AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking News: ಇಟ್ಟಿಗೆ ಎಸೆದು ಮನುಷ್ಯನ ಪ್ರಾಣ ತೆಗೆದ ಕೋತಿ!; ದೆಹಲಿಯಲ್ಲೊಂದು ಶಾಕಿಂಗ್ ಘಟನೆ

Viral News: ದೆಹಲಿಯ ನಬಿ ಕರೀಮ್ ಪ್ರದೇಶದಲ್ಲಿ 30 ವರ್ಷದ ಮೊಹಮ್ಮದ್ ಕುರ್ಬಾನ್ ಎಂಬುವವರ ತಲೆ ಮೇಲೆ ಕೋತಿ ಎಸೆದ ಇಟ್ಟಿಗೆ ಬಿದ್ದ ಪರಿಣಾಮದಿಂದ ಅವರು ಸಾವನ್ನಪ್ಪಿದ್ದಾರೆ.

Shocking News: ಇಟ್ಟಿಗೆ ಎಸೆದು ಮನುಷ್ಯನ ಪ್ರಾಣ ತೆಗೆದ ಕೋತಿ!; ದೆಹಲಿಯಲ್ಲೊಂದು ಶಾಕಿಂಗ್ ಘಟನೆ
ಸಾಂಕೇತಿಕ ಚಿತ್ರ
TV9 Web
| Edited By: |

Updated on:Oct 21, 2021 | 3:12 PM

Share

ಯಾರ ಸಾವು ಯಾವ ರೀತಿಯಲ್ಲಿ ಬರುತ್ತದೋ ಊಹಿಸಲು ಕೂಡ ಅಸಾಧ್ಯ. ಎಲ್ಲವೂ ಸರಿಯಿದೆ ಎಂದುಕೊಳ್ಳುವಾಗಲೇ ನಮ್ಮ ಊಹೆಗೆ ಮೀರಿದ ಘಟನೆಗಳು ನಡೆದು ಹೋಗುತ್ತವೆ. ಮನುಷ್ಯನಿಂದ ದಿನವೂ ಅದೆಷ್ಟೋ ಪಾಪದ ಕಾರ್ಯಗಳು ಆಗುತ್ತಲೇ ಇರುತ್ತವೆ. ಕೊಲೆ, ಸುಲಿಗೆ, ಅಪಘಾತ, ಅತ್ಯಾಚಾರ ಈ ರೀತಿಯ ಘಟನೆಗಳೆಲ್ಲ ಸಾಮಾನ್ಯ ಎಂದಾಗಿಬಿಟ್ಟಿದೆ. ಮನುಷ್ಯನಿಂದ ಪ್ರಾಣಿಗಳ ಪ್ರಾಣಕ್ಕೆ ಸಂಚಕಾರ ಆಗುತ್ತಲೇ ಇರುತ್ತದೆ. ಆದರೆ, ಕೋತಿಯೊಂದು ಮನುಷ್ಯನನ್ನು ಕೊಂದಿರುವ ವಿಚಿತ್ರ ಮತ್ತು ಅಪರೂಪದ ಘಟನೆ ದೆಹಲಿಯಲ್ಲಿ ನಡೆದಿದೆ.

ಕಟ್ಟಡವನ್ನು ಏರಿ ಕುಳಿತಿದ್ದ ಕೋತಿಯೊಂದು ಎರಡನೇ ಮಹಡಿಯಿಂದ ಇಟ್ಟಿಗೆಯನ್ನು ಎಸೆದ ಕಾರಣ ಕೆಳಗೆ ನಿಂತಿದ್ದ ವ್ಯಕ್ತಿ ಸಾವನ್ನಪ್ಪಿದ್ದಾರೆ. ದೆಹಲಿಯ ನಬಿ ಕರೀಮ್ ಪ್ರದೇಶದಲ್ಲಿ 30 ವರ್ಷದ ಮೊಹಮ್ಮದ್ ಕುರ್ಬಾನ್ ಎಂಬುವವರ ತಲೆ ಮೇಲೆ ಕೋತಿ ಎಸೆದ ಇಟ್ಟಿಗೆ ಬಿದ್ದ ಪರಿಣಾಮದಿಂದ ಅವರು ಸಾವನ್ನಪ್ಪಿದ್ದಾರೆ.

ಈ ಪ್ರದೇಶದಲ್ಲಿ ಬ್ಯಾಗ್​ಗಳನ್ನು ವ್ಯಾಪಾರ ಮಾಡುತ್ತಿದ್ದ ಕುರ್ಬಾನ್ ಅವರ ಸಾವು ಮಂಗನಿಂದಲೇ ಆಗಬೇಕೆಂದು ವಿಧಿ ನಿರ್ಧರಿಸಿತ್ತು ಎನಿಸುತ್ತದೆ. ಹೀಗಾಗಿ, ಕೋತಿಯ ಕೈಯಿಂದ ಜಾರಿದ ಇಟ್ಟಿಗೆ ಸೀದಾ ಕುರ್ಬಾನ್ ಅವರ ತಲೆಗೆ ಅವರು ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ವೈದ್ಯರು ಅವರು ಮೃತಪಟ್ಟಿರುವುದಾಗಿ ಘೋಷಿಸಿದರು.

ಕಟ್ಟಡದ ಮಾಲೀಕರು ಕೋತಿಗಳನ್ನು ಕಟ್ಟಡದ ಮೇಲಿದ್ದ ನೀರಿನ ಟ್ಯಾಂಕ್​ ಅನ್ನು ಕೋತಿಗಳು ಓಪನ್ ಮಾಡಬಾರದು ಎಂದು ಅದರ ಮೇಲೆ ಇಟ್ಟಿಗೆಗಳನ್ನು ಹೇರಿದ್ದರು. ಆ ಇಟ್ಟಿಗೆಯನ್ನು ತೆಗೆದು ಟ್ಯಾಂಕ್ ಮೇಲೆ ಹತ್ತಲು ನೋಡಿದ ಕೋತಿಯ ಕೈಯಿಂದ ಇಟ್ಟಿಗೆ ಜಾರಿ ಕೆಳಗೆ ಬಿದ್ದಿದೆ. ದುರಾದೃಷ್ಟವಶಾತ್ ಆ ಇಟ್ಟಿಗೆ ಕಟ್ಟಡದ ಕೆಳ ಭಾಗದಲ್ಲಿ ನಿಂತಿದ್ದ ಕುರ್ಬಾನ್ ಅವರ ತಲೆ ಮೇಲೆ ಬಿದ್ದು ಸಾವನ್ನಪ್ಪಿದ್ದಾರೆ. ಕೋತಿಗಳ ಗುಂಪು ನೀರಿನ ಟ್ಯಾಂಕ್ ಮೇಲಿಂದ ಎರಡು ಇಟ್ಟಿಗೆಗಳನ್ನು ತೆಗೆದಿದ್ದು, ಒಂದನ್ನು ಟೆರೇಸ್ ಮೇಲೆ ಎಸೆದಿವೆ. ಇನ್ನೊಂದು ಇಟ್ಟಿಗೆ ಕುರ್ಬಾನ್‌ ತಲೆಗೆ ಬಡಿದಿದೆ.

ಇದನ್ನೂ ಓದಿ: Crime News: ಹೋಂ ವರ್ಕ್ ಮಾಡದ 7ನೇ ಕ್ಲಾಸ್​ ವಿದ್ಯಾರ್ಥಿಯನ್ನು ಥಳಿಸಿ ಕೊಂದ ಶಿಕ್ಷಕ!

Murder: ಹಾಡಹಗಲೇ ಮಹಿಳೆಯ ಬರ್ಬರ ಹತ್ಯೆ; ಬೆಳ್ಳಿ ಗೆಜ್ಜೆಗಾಗಿ ಕಾಲನ್ನೇ ಕತ್ತರಿಸಿದ ಹಂತಕರು

Published On - 3:11 pm, Thu, 21 October 21

ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
BBL 2026: ರಣರೋಚಕ ಪಂದ್ಯದಲ್ಲಿ ರೋಚಕ ಜಯ..!
BBL 2026: ರಣರೋಚಕ ಪಂದ್ಯದಲ್ಲಿ ರೋಚಕ ಜಯ..!
ಬಣದ ಹುಣ್ಣಿಮೆಗೆ ಜನಸಾಗರ, ಬೆಳಗಾವಿಯಲ್ಲಿ ಬಸ್ ಕೊರತೆಯಿಂದ ಭಕ್ತರ ಪರದಾಟ
ಬಣದ ಹುಣ್ಣಿಮೆಗೆ ಜನಸಾಗರ, ಬೆಳಗಾವಿಯಲ್ಲಿ ಬಸ್ ಕೊರತೆಯಿಂದ ಭಕ್ತರ ಪರದಾಟ
ಬಿಗ್ ಬಾಸ್​​ನಲ್ಲಿ ಸುದೀಪ್ ಚರ್ಚೆ ಮಾಡಬೇಕಿರುವ ವಿಷಯಗಳ ಪಟ್ಟಿ ದೊಡ್ಡದಿದೆ
ಬಿಗ್ ಬಾಸ್​​ನಲ್ಲಿ ಸುದೀಪ್ ಚರ್ಚೆ ಮಾಡಬೇಕಿರುವ ವಿಷಯಗಳ ಪಟ್ಟಿ ದೊಡ್ಡದಿದೆ
ಸರ್ಕಾರದ ಗ್ಯಾರಂಟಿ ಯೋಜನೆ ವಿರುದ್ಧ ಗುಡುಗಿದ ಹೆಚ್​​ಡಿ ದೇವೇಗೌಡ
ಸರ್ಕಾರದ ಗ್ಯಾರಂಟಿ ಯೋಜನೆ ವಿರುದ್ಧ ಗುಡುಗಿದ ಹೆಚ್​​ಡಿ ದೇವೇಗೌಡ