AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking News: ಇಡೀ ಫೋನನ್ನೇ ನುಂಗಿ ನೈಸರ್ಗಿಕವಾಗಿ ಹೊರ ಬರಲು 6 ತಿಂಗಳು ಕಾದು ಕುಳಿತ ವ್ಯಕ್ತಿ!

Viral News: ಈಜಿಪ್ಟ್​ನ ವ್ಯಕ್ತಿಯ ಹೊಟ್ಟೆಯಲ್ಲಿ ಫೋನ್​ ಸಿಲುಕಿಕೊಂಡಿರುವದನ್ನು ಕಂಡು ವೈದ್ಯರು ಆಶ್ಚರ್ಯಚಕಿತರಾಗಿದ್ದಾರೆ. ಇಡೀ ಫೋನ್​ ನುಂಗಿದ ವ್ಯಕ್ತಿ ಹೊಟ್ಟೆ ನೋವು ತಾಳಲಾರದೇ ಆಸ್ಪತ್ರೆಗೆ ದಾಖಲಾಗಿದ್ದಾರೆ.

Shocking News: ಇಡೀ ಫೋನನ್ನೇ ನುಂಗಿ ನೈಸರ್ಗಿಕವಾಗಿ ಹೊರ ಬರಲು 6 ತಿಂಗಳು ಕಾದು ಕುಳಿತ ವ್ಯಕ್ತಿ!
ಇಡೀ ಫೋನನ್ನೇ ನುಂಗಿದ ವ್ಯಕ್ತಿ!
TV9 Web
| Edited By: |

Updated on:Oct 20, 2021 | 10:00 AM

Share

ಹೊಟ್ಟೆ ನೋವಿನಿಂದ ಆಸ್ಪತ್ರೆಗೆ ದಾಖಲಾದ ವ್ಯಕ್ತಿಯನ್ನು ಪರಿಶೀಲಿಸಿದ ಬಳಿಕ ಮೊಬೈಲ್​ ಫೋನ್ ಹೊಟ್ಟೆಯಲ್ಲಿ ಸಿಲುಕಿಕೊಂಡಿರುವ ದೃಶ್ಯ ನೋಡಿ ವೈದ್ಯರು ಆಶ್ಚರ್ಯಚಕಿತರಾಗಿದ್ದಾರೆ. ಈಜಿಪ್ಟ್ ವ್ಯಕ್ತಿಯೊಬ್ಬ 6 ತಿಂಗಳ ಹಿಂದೆ ಫೋನ್ ನುಂಗಿದ್ದ, ದೇಹದ ಮೂಲಕ ನೈಸರ್ಗಿಕವಾಗಿ ಹೊರಬರಲಿ ಎಂದು ಕಾದು ಕುಳಿತಿದ್ದ. ಆದಾಗ್ಯೂ ಫೋನ್ ಹೊರಬಂದಿಲ್ಲ. ಆದರೆ ದೇಹದಿಂದ ತ್ಯಾಜ್ಯಗಳು ಹೊರಬರದಂತೆ ನಿರ್ಬಂಧಿಸಿತ್ತು. ಇದರಿಂದ ಹೊಟ್ಟೆ ನೋವಿನ ಸಮಸ್ಯೆ ಎದುರಾಗಿದೆ. ನಂತರ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ಮಾಹಿತಿ ವರದಿಗಳಿಂದ ತಿಳಿದು ಬಂದಿದೆ.

ದಿನ ಕಳೆಯುತ್ತಿದ್ದಂತೆಯೇ ವ್ಯಕ್ತಿಗೆ ಹೊಟ್ಟೆ ನೋವು ಹೆಚ್ಚಾಗಿದೆ. ಸಹಿಸಿಕೊಳ್ಳಲಾಗದಷ್ಟು ವಿಪರೀತಕ್ಕೆ ಹೋದಂತೆ ವೈದ್ಯರ ಬಳಿ ಚಿಕಿತ್ಸೆಗೆ ಹೋಗಿದ್ದಾರೆ. ಎಕ್ಸ್-ರೇ ಸ್ಕ್ಯಾನ್ ಬಳಿಕ ಸಂಪೂರ್ಣ ಫೋನ್ ಆತನ ಹೊಟ್ಟೆಯೊಳಗೆ ಸಿಲುಕಿಕೊಂಡಿರುವುದನ್ನು ನೋಡಿ ವೈದ್ಯರು ಆಶ್ಚರ್ಯಗೊಂಡಿದ್ದಾರೆ.

ಈ ಘಟನೆಯ ಬಳಿಕ ವ್ಯಕ್ತಿಯ ಕರುಳು, ಕಿಬ್ಬೊಟ್ಟೆಯ ಮೇಲಿನ ಹೊಡೆತದಿಂದ ಶಸ್ತ್ರಚಿಕಿತ್ಸೆಗೆ ಒಳಗಾಗಬೇಕಾಯಿತು. ಈಜಿಪ್ಟ್​ನ ಅಸ್ವಾನ್ ಯೂನಿವರ್ಸಿಟಿ ಆಸಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ನಡೆಯಿತು. ವರದಿಗಳ ಪ್ರಕಾರ, ಸಂಪೂರ್ಣ ಫೋನ್ಅನ್ನು ನುಂಗಿದ ವ್ಯಕ್ತಿಯನ್ನು ನೋಡಿದ್ದು ಇದೇ ಮೊದಲು ಎಂದು ಅಸ್ವಾನ್ ಯುನಿವರ್ಸಿಟಿ ಆಸ್ಪತ್ರೆ ಅಧ್ಯಕ್ಷ ಮೊಹಮ್ಮದ್ ಎಲ್ ದಶೌರಿ ಹೇಳಿದ್ದಾರೆ.

ಮನುಷ್ಯನ ಸ್ಥಿತಿ ಇದೀಗ ಹೇಗಿದೆ ಎಂಬುದರ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಅದಾಗ್ಯೂ ಆತ ಮೊಬೈಲ್ ನುಂಗಲು ಕಾರಣವೇನೂ ಎಂಬುದೂ ಸ್ಪಷ್ಟವಾಗಿಲ್ಲ. ಆದರೆ ಆರೋಗ್ಯದಲ್ಲಿ ಚೇತರಿಕೆ ಕಾಣುತ್ತಿದೆ ಎಂಬ ಮಾಹಿತಿ  ವರದಿಗಳಿಂದ ತಿಳಿದು ಬಂದಿದೆ.

ಇದನ್ನೂ ಓದಿ:

Shocking News: ಮೊಬೈಲ್ ಕೊಡಲಿಲ್ಲ ಎಂದು ಗಂಡನ ತುಟಿಯನ್ನೇ ಕತ್ತರಿಸಿದ ಹೆಂಡತಿ!

Shocking Video: ದೈತ್ಯ ನಾಗರಹಾವನ್ನು ಕುತ್ತಿಗೆಗೆ ಸುತ್ತಿಕೊಂಡು ಮುದ್ದಾಡಿದ ವ್ಯಕ್ತಿ; ವಿಡಿಯೋ ನೋಡಿ

Published On - 9:54 am, Wed, 20 October 21

Follow Us
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ