AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking News: ಮೊಬೈಲ್ ನುಂಗಿದ ಮಹರಾಯ; 6 ತಿಂಗಳ ಬಳಿಕ ಆಪರೇಷನ್ ಮೂಲಕ ಹೊರತೆಗೆದ ವೈದ್ಯರು

ಈಜಿಪ್ಟ್​ನಲ್ಲಿ ತಮ್ಮ ಆಸ್ಪತ್ರೆಗೆ ಬಂದ ರೋಗಿಯ ಹೊಟ್ಟೆನೋವಿನ ಕಾರಣ ತಿಳಿಯದೆ ಆ ವ್ಯಕ್ತಿಯ ಹೊಟ್ಟೆಯ ಎಕ್ಸ್ ರೇ ತೆಗೆದ ನಂತರ ಮೊಬೈಲ್ ಫೋನ್ ಪತ್ತೆಯಾಗಿದೆ.

Shocking News: ಮೊಬೈಲ್ ನುಂಗಿದ ಮಹರಾಯ; 6 ತಿಂಗಳ ಬಳಿಕ ಆಪರೇಷನ್ ಮೂಲಕ ಹೊರತೆಗೆದ ವೈದ್ಯರು
ಮೊಬೈಲ್ ಹೊರತೆಗೆದ ವೈದ್ಯರು
TV9 Web
| Edited By: |

Updated on: Oct 22, 2021 | 8:25 PM

Share

ಮಕ್ಕಳು ತಮಗೆ ಗೊತ್ತಾಗದೆ ಕೈಗೆ ಸಿಕ್ಕಿದ್ದನ್ನೆಲ್ಲ ಬಾಯಿಗೆ ಹಾಕಿಕೊಳ್ಳುತ್ತಿರುತ್ತವೆ. ಆದರೆ, ಕೆಲವೊಮ್ಮೆ ದೊಡ್ಡವರೂ ಕೂಡ ಇದೇ ರೀತಯ ಎಡವಟ್ಟುಗಳನ್ನು ಮಾಡಿಕೊಳ್ಳುತ್ತಿರುತ್ತಾರೆ. ಅದೇ ರೀತಿ ಇಲ್ಲೊಬ್ಬ ಮಹಾಶಯ ವಿಪರೀತ ಹೊಟ್ಟೆನೋವೆಂದು ಡಾಕ್ಟರ್ ಬಳಿ ಬಂದಿದ್ದ. ಎಕ್ಸ್​ರೇ ತೆಗೆದು ನೋಡಿದ ವೈದ್ಯರೇ ಶಾಕ್ ಆಗಿದ್ದರು. ಏಕೆಂದರೆ ಆತನ ಹೊಟ್ಟೆಯಲ್ಲಿ ಒಂದು ಮೊಬೈಲ್ ಫೋನ್ ಇತ್ತು! ಆತ ಮೊಬೈಲನ್ನು ನುಂಗಿದ 6 ತಿಂಗಳ ಬಳಿಕ ಆತನ ಹೊಟ್ಟೆಯಿಂದ ಆಪರೇಷನ್ ಮೂಲಕ ಮೊಬೈಲನ್ನು ಹೊರಗೆ ತೆಗೆಯಲಾಗಿದೆ.

ಈಜಿಪ್ಟ್​ನಲ್ಲಿ ಈ ಘಟನೆ ನಡೆದಿದೆ. ತಮ್ಮ ಆಸ್ಪತ್ರೆಗೆ ಬಂದ ರೋಗಿಯ ಹೊಟ್ಟೆನೋವಿನ ಕಾರಣ ತಿಳಿಯದೆ ಆ ವ್ಯಕ್ತಿಯ ಹೊಟ್ಟೆಯ ಎಕ್ಸ್ ರೇ ತೆಗೆದ ನಂತರ ಮೊಬೈಲ್ ಫೋನ್ ಪತ್ತೆಯಾಗಿದೆ. ಎಕ್ಸ್-ರೇ ವರದಿಯಲ್ಲಿ ಆತನ ಹೊಟ್ಟೆಯಲ್ಲಿ ಮೊಬೈಲ್ ಇರುವುದನ್ನು ಖಚಿತಪಡಿಸಿದ ನಂತರ ಆತ 6 ತಿಂಗಳ ಹಿಂದೆಯೇ ಆ ಮೊಬೈಲನ್ನು ನುಂಗಿರುವುದು ಬಯಲಾಯಿತು. ಮೊಬೈಲನ್ನು ನುಂಗಿದ ನಂತರ ವೈದ್ಯರ ಬಳಿ ಹೋಗಲು ಮುಜುಗರವಾಗಿ ಆತನ ಸುಮ್ಮನಿದ್ದ. ಆ ಮೊಬೈಲ್ ತನ್ನಷ್ಟಕ್ಕೆ ತಾನೇ ದೇಹದಿಂದ ಹೊರಗೆ ಹೋಗುತ್ತದೆ ಎಂದು ಆತ ಭಾವಿಸಿದ್ದ. ಆದರೆ, ಆ ಮೊಬೈಲ್​ನಿಂದಾಗಿ ಆತನಿಗೆ ವಿಪರೀತ ಕಿಬ್ಬೊಟ್ಟೆ ನೋವು ಶುರುವಾಗಿತ್ತು.

ದೇಹದೊಳಗಿನ ಮೊಬೈಲ್ ಫೋನಿನ ಕಾರಣದಿಂದ ಆ ವ್ಯಕ್ತಿ ತೀವ್ರ ಹೊಟ್ಟೆ ನೋವಿನಿಂದ ಬಳಲುತ್ತಿದ್ದನು. ಆ ಮೊಬೈಲ್ ನುಂಗಿ ಆರು ತಿಂಗಳ ನಂತರ ಅಸ್ವಾನ್ ವಿಶ್ವವಿದ್ಯಾಲಯದ ಆಸ್ಪತ್ರೆಯ ವೈದ್ಯರ ಬಳಿ ತಪಾಸಣೆಗೆ ಹೋದ. ಆತನ ಎಕ್ಸ್ ರೇ ವರದಿಯಲ್ಲಿ ಮೊಬೈಲ್ ಇರುವುದು ಗೊತ್ತಾಯಿತು. ಈ ಮೊಬೈಲ್ ಆತನ ಹೊಟ್ಟೆ ಮತ್ತು ಕರುಳಿನಲ್ಲಿ ತೀವ್ರ ಸೋಂಕು ಉಂಟು ಮಾಡಿತ್ತು. ಆಸ್ಪತ್ರೆಯ ವೈದ್ಯರ ಪ್ರಕಾರ, ಆರು ತಿಂಗಳ ಕಾಲ ರೋಗಿಯ ಹೊಟ್ಟೆಯೊಳಗಿನ ಫೋನ್ ಆಹಾರವನ್ನು ತಡೆಹಿಡಿದು ತೀವ್ರ ಸೋಂಕಿಗೆ ಕಾರಣವಾಗಿತ್ತು.

ಇದನ್ನೂ ಓದಿ: Shocking News: ವಾಲಿಬಾಲ್ ಆಟಗಾರ್ತಿಯ ತಲೆ ಕತ್ತರಿಸಿ ಕೊಂದ ತಾಲಿಬಾನ್; ಅಫ್ಘಾನ್​ ಮಹಿಳೆಯರಿಗೆ ನರಕ ದರ್ಶನ

Shocking News: 10 ವರ್ಷದಿಂದ ದಿನವೂ ಗಂಡನ ಚಿತಾಭಸ್ಮ ತಿನ್ನುತ್ತಾಳೆ ಈ ಮಹಿಳೆ!

Follow Us
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’