Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಒಂದು ದೇಹ ಎರಡು ಜೀವ; ಮೂರು ಕಾಲು, ನಾಲ್ಕು ಕೈ,  ಒಂದು ಶಿಶ್ನ ಸಯಾಮಿ ಅವಳಿ ಮಕ್ಕಳ ಜನನ

ಇಂಡೋನೇಷ್ಯಾದಲ್ಲಿ ಅಪರೂಪದಲ್ಲಿ ಅಪರೂಪ ಪ್ರಕರಣವೊಂದು ಬೆಳಕಿಗೆ ಬಂದಿದ್ದು,  ಇಲ್ಲಿನ ಮಹಿಳೆಯೊಬ್ಬರು  ಮೂರು ಕಾಲುಗಳು, ನಾಲ್ಕು ಕೈ ಮತ್ತು ಒಂದು ಶಿಶ್ನವನ್ನು ಹೊಂದಿರುವ  ಸಯಾಮಿ ಅವಳಿ ಮಕ್ಕಳಿಗೆ ಜನ್ಮವನ್ನು ನೀಡಿದ್ದಾರೆ. 

Viral: ಒಂದು ದೇಹ ಎರಡು ಜೀವ; ಮೂರು ಕಾಲು, ನಾಲ್ಕು ಕೈ,  ಒಂದು ಶಿಶ್ನ ಸಯಾಮಿ ಅವಳಿ ಮಕ್ಕಳ ಜನನ
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​

Updated on: May 16, 2024 | 4:25 PM

ಅವಳಿ ಮಕ್ಕಳು ಜನಿಸುವುದು ಸಾಮಾನ್ಯ ಸಂಗತಿಯಾಗಿದೆ. ಕೆಲವೊಮ್ಮೆ ಏಕಕಾಲಕ್ಕೆ  ಮೂರು ಅಥವಾ ಐದು  ಮಕ್ಕಳು ಜನಿಸಿದಂತಹ  ಪ್ರಕರಣಗಳು ನಡೆದಿವೆ. ಇದೀಗ ಅಂತಹದ್ದೇ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಒಂದು ದೇಹ ಎರು ಜೀವ ಎಂಬಂತೆ ಮಹಿಳೆಯೊಬ್ಬರು  ಮೂರು ಕಾಲು, ನಾಲ್ಕು ಕೈ ಹಾಗೂ ಒಂದು ಶಿಶ್ನವನ್ನು ಹೊಂದಿರುವ ಸಯಾಮಿ ಅವಳಿ ಮಕ್ಕಳಿಗೆ ಜನ್ಮವನ್ನು ನೀಡಿದ್ದಾರೆ.

ಡೈಲಿ ಮೇಲ್ ವರದಿಯ ಪ್ರಕಾರ ಈ ಘಟನೆ ಇಂಡೋನೇಷ್ಯಾದಲ್ಲಿ ನಡೆದಿದ್ದು, ಇಲ್ಲಿನ ಮಹಿಳೆಯೊಬ್ಬರು 2018 ರಲ್ಲಿ ಇಶಿಯೋಪಾಗಸ್ ಟ್ರಿಪಸ್ ಕಂಜಾಯಿಂಡ್ ಟ್ವಿನ್ಸ್ ಎಂದು ಕರೆಯಲ್ಪಡುವ ಅಪರೂಪದ ಸಯಾಮಿ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ. ಇತ್ತೀಚಿಗೆ ಈ ಪ್ರಕರಣವನ್ನು ಅಮೇರಿಕನ್ ಜರ್ನಲ್ ಆಫ್ ಕೇಸ್ ರಿಪೋರ್ಟ್ ನಿಯತಕಾಲಿಕೆಯಲ್ಲಿ ಪ್ರಕಟಿಸಲಾಗಿದೆ.

ಸಾಮಾನ್ಯವಾಗಿ  ಇಂತಹ ಸಯಾಮಿ ಅವಳಿ ಜನಿಸಿದರೆ  ಶಿಶು ಸಾಯುವಂತಹ ಸಾಧ್ಯತೆಯಿರುತ್ತವೆ. ಆದರೆ ಈ ಅವಳಿ ಮಕ್ಕಳು ಆರೋಗ್ಯಕರವಾಗಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ. ಈ ಅವಳಿ ಮಕ್ಕಳು ಮೂರು ಕಾಲುಗಳು, ನಾಲ್ಕು ಕೈ ಹಾಗೂ ಒಂದು ಶಿಶ್ನ, ಒಂದು ಮೂತ್ರ ಕೋಶ, ಗುದನಾಳವನ್ನು ಹೊಂದಿದ್ದು, ಈ ಸ್ಥಿತಿಯಿಂದಾಗಿ ಈ ಅವಳಿ ಮಕ್ಕಳಿಗೆ ಕೂರಲು ಸಾಧ್ಯವಾಗದೆ 3 ವರ್ಷಗಳ ಕಾಲ ಹಾಸಿಗೆಯಲ್ಲಿಯೇ ಮಲಗಬೇಕಾಗಿತ್ತು. ಇತ್ತೀಚಿಗೆ ವೈದ್ಯರ ತಂಡವೊಂದು ಶಸ್ತ್ರ ಚಿಕಿತ್ಸೆಯ ಮೂಲಕ ಸಯಾಮಿ ಅವಳಿ ಮಕ್ಕಳ ಮೂರನೇ ಕಾಲನ್ನು ತೆಗೆದಿದ್ದಾರೆ. ಮತ್ತು ಸೊಂಟದ ಮೂಲೆಗಳನ್ನು ಸರಿಪಡಿಸಲು ಸಾಕಷ್ಟು ಪ್ರಯತ್ನಗಳನ್ನು ಮಾಡಿ, ಅವರು ಸರಿಯಾಗಿ ಕುಳಿತುಕೊಳ್ಳಲು ಅನುವು ಮಾಡಿಕೊಟ್ಟಿದ್ದಾರೆ.

ಇದನ್ನೂ ಓದಿ: ಅಮ್ಮಾ ನಾನು ಕಳ್ಳನನ್ನು ಹಿಡಿದುಬಿಟ್ಟೆ,  ಮೆಟ್ರೋದಲ್ಲಿ ಜೇಬುಗಳ್ಳನನ್ನು ಹಿಡಿದ ಯೂಟ್ಯೂಬರ್

50 ಸಾವಿರದಿಂದ 2 ಲಕ್ಷ ಗರ್ಭಾಧಾರಣೆಗಳಲ್ಲಿ ಒಂದು ಇಂತಹ ಪ್ರಕರಣಗಳು ಕಾಣಿಸಿಕೊಳ್ಳುತ್ತವೆ. ಗರ್ಭಾಶಯದಲ್ಲಿ ಒಂದು ಫಲವತ್ತಾದ  ಮೊಟ್ಟೆ ವಿಭಜನೆಗೊಂಡು ಎರಡು ಭಾಗವಾಗಿ ಬೆಳವಣಿಗೆ ಹೊಂದಲು ಆರಂಭಿಸಿದಾಗ ಸಯಾಮಿ ಅವಳಿ ಮಕ್ಕಳು ಜನಿಸುತ್ತವೆ.

ಮತ್ತಷ್ಟು ವೈರಲ್​ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದುಬಾರಿ ಬೈಕ್​ಗಳು ಕಳ್ಳನ ಪ್ರಥಮ ಆದ್ಯತೆ, ಅವು ಸಿಗದಿದ್ದರೆ ಬೇರೆಯವೂ ಓಕೆ
ದುಬಾರಿ ಬೈಕ್​ಗಳು ಕಳ್ಳನ ಪ್ರಥಮ ಆದ್ಯತೆ, ಅವು ಸಿಗದಿದ್ದರೆ ಬೇರೆಯವೂ ಓಕೆ
ಚೀನಾ: ಕಾರ್ಯಕ್ರಮವೊಂದರಲ್ಲಿ ಜನರ ಮೇಲೆ ಎಐ ರೊಬೊಟ್​ನಿಂದ ಹಲ್ಲೆ
ಚೀನಾ: ಕಾರ್ಯಕ್ರಮವೊಂದರಲ್ಲಿ ಜನರ ಮೇಲೆ ಎಐ ರೊಬೊಟ್​ನಿಂದ ಹಲ್ಲೆ
ಶಾಲು ಹೊದಿಸಿದ ವಿಜಯೇಂದ್ರರ ಬೆನ್ನುತಟ್ಟಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಶಾಲು ಹೊದಿಸಿದ ವಿಜಯೇಂದ್ರರ ಬೆನ್ನುತಟ್ಟಿದ ಮುಖ್ಯಮಂತ್ರಿ ಸಿದ್ದರಾಮಯ್ಯ
Shilpa Shetty: ಕಟೀಲು ದೇವಾಲಯಕ್ಕೆ ಬಂದ ನಟಿ ಶಿಲ್ಪಾ ಶೆಟ್ಟಿ
Shilpa Shetty: ಕಟೀಲು ದೇವಾಲಯಕ್ಕೆ ಬಂದ ನಟಿ ಶಿಲ್ಪಾ ಶೆಟ್ಟಿ
ತಮ್ಮ ಹೇಳಿಕೆಯಲ್ಲಿ ಶ್ರೀರಾಮುಲು ಶಿಂಧೆಯನ್ನು ಹತ್ತಾರು ಬಾರಿ ನೆನೆಯುತ್ತಾರೆ
ತಮ್ಮ ಹೇಳಿಕೆಯಲ್ಲಿ ಶ್ರೀರಾಮುಲು ಶಿಂಧೆಯನ್ನು ಹತ್ತಾರು ಬಾರಿ ನೆನೆಯುತ್ತಾರೆ
ಕ್ರಿಕೆಟ್ ತಂಡದ ಜೊತೆ ಚಾಮುಂಡೇಶ್ವರಿ ಬೆಟ್ಟಕ್ಕೆ ಭೇಟಿ ನೀಡಿದ ಸುದೀಪ್
ಕ್ರಿಕೆಟ್ ತಂಡದ ಜೊತೆ ಚಾಮುಂಡೇಶ್ವರಿ ಬೆಟ್ಟಕ್ಕೆ ಭೇಟಿ ನೀಡಿದ ಸುದೀಪ್