AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking News: ಇಡೀ ಫೋನನ್ನೇ ನುಂಗಿ ನೈಸರ್ಗಿಕವಾಗಿ ಹೊರ ಬರಲು 6 ತಿಂಗಳು ಕಾದು ಕುಳಿತ ವ್ಯಕ್ತಿ!

Viral News: ಈಜಿಪ್ಟ್​ನ ವ್ಯಕ್ತಿಯ ಹೊಟ್ಟೆಯಲ್ಲಿ ಫೋನ್​ ಸಿಲುಕಿಕೊಂಡಿರುವದನ್ನು ಕಂಡು ವೈದ್ಯರು ಆಶ್ಚರ್ಯಚಕಿತರಾಗಿದ್ದಾರೆ. ಇಡೀ ಫೋನ್​ ನುಂಗಿದ ವ್ಯಕ್ತಿ ಹೊಟ್ಟೆ ನೋವು ತಾಳಲಾರದೇ ಆಸ್ಪತ್ರೆಗೆ ದಾಖಲಾಗಿದ್ದಾರೆ.

Shocking News: ಇಡೀ ಫೋನನ್ನೇ ನುಂಗಿ ನೈಸರ್ಗಿಕವಾಗಿ ಹೊರ ಬರಲು 6 ತಿಂಗಳು ಕಾದು ಕುಳಿತ ವ್ಯಕ್ತಿ!
ಇಡೀ ಫೋನನ್ನೇ ನುಂಗಿದ ವ್ಯಕ್ತಿ!
TV9 Web
| Edited By: |

Updated on:Oct 20, 2021 | 10:00 AM

Share

ಹೊಟ್ಟೆ ನೋವಿನಿಂದ ಆಸ್ಪತ್ರೆಗೆ ದಾಖಲಾದ ವ್ಯಕ್ತಿಯನ್ನು ಪರಿಶೀಲಿಸಿದ ಬಳಿಕ ಮೊಬೈಲ್​ ಫೋನ್ ಹೊಟ್ಟೆಯಲ್ಲಿ ಸಿಲುಕಿಕೊಂಡಿರುವ ದೃಶ್ಯ ನೋಡಿ ವೈದ್ಯರು ಆಶ್ಚರ್ಯಚಕಿತರಾಗಿದ್ದಾರೆ. ಈಜಿಪ್ಟ್ ವ್ಯಕ್ತಿಯೊಬ್ಬ 6 ತಿಂಗಳ ಹಿಂದೆ ಫೋನ್ ನುಂಗಿದ್ದ, ದೇಹದ ಮೂಲಕ ನೈಸರ್ಗಿಕವಾಗಿ ಹೊರಬರಲಿ ಎಂದು ಕಾದು ಕುಳಿತಿದ್ದ. ಆದಾಗ್ಯೂ ಫೋನ್ ಹೊರಬಂದಿಲ್ಲ. ಆದರೆ ದೇಹದಿಂದ ತ್ಯಾಜ್ಯಗಳು ಹೊರಬರದಂತೆ ನಿರ್ಬಂಧಿಸಿತ್ತು. ಇದರಿಂದ ಹೊಟ್ಟೆ ನೋವಿನ ಸಮಸ್ಯೆ ಎದುರಾಗಿದೆ. ನಂತರ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ಮಾಹಿತಿ ವರದಿಗಳಿಂದ ತಿಳಿದು ಬಂದಿದೆ.

ದಿನ ಕಳೆಯುತ್ತಿದ್ದಂತೆಯೇ ವ್ಯಕ್ತಿಗೆ ಹೊಟ್ಟೆ ನೋವು ಹೆಚ್ಚಾಗಿದೆ. ಸಹಿಸಿಕೊಳ್ಳಲಾಗದಷ್ಟು ವಿಪರೀತಕ್ಕೆ ಹೋದಂತೆ ವೈದ್ಯರ ಬಳಿ ಚಿಕಿತ್ಸೆಗೆ ಹೋಗಿದ್ದಾರೆ. ಎಕ್ಸ್-ರೇ ಸ್ಕ್ಯಾನ್ ಬಳಿಕ ಸಂಪೂರ್ಣ ಫೋನ್ ಆತನ ಹೊಟ್ಟೆಯೊಳಗೆ ಸಿಲುಕಿಕೊಂಡಿರುವುದನ್ನು ನೋಡಿ ವೈದ್ಯರು ಆಶ್ಚರ್ಯಗೊಂಡಿದ್ದಾರೆ.

ಈ ಘಟನೆಯ ಬಳಿಕ ವ್ಯಕ್ತಿಯ ಕರುಳು, ಕಿಬ್ಬೊಟ್ಟೆಯ ಮೇಲಿನ ಹೊಡೆತದಿಂದ ಶಸ್ತ್ರಚಿಕಿತ್ಸೆಗೆ ಒಳಗಾಗಬೇಕಾಯಿತು. ಈಜಿಪ್ಟ್​ನ ಅಸ್ವಾನ್ ಯೂನಿವರ್ಸಿಟಿ ಆಸಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ನಡೆಯಿತು. ವರದಿಗಳ ಪ್ರಕಾರ, ಸಂಪೂರ್ಣ ಫೋನ್ಅನ್ನು ನುಂಗಿದ ವ್ಯಕ್ತಿಯನ್ನು ನೋಡಿದ್ದು ಇದೇ ಮೊದಲು ಎಂದು ಅಸ್ವಾನ್ ಯುನಿವರ್ಸಿಟಿ ಆಸ್ಪತ್ರೆ ಅಧ್ಯಕ್ಷ ಮೊಹಮ್ಮದ್ ಎಲ್ ದಶೌರಿ ಹೇಳಿದ್ದಾರೆ.

ಮನುಷ್ಯನ ಸ್ಥಿತಿ ಇದೀಗ ಹೇಗಿದೆ ಎಂಬುದರ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಅದಾಗ್ಯೂ ಆತ ಮೊಬೈಲ್ ನುಂಗಲು ಕಾರಣವೇನೂ ಎಂಬುದೂ ಸ್ಪಷ್ಟವಾಗಿಲ್ಲ. ಆದರೆ ಆರೋಗ್ಯದಲ್ಲಿ ಚೇತರಿಕೆ ಕಾಣುತ್ತಿದೆ ಎಂಬ ಮಾಹಿತಿ  ವರದಿಗಳಿಂದ ತಿಳಿದು ಬಂದಿದೆ.

ಇದನ್ನೂ ಓದಿ:

Shocking News: ಮೊಬೈಲ್ ಕೊಡಲಿಲ್ಲ ಎಂದು ಗಂಡನ ತುಟಿಯನ್ನೇ ಕತ್ತರಿಸಿದ ಹೆಂಡತಿ!

Shocking Video: ದೈತ್ಯ ನಾಗರಹಾವನ್ನು ಕುತ್ತಿಗೆಗೆ ಸುತ್ತಿಕೊಂಡು ಮುದ್ದಾಡಿದ ವ್ಯಕ್ತಿ; ವಿಡಿಯೋ ನೋಡಿ

Published On - 9:54 am, Wed, 20 October 21

Follow Us
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ