AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ದೇಶವಿಭಜನೆಯಲ್ಲಿ ಬೇರ್ಪಟ್ಟ ಒಡಹುಟ್ಟಿದವರು 75 ವರ್ಷಗಳ ನಂತರ ಪುನರ್ಮಿಲನಗೊಂಡಾಗ

Reunion : ಭಾರತೀಯ ಪ್ರಜೆ-ಸೋದರಿ 81 ವರ್ಷದ ಮಹೇಂದ್ರ ಕೌರ್, ಪಾಕ್​ ಆಕ್ರಮಿತ ಕಾಶ್ಮೀರದ ಪ್ರಜೆ-ಸೋದರ 78 ವರ್ಷದ ಶೇಖ್​ ಅಬ್ದುಲ್​ ಅಜೀಜ್​ ಕರ್ತಾರಪುರದ ಕಾರಿಡಾರಿನಲ್ಲಿ ಪರಸ್ಪರ ಅಪ್ಪಿಕೊಂಡು ಸಂಭ್ರಮಿಸಿದ್ದಾರೆ. ನೋಡಿ ವಿಡಿಯೋ.

Viral Video: ದೇಶವಿಭಜನೆಯಲ್ಲಿ ಬೇರ್ಪಟ್ಟ ಒಡಹುಟ್ಟಿದವರು 75 ವರ್ಷಗಳ ನಂತರ ಪುನರ್ಮಿಲನಗೊಂಡಾಗ
ಅಕ್ಕ ಮಹೇಂದ್ರ ಕೌರ್, ತಮ್ಮ ಶೇಖ್ ಅಬ್ದುಲ್ ಅಜೀಜ್​ ಪುನರ್ಮಿಲನ
TV9 Web
| Updated By: ಶ್ರೀದೇವಿ ಕಳಸದ|

Updated on: May 23, 2023 | 11:30 AM

Share

Partition : 1947ರ ಆಗಸ್ಟ್​ 15ರಂದು ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕಮೇಲೆ ಭಾರತ ಮತ್ತು ಪಾಕಿಸ್ತಾನ ಎರಡು ದೇಶಗಳಾಗಿ ವಿಭಜನೆಗೊಂಡವು. ಬಂಗಾಳ ಮತ್ತು ಪಂಜಾಬ್​ ಪ್ರಾಂತ್ಯಗಳೂ ವಿಭಜನೆಗೊಂಡು ಪೂರ್ವ ಪಾಕಿಸ್ತಾನ ಮತ್ತು ಪಶ್ಚಿಮ ಪಾಕಿಸ್ತಾನ ದೇಶ ಎಂಬ ಹೊಸ ದೇಶಗಳು ರೂಪುಗೊಂಡವು. ಈ ಸಂದರ್ಭದಲ್ಲಿ ಅನೇಕ ಕುಟುಂಬ ಸದಸ್ಯರು ಬೇರ್ಪಟ್ಟರು. ಇದೀಗ 75 ವರ್ಷಗಳ ನಂತರ ಕರ್ತಾರ್​​ಪುರದಲ್ಲಿ ಅಣ್ಣ ತಂಗಿಯ ಜೋಡಿ ಒಂದಾಗಿದೆ! ನೋಡಿ ಈ ಕೆಳಗಿನ ವಿಡಿಯೋ.

ಪಿಎಂಯು ಕತಾರ್​ಪುರ್ ತನ್ನ ಸಾಮಾಜಿಕ ಜಾಲತಾಣದ ಪುಟದಲ್ಲಿ ಇದನ್ನು ದಾಖಲಿಸಿದೆ. ಸ್ಥಳೀಯ ಆಡಳಿತ ವರ್ಗ ಮತ್ತು ಕುಟುಂಬಸ್ಥರು ಈ ಪುನರ್ಮಿಲನ ಸಭೆಯಲ್ಲಿ ಒಳಗೊಂಡಿದ್ದಾರೆ. ಭಾರತೀಯ ಪ್ರಜೆ-ಸೋದರಿ 81 ವರ್ಷದ ಮಹೇಂದ್ರ ಕೌರ್, ಪಾಕ್​ ಆಕ್ರಮಿತ ಕಾಶ್ಮೀರದ ಪ್ರಜೆ-ಸೋದರ 78 ವರ್ಷದ ಶೇಖ್​ ಅಬ್ದುಲ್​ ಅಜೀಜ್​ ಕರ್ತಾರಪುರದ ಕಾರಿಡಾರಿನಲ್ಲಿ ಪರಸ್ಪರ ಅಪ್ಪಿಕೊಂಡು ಸಂಭ್ರಮಿಸಿದ್ದಾರೆ.

ಇದನ್ನೂ ಓದಿ : ಪ್ಯಾರೀಸ್​ ಟೂರ್​​ ವಿಥ್​ ಅಜ್ಜಿ; ದಂತವೈದ್ಯರ ಈ ನಡೆಗೆ ಭಾವುಕರಾಗುತ್ತಿರುವ ನೆಟ್ಟಿಗರು

ದೇಶ ವಿಭಜನೆಯ ಸಂದರ್ಭದಲ್ಲಿ ಪಂಜಾಬ್​ನ ​ಸರ್ದಾರ್​ ಭಜನ್​ ಸಿಂಗ್​ ಕುಟುಂಬವು ಹರಿದು ಹಂಚಿಹೋಗಿತ್ತು. ಸಾಮಾಜಿಕ ಜಾಲತಾಣದ ಮೂಲಕವೇ ಈ ಸುದ್ದಿ ತಿಳಿದ ಕುಟುಂಬಸ್ಥರು ಒಡಹುಟ್ಟಿದವರನ್ನು ಒಂದಾಗಿಸಿದರು. ನಂತರ ಎರಡೂ ಕುಟುಂಬದವರು ಕರ್ತಾರಪುರದ ಗುರುದ್ವಾರ ದರ್ಬಾರ್​ ಸಾಹಿಬ್​ಗೆ ಭೇಟಿ ಕೊಟ್ಟು ಒಟ್ಟಿಗೇ ಊಟ ಮಾಡಿದರು. ಪುನರ್ಮಿಲನದ ಈ ಸಂದರ್ಭದಲ್ಲಿ ಪರಸ್ಪರ ಉಡುಗೊರೆಗಳನ್ನು ಕೊಟ್ಟುಕೊಂಡರು. ನಂತರ ಕರ್ತಾರಪುರ ಆಡಳಿತ ಸಿಬ್ಬಂದಿಯು ಎಲ್ಲರಿಗೂ ಸಿಹಿ ಹಂಚಿತು.

ಇದನ್ನೂ ಓದಿ : Viral Video: ಈಕೆಯ ಆತ್ಮವಿಶ್ವಾಸವನ್ನು ಗೌರವಿಸಲೇಬೇಕು ಎನ್ನುತ್ತಿರುವ ನೆಟ್ಟಿಗರು

ಕರ್ತಾರ್​ಪುರ ಕಾರಿಡಾರ್​, ಪಾಕಿಸ್ತಾನದ ಪಂಜಾಬ್​ ಪ್ರಾಂತ್ಯದ ಗುರುದ್ವಾರ ದರ್ಬಾರವು ಸಾಹಿಬ್​ ಸಿಖ್ ಧರ್ಮ ಸಂಸ್ಥಾಪಕ ಗುರುನಾನಕ್ ದೇವ್ ಅವರ ಕೊನೆಯ ವಿಶ್ರಾಂತಿ ಸ್ಥಳವನ್ನು ಮತ್ತು ಭಾರತದ ಪಂಜಾಬ್​​ನ ಗುರುದಾಸ್​ಪುರ ಜಿಲ್ಲೆಯ ಡೇರಾಬಾಬಾ ನಾನಕ್​ ದೇವಾಲಯವನ್ನು ಸಂಧಿಸುತ್ತದೆ. 4 ಕಿಮೀ ಉದ್ದದ ಈ ಕಾರಿಡಾರ್ ಭಾರತೀಯ ಸಿಖ್ ಯಾತ್ರಾರ್ಥಿಗಳಿಗೆ ದರ್ಬಾರ್ ಸಾಹಿಬ್‌ಗೆ ಭೇಟಿ ನೀಡಲು ವೀಸಾಮುಕ್ತ ಪ್ರವೇಶವಾಗಿರುತ್ತದೆ.

ಮತ್ತಷ್ಟು ವೈರಲ್​ ನ್ಯೂಸ್​ಗಾಗಿ ಕ್ಲಿಕ್ ಮಾಡಿ  

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು