AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking News: ವಿಮಾನದ ಶೌಚಾಲಯದಲ್ಲಿ ಮಗುವಿಗೆ ಜನ್ಮ ನೀಡಿ, ಕಸದ ಬುಟ್ಟಿಯಲ್ಲಿ ಬಿಸಾಡಿದ ಮಹಿಳೆ!

ವಿಮಾನದಲ್ಲೇ ಮಗುವಿಗೆ ಜನ್ಮ ನೀಡಿದ್ದ ಮಹಿಳೆ ಆ ಮಗುವನ್ನು ಶೌಚಾಲಯದ ಕಸದ ಬುಟ್ಟಿಯಲ್ಲಿ ಬಿಸಾಡಿದ್ದಾರೆ. ಮಡಗಾಸ್ಕರ್‌ನ 20 ವರ್ಷದ ಮಹಿಳೆ ಮಾರಿಷಸ್‌ನ ಸರ್ ಸೀವೂಸಗೂರ್ ರಾಮ್‌ಗೂಲಂ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರಯಾಣಿಸುತ್ತಿದ್ದರು.

Shocking News: ವಿಮಾನದ ಶೌಚಾಲಯದಲ್ಲಿ ಮಗುವಿಗೆ ಜನ್ಮ ನೀಡಿ, ಕಸದ ಬುಟ್ಟಿಯಲ್ಲಿ ಬಿಸಾಡಿದ ಮಹಿಳೆ!
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Jan 04, 2022 | 5:05 PM

Share

ಪೋರ್ಟ್ ಲೂಯಿಸ್: ವಿಮಾನದ ಶೌಚಾಲಯದಲ್ಲಿ ನವಜಾತ ಶಿಶುವೊಂದನ್ನು ಬಿಸಾಡಿ ಹೋಗಿರುವ ಹೃದಯವಿದ್ರಾವಕ ಘಟನೆಯೊಂದು ಜನವರ 1ರಂದು ನಡೆದಿದೆ. ಏರ್ ಮಾರಿಷಸ್ ಏರ್‌ಬಸ್ ಎ 330-900ರ ಕಸದ ತೊಟ್ಟಿಯಲ್ಲಿ ರಕ್ತದಲ್ಲಿ ತೊಯ್ದ ಟಾಯ್ಲೆಟ್ ಪೇಪರ್‌ನಲ್ಲಿ ಮುಚ್ಚಿದ ಎಳೆ ಮಗುವನ್ನು ಎಸೆಯಲಾಗಿತ್ತು. ನಿಯಮಿತ ಕಸ್ಟಮ್ಸ್ ತಪಾಸಣೆಯ ಸಮಯದಲ್ಲಿ ವಿಮಾನ ನಿಲ್ದಾಣದ ಅಧಿಕಾರಿಗಳ ಕಣ್ಣಿಗೆ ಈ ಮಗು ಬಿದ್ದಿದೆ. ವಿಮಾನದಲ್ಲೇ ಮಗುವಿಗೆ ಜನ್ಮ ನೀಡಿದ್ದ ಮಹಿಳೆ ಆ ಮಗುವನ್ನು ಶೌಚಾಲಯದ ಕಸದ ಬುಟ್ಟಿಯಲ್ಲಿ ಬಿಸಾಡಿದ್ದಾರೆ ಎಂದು ಅನುಮಾನಿಸಲಾಗಿದೆ.

ಮಡಗಾಸ್ಕರ್‌ನ 20 ವರ್ಷದ ಮಹಿಳೆಯೊಬ್ಬರು ವಿಮಾನದಲ್ಲಿಯೇ ಜನ್ಮ ನೀಡಿದ್ದಾರೆ ಎಂದು ಶಂಕಿಸಲಾಗಿದೆ. ಅವರು ಜನವರಿ 1ರಂದು ಮಾರಿಷಸ್‌ನ ಸರ್ ಸೀವೂಸಗೂರ್ ರಾಮ್‌ಗೂಲಂ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತನ್ನ ತಾಯ್ನಾಡಿನಿಂದ ವಿಮಾನದಲ್ಲಿ ಪ್ರಯಾಣಿಸುತ್ತಿದ್ದರು. ಆಗ ಆಕೆ ವಿಮಾನದಲ್ಲಿ ಮಗುವಿಗೆ ಜನ್ಮ ನೀಡಿದ್ದರು. ಕಸದ ತೊಟ್ಟಿಯಲ್ಲಿ ಸಿಕ್ಕಿದ್ದ ಮಗುವನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಲಾಯಿತು. ಮಗು ಸದ್ಯಕ್ಕೆ ಆರೋಗ್ಯವಾಗಿದೆ ಎಂದು ಬಿಬಿಸಿ ವರದಿ ಮಾಡಿದೆ.

ಆರಂಭದಲ್ಲಿ ಗಂಡು ಮಗು ತನ್ನದಲ್ಲ ಎಂದು ವಾದಿಸಿದ ವಿಮಾನ ಪ್ರಯಾಣಿಕಳನ್ನು ಬಳಿಕ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಯಿತು. ವೈದ್ಯಕೀಯ ಪರೀಕ್ಷೆಯಲ್ಲಿ ಆಕೆ ಮಗುವಿಗೆ ಜನ್ಮ ನೀಡಿದ್ದು ದೃಢಪಟ್ಟಿತು ಎಂದು ಬಿಬಿಸಿ ತನ್ನ ವರದಿಯಲ್ಲಿ ತಿಳಿಸಿದೆ. ಆಸ್ಪತ್ರೆಯಲ್ಲಿ ಆಕೆಯನ್ನು ಪೊಲೀಸ್ ಕಣ್ಗಾವಲಿನಲ್ಲಿ ಇರಿಸಲಾಗಿತ್ತು. ಆಕೆ ಮತ್ತು ಮಗು ಇಬ್ಬರೂ ಆರೋಗ್ಯವಾಗಿದ್ದಾರೆ ಎನ್ನಲಾಗಿದೆ.

ಸ್ಥಳೀಯ ಪತ್ರಿಕೆ ಲೆ ಮಾರಿಸಿಯನ್ ಪ್ರಕಾರ, ಮಲಗಾಸಿ ಮಹಿಳೆ ಎರಡು ವರ್ಷಗಳ ಕೆಲಸದ ಪರವಾನಗಿಯ ಮೇಲೆ ಮಾರಿಷಸ್‌ಗೆ ಬಂದಿದ್ದಳು. ಆಸ್ಪತ್ರೆಯಿಂದ ಬಿಡುಗಡೆಯಾದ ನಂತರ ಆಕೆಯನ್ನು ವಿಚಾರಣೆಗೊಳಪಡಿಸಲಾಗುತ್ತದೆ.

ಇದನ್ನೂ ಓದಿ: Shocking News: ಮೊದಲ ರಾತ್ರಿಯಲ್ಲೇ ಹೆಂಡತಿ ಗರ್ಭಿಣಿ ಎಂದು ಗೊತ್ತಾಗಿ ಗಂಡ ಶಾಕ್!

Shocking News: ಧಾರಾವಾಹಿ ತಂದ ಅವಾಂತರ; ಮಹಿಳೆಯರು ಟಿವಿ ನೋಡುತ್ತಿದ್ದಾಗ ಹಣ, ಒಡವೆ ದೋಚಿದ ಕಳ್ಳರು!

Published On - 5:03 pm, Tue, 4 January 22

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ