AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking News: ಸೂಪರ್ ಹೀರೋ ಕಾಪಾಡುತ್ತಾನೆಂಬ ನಂಬಿಕೆಯಿಂದ ಟೆರೇಸ್​ನಿಂದ ಕೆಳಗೆ ಜಿಗಿದು ಸಾವನ್ನಪ್ಪಿದ ಬಾಲಕ

Crime News: ಬಿರಾಜ್ ಪಚಿಜಿಯಾ ಎಂಬ 12 ವರ್ಷದ ಬಾಲಕ ಕುಟುಂಬದ ಇತರ ಸದಸ್ಯರು ಪೂಜೆಯಲ್ಲಿ ನಿರತರಾಗಿದ್ದಾಗ ಟೆರೇಸ್​ನ ಮೇಲೆ ಹೋಗಿದ್ದ. ಆಗ ತನ್ನನ್ನು ಏಂಜೆಲ್ ಅಥವಾ ಸೂಪರ್ ಹೀರೋ ಬಂದು ಕಾಪಾಡುತ್ತಾನೆ ಎಂಬ ನಂಬಿಕೆಯಿಂದ ಆತ ಕೆಳಗೆ ಹಾರಿದ್ದ.

Shocking News: ಸೂಪರ್ ಹೀರೋ ಕಾಪಾಡುತ್ತಾನೆಂಬ ನಂಬಿಕೆಯಿಂದ ಟೆರೇಸ್​ನಿಂದ ಕೆಳಗೆ ಜಿಗಿದು ಸಾವನ್ನಪ್ಪಿದ ಬಾಲಕ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Feb 08, 2022 | 6:52 PM

Share

ಕೊಲ್ಕತ್ತಾ: ಕೆಲವೊಮ್ಮೆ ನಾವು ನೋಡುವ ದೃಶ್ಯಗಳು, ಕೇಳುವ ಕತೆಗಳು ನಮ್ಮ ಮನಸಿನ ಮೇಲೆ ಬಹಳ ಪರಿಣಾಮ ಬೀರುತ್ತವೆ. ಅದರಲ್ಲೂ ಟಿವಿಗಳಲ್ಲಿ ಬರುವ ಶೋಗಳು ಮಕ್ಕಳ ಮೇಲೆ ಬಹಳ ಪರಿಣಾಮ ಬೀರುತ್ತವೆ. ಸೂಪರ್​ ಹೀರೋ ಕತೆಗಳನ್ನು ಟಿವಿಯಲ್ಲಿ ನೋಡಿ ಪ್ರಭಾವಿತನಾಗಿದ್ದ 12 ವರ್ಷದ ಬಾಲಕನೊಬ್ಬ ಸೂಪರ್ ಹೀರೋ ಬಂದು ತನ್ನನ್ನು ಕಾಪಾಡುತ್ತಾನೆ ಎಂಬ ನಂಬಿಕೆಯಲ್ಲಿ ಉತ್ತರ ಕೊಲ್ಕತ್ತಾದಲ್ಲಿನ ಅಪಾರ್ಟ್‌ಮೆಂಟ್‌ನ 11ನೇ ಮಹಡಿಯಿಂದ ಹಾರಿ ಸಾವನ್ನಪ್ಪಿದ್ದಾನೆ. ಈ ಕುರಿತು ಸುದ್ದಿ ಸಂಸ್ಥೆ ಐಎಎನ್‌ಎಸ್ ವರದಿ ಮಾಡಿದ್ದು, ‘ಪ್ಲಾಟಿನಂ ಎಂಡ್’ ಎಂಬ ವೆಬ್-ಸೀರೀಸ್‌ನಲ್ಲಿ ತೋರಿಸಿರುವಂತೆ ‘ಏಂಜೆಲ್’ ತನ್ನನ್ನು ರಕ್ಷಿಸುತ್ತಾರೆಂಬ ನಂಬಿಕೆಯಲ್ಲಿ ಬಾಲಕ ಮಹಡಿಯಿಂದ ಕೆಳಗೆ ಹಾರಿದ್ದಾನೆ ಎಂದು ಪ್ರಾಥಮಿಕ ತನಿಖೆಯಿಂದ ಪೊಲೀಸರಿಗೆ ತಿಳಿದುಬಂದಿದೆ.

ಜಪಾನಿನ ಶೋ ‘ಪ್ಲಾಟಿನಂ ಎಂಡ್’ ಒಂದು ಕಾಲ್ಪನಿಕ ಕಥೆಯನ್ನು ಆಧರಿಸಿ ವೆಬ್​ ಸೀರೀಸ್ ಆಗಿದೆ. ಆ ಶೋನಲ್ಲಿ ಹದಿಹರೆಯದ ಯುವಕನೊಬ್ಬ ಕಟ್ಟಡದ ಟೆರೇಸ್​ನಿಂದ ಹಾರಿದ್ದ. ಆದರೆ ಏಂಜೆಲ್​ ಬಂದು ಆತನನ್ನು ಕೆಳಗೆ ಬೀಳದ ಹಾಗೆ ಕಾಪಾಡಿದ್ದಳು. ಆ ಹುಡುಗ ಮಾಂತ್ರಿಕ ಶಕ್ತಿಯನ್ನು ಬೆಳೆಸಿಕೊಂಡಿದ್ದ. ಅದನ್ನು ನೋಡಿ 12 ವರ್ಷದ ಬಾಲಕ ಕೂಡ ಪ್ರಭಾವಿತನಾಗಿದ್ದ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ಶನಿವಾರದಂದು ಪಾರ್ಕ್ ಸರ್ಕಸ್‌ನ ಫುಲ್‌ಬಗಾನ್ ಪ್ರದೇಶದ ಕೆನಾಲ್ ಸರ್ಕ್ಯುಲರ್ ರಸ್ತೆಯಲ್ಲಿರುವ ಅಪಾರ್ಟ್​ಮೆಂಟ್​ನಲ್ಲಿ ಪೂಜೆಯ ದಿನ ಈ ಘಟನೆ ನಡೆದಿದೆ. ಬಿರಾಜ್ ಪಚಿಜಿಯಾ ಎಂಬ 12 ವರ್ಷದ ಬಾಲಕ ಕುಟುಂಬದ ಇತರ ಸದಸ್ಯರು ಪೂಜೆಯಲ್ಲಿ ನಿರತರಾಗಿದ್ದಾಗ ಟೆರೇಸ್​ನ ಮೇಲೆ ಹೋಗಿದ್ದ. ಆಗ ತನ್ನನ್ನು ಏಂಜೆಲ್ ಅಥವಾ ಸೂಪರ್ ಹೀರೋ ಬಂದು ಕಾಪಾಡುತ್ತಾನೆ ಎಂಬ ನಂಬಿಕೆಯಿಂದ ಆತ ಕೆಳಗೆ ಹಾರಿದ್ದ.

ಆತ ಕೆಳಗೆ ಬಿದ್ದ ಶಬ್ದ ಕೇಳಿದ ಅಪಾರ್ಟ್​ಮೆಂಟ್​ನ ಜನರು ಓಡಿಬಂದು ನೋಡಿದಾಗ ಆ ಬಾಲಕ ರಕ್ತದ ಮಡುವಿನಲ್ಲಿ ಬಿದ್ದಿರುವುದನ್ನು ನೋಡಿದರು. ತಕ್ಷಣ ಆತನ ಮನೆಯವರಿಗೆ ವಿಷಯ ತಿಳಿಸಿ, ಆತನನ್ನು ಹತ್ತಿರದ ನರ್ಸಿಂಗ್ ಹೋಮ್‌ಗೆ ಕರೆದೊಯ್ಯಲಾಯಿತು. ಆದರೆ, ಅಷ್ಟರಲ್ಲಿ ಆತ ಸಾವನ್ನಪ್ಪಿದ್ದ.

ಆ ವಿದ್ಯಾರ್ಥಿಗೆ ಆನ್‌ಲೈನ್ ತರಗತಿಗಳಿಗಾಗಿ ಇತ್ತೀಚೆಗೆ ಗೆಜೆಟ್ ಕೊಡಿಸಲಾಗಿತ್ತು. ಅದರಲ್ಲಿ ಆತ ವೆಬ್ ಸೀರೀಸ್, ಸಿನಿಮಾಗಳನ್ನು ನೋಡುತ್ತಿದ್ದ. ಆತ ‘ಪ್ಲಾಟಿನಂ ಎಂಡ್’ ವೆಬ್ ಸೀರೀಸ್​ಗೆ ಅಡಿಕ್ಟ್​ ಆಗಿದ್ದ. ಅದರ ಪ್ರಭಾವದಿಂದಲೇ ಆತ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Shocking News: ಪೊಲೀಸರು ತಂದ ಕೈದಿಯ ಶವ ಪೋಸ್ಟ್​ ಮಾರ್ಟಂ ವೇಳೆ ಎದ್ದು ಕುಳಿತಿತ್ತು!

Shocking News: ಹೆಂಡತಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದವರನ್ನು ಕೊಲ್ಲಲು ಗಂಡ ಮಾಡಿದ ಪ್ಲಾನ್ ಅಂತಿಂಥದ್ದಲ್ಲ!

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ