AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ದೇಶವಿಭಜನೆಯಲ್ಲಿ ಬೇರ್ಪಟ್ಟ ಒಡಹುಟ್ಟಿದವರು 75 ವರ್ಷಗಳ ನಂತರ ಪುನರ್ಮಿಲನಗೊಂಡಾಗ

Reunion : ಭಾರತೀಯ ಪ್ರಜೆ-ಸೋದರಿ 81 ವರ್ಷದ ಮಹೇಂದ್ರ ಕೌರ್, ಪಾಕ್​ ಆಕ್ರಮಿತ ಕಾಶ್ಮೀರದ ಪ್ರಜೆ-ಸೋದರ 78 ವರ್ಷದ ಶೇಖ್​ ಅಬ್ದುಲ್​ ಅಜೀಜ್​ ಕರ್ತಾರಪುರದ ಕಾರಿಡಾರಿನಲ್ಲಿ ಪರಸ್ಪರ ಅಪ್ಪಿಕೊಂಡು ಸಂಭ್ರಮಿಸಿದ್ದಾರೆ. ನೋಡಿ ವಿಡಿಯೋ.

Viral Video: ದೇಶವಿಭಜನೆಯಲ್ಲಿ ಬೇರ್ಪಟ್ಟ ಒಡಹುಟ್ಟಿದವರು 75 ವರ್ಷಗಳ ನಂತರ ಪುನರ್ಮಿಲನಗೊಂಡಾಗ
ಅಕ್ಕ ಮಹೇಂದ್ರ ಕೌರ್, ತಮ್ಮ ಶೇಖ್ ಅಬ್ದುಲ್ ಅಜೀಜ್​ ಪುನರ್ಮಿಲನ
TV9 Web
| Edited By: |

Updated on: May 23, 2023 | 11:30 AM

Share

Partition : 1947ರ ಆಗಸ್ಟ್​ 15ರಂದು ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕಮೇಲೆ ಭಾರತ ಮತ್ತು ಪಾಕಿಸ್ತಾನ ಎರಡು ದೇಶಗಳಾಗಿ ವಿಭಜನೆಗೊಂಡವು. ಬಂಗಾಳ ಮತ್ತು ಪಂಜಾಬ್​ ಪ್ರಾಂತ್ಯಗಳೂ ವಿಭಜನೆಗೊಂಡು ಪೂರ್ವ ಪಾಕಿಸ್ತಾನ ಮತ್ತು ಪಶ್ಚಿಮ ಪಾಕಿಸ್ತಾನ ದೇಶ ಎಂಬ ಹೊಸ ದೇಶಗಳು ರೂಪುಗೊಂಡವು. ಈ ಸಂದರ್ಭದಲ್ಲಿ ಅನೇಕ ಕುಟುಂಬ ಸದಸ್ಯರು ಬೇರ್ಪಟ್ಟರು. ಇದೀಗ 75 ವರ್ಷಗಳ ನಂತರ ಕರ್ತಾರ್​​ಪುರದಲ್ಲಿ ಅಣ್ಣ ತಂಗಿಯ ಜೋಡಿ ಒಂದಾಗಿದೆ! ನೋಡಿ ಈ ಕೆಳಗಿನ ವಿಡಿಯೋ.

ಪಿಎಂಯು ಕತಾರ್​ಪುರ್ ತನ್ನ ಸಾಮಾಜಿಕ ಜಾಲತಾಣದ ಪುಟದಲ್ಲಿ ಇದನ್ನು ದಾಖಲಿಸಿದೆ. ಸ್ಥಳೀಯ ಆಡಳಿತ ವರ್ಗ ಮತ್ತು ಕುಟುಂಬಸ್ಥರು ಈ ಪುನರ್ಮಿಲನ ಸಭೆಯಲ್ಲಿ ಒಳಗೊಂಡಿದ್ದಾರೆ. ಭಾರತೀಯ ಪ್ರಜೆ-ಸೋದರಿ 81 ವರ್ಷದ ಮಹೇಂದ್ರ ಕೌರ್, ಪಾಕ್​ ಆಕ್ರಮಿತ ಕಾಶ್ಮೀರದ ಪ್ರಜೆ-ಸೋದರ 78 ವರ್ಷದ ಶೇಖ್​ ಅಬ್ದುಲ್​ ಅಜೀಜ್​ ಕರ್ತಾರಪುರದ ಕಾರಿಡಾರಿನಲ್ಲಿ ಪರಸ್ಪರ ಅಪ್ಪಿಕೊಂಡು ಸಂಭ್ರಮಿಸಿದ್ದಾರೆ.

ಇದನ್ನೂ ಓದಿ : ಪ್ಯಾರೀಸ್​ ಟೂರ್​​ ವಿಥ್​ ಅಜ್ಜಿ; ದಂತವೈದ್ಯರ ಈ ನಡೆಗೆ ಭಾವುಕರಾಗುತ್ತಿರುವ ನೆಟ್ಟಿಗರು

ದೇಶ ವಿಭಜನೆಯ ಸಂದರ್ಭದಲ್ಲಿ ಪಂಜಾಬ್​ನ ​ಸರ್ದಾರ್​ ಭಜನ್​ ಸಿಂಗ್​ ಕುಟುಂಬವು ಹರಿದು ಹಂಚಿಹೋಗಿತ್ತು. ಸಾಮಾಜಿಕ ಜಾಲತಾಣದ ಮೂಲಕವೇ ಈ ಸುದ್ದಿ ತಿಳಿದ ಕುಟುಂಬಸ್ಥರು ಒಡಹುಟ್ಟಿದವರನ್ನು ಒಂದಾಗಿಸಿದರು. ನಂತರ ಎರಡೂ ಕುಟುಂಬದವರು ಕರ್ತಾರಪುರದ ಗುರುದ್ವಾರ ದರ್ಬಾರ್​ ಸಾಹಿಬ್​ಗೆ ಭೇಟಿ ಕೊಟ್ಟು ಒಟ್ಟಿಗೇ ಊಟ ಮಾಡಿದರು. ಪುನರ್ಮಿಲನದ ಈ ಸಂದರ್ಭದಲ್ಲಿ ಪರಸ್ಪರ ಉಡುಗೊರೆಗಳನ್ನು ಕೊಟ್ಟುಕೊಂಡರು. ನಂತರ ಕರ್ತಾರಪುರ ಆಡಳಿತ ಸಿಬ್ಬಂದಿಯು ಎಲ್ಲರಿಗೂ ಸಿಹಿ ಹಂಚಿತು.

ಇದನ್ನೂ ಓದಿ : Viral Video: ಈಕೆಯ ಆತ್ಮವಿಶ್ವಾಸವನ್ನು ಗೌರವಿಸಲೇಬೇಕು ಎನ್ನುತ್ತಿರುವ ನೆಟ್ಟಿಗರು

ಕರ್ತಾರ್​ಪುರ ಕಾರಿಡಾರ್​, ಪಾಕಿಸ್ತಾನದ ಪಂಜಾಬ್​ ಪ್ರಾಂತ್ಯದ ಗುರುದ್ವಾರ ದರ್ಬಾರವು ಸಾಹಿಬ್​ ಸಿಖ್ ಧರ್ಮ ಸಂಸ್ಥಾಪಕ ಗುರುನಾನಕ್ ದೇವ್ ಅವರ ಕೊನೆಯ ವಿಶ್ರಾಂತಿ ಸ್ಥಳವನ್ನು ಮತ್ತು ಭಾರತದ ಪಂಜಾಬ್​​ನ ಗುರುದಾಸ್​ಪುರ ಜಿಲ್ಲೆಯ ಡೇರಾಬಾಬಾ ನಾನಕ್​ ದೇವಾಲಯವನ್ನು ಸಂಧಿಸುತ್ತದೆ. 4 ಕಿಮೀ ಉದ್ದದ ಈ ಕಾರಿಡಾರ್ ಭಾರತೀಯ ಸಿಖ್ ಯಾತ್ರಾರ್ಥಿಗಳಿಗೆ ದರ್ಬಾರ್ ಸಾಹಿಬ್‌ಗೆ ಭೇಟಿ ನೀಡಲು ವೀಸಾಮುಕ್ತ ಪ್ರವೇಶವಾಗಿರುತ್ತದೆ.

ಮತ್ತಷ್ಟು ವೈರಲ್​ ನ್ಯೂಸ್​ಗಾಗಿ ಕ್ಲಿಕ್ ಮಾಡಿ  

ಆಭರಣದಂಗಡಿ ಮಾಲೀಕನಿಂದ 425 ಗ್ರಾಂ ಚಿನ್ನ ದೋಚಿದ ಕಳ್ಳರು
ಆಭರಣದಂಗಡಿ ಮಾಲೀಕನಿಂದ 425 ಗ್ರಾಂ ಚಿನ್ನ ದೋಚಿದ ಕಳ್ಳರು
ಊರಿನ ನೇಮೋತ್ಸವದಲ್ಲಿ ಭಾಗಿಯಾದ ನಟ ರಕ್ಷಿತ್ ಶೆಟ್ಟಿ; ವಿಡಿಯೋ ನೋಡಿ
ಊರಿನ ನೇಮೋತ್ಸವದಲ್ಲಿ ಭಾಗಿಯಾದ ನಟ ರಕ್ಷಿತ್ ಶೆಟ್ಟಿ; ವಿಡಿಯೋ ನೋಡಿ
ಮರಕ್ಕೆ ಗುದ್ದಿ ರಸ್ತೆ ಬದಿ ಆಟೋ ಪಲ್ಟಿ: ಪ್ರಯಾಣಿಕರು ಬದುಕಿದ್ದೇ ಪವಾಡ!
ಮರಕ್ಕೆ ಗುದ್ದಿ ರಸ್ತೆ ಬದಿ ಆಟೋ ಪಲ್ಟಿ: ಪ್ರಯಾಣಿಕರು ಬದುಕಿದ್ದೇ ಪವಾಡ!
ಸೋಮನಾಥದಲ್ಲಿ ಪ್ರಧಾನಿ ನರೇಂದ್ರ ಮೋದಿ ಶೌರ್ಯ ಯಾತ್ರೆ
ಸೋಮನಾಥದಲ್ಲಿ ಪ್ರಧಾನಿ ನರೇಂದ್ರ ಮೋದಿ ಶೌರ್ಯ ಯಾತ್ರೆ
ಯಶ್ ತಾಯಿ ಪುಷ್ಪಾ ಬೆಂಬಲಿಗರಿಂದ ಜೀವ ಬೆದರಿಕೆ ಆರೋಪ: ದೂರು ನೀಡಿದ ದೇವರಾಜ್
ಯಶ್ ತಾಯಿ ಪುಷ್ಪಾ ಬೆಂಬಲಿಗರಿಂದ ಜೀವ ಬೆದರಿಕೆ ಆರೋಪ: ದೂರು ನೀಡಿದ ದೇವರಾಜ್
ಗಡಿಯಲ್ಲಿ ನಿಂತು ಕೇರಳ ಸಿಎಂಗೆ ಖಡಕ್​​ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ
ಗಡಿಯಲ್ಲಿ ನಿಂತು ಕೇರಳ ಸಿಎಂಗೆ ಖಡಕ್​​ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ
2 ಶತಕಗಳೊಂದಿಗೆ ಹೊಸ ಇತಿಹಾಸ ಬರೆದ ರಯಾನ್ ರಿಕೆಲ್ಟನ್
2 ಶತಕಗಳೊಂದಿಗೆ ಹೊಸ ಇತಿಹಾಸ ಬರೆದ ರಯಾನ್ ರಿಕೆಲ್ಟನ್
ಗಿಲ್ಲಿ ವಿರುದ್ಧ ಸೇಡು ತೀರಿಸಿಕೊಂಡ ಕಾವ್ಯಾ: ರಘು ಕೂಡ ಕಡಿಮೆ ಏನಿಲ್ಲ
ಗಿಲ್ಲಿ ವಿರುದ್ಧ ಸೇಡು ತೀರಿಸಿಕೊಂಡ ಕಾವ್ಯಾ: ರಘು ಕೂಡ ಕಡಿಮೆ ಏನಿಲ್ಲ
ಕಂಬಳ ಕೋಣಗಳ ಓಟಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್​​ ಫಿದಾ
ಕಂಬಳ ಕೋಣಗಳ ಓಟಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್​​ ಫಿದಾ
ಕೆಜಿಗಟ್ಟಲೆ ನಿಧಿಯನ್ನು ಸರ್ಕಾರಕ್ಕೊಪ್ಪಿಸಿದ 8ನೇ ತರಗತಿಯ ಬಾಲಕನಿಗೆ ಸನ್ಮಾನ
ಕೆಜಿಗಟ್ಟಲೆ ನಿಧಿಯನ್ನು ಸರ್ಕಾರಕ್ಕೊಪ್ಪಿಸಿದ 8ನೇ ತರಗತಿಯ ಬಾಲಕನಿಗೆ ಸನ್ಮಾನ