Shocking News: ಅಜ್ಜಿ ಪಕ್ಕ ಮಲಗಿದ್ದ ಮಗುವನ್ನು ಎತ್ತಿಕೊಂಡು ನೀರಿನ ಟ್ಯಾಂಕ್​ನಲ್ಲಿ ಹಾಕಿದ ಕೋತಿಗಳು!

Viral News: 2 ತಿಂಗಳ ಮಗು ಮನೆಯ ಟೆರೇಸ್‌ನಲ್ಲಿರುವ ಕೋಣೆಯಲ್ಲಿ ತನ್ನ ಅಜ್ಜಿಯ ಪಕ್ಕದಲ್ಲಿ ಮಲಗಿತ್ತು. ಆಗ ರೂಮಿನೊಳಗೆ ನುಗ್ಗಿದ ಕೋತಿಗಳು ಹಸುಗೂಸನ್ನು ಎತ್ತಿಕೊಂಡು ಟೆರೇಸ್​ನಲ್ಲಿದ್ದ ನೀರಿನ ಟ್ಯಾಂಕ್​ನೊಳಗೆ ಎಸೆದಿರುವ ಘಟನೆ ನಡೆದಿದೆ.

Shocking News: ಅಜ್ಜಿ ಪಕ್ಕ ಮಲಗಿದ್ದ ಮಗುವನ್ನು ಎತ್ತಿಕೊಂಡು ನೀರಿನ ಟ್ಯಾಂಕ್​ನಲ್ಲಿ ಹಾಕಿದ ಕೋತಿಗಳು!
ಕೋತಿ
Follow us
| Edited By: Sushma Chakre

Updated on: Jan 10, 2022 | 7:07 PM

ನವದೆಹಲಿ: ಯಾರಾದರೂ ತೀರಾ ತಲೆಹರಟೆ, ಕಿತಾಪತಿ ಮಾಡುತ್ತಿದ್ದರೆ ಕಪಿ ಚೇಷ್ಟೆ ಮಾಡುತ್ತೀಯಲ್ಲ ಎಂದು ಗದರುವುದುಂಟು. ಮಂಗಗಳು ಒಂದೇ ಕಡೆ ನಿಂತಲ್ಲಿ ನಿಲ್ಲುವುದಿಲ್ಲ. ಸದಾ ಏನಾದರೂ ಕಿತಾಪತಿಗಳನ್ನು ಮಾಡುತ್ತಲೇ ಇರುತ್ತವೆ. ಉತ್ತರ ಪ್ರದೇಶದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಬಾಗ್‌ಪತ್‌ನಲ್ಲಿ ಕೋತಿಗಳ ಗುಂಪೊಂದು 2 ತಿಂಗಳ ಮಗುವನ್ನು ಎತ್ತಿಕೊಂಡು ಹೋಗಿ ನೀರಿನ ಟ್ಯಾಂಕ್​ನಲ್ಲಿ ಹಾಕಿವೆ. ಆ ಮಗುವಿನ ಮನೆಯ ಟೆರೇಸ್‌ನಲ್ಲಿದ್ದ ರೂಮಿನಲ್ಲಿ ಅಜ್ಜಿಯ ಜೊತೆ ಮಲಗಿದ್ದ ಮಗುವನ್ನು ಎತ್ತಿಕೊಂಡು ಹೋಗಿ ನೀರಿನ ಟ್ಯಾಂಕ್‌ಗೆ ಎಸೆದಿವೆ!

ಹೌದು, ಈ ಆಘಾತಕಾರಿ ಘಟನೆ ಭಾನುವಾರ ಬಾಗ್​ಪತ್​ನಲ್ಲಿ ನಡೆದಿದ್ದು, ನೀರಿನಲ್ಲಿ ಮುಳುಗಿ ಮಗು ಸಾವನ್ನಪ್ಪಿದೆ. 2 ತಿಂಗಳ ಮಗು ಮನೆಯ ಟೆರೇಸ್‌ನಲ್ಲಿರುವ ಕೋಣೆಯಲ್ಲಿ ತನ್ನ ಅಜ್ಜಿಯ ಪಕ್ಕದಲ್ಲಿ ಮಲಗಿತ್ತು. ಗಾಳಿ ಬರಲೆಂದು ಅಜ್ಜಿ ಬಾಗಿಲು ತೆರೆದು, ಮೊಮ್ಮಗುವಿನೊಂದಿಗೆ ರೂಮಿನಲ್ಲಿ ಮಲಗಿದ್ದರು. ಆಗ ರೂಮಿನೊಳಗೆ ಬಂದ ಕೋತಿಗಳು ಹಸುಗೂಸನ್ನು ಎತ್ತಿಕೊಂಡು ಟೆರೇಸ್​ನ ಹೊರಭಾಗದಲ್ಲಿದ್ದ ನೀರಿನ ಟ್ಯಾಂಕ್​ನೊಳಗೆ ಹಾಕಿರುವ ಘಟನೆ ನಡೆದಿದೆ.

ಕೋತಿಗಳು ಕೋಣೆಗೆ ನುಗ್ಗಿ ಮಗುವನ್ನು ಎಳೆದುಕೊಂಡು ಹೋದವು. ನಿದ್ರೆಗೆ ಜಾರಿದ್ದ ಅಜ್ಜಿ ನಿದ್ರೆಯಿಂದ ಎದ್ದಾಗ ಮೊಮ್ಮಗು ಕಾಣೆಯಾಗಿರುವುದನ್ನು ಕಂಡು ಅಜ್ಜಿ ಜೋರಾಗಿ ಕೂಗಿದರು. ಮೇಲೆ ಓಡಿ ಬಂದ ಮನೆಯವರು ಆ ಮಗು ಕಾಣದಿರುವುದನ್ನು ನೋಡಿ ಆತಂಕದಿಂದ ಸುತ್ತಲೂ ಹುಡುಕಾಡತೊಡಗಿದರು. 2 ತಿಂಗಳ ಮಗುವಾಗಿದ್ದರಿಂದ ಬೇರೆಲ್ಲೂ ಓಡಿಹೋಗಲು ಸಾಧ್ಯವಿಲ್ಲ ಎಂಬುದಂತೂ ಖಚಿತವಾಗಿತ್ತು. ಎಲ್ಲ ಕಡೆ ಹುಡುಕಾಡಿದ ನಂತರ ಟೆರೇಸ್​ನ ನೀರಿನ ತೊಟ್ಟಿಯಲ್ಲಿ ಮಗು ತೇಲುತ್ತಿರುವುದು ಪತ್ತೆಯಾಗಿದೆ.

ಆ ಏರಿಯಾದಲ್ಲಿ ಮಂಗಗಳ ಹಾವಳಿ ಹೆಚ್ಚಾಗಿದ್ದು, ಇದಕ್ಕೂ ಮೊದಲು ಕೂಡ ಸಾಕಷ್ಟು ಬಾರಿ ಕೋತಿಗಳು ಮನೆಯೊಳಗೆ ನುಗ್ಗಿ ದಾಂಧಲೆ ಮಾಡಿದ್ದವು. ಮನೆಯೊಳಗಿನ ವಸ್ತುಗಳನ್ನು ಹೊರಗೆ ತೆಗೆದುಕೊಂಡು ಹೋಗಿ ಬಿಸಾಡುತ್ತಿದ್ದವು. ಹಾಗೇ, ಹಿಂದೊಮ್ಮೆ ಮಗುವನ್ನು ತೆಗೆದುಕೊಂಡು ಹೋಗಲು ಕೂಡ ಪ್ರಯತ್ನಿಸಿದ್ದವು. ಆಗ ಎಚ್ಚೆತ್ತ ಪೋಷಕರು ಮಗುವನ್ನು ಕಾಪಾಡಿಕೊಂಡಿದ್ದರು. ಆದರೆ, ಈ ಬಾರಿ ಅಜ್ಜಿ ನಿದ್ರೆ ಮಾಡುತ್ತಿದ್ದಾಗ ಕೋತಿಗಳು ಮಗುವನ್ನು ಎತ್ತಿಕೊಂಡು ಹೋಗಿವೆ.

ಇದನ್ನೂ ಓದಿ: Shocking News: ವಿಮಾನದ ಶೌಚಾಲಯದಲ್ಲಿ ಮಗುವಿಗೆ ಜನ್ಮ ನೀಡಿ, ಕಸದ ಬುಟ್ಟಿಯಲ್ಲಿ ಬಿಸಾಡಿದ ಮಹಿಳೆ!

Shocking News: ಧಾರಾವಾಹಿ ತಂದ ಅವಾಂತರ; ಮಹಿಳೆಯರು ಟಿವಿ ನೋಡುತ್ತಿದ್ದಾಗ ಹಣ, ಒಡವೆ ದೋಚಿದ ಕಳ್ಳರು!

ತಾಜಾ ಸುದ್ದಿ
ಲೀಲಾವತಿ ಅಂತಿಮ ದರ್ಶನಕ್ಕೆ ಹೇಗಿದೆ ವ್ಯವಸ್ಥೆ:ಜಿಲ್ಲಾಧಿಕಾರಿ ನೀಡಿದ ಮಾಹಿತಿ
ಲೀಲಾವತಿ ಅಂತಿಮ ದರ್ಶನಕ್ಕೆ ಹೇಗಿದೆ ವ್ಯವಸ್ಥೆ:ಜಿಲ್ಲಾಧಿಕಾರಿ ನೀಡಿದ ಮಾಹಿತಿ
ಕಣ್ಣೀರು ಹಾಕುತ್ತಲೇ ಲೀಲಮ್ಮನ ಪೋಟೋಗೆ ವಿನೋದ್ ಪೂಜೆ; ಇಲ್ಲಿದೆ ಭಾವುಕ ಕ್ಷಣ
ಕಣ್ಣೀರು ಹಾಕುತ್ತಲೇ ಲೀಲಮ್ಮನ ಪೋಟೋಗೆ ವಿನೋದ್ ಪೂಜೆ; ಇಲ್ಲಿದೆ ಭಾವುಕ ಕ್ಷಣ
‘ವಿನೋದ್​ಗೆ ಅದೇ ಹೇಳ್ತೀನಿ..’: ಲೀಲಾವತಿ ನಿಧನಕ್ಕೆ ಶಿವಣ್ಣ ಪ್ರತಿಕ್ರಿಯೆ
‘ವಿನೋದ್​ಗೆ ಅದೇ ಹೇಳ್ತೀನಿ..’: ಲೀಲಾವತಿ ನಿಧನಕ್ಕೆ ಶಿವಣ್ಣ ಪ್ರತಿಕ್ರಿಯೆ
ಅಮ್ಮ ನನ್ನನ್ನು ಒಂಟಿಯಾಗಿಸಿ ಹೋಗಿಬಿಟ್ಟಳು! ವಿನೋದ್ ರಾಜ್ ಆಕ್ರಂದನ
ಅಮ್ಮ ನನ್ನನ್ನು ಒಂಟಿಯಾಗಿಸಿ ಹೋಗಿಬಿಟ್ಟಳು! ವಿನೋದ್ ರಾಜ್ ಆಕ್ರಂದನ
ಸರ್ವವಸ್ವವೇ ಆಗಿದ್ದ ತಾಯಿ ಅಗಲಿಕೆ: ವಿನೋದ್ ರಾಜ್ ದುಃಖತಪ್ತ ಮಾತುಗಳು
ಸರ್ವವಸ್ವವೇ ಆಗಿದ್ದ ತಾಯಿ ಅಗಲಿಕೆ: ವಿನೋದ್ ರಾಜ್ ದುಃಖತಪ್ತ ಮಾತುಗಳು
ಪ್ರತಿಭಟನೆಗೆ ಅಡ್ಡಿಪಡಿಸುವ ಪೊಲೀಸರು ನಮಗೆ ಅನ್ನ ನೀಡುತ್ತಾರೆಯೇ? ಶಾಲಾ ಬಾಲಕ
ಪ್ರತಿಭಟನೆಗೆ ಅಡ್ಡಿಪಡಿಸುವ ಪೊಲೀಸರು ನಮಗೆ ಅನ್ನ ನೀಡುತ್ತಾರೆಯೇ? ಶಾಲಾ ಬಾಲಕ
ತಾಳಿ ಕಟ್ಟಿಸಿಕೊಳ್ಳಲು ಒಲ್ಲೆನೆಂದ ಯುವತಿಗೆ ರೂ. 4.70 ಲಕ್ಷ ವಧುದಕ್ಷಿಣೆ?
ತಾಳಿ ಕಟ್ಟಿಸಿಕೊಳ್ಳಲು ಒಲ್ಲೆನೆಂದ ಯುವತಿಗೆ ರೂ. 4.70 ಲಕ್ಷ ವಧುದಕ್ಷಿಣೆ?
ಬೆಂಗಳೂರಲ್ಲಿ ಅನಾಮತ್ತಾಗಿ ಉರುಳಿದ ಸೆಲ್ ಪೋನ್ ಟವರ್, ಪ್ರಾಣಹಾನಿ ಇಲ್ಲ
ಬೆಂಗಳೂರಲ್ಲಿ ಅನಾಮತ್ತಾಗಿ ಉರುಳಿದ ಸೆಲ್ ಪೋನ್ ಟವರ್, ಪ್ರಾಣಹಾನಿ ಇಲ್ಲ
ಸಿದ್ದರಾಮಯ್ಯ ಸಿಎಂ ಆದರೆ ಬರ ಯಡಿಯೂರಪ್ಪ ಆದರೆ ಅತಿವೃಷ್ಟಿ: ಜ್ಞಾನೇಂದ್ರ
ಸಿದ್ದರಾಮಯ್ಯ ಸಿಎಂ ಆದರೆ ಬರ ಯಡಿಯೂರಪ್ಪ ಆದರೆ ಅತಿವೃಷ್ಟಿ: ಜ್ಞಾನೇಂದ್ರ
ಉಡುಪಿ ಕಾರ್ಟೂನ್ ಹಬ್ಬಕ್ಕೆ ವಿಭಿನ್ನವಾಗಿ ಶುಭ ಕೋರಿದ ಮರಳು ಶಿಲ್ಪ ಕಲಾವಿದ
ಉಡುಪಿ ಕಾರ್ಟೂನ್ ಹಬ್ಬಕ್ಕೆ ವಿಭಿನ್ನವಾಗಿ ಶುಭ ಕೋರಿದ ಮರಳು ಶಿಲ್ಪ ಕಲಾವಿದ