AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಶಶಿ ತರೂರ್​​ ನೋಟ, ನಗುವಿಗೆ ಮನಸೋತ ನೆಟ್ಟಿಗರು; ಸಂಸತ್ತಿನಲ್ಲಿ ಸುಪ್ರಿಯಾ ಸುಲೆ ಜತೆ ಮಾತಾಡುತ್ತ ಕುಳಿತ ಭಂಗಿ ನೋಡಿ !

ನೆಟ್ಟಿಗರಂತೂ ಶಶಿ ತರೂರ್​ರನ್ನು ಸಿಕ್ಕಾಪಟೆ ಕಾಲೆಳೆದಿದ್ದಾರೆ. ಸುಪ್ರಿಯಾ ಸುಲೆ ಮಾತನಾಡುತ್ತಿದ್ದರೆ, ಶಶಿ ತರೂರ್​ ಮುಖಭಾವ ಹೇಗಿತ್ತು ಎಂಬುದನ್ನು ಝೂಮ್ ಮಾಡಿ ತೋರಿಸಲಾಗಿದೆ.

Video: ಶಶಿ ತರೂರ್​​ ನೋಟ, ನಗುವಿಗೆ ಮನಸೋತ ನೆಟ್ಟಿಗರು; ಸಂಸತ್ತಿನಲ್ಲಿ ಸುಪ್ರಿಯಾ ಸುಲೆ ಜತೆ ಮಾತಾಡುತ್ತ ಕುಳಿತ ಭಂಗಿ ನೋಡಿ !
ಸುಪ್ರಿಯಾ ಸುಲೆ-ಶಶಿ ತರೂರ್​ ಮಾತು
TV9 Web
| Edited By: |

Updated on:Apr 07, 2022 | 4:23 PM

Share

ನೀವೇನೇ ಹೇಳಿ, ಕಾಂಗ್ರೆಸ್​ ಸಂಸದ ಶಶಿ ತರೂರ್​ ಪದೇಪದೆ ಸುದ್ದಿಯಲ್ಲಿ ಇರುತ್ತಾರೆ. ಅದರಲ್ಲೂ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಯಾಗುವುದು ಹೆಚ್ಚು. ಕೆಲವು ವಿಭಿನ್ನ, ವಿಶಿಷ್ಟ ಕಾರಣಗಳಿಗೆ ಅವರು ಟ್ರೋಲ್ ಆಗುತ್ತಿರುತ್ತಾರೆ. ಈಗ ಮತ್ತೊಮ್ಮೆ ಶಶಿ ತರೂರ್​ ನೆಟ್ಟಿಗರ ಬಾಯಿಗೆ ಆಹಾರವಾಗಿದ್ದಾರೆ.. ಅದೂ ಲೋಕಸಭೆಯಲ್ಲಿ ಕಂಡುಬಂದ ಒಂದು ಸನ್ನಿವೇಶದಿಂದಾಗಿ !.

Farrago Abdullah ಎಂಬ ಟ್ವಿಟರ್ ಅಕೌಂಟ್​​ನಿಂದ ವಿಡಿಯೋವೊಂದು ಶೇರ್ ಆಗಿದೆ. ಅದರಲ್ಲಿ ಫಾರೂಕ್ ಅಬ್ದುಲ್ಲಾ ಎದ್ದು ನಿಂತು, ಸದನವನ್ನು ಉದ್ದೇಶಿಸಿ ಗಂಭೀರವಾಗಿ ಮಾತನಾಡುತ್ತಿದ್ದಾರೆ. ಆದರೆ ಅವರ ತುಸು ಹಿಂದೆ ಕುಳಿತ ಶಶಿ ತರೂರ್​, ಸಂಸದೆ ಸುಪ್ರಿಯಾ ಸುಲೆಯೊಂದಿಗೆ ಏನೋ ಹರಟೆಹೊಡೆಯುತ್ತಿದ್ದಾರೆ. ಅದೂ ಹೇಗೆ ಅಂತೀರಿ, ಮುಂದಿನ ಸಾಲಿನಲ್ಲಿ ಕುಳಿತ ಸುಪ್ರಿಯಾ ಹಿಂದಿರುಗಿ ಕುಳಿತು ಶಶಿ ತರೂರ್​ಗೆ ಏನೋ ಹೇಳುತ್ತಿದ್ದಾರೆ. ಶಶಿ ತರೂರ್​ ತಮ್ಮ ಮುಂದಿನ ಡೆಸ್ಕ್​ ಮೇಲೆ ಎರಡೂ ಕೈಯಿಟ್ಟು, ಆ ಕೈಗಳ ಮೇಲೆ ತಮ್ಮ ಗಲ್ಲವನ್ನಿಟ್ಟು, ಮುಗುಳ್ನಗುತ್ತ ಸುಪ್ರಿಯಾ ಮಾತುಗಳಿಗೆ ತಲೆ ಹಾಕುತ್ತ ಆಲಿಸುತ್ತಿದ್ದಾರೆ. ಅದನ್ನು ನೋಡಿದರೆ ಕಾಲೇಜು ಹುಡುಗರ ಫೀಲ್ ಬಾರದೆ ಇರದು. ಹೀಗೆ ಸುಪ್ರಿಯಾ ಸುಲೆಯ ಮಾತುಗಳನ್ನು ಅಷ್ಟು ಮಗ್ನವಾಗಿ ಆಲಿಸುತ್ತ, ಅದಕ್ಕೆ ತಲೆ ಅಲ್ಲಾಡಿಸುತ್ತಿರುವ ಶಶಿ ತರೂರ್​​ರನ್ನು ನೋಡಿ ನೆಟ್ಟಿಗರು ಕಾಲೆಳೆದಿದ್ದಾರೆ. ಈ ವಿಡಿಯೋಕ್ಕೆ ಪುಷ್ಪಾ ಸಿನಿಮಾದ ಶ್ರೀವಲ್ಲಿ ಹಾಡನ್ನು ಹಾಕಿ ವೈರಲ್ ಮಾಡಲಾಗಿದೆ. ಹೀಗಾಗಿ ಫಾರೂಕ್​ ಅಬ್ದುಲ್ಲಾ ಯಾವ ವಿಚಾರ ಮಾತನಾಡುತ್ತಿದ್ದರು ಎಂಬುದು ಗೊತ್ತಾಗುತ್ತಿಲ್ಲ.

ನೆಟ್ಟಿಗರಂತೂ ಶಶಿ ತರೂರ್​ರನ್ನು ಸಿಕ್ಕಾಪಟೆ ಕಾಲೆಳೆದಿದ್ದಾರೆ. ಸುಪ್ರಿಯಾ ಸುಲೆ ಮಾತನಾಡುತ್ತಿದ್ದರೆ, ಶಶಿ ತರೂರ್​ ಮುಖಭಾವ ಹೇಗಿತ್ತು ಎಂಬುದನ್ನು ಝೂಮ್ ಮಾಡಿ ತೋರಿಸಲಾಗಿದೆ. ವೃತ್ತಿಜೀವನವನ್ನೂ ಹೇಗೆ ಬೋರ್​ ಬಾರದಂತೆ ಮಾಡಬೇಕು ಎಂಬುದನ್ನು ಶಶಿ ತರೂರ್​ ತೋರಿಸುತ್ತಿದ್ದಾರೆ ಎಂಬಂಥ ಕಮೆಂಟ್​ಗಳನ್ನೂ ನೆಟ್ಟಿಗರು ಮಾಡಿದ್ದಾರೆ ಇಲ್ಲಿದೆ ನೋಡಿ ಫನ್ನಿ ವಿಡಿಯೋ..

ಇದನ್ನೂ ಓದಿತಂದೆಯಿಂದಲೇ ಮಗನಿಗೆ ಬೆಂಕಿ ಹಾಕಿ ಹತ್ಯೆ ಪ್ರಕರಣ: ಚಿಕಿತ್ಸೆ ಫಲಕಾರಿಯಾಗದೇ ಇಂದು ಮಗ ಸಾವು; ಬೆಂಕಿ ಹಾಕುವ ದೃಶ್ಯಾವಳಿ ಸಿಸಿಟಿಯಲ್ಲಿ ಸೆರೆ

Published On - 4:23 pm, Thu, 7 April 22

Follow Us
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ