AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking News: ಯುವತಿಯಿಂದಲೇ ಸಮಾಧಿ ತೋಡಿಸಿ, ಆಕೆಯನ್ನು ಕೊಂದು ಹೂತು ಹಾಕಿದ ಕಿರಾತಕರು!

Viral News: ಅಲ್ಬಾಚ್ ಹತ್ಯೆಯ ಬಗ್ಗೆ ಪೊಲೀಸರು ಆಘಾತಕಾರಿ ಮಾಹಿತಿಯನ್ನು ಹೊರಹಾಕಿದ್ದು, ಸಾಯಿಸುವ ಮೊದಲು ಆಕೆಯಿಂದಲೇ ಸಮಾಧಿಯನ್ನು ಅಗೆಯಿಸಲಾಯಿತು. ನಂತರ ಆಕೆಗೆ ಗುಂಡು ಹಾರಿಸಿ ಕೊಂದು, ಅದೇ ಗುಂಡಿಯಲ್ಲಿ ಸಮಾಧಿ ಮಾಡಲಾಯಿತು.

Shocking News: ಯುವತಿಯಿಂದಲೇ ಸಮಾಧಿ ತೋಡಿಸಿ, ಆಕೆಯನ್ನು ಕೊಂದು ಹೂತು ಹಾಕಿದ ಕಿರಾತಕರು!
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Dec 08, 2021 | 2:09 PM

Share

ಯುವತಿಯೊಬ್ಬಳನ್ನು ಕೊಲೆ ಮಾಡಲು ಹೋಗಿದ್ದ ಆಗಂತಕರು ಆಕೆಯಿಂದಲೇ ಸಮಾಧಿ ತೋಡಿಸಿ, ನಂತರ ಆಕೆಗೆ ಶೂಟ್ ಮಾಡಿ ಅದೇ ಗುಂಡಿಯೊಳಗೆ ಹೆಣವನ್ನು ಹಾಕಿ ಸಮಾಧಿ ಮಾಡಿದ್ದಾರೆ. ಈ ವಿಚಿತ್ರ ಮತ್ತು ಆಘಾತಕಾರಿ ಘಟನೆ ಸಮುದ್ರತೀರದಲ್ಲಿ ನಡೆದಿದೆ. ಯುವತಿಯಿಂದಲೇ ಸಮಾಧಿಯನ್ನು ತೆಗೆಯಲು ಒತ್ತಾಯಿಸಿ, ನಂತರ ಆಕೆಗೆ ಗುಂಡಿಕ್ಕಿ ಕೊಂದು ಅದರಲ್ಲಿ ಹೂಳಲಾಯಿತು.

‘ದಿ ಸನ್ ಯುಕೆ’ ಪ್ರಕಾರ, ಈ ಘಟನೆ ಬ್ರೆಜಿಲ್‌ನ ಸಾಂಟಾ ಕ್ಯಾಟರಿನಾ ರಾಜ್ಯದಲ್ಲಿ ನಡೆದಿದೆ. ಮೃತ ಯುವತಿ ಅಮಂಡಾ ಅಲ್ಬಾಚ್ ಸ್ನೇಹಿತರೊಂದಿಗೆ ಹುಟ್ಟುಹಬ್ಬದ ಪಾರ್ಟಿಗೆ ತೆರಳಿದ್ದರು. ಆಕೆಗೆ 21 ವರ್ಷವಾಗಿತ್ತು. ಅಲ್ಬಾಚ್ ಹತ್ಯೆಯ ಬಗ್ಗೆ ಪೊಲೀಸರು ಆಘಾತಕಾರಿ ಮಾಹಿತಿಯನ್ನು ಹೊರಹಾಕಿದ್ದು, ಸಾಯಿಸುವ ಮೊದಲು ಆಕೆಯಿಂದಲೇ ತನ್ನ ಸಮಾಧಿಯನ್ನು ಅಗೆಯಲು ಒತ್ತಾಯಿಸಲಾಯಿತು. ನಂತರ ಆಕೆಗೆ ಗುಂಡು ಹಾರಿಸಿ ಕೊಂದು, ಅದೇ ಗುಂಡಿಯಲ್ಲಿ ಸಮಾಧಿ ಮಾಡಲಾಯಿತು ಎಂದಿದ್ದಾರೆ.

ಅಪರಾಧ ತನಿಖಾ ವಿಭಾಗದ ಪೊಲೀಸ್ ಮುಖ್ಯಸ್ಥ ಬ್ರೂನೋ ಫೆರ್ನಾಂಡಿಸ್ ಕೂಡ ಈ ಘಟನೆ ಬಗ್ಗೆ ಮಾಹಿತಿ ನೀಡಿದ್ದು, ಅಲ್ಬಾಚ್ ತನ್ನ ಸ್ನೇಹಿತನ ಹುಟ್ಟುಹಬ್ಬದ ಪಾರ್ಟಿಯಲ್ಲಿ ಪಾಲ್ಗೊಳ್ಳಲು ಕೆಲವು ಸ್ನೇಹಿತರೊಂದಿಗೆ ಸಾಂಟಾ ಕ್ಯಾಟರಿನಾಗೆ ಹೋಗಿದ್ದರು ಎಂದು ಹೇಳಿದ್ದಾರೆ. ಮಾದಕ ವಸ್ತು ದಂಧೆಯಲ್ಲಿ ಕೆಲವರು ಭಾಗಿಯಾಗಿದ್ದರು ಎನ್ನಲಾಗಿದೆ. ಈ ಸಮಯದಲ್ಲಿ, ಅಲ್ಬಾಚ್ ಅಲ್ಲಿದ್ದವರ ಫೋಟೋಗಳನ್ನು ಕ್ಲಿಕ್ಕಿಸಿಕೊಂಡರು. ತಾವು ಸಿಕ್ಕಿಬೀಳುತ್ತೇವೆ ಎಂಬ ಭಯದಲ್ಲಿ ಆ ಮಾದಕದ್ರವ್ಯ ಸೇವಿಸಿದ್ದ ವ್ಯಕ್ತಿಗಳು ಅಲ್ಬಾಚ್ ಅನ್ನು ಕೊಲ್ಲಲು ಪ್ಲಾನ್ ಮಾಡಿದರು.

ಅಲ್ಬಾಚ್ ಪಾರ್ಟಿಯಿಂದ ಮನೆಗೆ ಹಿಂತಿರುಗದಿದ್ದಾಗ ಆಕೆಯನ್ನು ಕೊಲೆ ಮಾಡಲಾಗಿದೆ. ಆಕೆಯ ಕುಟುಂಬ ಸದಸ್ಯರು ಆಕೆಗ ಮೊಬೈಲ್​ಗೆ ಫೋನ್ ಮಾಡಿದರೂ ಅವಳನ್ನು ಸಂಪರ್ಕಿಸಲು ಸಾಧ್ಯವಾಗಲಿಲ್ಲ. ಹೀಗಾಗಿ, ಅವರು ಪೊಲೀಸರಿಗೆ ದೂರು ನೀಡಿದ್ದು, ಪೊಲೀಸರು ಹುಡುಕಾಟ ನಡೆಸಿದ್ದರು. ಈ ಘಟನೆಯ ಮಧ್ಯೆ, ಪೊಲೀಸರು ಶಂಕಿತ ಡ್ರಗ್ ಡೀಲರ್​ನನ್ನು ಬಂಧಿಸಿದ್ದರು. ಆತನ ವಿಚಾರಣೆಯ ಸಮಯದಲ್ಲಿ ತಾವೆಲ್ಲರೂ ಸೇರಿ ಅಲ್ಬಾಚ್​ಳನ್ನು ಕೊಂದಿರುವುದಾಗಿ ಒಪ್ಪಿಕೊಂಡಿದ್ದ.

ಇದನ್ನೂ ಓದಿ: Shocking Video: ಹೋಟೆಲ್ ಊಟದಲ್ಲಿ ಶಿಶ್ನದ ತುಂಡು ಪತ್ತೆ!; ತಿನ್ನೋ ಆಹಾರದಲ್ಲಿ ಗುಪ್ತಾಂಗ ಕಂಡು ಮಹಿಳೆ ಶಾಕ್

Shocking News: ಹೋಂ ವರ್ಕ್ ಮಾಡದ ಮಗನ ಕೈ-ಕಾಲು ಕಟ್ಟಿ ಫ್ಯಾನ್​ಗೆ ನೇತು ಹಾಕಿದ ಅಪ್ಪ!

Published On - 2:08 pm, Wed, 8 December 21

Follow Us
Web contact
Web contact

TV9 Kannada

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?