AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking News: ತಣ್ಣಗಾದ ಐಸ್​ ಕ್ರೀಂ ಕೊಟ್ಟಿದ್ದಕ್ಕೆ ರೆಸ್ಟೋರೆಂಟ್​ನಿಂದ ಹಣ ವಾಪಾಸ್ ಕೇಳಿದ ಗ್ರಾಹಕ!

ಚೀಸ್‌, ಮಿಲ್ಕ್‌ಶೇಕ್‌, ಐಸ್‌ಕ್ರೀಂ ಸೇರಿದಂತೆ ಆರ್ಡರ್‌ ತಣ್ಣಗಾಗಿದೆ ಎಂಬ ಕಾರಣ ನೀಡಿ ಹಣವನ್ನು ಮರುಪಾವತಿ (ರೀಫಂಡ್) ಮಾಡಲು ಒತ್ತಾಯಿಸಿರುವ ಘಟನೆಗಳೂ ನಡೆದಿವೆ ಎಂದರೆ ಆಶ್ಚರ್ಯವಾಗದಿರದು!

Shocking News: ತಣ್ಣಗಾದ ಐಸ್​ ಕ್ರೀಂ ಕೊಟ್ಟಿದ್ದಕ್ಕೆ ರೆಸ್ಟೋರೆಂಟ್​ನಿಂದ ಹಣ ವಾಪಾಸ್ ಕೇಳಿದ ಗ್ರಾಹಕ!
ಐಸ್​ಕ್ರೀಂ
TV9 Web
| Edited By: |

Updated on:Dec 11, 2021 | 6:57 PM

Share

ಆನ್​ಲೈನ್ ಡೆಲಿವರಿ ಶುರುವಾದಾಗಿನಿಂದ ಅನೇಕ ಗ್ರಾಹಕರು ಹೇಗೆ ರೆಸ್ಟೋರೆಂಟ್​ಗಳಿಂದ, ಡೆಲಿವರಿ ಬಾಯ್​ಗಳಿಂದ ವಂಚನೆಗೊಳಗಾಗಿದ್ದಾರೋ ಹಾಗೇ ರೆಸ್ಟೋರೆಂಟ್​ನವರು ಕೂಡ ಗ್ರಾಹಕರಿಂದ ವಂಚನೆಗೊಳಗಾದ ಸಾಕಷ್ಟು ಉದಾಹರಣೆಗಳಿವೆ. ಚೀಸ್‌, ಮಿಲ್ಕ್‌ಶೇಕ್‌, ಐಸ್‌ಕ್ರೀಂ ಸೇರಿದಂತೆ ಆರ್ಡರ್‌ ತಣ್ಣಗಾಗಿದೆ ಎಂಬ ಕಾರಣ ನೀಡಿ ಹಣವನ್ನು ಮರುಪಾವತಿ (ರೀಫಂಡ್) ಮಾಡಲು ಒತ್ತಾಯಿಸಿರುವ ಘಟನೆಗಳೂ ನಡೆದಿವೆ ಎಂದರೆ ಆಶ್ಚರ್ಯವಾಗದಿರದು!

ಇಂಗ್ಲೆಂಡ್​ನ ಓಲ್ಡ್‌ಹ್ಯಾಮ್‌ನಲ್ಲಿ ಲಕ್ಕಿಸ್ ನಡೆಸುತ್ತಿರುವ ಹಸನ್ ಹಬೀಬ್, ತಮ್ಮ ಹಣವನ್ನು ಮರಳಿ ಕೇಳುವ ಡೈನರ್‌ಗಳಿಗಾಗಿ ಡೆಲಿವರಿ ಸೇವೆಯು ತನ್ನ ನೀತಿಯನ್ನು ಬದಲಾಯಿಸಿದ ನಂತರ ಜಸ್ಟ್ ಈಟ್‌ನಲ್ಲಿ ಹೊಸ ಸಮಸ್ಯೆ ಪ್ರಾರಂಭವಾಗಿದೆ ಎಂದು ಹೇಳಿಕೊಂಡಿದ್ದಾರೆ. ಇತ್ತೀಚೆಗೆ ಡೆಲಿವರಿ ಸೇವೆ ಬಗ್ಗೆ ಗ್ರಾಹಕರಿಂದ ಅತಿ ಹೆಚ್ಚು ದೂರುಗಳು ಬರುತ್ತಿದ್ದು, ಅವುಗಳಲ್ಲಿ ಕೆಲವು ವಿಚಿತ್ರವಾದ ಪ್ರಕರಣಗಳಾಗಿವೆ. ನಾಲ್ಕು ಮಿಲ್ಕ್‌ಶೇಕ್‌ಗಳು, ಚೀಸ್‌ಕೇಕ್ ಮತ್ತು ಐಸ್‌ಕ್ರೀಮ್ ಅನ್ನು ಆರ್ಡರ್ ಮಾಡಿದ ವ್ಯಕ್ತಿಯೊಬ್ಬರು ಅದಾದ 45 ನಿಮಿಷಗಳ ನಂತರ ಅವರು ಆಹಾರ ತಣ್ಣಗಿರುವ ಕಾರಣ ತಾವು ನೀಡಿದ ಹಣವನ್ನು ಮರುಪಾವತಿ ಮಾಡಬೇಕೆಂದು ದೂರು ನೀಡಿದರು. ಐಸ್​ಕ್ರೀಂ, ಮಿಲ್ಕ್​ಶೇಕ್, ಚೀಸ್ ಕೇಕ್ ಎಲ್ಲಾದರೂ ಬಿಸಿಯಾಗಿರುತ್ತದೆಯೇ? ಎಂದು ಅವರು ಪ್ರಶ್ನಿಸಿದ್ದಾರೆ.

ಕೆಲವೊಮ್ಮೆ ನಾವು ತಪ್ಪುಗಳನ್ನು ಮಾಡುತ್ತೇವೆ. ಟ್ರಾಫಿಕ್​ನಿಂದಾಗಿ ಅಥವಾ ಇನ್ನಿತರ ಕಾರಣಗಳಿಂದ ಸರಿಯಾದ ಸಮಯದಲ್ಲಿ ಆಹಾರವನ್ನು ಡೆಲಿವರಿ ನೀಡಲು ಆಗುವುದಿಲ್ಲ. ಕೆಲವೊಮ್ಮೆ ನಾವು ಐಟಂಗಳನ್ನು ಕಳೆದುಕೊಳ್ಳುತ್ತೇವೆ ಅಥವಾ ತಪ್ಪು ಐಟಂ ಅನ್ನು ಕಳುಹಿಸುತ್ತೇವೆ. ಆದರೆ ಬದಲಿ ಐಟಂ ಅಥವಾ ಸಂಪೂರ್ಣ ಅರ್ಹ ಮರುಪಾವತಿಯೊಂದಿಗೆ ನಾವು ಅದನ್ನು ಗ್ರಾಹಕರಿಗೆ ಒಪ್ಪಿಸುತ್ತೇವೆ. ಆದರೆ, ಗ್ರಾಹಕರು ಹೀಗೆ ವಿಚಿತ್ರವಾದ ಕಾರಣಗಳನ್ನು ನೀಡಿ ಹಣವನ್ನು ಮರುಪಾವತಿ ಮಾಡಲು ದೂರು ನೀಡುವುದು ಇತ್ತೀಚೆಗೆ ಹೆಚ್ಚಾಗಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: Viral News: ಶಿವನಿಗೆ ನೈವೇದ್ಯವಾಗಿ 10 ಕೆಜಿ ಐಸ್​ ಕ್ರೀಂ ನೀಡಿದ ಭಕ್ತ; ಪ್ರಸಾದಕ್ಕಾಗಿ ಸಾಲುಗಟ್ಟಿ ನಿಂತ ಜನರು

Shocking Video: ಹೋಟೆಲ್ ಊಟದಲ್ಲಿ ಶಿಶ್ನದ ತುಂಡು ಪತ್ತೆ!; ತಿನ್ನೋ ಆಹಾರದಲ್ಲಿ ಗುಪ್ತಾಂಗ ಕಂಡು ಮಹಿಳೆ ಶಾಕ್

Published On - 6:54 pm, Sat, 11 December 21

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ