AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking News: ಇಡೀ ಫೋನನ್ನೇ ನುಂಗಿ ನೈಸರ್ಗಿಕವಾಗಿ ಹೊರ ಬರಲು 6 ತಿಂಗಳು ಕಾದು ಕುಳಿತ ವ್ಯಕ್ತಿ!

Viral News: ಈಜಿಪ್ಟ್​ನ ವ್ಯಕ್ತಿಯ ಹೊಟ್ಟೆಯಲ್ಲಿ ಫೋನ್​ ಸಿಲುಕಿಕೊಂಡಿರುವದನ್ನು ಕಂಡು ವೈದ್ಯರು ಆಶ್ಚರ್ಯಚಕಿತರಾಗಿದ್ದಾರೆ. ಇಡೀ ಫೋನ್​ ನುಂಗಿದ ವ್ಯಕ್ತಿ ಹೊಟ್ಟೆ ನೋವು ತಾಳಲಾರದೇ ಆಸ್ಪತ್ರೆಗೆ ದಾಖಲಾಗಿದ್ದಾರೆ.

Shocking News: ಇಡೀ ಫೋನನ್ನೇ ನುಂಗಿ ನೈಸರ್ಗಿಕವಾಗಿ ಹೊರ ಬರಲು 6 ತಿಂಗಳು ಕಾದು ಕುಳಿತ ವ್ಯಕ್ತಿ!
ಇಡೀ ಫೋನನ್ನೇ ನುಂಗಿದ ವ್ಯಕ್ತಿ!
TV9 Web
| Updated By: shruti hegde|

Updated on:Oct 20, 2021 | 10:00 AM

Share

ಹೊಟ್ಟೆ ನೋವಿನಿಂದ ಆಸ್ಪತ್ರೆಗೆ ದಾಖಲಾದ ವ್ಯಕ್ತಿಯನ್ನು ಪರಿಶೀಲಿಸಿದ ಬಳಿಕ ಮೊಬೈಲ್​ ಫೋನ್ ಹೊಟ್ಟೆಯಲ್ಲಿ ಸಿಲುಕಿಕೊಂಡಿರುವ ದೃಶ್ಯ ನೋಡಿ ವೈದ್ಯರು ಆಶ್ಚರ್ಯಚಕಿತರಾಗಿದ್ದಾರೆ. ಈಜಿಪ್ಟ್ ವ್ಯಕ್ತಿಯೊಬ್ಬ 6 ತಿಂಗಳ ಹಿಂದೆ ಫೋನ್ ನುಂಗಿದ್ದ, ದೇಹದ ಮೂಲಕ ನೈಸರ್ಗಿಕವಾಗಿ ಹೊರಬರಲಿ ಎಂದು ಕಾದು ಕುಳಿತಿದ್ದ. ಆದಾಗ್ಯೂ ಫೋನ್ ಹೊರಬಂದಿಲ್ಲ. ಆದರೆ ದೇಹದಿಂದ ತ್ಯಾಜ್ಯಗಳು ಹೊರಬರದಂತೆ ನಿರ್ಬಂಧಿಸಿತ್ತು. ಇದರಿಂದ ಹೊಟ್ಟೆ ನೋವಿನ ಸಮಸ್ಯೆ ಎದುರಾಗಿದೆ. ನಂತರ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ಮಾಹಿತಿ ವರದಿಗಳಿಂದ ತಿಳಿದು ಬಂದಿದೆ.

ದಿನ ಕಳೆಯುತ್ತಿದ್ದಂತೆಯೇ ವ್ಯಕ್ತಿಗೆ ಹೊಟ್ಟೆ ನೋವು ಹೆಚ್ಚಾಗಿದೆ. ಸಹಿಸಿಕೊಳ್ಳಲಾಗದಷ್ಟು ವಿಪರೀತಕ್ಕೆ ಹೋದಂತೆ ವೈದ್ಯರ ಬಳಿ ಚಿಕಿತ್ಸೆಗೆ ಹೋಗಿದ್ದಾರೆ. ಎಕ್ಸ್-ರೇ ಸ್ಕ್ಯಾನ್ ಬಳಿಕ ಸಂಪೂರ್ಣ ಫೋನ್ ಆತನ ಹೊಟ್ಟೆಯೊಳಗೆ ಸಿಲುಕಿಕೊಂಡಿರುವುದನ್ನು ನೋಡಿ ವೈದ್ಯರು ಆಶ್ಚರ್ಯಗೊಂಡಿದ್ದಾರೆ.

ಈ ಘಟನೆಯ ಬಳಿಕ ವ್ಯಕ್ತಿಯ ಕರುಳು, ಕಿಬ್ಬೊಟ್ಟೆಯ ಮೇಲಿನ ಹೊಡೆತದಿಂದ ಶಸ್ತ್ರಚಿಕಿತ್ಸೆಗೆ ಒಳಗಾಗಬೇಕಾಯಿತು. ಈಜಿಪ್ಟ್​ನ ಅಸ್ವಾನ್ ಯೂನಿವರ್ಸಿಟಿ ಆಸಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ನಡೆಯಿತು. ವರದಿಗಳ ಪ್ರಕಾರ, ಸಂಪೂರ್ಣ ಫೋನ್ಅನ್ನು ನುಂಗಿದ ವ್ಯಕ್ತಿಯನ್ನು ನೋಡಿದ್ದು ಇದೇ ಮೊದಲು ಎಂದು ಅಸ್ವಾನ್ ಯುನಿವರ್ಸಿಟಿ ಆಸ್ಪತ್ರೆ ಅಧ್ಯಕ್ಷ ಮೊಹಮ್ಮದ್ ಎಲ್ ದಶೌರಿ ಹೇಳಿದ್ದಾರೆ.

ಮನುಷ್ಯನ ಸ್ಥಿತಿ ಇದೀಗ ಹೇಗಿದೆ ಎಂಬುದರ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಅದಾಗ್ಯೂ ಆತ ಮೊಬೈಲ್ ನುಂಗಲು ಕಾರಣವೇನೂ ಎಂಬುದೂ ಸ್ಪಷ್ಟವಾಗಿಲ್ಲ. ಆದರೆ ಆರೋಗ್ಯದಲ್ಲಿ ಚೇತರಿಕೆ ಕಾಣುತ್ತಿದೆ ಎಂಬ ಮಾಹಿತಿ  ವರದಿಗಳಿಂದ ತಿಳಿದು ಬಂದಿದೆ.

ಇದನ್ನೂ ಓದಿ:

Shocking News: ಮೊಬೈಲ್ ಕೊಡಲಿಲ್ಲ ಎಂದು ಗಂಡನ ತುಟಿಯನ್ನೇ ಕತ್ತರಿಸಿದ ಹೆಂಡತಿ!

Shocking Video: ದೈತ್ಯ ನಾಗರಹಾವನ್ನು ಕುತ್ತಿಗೆಗೆ ಸುತ್ತಿಕೊಂಡು ಮುದ್ದಾಡಿದ ವ್ಯಕ್ತಿ; ವಿಡಿಯೋ ನೋಡಿ

Published On - 9:54 am, Wed, 20 October 21

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ