದೆ, ಸಂಭಾವ್ಯವಾಗಿ ರಕ್ತನಾಳಗಳ ಸಂಕೋಚನಕ್ಕೆ ಕಾರಣವಾಗುತ್ತದೆ ಮತ್ತು ಮೆದುಳಿಗೆ ರಕ್ತದ ಹರಿವು ಕಡಿಮೆಯಾಗುತ್ತದೆ. ಇದು ಹೃದಯ ಬಡಿತ ಮತ್ತು ರಕ್ತದೊತ್ತಡದಲ್ಲಿ ಇಳಿಕೆಗೆ ಕಾರಣವಾಗುತ್ತದೆ.

ಇದನ್ನೂ ಓದಿ: ಬೇಯಿಸಿದ ಮೊಟ್ಟೆ ಸಿಪ್ಪೆಯನ್ನು ಹೀಗೂ ತೆಗೆಯಬಹುದು, ಇಲ್ಲಿದೆ ವಿಡಿಯೋ

ಇದರ ಹೊರತಾಗಿ ವಿವಿಧ ಕಾರಣಗಳಿಗಾಗಿ ವಿವಿಧ ಜನರಿಗೆ ಮೂರ್ಛೆ ಸಂಭವಿಸಬಹುದು. ಆದರೆ ಇದು ಪದೇ ಪದೇ ಸಂಭವಿಸಿದರೆ, ಇದು ಹೃದಯ ಅಥವಾ ರಕ್ತನಾಳದ ಸಮಸ್ಯೆಯ ಸಂಕೇತವಾಗಿರಬಹುದು ಎಂದು ಡಾ.ಸುಧೀರ್ ಕುಮಾರ್ ಎಚ್ಚರಿಸುತ್ತಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:05 pm, Sat, 1 June 24

ದೆಹಲಿಯಲ್ಲಿ ರಸ್ತೆ ಮಧ್ಯೆ ಮಹಿಳೆಯಿಂದ ಸರ ದೋಚಿ, ಕೊಂದು ಪರಾರಿ
ದೆಹಲಿಯಲ್ಲಿ ರಸ್ತೆ ಮಧ್ಯೆ ಮಹಿಳೆಯಿಂದ ಸರ ದೋಚಿ, ಕೊಂದು ಪರಾರಿ
ದುಪಟ್ಟಾವನ್ನೇ ಹರಿದು ಉತ್ತರಾಖಂಡದ ಸಿಎಂಗೆ ರಾಖಿ ಕಟ್ಟಿದ ಗುಜರಾತ್ ಮಹಿಳೆ
ದುಪಟ್ಟಾವನ್ನೇ ಹರಿದು ಉತ್ತರಾಖಂಡದ ಸಿಎಂಗೆ ರಾಖಿ ಕಟ್ಟಿದ ಗುಜರಾತ್ ಮಹಿಳೆ
ವರಮಹಾಲಕ್ಷ್ಮಿ ಹಬ್ಬ: ಚಾಮುಂಡೇಶ್ವರಿ ದೇವಿಗೆ ನೋಟುಗಳಿಂದ ಅಲಂಕಾರ
ವರಮಹಾಲಕ್ಷ್ಮಿ ಹಬ್ಬ: ಚಾಮುಂಡೇಶ್ವರಿ ದೇವಿಗೆ ನೋಟುಗಳಿಂದ ಅಲಂಕಾರ
ಕಳೆದ 40-ವರ್ಷದಿಂದ ಬಿಜ್ಜನಗೆರಾದಲ್ಲಿ ಭಿಕ್ಷಾಟನೆ ನಡೆಸುತ್ತಿರುವ ರಂಗಮ್ಮ
ಕಳೆದ 40-ವರ್ಷದಿಂದ ಬಿಜ್ಜನಗೆರಾದಲ್ಲಿ ಭಿಕ್ಷಾಟನೆ ನಡೆಸುತ್ತಿರುವ ರಂಗಮ್ಮ
ರಭಸವಾಗಿ ಹರಿಯುತ್ತಿರುವ ಹಳ್ಳ: ಯಲ್ಲಮ್ಮನ ಗುಡ್ಡಕ್ಕೆ ಹೋಗುವ ರಸ್ತೆ ಬಂದ್​
ರಭಸವಾಗಿ ಹರಿಯುತ್ತಿರುವ ಹಳ್ಳ: ಯಲ್ಲಮ್ಮನ ಗುಡ್ಡಕ್ಕೆ ಹೋಗುವ ರಸ್ತೆ ಬಂದ್​
ಮುಖ್ಯ ಚುನಾವಣಾಧಿಕಾರಿ ಮನವಿಗಳಿಗೆ ಸ್ಪಂದಿಸಿದ್ದಾರೆ: ಶಿವಕುಮಾರ್
ಮುಖ್ಯ ಚುನಾವಣಾಧಿಕಾರಿ ಮನವಿಗಳಿಗೆ ಸ್ಪಂದಿಸಿದ್ದಾರೆ: ಶಿವಕುಮಾರ್
ಪ್ರಜ್ವಲ್ ಪ್ರಕರಣ; ಕಾನೂನು ಹೋರಾಟ ಮುಂದುವರಿಸಲು ಕುಟುಂಬದ ನಿರ್ಣಯ: ಶಾಸಕ
ಪ್ರಜ್ವಲ್ ಪ್ರಕರಣ; ಕಾನೂನು ಹೋರಾಟ ಮುಂದುವರಿಸಲು ಕುಟುಂಬದ ನಿರ್ಣಯ: ಶಾಸಕ
ವಿಷ್ಣುವರ್ಧನ್ ಸಮಾಧಿ ನೆಲಸಮ; ಅಭಿಮಾನ್ ಸ್ಟುಡಿಯೋದಲ್ಲಿ ಪೊಲೀಸ್ ಭದ್ರತೆ
ವಿಷ್ಣುವರ್ಧನ್ ಸಮಾಧಿ ನೆಲಸಮ; ಅಭಿಮಾನ್ ಸ್ಟುಡಿಯೋದಲ್ಲಿ ಪೊಲೀಸ್ ಭದ್ರತೆ
ಮತಗಳ್ಳತನ ಆರೋಪ: ಟಿವಿ9 ರಿಯಾಲಿಟಿ ಚೆಕ್​ ನಲ್ಲಿ ಸತ್ಯ ಬಯಲು
ಮತಗಳ್ಳತನ ಆರೋಪ: ಟಿವಿ9 ರಿಯಾಲಿಟಿ ಚೆಕ್​ ನಲ್ಲಿ ಸತ್ಯ ಬಯಲು
ಠುಸ್ ಪಟಾಕಿ ಅನ್ನುವವರು ಅದನ್ನು ಕೈಯಲ್ಲಿ ಹಿಡಿದು ತೋರಿಸಲಿ: ಪ್ರಿಯಾಂಕ್
ಠುಸ್ ಪಟಾಕಿ ಅನ್ನುವವರು ಅದನ್ನು ಕೈಯಲ್ಲಿ ಹಿಡಿದು ತೋರಿಸಲಿ: ಪ್ರಿಯಾಂಕ್