AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking News: ಇಟ್ಟಿಗೆ ಎಸೆದು ಮನುಷ್ಯನ ಪ್ರಾಣ ತೆಗೆದ ಕೋತಿ!; ದೆಹಲಿಯಲ್ಲೊಂದು ಶಾಕಿಂಗ್ ಘಟನೆ

Viral News: ದೆಹಲಿಯ ನಬಿ ಕರೀಮ್ ಪ್ರದೇಶದಲ್ಲಿ 30 ವರ್ಷದ ಮೊಹಮ್ಮದ್ ಕುರ್ಬಾನ್ ಎಂಬುವವರ ತಲೆ ಮೇಲೆ ಕೋತಿ ಎಸೆದ ಇಟ್ಟಿಗೆ ಬಿದ್ದ ಪರಿಣಾಮದಿಂದ ಅವರು ಸಾವನ್ನಪ್ಪಿದ್ದಾರೆ.

Shocking News: ಇಟ್ಟಿಗೆ ಎಸೆದು ಮನುಷ್ಯನ ಪ್ರಾಣ ತೆಗೆದ ಕೋತಿ!; ದೆಹಲಿಯಲ್ಲೊಂದು ಶಾಕಿಂಗ್ ಘಟನೆ
ಸಾಂಕೇತಿಕ ಚಿತ್ರ
TV9 Web
| Updated By: ಸುಷ್ಮಾ ಚಕ್ರೆ|

Updated on:Oct 21, 2021 | 3:12 PM

Share

ಯಾರ ಸಾವು ಯಾವ ರೀತಿಯಲ್ಲಿ ಬರುತ್ತದೋ ಊಹಿಸಲು ಕೂಡ ಅಸಾಧ್ಯ. ಎಲ್ಲವೂ ಸರಿಯಿದೆ ಎಂದುಕೊಳ್ಳುವಾಗಲೇ ನಮ್ಮ ಊಹೆಗೆ ಮೀರಿದ ಘಟನೆಗಳು ನಡೆದು ಹೋಗುತ್ತವೆ. ಮನುಷ್ಯನಿಂದ ದಿನವೂ ಅದೆಷ್ಟೋ ಪಾಪದ ಕಾರ್ಯಗಳು ಆಗುತ್ತಲೇ ಇರುತ್ತವೆ. ಕೊಲೆ, ಸುಲಿಗೆ, ಅಪಘಾತ, ಅತ್ಯಾಚಾರ ಈ ರೀತಿಯ ಘಟನೆಗಳೆಲ್ಲ ಸಾಮಾನ್ಯ ಎಂದಾಗಿಬಿಟ್ಟಿದೆ. ಮನುಷ್ಯನಿಂದ ಪ್ರಾಣಿಗಳ ಪ್ರಾಣಕ್ಕೆ ಸಂಚಕಾರ ಆಗುತ್ತಲೇ ಇರುತ್ತದೆ. ಆದರೆ, ಕೋತಿಯೊಂದು ಮನುಷ್ಯನನ್ನು ಕೊಂದಿರುವ ವಿಚಿತ್ರ ಮತ್ತು ಅಪರೂಪದ ಘಟನೆ ದೆಹಲಿಯಲ್ಲಿ ನಡೆದಿದೆ.

ಕಟ್ಟಡವನ್ನು ಏರಿ ಕುಳಿತಿದ್ದ ಕೋತಿಯೊಂದು ಎರಡನೇ ಮಹಡಿಯಿಂದ ಇಟ್ಟಿಗೆಯನ್ನು ಎಸೆದ ಕಾರಣ ಕೆಳಗೆ ನಿಂತಿದ್ದ ವ್ಯಕ್ತಿ ಸಾವನ್ನಪ್ಪಿದ್ದಾರೆ. ದೆಹಲಿಯ ನಬಿ ಕರೀಮ್ ಪ್ರದೇಶದಲ್ಲಿ 30 ವರ್ಷದ ಮೊಹಮ್ಮದ್ ಕುರ್ಬಾನ್ ಎಂಬುವವರ ತಲೆ ಮೇಲೆ ಕೋತಿ ಎಸೆದ ಇಟ್ಟಿಗೆ ಬಿದ್ದ ಪರಿಣಾಮದಿಂದ ಅವರು ಸಾವನ್ನಪ್ಪಿದ್ದಾರೆ.

ಈ ಪ್ರದೇಶದಲ್ಲಿ ಬ್ಯಾಗ್​ಗಳನ್ನು ವ್ಯಾಪಾರ ಮಾಡುತ್ತಿದ್ದ ಕುರ್ಬಾನ್ ಅವರ ಸಾವು ಮಂಗನಿಂದಲೇ ಆಗಬೇಕೆಂದು ವಿಧಿ ನಿರ್ಧರಿಸಿತ್ತು ಎನಿಸುತ್ತದೆ. ಹೀಗಾಗಿ, ಕೋತಿಯ ಕೈಯಿಂದ ಜಾರಿದ ಇಟ್ಟಿಗೆ ಸೀದಾ ಕುರ್ಬಾನ್ ಅವರ ತಲೆಗೆ ಅವರು ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ವೈದ್ಯರು ಅವರು ಮೃತಪಟ್ಟಿರುವುದಾಗಿ ಘೋಷಿಸಿದರು.

ಕಟ್ಟಡದ ಮಾಲೀಕರು ಕೋತಿಗಳನ್ನು ಕಟ್ಟಡದ ಮೇಲಿದ್ದ ನೀರಿನ ಟ್ಯಾಂಕ್​ ಅನ್ನು ಕೋತಿಗಳು ಓಪನ್ ಮಾಡಬಾರದು ಎಂದು ಅದರ ಮೇಲೆ ಇಟ್ಟಿಗೆಗಳನ್ನು ಹೇರಿದ್ದರು. ಆ ಇಟ್ಟಿಗೆಯನ್ನು ತೆಗೆದು ಟ್ಯಾಂಕ್ ಮೇಲೆ ಹತ್ತಲು ನೋಡಿದ ಕೋತಿಯ ಕೈಯಿಂದ ಇಟ್ಟಿಗೆ ಜಾರಿ ಕೆಳಗೆ ಬಿದ್ದಿದೆ. ದುರಾದೃಷ್ಟವಶಾತ್ ಆ ಇಟ್ಟಿಗೆ ಕಟ್ಟಡದ ಕೆಳ ಭಾಗದಲ್ಲಿ ನಿಂತಿದ್ದ ಕುರ್ಬಾನ್ ಅವರ ತಲೆ ಮೇಲೆ ಬಿದ್ದು ಸಾವನ್ನಪ್ಪಿದ್ದಾರೆ. ಕೋತಿಗಳ ಗುಂಪು ನೀರಿನ ಟ್ಯಾಂಕ್ ಮೇಲಿಂದ ಎರಡು ಇಟ್ಟಿಗೆಗಳನ್ನು ತೆಗೆದಿದ್ದು, ಒಂದನ್ನು ಟೆರೇಸ್ ಮೇಲೆ ಎಸೆದಿವೆ. ಇನ್ನೊಂದು ಇಟ್ಟಿಗೆ ಕುರ್ಬಾನ್‌ ತಲೆಗೆ ಬಡಿದಿದೆ.

ಇದನ್ನೂ ಓದಿ: Crime News: ಹೋಂ ವರ್ಕ್ ಮಾಡದ 7ನೇ ಕ್ಲಾಸ್​ ವಿದ್ಯಾರ್ಥಿಯನ್ನು ಥಳಿಸಿ ಕೊಂದ ಶಿಕ್ಷಕ!

Murder: ಹಾಡಹಗಲೇ ಮಹಿಳೆಯ ಬರ್ಬರ ಹತ್ಯೆ; ಬೆಳ್ಳಿ ಗೆಜ್ಜೆಗಾಗಿ ಕಾಲನ್ನೇ ಕತ್ತರಿಸಿದ ಹಂತಕರು

Published On - 3:11 pm, Thu, 21 October 21

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ