AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಒಂದು ದೇಹ ಎರಡು ಜೀವ; ಮೂರು ಕಾಲು, ನಾಲ್ಕು ಕೈ,  ಒಂದು ಶಿಶ್ನ ಸಯಾಮಿ ಅವಳಿ ಮಕ್ಕಳ ಜನನ

ಇಂಡೋನೇಷ್ಯಾದಲ್ಲಿ ಅಪರೂಪದಲ್ಲಿ ಅಪರೂಪ ಪ್ರಕರಣವೊಂದು ಬೆಳಕಿಗೆ ಬಂದಿದ್ದು,  ಇಲ್ಲಿನ ಮಹಿಳೆಯೊಬ್ಬರು  ಮೂರು ಕಾಲುಗಳು, ನಾಲ್ಕು ಕೈ ಮತ್ತು ಒಂದು ಶಿಶ್ನವನ್ನು ಹೊಂದಿರುವ  ಸಯಾಮಿ ಅವಳಿ ಮಕ್ಕಳಿಗೆ ಜನ್ಮವನ್ನು ನೀಡಿದ್ದಾರೆ. 

Viral: ಒಂದು ದೇಹ ಎರಡು ಜೀವ; ಮೂರು ಕಾಲು, ನಾಲ್ಕು ಕೈ,  ಒಂದು ಶಿಶ್ನ ಸಯಾಮಿ ಅವಳಿ ಮಕ್ಕಳ ಜನನ
ಮಾಲಾಶ್ರೀ ಅಂಚನ್​
| Edited By: |

Updated on: May 16, 2024 | 4:25 PM

Share

ಅವಳಿ ಮಕ್ಕಳು ಜನಿಸುವುದು ಸಾಮಾನ್ಯ ಸಂಗತಿಯಾಗಿದೆ. ಕೆಲವೊಮ್ಮೆ ಏಕಕಾಲಕ್ಕೆ  ಮೂರು ಅಥವಾ ಐದು  ಮಕ್ಕಳು ಜನಿಸಿದಂತಹ  ಪ್ರಕರಣಗಳು ನಡೆದಿವೆ. ಇದೀಗ ಅಂತಹದ್ದೇ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಒಂದು ದೇಹ ಎರು ಜೀವ ಎಂಬಂತೆ ಮಹಿಳೆಯೊಬ್ಬರು  ಮೂರು ಕಾಲು, ನಾಲ್ಕು ಕೈ ಹಾಗೂ ಒಂದು ಶಿಶ್ನವನ್ನು ಹೊಂದಿರುವ ಸಯಾಮಿ ಅವಳಿ ಮಕ್ಕಳಿಗೆ ಜನ್ಮವನ್ನು ನೀಡಿದ್ದಾರೆ.

ಡೈಲಿ ಮೇಲ್ ವರದಿಯ ಪ್ರಕಾರ ಈ ಘಟನೆ ಇಂಡೋನೇಷ್ಯಾದಲ್ಲಿ ನಡೆದಿದ್ದು, ಇಲ್ಲಿನ ಮಹಿಳೆಯೊಬ್ಬರು 2018 ರಲ್ಲಿ ಇಶಿಯೋಪಾಗಸ್ ಟ್ರಿಪಸ್ ಕಂಜಾಯಿಂಡ್ ಟ್ವಿನ್ಸ್ ಎಂದು ಕರೆಯಲ್ಪಡುವ ಅಪರೂಪದ ಸಯಾಮಿ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ. ಇತ್ತೀಚಿಗೆ ಈ ಪ್ರಕರಣವನ್ನು ಅಮೇರಿಕನ್ ಜರ್ನಲ್ ಆಫ್ ಕೇಸ್ ರಿಪೋರ್ಟ್ ನಿಯತಕಾಲಿಕೆಯಲ್ಲಿ ಪ್ರಕಟಿಸಲಾಗಿದೆ.

ಸಾಮಾನ್ಯವಾಗಿ  ಇಂತಹ ಸಯಾಮಿ ಅವಳಿ ಜನಿಸಿದರೆ  ಶಿಶು ಸಾಯುವಂತಹ ಸಾಧ್ಯತೆಯಿರುತ್ತವೆ. ಆದರೆ ಈ ಅವಳಿ ಮಕ್ಕಳು ಆರೋಗ್ಯಕರವಾಗಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ. ಈ ಅವಳಿ ಮಕ್ಕಳು ಮೂರು ಕಾಲುಗಳು, ನಾಲ್ಕು ಕೈ ಹಾಗೂ ಒಂದು ಶಿಶ್ನ, ಒಂದು ಮೂತ್ರ ಕೋಶ, ಗುದನಾಳವನ್ನು ಹೊಂದಿದ್ದು, ಈ ಸ್ಥಿತಿಯಿಂದಾಗಿ ಈ ಅವಳಿ ಮಕ್ಕಳಿಗೆ ಕೂರಲು ಸಾಧ್ಯವಾಗದೆ 3 ವರ್ಷಗಳ ಕಾಲ ಹಾಸಿಗೆಯಲ್ಲಿಯೇ ಮಲಗಬೇಕಾಗಿತ್ತು. ಇತ್ತೀಚಿಗೆ ವೈದ್ಯರ ತಂಡವೊಂದು ಶಸ್ತ್ರ ಚಿಕಿತ್ಸೆಯ ಮೂಲಕ ಸಯಾಮಿ ಅವಳಿ ಮಕ್ಕಳ ಮೂರನೇ ಕಾಲನ್ನು ತೆಗೆದಿದ್ದಾರೆ. ಮತ್ತು ಸೊಂಟದ ಮೂಲೆಗಳನ್ನು ಸರಿಪಡಿಸಲು ಸಾಕಷ್ಟು ಪ್ರಯತ್ನಗಳನ್ನು ಮಾಡಿ, ಅವರು ಸರಿಯಾಗಿ ಕುಳಿತುಕೊಳ್ಳಲು ಅನುವು ಮಾಡಿಕೊಟ್ಟಿದ್ದಾರೆ.

ಇದನ್ನೂ ಓದಿ: ಅಮ್ಮಾ ನಾನು ಕಳ್ಳನನ್ನು ಹಿಡಿದುಬಿಟ್ಟೆ,  ಮೆಟ್ರೋದಲ್ಲಿ ಜೇಬುಗಳ್ಳನನ್ನು ಹಿಡಿದ ಯೂಟ್ಯೂಬರ್

50 ಸಾವಿರದಿಂದ 2 ಲಕ್ಷ ಗರ್ಭಾಧಾರಣೆಗಳಲ್ಲಿ ಒಂದು ಇಂತಹ ಪ್ರಕರಣಗಳು ಕಾಣಿಸಿಕೊಳ್ಳುತ್ತವೆ. ಗರ್ಭಾಶಯದಲ್ಲಿ ಒಂದು ಫಲವತ್ತಾದ  ಮೊಟ್ಟೆ ವಿಭಜನೆಗೊಂಡು ಎರಡು ಭಾಗವಾಗಿ ಬೆಳವಣಿಗೆ ಹೊಂದಲು ಆರಂಭಿಸಿದಾಗ ಸಯಾಮಿ ಅವಳಿ ಮಕ್ಕಳು ಜನಿಸುತ್ತವೆ.

ಮತ್ತಷ್ಟು ವೈರಲ್​ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ