AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking News: 10 ವರ್ಷದಿಂದ ದಿನವೂ ಗಂಡನ ಚಿತಾಭಸ್ಮ ತಿನ್ನುತ್ತಾಳೆ ಈ ಮಹಿಳೆ!

Viral News: 2009ರಲ್ಲಿ ಮದುವೆಯಾಗಿದ್ದ ಇಂಗ್ಲೆಂಡ್​ನ 26 ವರ್ಷದ ಕ್ಯಾಸಿಯ ಗಂಡ 2011ರಲ್ಲಿ ಸಾವನ್ನಪ್ಪಿದ್ದ. ಆತನ ನೆನಪಿಗಾಗಿ ಚಿತಾಭಸ್ಮವನ್ನು ಇಟ್ಟುಕೊಂಡು ಎಲ್ಲೇ ಹೋದರೂ ತೆಗೆದುಕೊಂಡು ಹೋಗುವ ಕ್ಯಾಸಿ ದಿನವೂ ಅದನ್ನು ಸೇವಿಸುತ್ತಾಳೆ.

Shocking News: 10 ವರ್ಷದಿಂದ ದಿನವೂ ಗಂಡನ ಚಿತಾಭಸ್ಮ ತಿನ್ನುತ್ತಾಳೆ ಈ ಮಹಿಳೆ!
ಗಂಡನ ಚಿತಾಭಸ್ಮ ತಿನ್ನುತ್ತಿರುವ ಮಹಿಳೆ
TV9 Web
| Edited By: |

Updated on:Oct 21, 2021 | 1:20 PM

Share

ಆಕೆಗೆ ತನ್ನ ಗಂಡನೆಂದರೆ ಪ್ರಾಣ. ಬಹಳ ಅನ್ಯೋನ್ಯವಾಗಿ ಜೀವನ ನಡೆಸುತ್ತಿದ್ದ ಅವರ ಮೇಲೆ ಯಾರ ಕಣ್ಣು ಬಿತ್ತೋ ಏನೋ ಮದುವೆಯಾಗಿ 2 ವರ್ಷಗಳಲ್ಲಿ ಆಕೆಯ ಗಂಡ ಸಾವನ್ನಪ್ಪಿದ್ದ. ಗಂಡನ ಶವವನ್ನು ಸುಟ್ಟ ಬಳಿಕ ಚಿತಾಭಸ್ಮವನ್ನು ಒಂದು ಡಬ್ಬಿಯಲ್ಲಿ ಹಾಕಿಟ್ಟುಕೊಂಡ ಆ ಮಹಿಳೆ ಅಂದಿನಿಂದ ಇಂದಿನವರೆಗೂ ದಿನವೂ ಆ ಬೂದಿಯನ್ನು ತಿನ್ನುತ್ತಾಳೆ! ಕಳೆದ 10 ವರ್ಷಗಳಿಂದ ಆಕೆ ದಿನವೂ ಆತನ ನೆನಪಾದಾಗಲೆಲ್ಲ ಗಂಡನ ಚಿತಾಭಸ್ಮವನ್ನು ತಿನ್ನುತ್ತಾಳೆ. ಬೂದಿಯಲ್ಲಿ ಬೆರಳನ್ನಿಟ್ಟು ಆ ಬೆರಳನ್ನು ನೆಕ್ಕುತ್ತಾ ಆಕೆ ತನ್ನ ಗಂಡನನ್ನು ನೆನೆಯುತ್ತಾಳೆ.

2009ರಲ್ಲಿ ಮದುವೆಯಾಗಿದ್ದ ಇಂಗ್ಲೆಂಡ್​ನ 26 ವರ್ಷದ ಕ್ಯಾಸಿಯ ಗಂಡ 2011ರಲ್ಲಿ ಸಾವನ್ನಪ್ಪಿದ್ದ. ಆತನ ನೆನಪಿಗಾಗಿ ಚಿತಾಭಸ್ಮವನ್ನು ಇಟ್ಟುಕೊಂಡು ಎಲ್ಲೇ ಹೋದರೂ ತೆಗೆದುಕೊಂಡು ಹೋಗುವ ಕ್ಯಾಸಿ ದಿನವೂ ಅದನ್ನು ಸೇವಿಸುತ್ತಾಳೆ. ಅಸ್ತಮಾದಿಂದಾಗಿ ಸಾವನ್ನಪ್ಪಿದ ಗಂಡನ ಅಂತ್ಯಸಂಸ್ಕಾರ ಮಾಡಿದ ನಂತರ ಆತನ ಚಿತಾಭಸ್ಮವನ್ನು ತನ್ನೊಂದಿಗೆ ಇಟ್ಟುಕೊಂಡಿದ್ದಾಳೆ. 2011ರಿಂದ ನಾನು ಎಲ್ಲೇ ಹೋದರೂ ಗಂಡನ ಚಿತಾಭಸ್ಮವನ್ನು ತೆಗೆದುಕೊಂಡು ಹೋಗುತ್ತೇನೆ. ಗಂಡನ ನೆನಪಾದಾಗಲೆಲ್ಲಾ ಚಿತಾಭಸ್ಮವನ್ನು ಸೇವಿಸುತ್ತೇನೆ ಎಂದಿದ್ದಾಳೆ.

ಮನೆಯಲ್ಲಿ ಮಾತ್ರವಲ್ಲದೆ ದಿನಸಿ ಅಂಗಡಿ, ರೆಸ್ಟೋರೇಂಟ್​, ಪ್ರವಾಸ ಎಲ್ಲೇ ಹೋದರೂ ಗಂಡನ ಚಿತಾಭಸ್ಮವನ್ನು ತೆಗೆದುಕೊಂಡು ಹೋಗುತ್ತೇನೆ. ದಿನಕ್ಕೆ ಮೂರು ಅಥವಾ 4 ಬಾರಿ ಬೂದಿಯನ್ನು ತಿನ್ನುತ್ತೇನೆ. ನನ್ನನ್ನು ನೋಡಿದವರು ಗೇಲಿ ಮಾಡುತ್ತಾರೆ. ಹೀಗಾಗಿ, ಈ ಅಭ್ಯಾಸವನ್ನು ಬಿಟ್ಟುಬಿಡಬೇಕು ಎಂದು ಸಾಕಷ್ಟು ಪ್ರಯತ್ನ ಮಾಡಿದೆ. ಆದರೆ, ನನಗೆ ಸಾಧ್ಯವಾಗಲಿಲ್ಲ. ನನ್ನ ಗಂಡನ ಚಿತಾಭಸ್ಮ ಖಾಲಿಯಾದ ನಂತರ ಏನು ಮಾಡಬೇಕೆಂಬುದೇ ನನಗೆ ಗೊತ್ತಾಗುತ್ತಿಲ್ಲ ಎಂದು ಕ್ಯಾಸಿ ಮಾಧ್ಯಮಗಳಿಗೆ ಹೇಳಿದ್ದಾಳೆ.

ಇದನ್ನೂ ಓದಿ: Shocking News: ಮೊಬೈಲ್ ಕೊಡಲಿಲ್ಲ ಎಂದು ಗಂಡನ ತುಟಿಯನ್ನೇ ಕತ್ತರಿಸಿದ ಹೆಂಡತಿ!

Viral Photo: ಕುಕ್ಕರ್ ಜೊತೆ ಮದುವೆಯಾಗಿ ಎರಡೇ ದಿನಕ್ಕೆ ಡೈವೋರ್ಸ್ ನೀಡಿದ ಯುವಕ; ಕಾರಣವೇನು ಗೊತ್ತಾ?

Published On - 1:18 pm, Thu, 21 October 21

ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!