AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking News: ವಿಮಾನದೊಳಗೆ ಬೆತ್ತಲೆಯಾಗಿ ಓಡಿದ ಪ್ರಯಾಣಿಕ; ಆಮೇಲೇನಾಯ್ತು?

ಆಕಾಶದಲ್ಲಿ ಹಾರುತ್ತಿದ್ದ ವಿಮಾನದಲ್ಲಿ ಪ್ರಯಾಣಿಕರೊಬ್ಬರು ನಗ್ನವಾಗಿ ಓಡಾಡಿದ ಆಘಾತಕಾರಿ ಘಟನೆ ನಡೆದಿದೆ. ಇದರಿಂದಾಗಿ ವಿಮಾನದಲ್ಲಿದ್ದ ಪ್ರಯಾಣಿಕರು ಮುಜುಗರಪಡುವಂತಾಯಿತು. ವಿಮಾನದಲ್ಲಿದ್ದ ಗಗನಸಖಿಯರು ಕೂಡ ಕೆಲಕಾಲ ಆಘಾತಕ್ಕೀಡಾದರು. ಈ ಘಟನೆ ನಡೆದಿದ್ದು ಎಲ್ಲಿ? ಆತ ಹಾಗೆ ಬಟ್ಟೆ ಬಿಚ್ಚಿ ಓಡಾಡಿದ್ದು ಏಕೆ? ಎಂಬ ಕುರಿತು ಮಾಹಿತಿ ಇಲ್ಲಿದೆ.

Shocking News: ವಿಮಾನದೊಳಗೆ ಬೆತ್ತಲೆಯಾಗಿ ಓಡಿದ ಪ್ರಯಾಣಿಕ; ಆಮೇಲೇನಾಯ್ತು?
ವಿಮಾನ
ಸುಷ್ಮಾ ಚಕ್ರೆ
|

Updated on: May 29, 2024 | 8:14 AM

Share

ಮೆಲ್ಬೋರ್ನ್: ಪಶ್ಚಿಮ ಕರಾವಳಿಯ ಪರ್ತ್‌ನಿಂದ ಪೂರ್ವ ಕರಾವಳಿಯ ಮೆಲ್ಬೋರ್ನ್‌ಗೆ ಸೋಮವಾರ ಸಂಜೆ ಸಂಚರಿಸುತ್ತಿದ್ದ ಆಸ್ಟ್ರೇಲಿಯಾ ಮೂಲದ ವರ್ಜಿನ್ ಆಸ್ಟ್ರೇಲಿಯಾ ವಿಮಾನದಲ್ಲಿ (Virgin Australia Airplane) ಪ್ರಯಾಣಿಕರೊಬ್ಬರು ಬೆತ್ತಲೆಯಾಗಿ ಓಡಾಡಿರುವ ವಿಚಿತ್ರ ಘಟನೆ (Shocking News) ನಡೆದಿದೆ. ಈ ಘಟನೆಯಿಂದಾಗಿ ವಿಮಾನದ ಹಾರಾಟ 30 ನಿಮಿಷಗಳಷ್ಟು ವಿಳಂಬವಾಯಿತು.

ಆಸ್ಟ್ರೇಲಿಯಾದಿಂದ ಬಂದ ದೇಶೀಯ ವಿಮಾನದಲ್ಲಿ ನಗ್ನವಾಗಿ ಓಡಿದ ಪ್ರಯಾಣಿಕ ಗಗನಸಖಿಯನ್ನು ಕೆಳಗಿಳಿಸಿ ವಿಮಾನವನ್ನು ಅನಿಯಂತ್ರಿತ ಲ್ಯಾಂಡಿಂಗ್ ಮಾಡಲು ಒತ್ತಾಯಿಸಿದ್ದರಿಂದ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ನಂತರ ಪೊಲೀಸರು ಈ ಘಟನೆಗೆ ಸಂಬಂಧಿಸಿದಂತೆ ಇಂದು ಒಬ್ಬ ವ್ಯಕ್ತಿಯನ್ನು ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ.

ಇದನ್ನೂ ಓದಿ: Viral Video: ಟ್ರಾಫಿಕ್​ನಲ್ಲೇ ರಸ್ತೆಯ ಡಿವೈಡರ್ ಮೇಲೆ ಬೈಕ್ ಓಡಿಸಿದ ಯುವಕ; ಭಯಾನಕ ವಿಡಿಯೋ ವೈರಲ್

ಪ್ರಯಾಣಿಕರೊಬ್ಬರ ವಿಚಿತ್ರ ವರ್ತನೆಯಿಂದ ವಿಮಾನವು ಪರ್ತ್ ಏರ್‌ಪೋರ್ಟ್‌ಗೆ ಹಿಂತಿರುಗುವಂತಾಯಿತು ಎಂದು ಏರ್‌ಲೈನ್ ಹೇಳಿಕೆ ತಿಳಿಸಿದೆ.

ಆಸ್ಟ್ರೇಲಿಯನ್ ಫೆಡರಲ್ ಪೋಲೀಸ್‌ನ ಅಧಿಕಾರಿಗಳು ವಿಮಾನಕ್ಕಾಗಿ ಕಾಯುತ್ತಿದ್ದರು. ಈ ಘಟನೆಗೆ ಸಂಬಂಧಿಸಿದಂತೆ ಒಬ್ಬ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತ ತಾನು ಪ್ರಯಾಣಿಸುತ್ತಿದ್ದ ವಿಮಾನದಲ್ಲಿ ಬೆತ್ತಲೆಯಾಗಿ ಓಡಿದ್ದು ಮಾತ್ರವಲ್ಲದೆ ವಿಮಾನದ ಸಿಬ್ಬಂದಿಯನ್ನು ನೆಲಕ್ಕೆ ಕೆಡವಿದ್ದನು. ವಿಮಾನವನ್ನು ಮಧ್ಯದಲ್ಲಿಯೇ ಹಿಂತಿರುಗಿಸುವಂತೆ ಒತ್ತಾಯಿಸಿದ್ದನು ಎಂದು ತಿಳಿಸಿದ್ದಾರೆ.

ಪೊಲೀಸ್ ಹೇಳಿಕೆಯ ಪ್ರಕಾರ, “ಆ ವ್ಯಕ್ತಿಯನ್ನು ಆಸ್ಪತ್ರೆಗೆ ವರ್ಗಾಯಿಸಲಾಯಿತು. ಆ ಪ್ರಯಾಣಿಕ ವಿಮಾನದಲ್ಲಿ ಹೇಗೆ ಮತ್ತು ಎಲ್ಲಿ ವಿವಸ್ತ್ರಗೊಂಡರು ಎಂಬುದು ಯಾರಿಗೂ ತಿಳಿದಿಲ್ಲ. ಜೂನ್ 14ರಂದು ಪರ್ತ್ ನ್ಯಾಯಾಲಯಕ್ಕೆ ಹಾಜರಾಗುವಂತೆ ಆ ವ್ಯಕ್ತಿಗೆ ಸಮನ್ಸ್ ನೀಡಲು ಪೊಲೀಸರು ಯೋಜಿಸಿದ್ದಾರೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ