AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹರಾಜಿನಲ್ಲಿ ಗೆದ್ದ ಸೂಟ್​ಕೇಸ್​ ಅನ್ನು ಮನೆಯಲ್ಲಿ ತೆರೆದು ನೋಡಿದಾಗ ಇಡೀ ಕುಟುಂಬವೇ ಶಾಕ್!

ಹರಾಜಿನಲ್ಲಿ ಭಾಗಿಯಾಗಿದ್ದ ಕುಟುಂಬವೊಂದು ಸೂಟ್​ಕೇಸ್​ಗಳನ್ನು ತನ್ನದಾಗಿಸಿಕೊಂಡಿದೆ. ನಿಯಮಗಳ ಪ್ರಕಾರ ಮನೆಗೆ ಹೋಗಿ ತೆರೆದು ನೋಡಿದಾಗ ಇಡೀ ಕುಟುಂಬವೇ ಭೀತಿಗೊಂಡಿದೆ. ಈ ಬಗ್ಗೆ ಕುತೂಹಲಕಾರಿ ಸ್ಟೋರಿ ಇಲ್ಲಿದೆ..

ಹರಾಜಿನಲ್ಲಿ ಗೆದ್ದ ಸೂಟ್​ಕೇಸ್​ ಅನ್ನು ಮನೆಯಲ್ಲಿ ತೆರೆದು ನೋಡಿದಾಗ ಇಡೀ ಕುಟುಂಬವೇ ಶಾಕ್!
ಸೂಟ್​ಕೇಸ್
Rakesh Nayak Manchi
| Edited By: |

Updated on:Aug 16, 2022 | 8:08 PM

Share

ಅದೇನು ಅದೃಷ್ಟವೋ ಹರಾಜಿನಲ್ಲಿ ಭಾಗಿಯಾಗಿದ್ದ ಕುಟುಂಬವೊಂದು ಸೂಟ್​ಕೇಸ್​ಗಳನ್ನು(Suitcases) ತನ್ನದಾಗಿಸಿಕೊಂಡಿದೆ. ನಿಯಮಗಳಂತೆ ಅದನ್ನು ಸ್ಥಳದಲ್ಲೇ ತೆರೆದು ನೋಡುವಂತಿಲ್ಲ, ಅದರಂತೆ ಅದರಲ್ಲೇನಿದೆಯೋ ಎಂಬ ಕುತೂಹಲದಲ್ಲೇ ಖುಷಿ ಖುಷಿಯಾಗಿ ಮನೆಗೆ ತೆರಳಿದ ಕುಟುಂಬ ಸೂಟ್​ಕೇಸ್ ತೆರೆದು ನೋಡಿದಾಗ ನಿಬ್ಬೆರಗಾಗಿದೆ. ಹಾಗಿದ್ದರೆ ಆ ಸೂಟ್​ಕೇಸ್​ನಲ್ಲಿ ಇದ್ದದ್ದಾದರೂ ಏನು? ಕುತೂಹಲಕಾರಿ ಸುದ್ದಿ ಇಲ್ಲಿದೆ ಓದಿ…

ನ್ಯೂಜಿಲೆಂಡ್‌ನ ದಕ್ಷಿಣ ಆಕ್ಲೆಂಡ್‌ನ ಕುಟುಂಬವೊಂದು ಹರಾಜು ಪ್ರಕ್ರಿಯೆಯಲ್ಲಿ ಭಾಗಿಯಾಗಿತ್ತು. ಅದರಂತೆ ಹರಾಜಿನಲ್ಲಿ ನಡೆದ ಡ್ರಾದಲ್ಲಿ ಆ ಕುಟುಂಬವು 5 ಸೂಟ್‌ಕೇಸ್‌ಗಳನ್ನು ಗೆದ್ದುಕೊಂಡಿದೆ. ಹರಾಜು ನಡೆಯುತ್ತಿದ್ದಾಗ ಆ ಸೂಟ್‌ಕೇಸ್‌ಗಳನ್ನು ತೆರೆಯಬಾರದು ಎಂಬ ನಿಯಮವಿದ್ದುದರಿಂದ ಮನೆಗೆ ಹೋಗಿ ತೆರೆದಿದ್ದಾರೆ. ಹೀಗೆ ಸೂಟ್​ಕೇಸ್​ಗಳನ್ನು ತೆರೆದ ಕುಟುಂಬಕ್ಕೆ ಸಿಕ್ಕಿದ್ದು ಮಾನವನ ಅವಶೇಷಗಳು.

ಭೀತಿಗೊಂಡ ಕುಟುಂಬಸ್ಥರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅದರಂತೆ ಸ್ಥಳಕ್ಕೆ ಬಂದ ಪೊಲೀಸರು, ಅವಶೇಷಗಳನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಪೊಲೀಸರ ಹೇಳಿಕೆ ಪ್ರಕಾರ, ಈ ಕುಟುಂಬಕ್ಕೂ ಕೊಲೆಗೂ ಯಾವುದೇ ಸಂಬಂಧವಿಲ್ಲ. ಆದರೆ ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

ಮತ್ತಷ್ಟು ಟ್ರೆಂಡಿಂಗ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಈ ಸುದ್ದಿಯನ್ನು ತೆಲುಗಿನಲ್ಲಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:07 pm, Tue, 16 August 22

Follow Us
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​