Shocking News: ಹೆಂಡತಿಯನ್ನು ಕೊಂದು, ಆಕೆಯ ರುಂಡ ಹಿಡಿದು ರಸ್ತೆ ತುಂಬ ಓಡಾಡಿದ ಗಂಡ!

Viral Video: 17 ವರ್ಷದ ತನ್ನ ಹೆಂಡತಿ ಬೇರೆಯವನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾಳೆ ಎಂಬ ಕಾರಣಕ್ಕೆ ಆಕೆಯ ಶಿರಚ್ಛೇದ ಮಾಡಿದ ಅವಿರಾಲ್ ಎಂಬಾತ ಆಕೆಯ ತಲೆಯನ್ನು ಹಿಡಿದುಕೊಂಡು ರಸ್ತೆಯಲ್ಲಿ ತಿರುಗಾಡುತ್ತಿರುವ ವಿಡಿಯೋ ಇರಾನಿಯನ್ನರನ್ನು ಬೆಚ್ಚಿಬೀಳಿಸಿದೆ.

Shocking News: ಹೆಂಡತಿಯನ್ನು ಕೊಂದು, ಆಕೆಯ ರುಂಡ ಹಿಡಿದು ರಸ್ತೆ ತುಂಬ ಓಡಾಡಿದ ಗಂಡ!
ಹೆಂಡತಿಯ ತಲೆ ಕತ್ತರಿಸಿ ತಂದ ಗಂಡ
Follow us
| Updated By: ಸುಷ್ಮಾ ಚಕ್ರೆ

Updated on: Feb 09, 2022 | 3:18 PM

ಕೆಲವೊಂದು ಘಟನೆಗಳು ನಾವು ಊಹೆ ಮಾಡಿಕೊಳ್ಳಲೂ ಸಾಧ್ಯವಾಗದಷ್ಟು ಕ್ರೂರವಾಗಿರುತ್ತವೆ. ಕೆಲವೊಂದು ಅಪರಾಧಗಳು ವಿಕೃತಿಯಾಗಿ ಬದಲಾಗುತ್ತದೆ. ಶಿಯಾ ಮುಸ್ಲಿಮರ ಪ್ರಾಬಲ್ಯವಿರುವ ಮಧ್ಯಪ್ರಾಚ್ಯದ ರಾಷ್ಟ್ರವಾದ ಇರಾನ್​ನಲ್ಲಿ (Iran) ವಿಕೃತಿಯ ಘಟನೆಯೊಂದು ನಡೆದಿದ್ದು, ಇಡೀ ರಾಷ್ಟ್ರವನ್ನೇ ಬೆಚ್ಚಿ ಬೀಳಿಸಿದೆ. ತನಗೆ ದ್ರೋಹ ಎಸಗಿ ಅಕ್ರಮ ಸಂಬಂಧ (Extra Marital Affair) ಹೊಂದಿದ್ದಾಳೆ ಎಂಬ ಅನುಮಾನದಿಂದ ವ್ಯಕ್ತಿಯೋರ್ವ ತನ್ನ ಪತ್ನಿಯನ್ನು ಅತ್ಯಂತ ಘೋರವಾದ ರೀತಿಯಲ್ಲಿ ಕೊಂದಿದ್ದಾನೆ. 17 ವರ್ಷದ ತನ್ನ ಹೆಂಡತಿಯನ್ನು ಕೊಲೆ ಮಾಡಿದ ಬಳಿಕ ಆಕೆಯ ತಲೆಯನ್ನು ಕತ್ತರಿಸಿ, ಆ ತಲೆಯನ್ನು ಕೈಯಲ್ಲಿ ಹಿಡಿದುಕೊಂಡು ಬೀದಿಯಲ್ಲಿ ತಿರುಗಾಡಿ ವಿಕೃತಿ ಮೆರೆದಿದ್ದಾನೆ. ಇರಾನ್​ನ ನೈರುತ್ಯ ಭಾಗದ ಅಹ್ವಾಜ್ ಎಂಬ ನಗರದಲ್ಲಿ ಈ ಆಘಾತಕಾರಿ ಘಟನೆ (Shocking Incident) ನಡೆದಿದೆ.

ಮೋನಾ ಹೈದರಿ ಎಂಬ 17 ವರ್ಷ ಯುವತಿಯೇ ಕೊಲೆಯಾದಾಕೆ. ಆಕೆಯ ಗಂಡ ಮತ್ತು ಮಾವ ಸೇರಿ ಮೋನಾ ಹೈದರಿಯ ಒಲೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದು, ಇಬ್ಬರನ್ನೂ ಬಂಧಿಸಲಾಗಿದೆ ಎಂದು ಇರಾನ್‌ನ ಸುದ್ದಿ ಸಂಸ್ಥೆ ವರದಿ ಮಾಡಿದೆ.

17 ವರ್ಷದ ತನ್ನ ಹೆಂಡತಿ ಬೇರೆಯವನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾಳೆ ಎಂಬ ಕಾರಣಕ್ಕೆ ಆಕೆಯ ಶಿರಚ್ಛೇದ ಮಾಡಿದ ಅವಿರಾಲ್ ಎಂಬಾತ ಆಕೆಯ ತಲೆಯನ್ನು ಹಿಡಿದುಕೊಂಡು ರಸ್ತೆಯಲ್ಲಿ ತಿರುಗಾಡುತ್ತಿರುವ ವಿಡಿಯೋ ಇರಾನಿಯನ್ನರನ್ನು ಬೆಚ್ಚಿಬೀಳಿಸಿದೆ. ಇರಾನಿನ ಪತ್ರಿಕೆಗಳು ಮತ್ತು ಸಾಮಾಜಿಕ ಮಾಧ್ಯಮಗಳು ಈ ಭೀಕರ ಹತ್ಯೆಯ ವಿರುದ್ಧ ಆಕ್ರೋಶವನ್ನು ಹೊರಹಾಕಿವೆ. ಹೆಂಡತಿಯ ತಲೆ ಕತ್ತರಿಸಿ, ಅದನ್ನು ಕೈಯಲ್ಲಿ ಹಿಡಿದು ರಸ್ತೆ ತುಂಬ ಹೆಮ್ಮೆಯಿಂದ ಓಡಾಡುತ್ತಿರುವುದನ್ನು ನೋಡಿ ಇರಾನ್​ ಜನರು ಆಘಾತಕ್ಕೀಡಾಗಿದ್ದಾರೆ, ಆತನಿಗೆ ಗಲ್ಲು ಶಿಕ್ಷೆ ವಿಧಿಸಬೇಕೆಂದು ಒತ್ತಾಯಿಸಿದ್ದಾರೆ ಎಂದು ‘ಇಂಡಿಯಾ ಟುಡೆ’ ವರದಿ ಮಾಡಿದೆ.

ಇರಾನಿನ ಮಾಧ್ಯಮಗಳ ಪ್ರಕಾರ, ಮೋನಾ ಹೈದರಿ ತನ್ನ 12ನೇ ವಯಸ್ಸಿನಲ್ಲೇ ಮದುವೆಯಾಗಿದ್ದಳು. ಆಕೆ ಸಾಯುವಾಗ ಕೇವಲ 17 ವರ್ಷವಾಗಿತ್ತು. ಅಷ್ಟರಲ್ಲೇ ಆಕೆ 3 ವರ್ಷದ ಮಗನನ್ನು ಪಡೆದಿದ್ದಳು.

ಇದೇ ರೀತಿ 2020ರ ಮೇ ತಿಂಗಳಲ್ಲಿ ಬೇರೆ ಜಾತಿಯವನನ್ನು ಪ್ರೀತಿಸಿದ್ದಕ್ಕೆ ಒಬ್ಬ ವ್ಯಕ್ತಿ ತನ್ನ 14 ವರ್ಷದ ಮಗಳ ತಲೆ ಕತ್ತರಿಸಿ, ಗೌರವ ಹತ್ಯೆ ಮಾಡಿದ್ದ. ಆತನಿಗೆ ಬಳಿಕ 9 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿತ್ತು.

ಇದನ್ನೂ ಓದಿ: Shocking News: ಸೂಪರ್ ಹೀರೋ ಕಾಪಾಡುತ್ತಾನೆಂಬ ನಂಬಿಕೆಯಿಂದ ಟೆರೇಸ್​ನಿಂದ ಕೆಳಗೆ ಜಿಗಿದು ಸಾವನ್ನಪ್ಪಿದ ಬಾಲಕ

Shocking News: ಪೊಲೀಸರು ತಂದ ಕೈದಿಯ ಶವ ಪೋಸ್ಟ್​ ಮಾರ್ಟಂ ವೇಳೆ ಎದ್ದು ಕುಳಿತಿತ್ತು!

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ