AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ದೇಶವಿಭಜನೆಯಲ್ಲಿ ಬೇರ್ಪಟ್ಟ ಒಡಹುಟ್ಟಿದವರು 75 ವರ್ಷಗಳ ನಂತರ ಪುನರ್ಮಿಲನಗೊಂಡಾಗ

Reunion : ಭಾರತೀಯ ಪ್ರಜೆ-ಸೋದರಿ 81 ವರ್ಷದ ಮಹೇಂದ್ರ ಕೌರ್, ಪಾಕ್​ ಆಕ್ರಮಿತ ಕಾಶ್ಮೀರದ ಪ್ರಜೆ-ಸೋದರ 78 ವರ್ಷದ ಶೇಖ್​ ಅಬ್ದುಲ್​ ಅಜೀಜ್​ ಕರ್ತಾರಪುರದ ಕಾರಿಡಾರಿನಲ್ಲಿ ಪರಸ್ಪರ ಅಪ್ಪಿಕೊಂಡು ಸಂಭ್ರಮಿಸಿದ್ದಾರೆ. ನೋಡಿ ವಿಡಿಯೋ.

Viral Video: ದೇಶವಿಭಜನೆಯಲ್ಲಿ ಬೇರ್ಪಟ್ಟ ಒಡಹುಟ್ಟಿದವರು 75 ವರ್ಷಗಳ ನಂತರ ಪುನರ್ಮಿಲನಗೊಂಡಾಗ
ಅಕ್ಕ ಮಹೇಂದ್ರ ಕೌರ್, ತಮ್ಮ ಶೇಖ್ ಅಬ್ದುಲ್ ಅಜೀಜ್​ ಪುನರ್ಮಿಲನ
TV9 Web
| Edited By: |

Updated on: May 23, 2023 | 11:30 AM

Share

Partition : 1947ರ ಆಗಸ್ಟ್​ 15ರಂದು ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕಮೇಲೆ ಭಾರತ ಮತ್ತು ಪಾಕಿಸ್ತಾನ ಎರಡು ದೇಶಗಳಾಗಿ ವಿಭಜನೆಗೊಂಡವು. ಬಂಗಾಳ ಮತ್ತು ಪಂಜಾಬ್​ ಪ್ರಾಂತ್ಯಗಳೂ ವಿಭಜನೆಗೊಂಡು ಪೂರ್ವ ಪಾಕಿಸ್ತಾನ ಮತ್ತು ಪಶ್ಚಿಮ ಪಾಕಿಸ್ತಾನ ದೇಶ ಎಂಬ ಹೊಸ ದೇಶಗಳು ರೂಪುಗೊಂಡವು. ಈ ಸಂದರ್ಭದಲ್ಲಿ ಅನೇಕ ಕುಟುಂಬ ಸದಸ್ಯರು ಬೇರ್ಪಟ್ಟರು. ಇದೀಗ 75 ವರ್ಷಗಳ ನಂತರ ಕರ್ತಾರ್​​ಪುರದಲ್ಲಿ ಅಣ್ಣ ತಂಗಿಯ ಜೋಡಿ ಒಂದಾಗಿದೆ! ನೋಡಿ ಈ ಕೆಳಗಿನ ವಿಡಿಯೋ.

ಪಿಎಂಯು ಕತಾರ್​ಪುರ್ ತನ್ನ ಸಾಮಾಜಿಕ ಜಾಲತಾಣದ ಪುಟದಲ್ಲಿ ಇದನ್ನು ದಾಖಲಿಸಿದೆ. ಸ್ಥಳೀಯ ಆಡಳಿತ ವರ್ಗ ಮತ್ತು ಕುಟುಂಬಸ್ಥರು ಈ ಪುನರ್ಮಿಲನ ಸಭೆಯಲ್ಲಿ ಒಳಗೊಂಡಿದ್ದಾರೆ. ಭಾರತೀಯ ಪ್ರಜೆ-ಸೋದರಿ 81 ವರ್ಷದ ಮಹೇಂದ್ರ ಕೌರ್, ಪಾಕ್​ ಆಕ್ರಮಿತ ಕಾಶ್ಮೀರದ ಪ್ರಜೆ-ಸೋದರ 78 ವರ್ಷದ ಶೇಖ್​ ಅಬ್ದುಲ್​ ಅಜೀಜ್​ ಕರ್ತಾರಪುರದ ಕಾರಿಡಾರಿನಲ್ಲಿ ಪರಸ್ಪರ ಅಪ್ಪಿಕೊಂಡು ಸಂಭ್ರಮಿಸಿದ್ದಾರೆ.

ಇದನ್ನೂ ಓದಿ : ಪ್ಯಾರೀಸ್​ ಟೂರ್​​ ವಿಥ್​ ಅಜ್ಜಿ; ದಂತವೈದ್ಯರ ಈ ನಡೆಗೆ ಭಾವುಕರಾಗುತ್ತಿರುವ ನೆಟ್ಟಿಗರು

ದೇಶ ವಿಭಜನೆಯ ಸಂದರ್ಭದಲ್ಲಿ ಪಂಜಾಬ್​ನ ​ಸರ್ದಾರ್​ ಭಜನ್​ ಸಿಂಗ್​ ಕುಟುಂಬವು ಹರಿದು ಹಂಚಿಹೋಗಿತ್ತು. ಸಾಮಾಜಿಕ ಜಾಲತಾಣದ ಮೂಲಕವೇ ಈ ಸುದ್ದಿ ತಿಳಿದ ಕುಟುಂಬಸ್ಥರು ಒಡಹುಟ್ಟಿದವರನ್ನು ಒಂದಾಗಿಸಿದರು. ನಂತರ ಎರಡೂ ಕುಟುಂಬದವರು ಕರ್ತಾರಪುರದ ಗುರುದ್ವಾರ ದರ್ಬಾರ್​ ಸಾಹಿಬ್​ಗೆ ಭೇಟಿ ಕೊಟ್ಟು ಒಟ್ಟಿಗೇ ಊಟ ಮಾಡಿದರು. ಪುನರ್ಮಿಲನದ ಈ ಸಂದರ್ಭದಲ್ಲಿ ಪರಸ್ಪರ ಉಡುಗೊರೆಗಳನ್ನು ಕೊಟ್ಟುಕೊಂಡರು. ನಂತರ ಕರ್ತಾರಪುರ ಆಡಳಿತ ಸಿಬ್ಬಂದಿಯು ಎಲ್ಲರಿಗೂ ಸಿಹಿ ಹಂಚಿತು.

ಇದನ್ನೂ ಓದಿ : Viral Video: ಈಕೆಯ ಆತ್ಮವಿಶ್ವಾಸವನ್ನು ಗೌರವಿಸಲೇಬೇಕು ಎನ್ನುತ್ತಿರುವ ನೆಟ್ಟಿಗರು

ಕರ್ತಾರ್​ಪುರ ಕಾರಿಡಾರ್​, ಪಾಕಿಸ್ತಾನದ ಪಂಜಾಬ್​ ಪ್ರಾಂತ್ಯದ ಗುರುದ್ವಾರ ದರ್ಬಾರವು ಸಾಹಿಬ್​ ಸಿಖ್ ಧರ್ಮ ಸಂಸ್ಥಾಪಕ ಗುರುನಾನಕ್ ದೇವ್ ಅವರ ಕೊನೆಯ ವಿಶ್ರಾಂತಿ ಸ್ಥಳವನ್ನು ಮತ್ತು ಭಾರತದ ಪಂಜಾಬ್​​ನ ಗುರುದಾಸ್​ಪುರ ಜಿಲ್ಲೆಯ ಡೇರಾಬಾಬಾ ನಾನಕ್​ ದೇವಾಲಯವನ್ನು ಸಂಧಿಸುತ್ತದೆ. 4 ಕಿಮೀ ಉದ್ದದ ಈ ಕಾರಿಡಾರ್ ಭಾರತೀಯ ಸಿಖ್ ಯಾತ್ರಾರ್ಥಿಗಳಿಗೆ ದರ್ಬಾರ್ ಸಾಹಿಬ್‌ಗೆ ಭೇಟಿ ನೀಡಲು ವೀಸಾಮುಕ್ತ ಪ್ರವೇಶವಾಗಿರುತ್ತದೆ.

ಮತ್ತಷ್ಟು ವೈರಲ್​ ನ್ಯೂಸ್​ಗಾಗಿ ಕ್ಲಿಕ್ ಮಾಡಿ  

‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!