AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking News: ರೋಗಿಯ ಹೊಟ್ಟೆಯಿಂದ 1 ಕೆಜಿಗಿಂತ ಹೆಚ್ಚು ಉಗುರು ಮತ್ತು ಕಬ್ಬಿಣದ ತುಂಡುಗಳನ್ನು ಹೊರತೆಗೆದ ವೈದ್ಯರು!

Viral News: ಎಕ್ಸ್-ರೇ ಬಳಿಕ ವ್ಯಕ್ತಿಯ ಹೊಟ್ಟೆಯಲ್ಲಿ ಕಬ್ಬಿಣದ ತುಂಡುಗಳು ಜತೆಗೆ ಉಗುರಿನ ಚೂರುಗಳು ಇರುವುದು ಕಂಡು ಬಂದಿದೆ. ಚಿಕಿತ್ಸೆಯ ಬಳಿಕ ವ್ಯಕ್ತಿಯ ಹೊಟ್ಟೆಯಿದ ವೈದ್ಯರು ಸುಮಾರು ಒಂದು ಕೆಜಿಯಷ್ಟು ತಿರುಪು ಮೊಳೆಗಳನ್ನು ಹೊರತೆಗೆದಿದ್ದಾರೆ.

Shocking News: ರೋಗಿಯ ಹೊಟ್ಟೆಯಿಂದ 1 ಕೆಜಿಗಿಂತ ಹೆಚ್ಚು ಉಗುರು ಮತ್ತು ಕಬ್ಬಿಣದ ತುಂಡುಗಳನ್ನು ಹೊರತೆಗೆದ ವೈದ್ಯರು!
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Oct 03, 2021 | 11:09 AM

Share

ಹೊಟ್ಟೆ ನೋವಿನಿಂದ ಬಳಲುತ್ತಿರುವ ರೋಗಿಯ  ಹೊಟ್ಟೆಯಲ್ಲಿ 1 ಕೆಜಿಗಿಂತಲೂ ಹೆಚ್ಚಿನ ಉಗುರು ಮತ್ತು ಕಬ್ಬಿಣದ ತುಂಡುಗಳು ಇರುವುದು ಕಂಡು ಬಂದಿದೆ. ತೀವ್ರವಾದ ಹೊಟ್ಟೆ ನೋವು ಎಂದು ಬಳಲುತ್ತಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆತನ ಹೊಟ್ಟೆಯಲ್ಲಿ ಕಬ್ಬಿಣದ ತುಂಡುಗಳಿವೆ, ಸುಮಾರು 1ಕೆಜಿಗಿಂತಲೂ ಹೆಚ್ಚಿನ ಕಬ್ಬಿಣದ ಚೂರುಗಳಿವೆ ಎಂಬುದು ಸ್ಕ್ಯಾನಿಂಗ್​ ಮೂಲಕ ತಿಳಿದು ಬಂದಿದೆ. ಚಿಕಿತ್ಸೆಯ ಬಳಿಕ ಎಲ್ಲಾ ಲೋಹದ ತುಂಡುಗಳನ್ನು ವ್ಯಕ್ತಿಯ ದೇಹದಿಂದ ಹೊರತೆಗೆಯಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ವ್ಯಕ್ತಿಯನ್ನು ಕ್ಲೈಪೆಡಾ ಆಸ್ಪತ್ರೆಗೆ ಸೇರಿಸಲಾಯಿತು. ಎಕ್ಸ್-ರೇ ಬಳಿಕ ವ್ಯಕ್ತಿಯ ಹೊಟ್ಟೆಯಲ್ಲಿ ಕಬ್ಬಿಣದ ತುಂಡುಗಳು ಜತೆಗೆ ಉಗುರಿನ ಚೂರುಗಳು ಇರುವುದು ಕಂಡು ಬಂದಿದೆ. ಚಿಕಿತ್ಸೆಯ ಬಳಿಕ ವ್ಯಕ್ತಿಯ ಹೊಟ್ಟೆಯಿದ ವೈದ್ಯರು ಸುಮಾರು ಒಂದು ಕೆಜಿಯಷ್ಟು ತಿರುಪು ಮೊಳೆಗಳನ್ನು ಹೊರತೆಗೆದಿದ್ದಾರೆ.

ವರದಿಗಳ ಪ್ರಕಾರ, ವೈದ್ಯರು ಮೂರು ಗಂಟೆಗಳ ಸುದೀರ್ಘ ಕಾರ್ಯಾಚರಣೆಯ ನಂತರ ಎಲ್ಲಾ ಲೋಹದ ವಸ್ತುಗಳನ್ನು ಯಶಸ್ವಿಯಾಗಿ ಹೊರತೆಗೆದಿದ್ದಾರೆ. ಈ ರೀತಿಯ ಘಟನೆಯನ್ನು ನಾನು ಈ ಹಿಂದೆ ನೋಡಿರಲಿಲ್ಲ. ಆತನ ಹೊಟ್ಟೆಯಲ್ಲಿ ಉಗುರುಗಳು ಮತ್ತು ಸ್ಕ್ರೂಗಳಿದ್ದವು ಎಂದು ಕ್ಲೈಪಡಾ ಯೂನಿವರ್ಸಿಟಿ ಆಸ್ಪತ್ರೆಯ ಸರ್ಜನ್ ಅಲ್ಗಿರ್ದಾಸ್ ಸ್ಲೇಪಾವೀಸಿಯಸ್ ಅವರು ಸ್ಥಳೀಯ ಮಾಧ್ಯಮಗಳೊಂದಿಗೆ ಮಾಹಿತಿ ಹಂಚಿಕೊಂಡಿದ್ದಾರೆ.

ಈ ಹಿಂದೆ ಇದೇ ರೀತಿಯ ಮತ್ತೊಂದು ಘಟನೆ ನಡೆದಿತ್ತು. ಕಳೆದ ಸಪ್ಟೆಂಬರ್ ತಿಂಗಳಿನಲ್ಲಿ ಇಡೀ ಮೊಬೈಲ್ಅನ್ನೇ ವ್ಯಕ್ತಿ ನುಂಗಿಬಿಟ್ಟಿದ್ದರು. ಶಸ್ತ್ರ ಚಿಕಿತ್ಸೆಯ ಬಳಿಕ ವ್ಯಕ್ತಿಯ ಹೊಟ್ಟೆಯಿಂದ ನೋಕಿಯಾ ಮೊಬೈಲ್ಅನ್ನು ಹೊರತೆಗೆಯಲಾಗಿತ್ತು. ಶಸ್ತ್ರಚಿಕಿತ್ಸೆ ಯಶಸ್ವಿಯಾಯಿತು, ವ್ಯಕ್ತಿಯ ಹೊಟ್ಟೆಯಿಂದ ಮೊಬೈಲ್ ಫೋನ್ಅನ್ನು ಹೊರತೆಗೆಯಲಾಗಿದೆ ಎಂದು ಡಾ. ಸ್ಕೆಂದರ್ ತಿಳಿಸಿದ್ದರು.

ಇದನ್ನೂ ಓದಿ:

Viral News: ಹೆಂಡತಿ ಸ್ನಾನ ಮಾಡಲ್ಲ ಅಂತ ವಿಚ್ಛೇದನ ನೀಡಿದ ಗಂಡ!

Viral News: ಲೇಹ್​ನಿಂದ ಮನಾಲಿಗೆ ಸೊಲೊ ಸೈಕ್ಲಿಂಗ್ ಮಾಡಿದ ಭಾರತೀಯ ಸೇನಾಧಿಕಾರಿ; ಗಿನ್ನಿಸ್ ದಾಖಲೆ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ