AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking News: ವಿಮಾನದೊಳಗೆ ಬೆತ್ತಲೆಯಾಗಿ ಓಡಿದ ಪ್ರಯಾಣಿಕ; ಆಮೇಲೇನಾಯ್ತು?

ಆಕಾಶದಲ್ಲಿ ಹಾರುತ್ತಿದ್ದ ವಿಮಾನದಲ್ಲಿ ಪ್ರಯಾಣಿಕರೊಬ್ಬರು ನಗ್ನವಾಗಿ ಓಡಾಡಿದ ಆಘಾತಕಾರಿ ಘಟನೆ ನಡೆದಿದೆ. ಇದರಿಂದಾಗಿ ವಿಮಾನದಲ್ಲಿದ್ದ ಪ್ರಯಾಣಿಕರು ಮುಜುಗರಪಡುವಂತಾಯಿತು. ವಿಮಾನದಲ್ಲಿದ್ದ ಗಗನಸಖಿಯರು ಕೂಡ ಕೆಲಕಾಲ ಆಘಾತಕ್ಕೀಡಾದರು. ಈ ಘಟನೆ ನಡೆದಿದ್ದು ಎಲ್ಲಿ? ಆತ ಹಾಗೆ ಬಟ್ಟೆ ಬಿಚ್ಚಿ ಓಡಾಡಿದ್ದು ಏಕೆ? ಎಂಬ ಕುರಿತು ಮಾಹಿತಿ ಇಲ್ಲಿದೆ.

Shocking News: ವಿಮಾನದೊಳಗೆ ಬೆತ್ತಲೆಯಾಗಿ ಓಡಿದ ಪ್ರಯಾಣಿಕ; ಆಮೇಲೇನಾಯ್ತು?
ವಿಮಾನ
ಸುಷ್ಮಾ ಚಕ್ರೆ
|

Updated on: May 29, 2024 | 8:14 AM

Share

ಮೆಲ್ಬೋರ್ನ್: ಪಶ್ಚಿಮ ಕರಾವಳಿಯ ಪರ್ತ್‌ನಿಂದ ಪೂರ್ವ ಕರಾವಳಿಯ ಮೆಲ್ಬೋರ್ನ್‌ಗೆ ಸೋಮವಾರ ಸಂಜೆ ಸಂಚರಿಸುತ್ತಿದ್ದ ಆಸ್ಟ್ರೇಲಿಯಾ ಮೂಲದ ವರ್ಜಿನ್ ಆಸ್ಟ್ರೇಲಿಯಾ ವಿಮಾನದಲ್ಲಿ (Virgin Australia Airplane) ಪ್ರಯಾಣಿಕರೊಬ್ಬರು ಬೆತ್ತಲೆಯಾಗಿ ಓಡಾಡಿರುವ ವಿಚಿತ್ರ ಘಟನೆ (Shocking News) ನಡೆದಿದೆ. ಈ ಘಟನೆಯಿಂದಾಗಿ ವಿಮಾನದ ಹಾರಾಟ 30 ನಿಮಿಷಗಳಷ್ಟು ವಿಳಂಬವಾಯಿತು.

ಆಸ್ಟ್ರೇಲಿಯಾದಿಂದ ಬಂದ ದೇಶೀಯ ವಿಮಾನದಲ್ಲಿ ನಗ್ನವಾಗಿ ಓಡಿದ ಪ್ರಯಾಣಿಕ ಗಗನಸಖಿಯನ್ನು ಕೆಳಗಿಳಿಸಿ ವಿಮಾನವನ್ನು ಅನಿಯಂತ್ರಿತ ಲ್ಯಾಂಡಿಂಗ್ ಮಾಡಲು ಒತ್ತಾಯಿಸಿದ್ದರಿಂದ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ನಂತರ ಪೊಲೀಸರು ಈ ಘಟನೆಗೆ ಸಂಬಂಧಿಸಿದಂತೆ ಇಂದು ಒಬ್ಬ ವ್ಯಕ್ತಿಯನ್ನು ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ.

ಇದನ್ನೂ ಓದಿ: Viral Video: ಟ್ರಾಫಿಕ್​ನಲ್ಲೇ ರಸ್ತೆಯ ಡಿವೈಡರ್ ಮೇಲೆ ಬೈಕ್ ಓಡಿಸಿದ ಯುವಕ; ಭಯಾನಕ ವಿಡಿಯೋ ವೈರಲ್

ಪ್ರಯಾಣಿಕರೊಬ್ಬರ ವಿಚಿತ್ರ ವರ್ತನೆಯಿಂದ ವಿಮಾನವು ಪರ್ತ್ ಏರ್‌ಪೋರ್ಟ್‌ಗೆ ಹಿಂತಿರುಗುವಂತಾಯಿತು ಎಂದು ಏರ್‌ಲೈನ್ ಹೇಳಿಕೆ ತಿಳಿಸಿದೆ.

ಆಸ್ಟ್ರೇಲಿಯನ್ ಫೆಡರಲ್ ಪೋಲೀಸ್‌ನ ಅಧಿಕಾರಿಗಳು ವಿಮಾನಕ್ಕಾಗಿ ಕಾಯುತ್ತಿದ್ದರು. ಈ ಘಟನೆಗೆ ಸಂಬಂಧಿಸಿದಂತೆ ಒಬ್ಬ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತ ತಾನು ಪ್ರಯಾಣಿಸುತ್ತಿದ್ದ ವಿಮಾನದಲ್ಲಿ ಬೆತ್ತಲೆಯಾಗಿ ಓಡಿದ್ದು ಮಾತ್ರವಲ್ಲದೆ ವಿಮಾನದ ಸಿಬ್ಬಂದಿಯನ್ನು ನೆಲಕ್ಕೆ ಕೆಡವಿದ್ದನು. ವಿಮಾನವನ್ನು ಮಧ್ಯದಲ್ಲಿಯೇ ಹಿಂತಿರುಗಿಸುವಂತೆ ಒತ್ತಾಯಿಸಿದ್ದನು ಎಂದು ತಿಳಿಸಿದ್ದಾರೆ.

ಪೊಲೀಸ್ ಹೇಳಿಕೆಯ ಪ್ರಕಾರ, “ಆ ವ್ಯಕ್ತಿಯನ್ನು ಆಸ್ಪತ್ರೆಗೆ ವರ್ಗಾಯಿಸಲಾಯಿತು. ಆ ಪ್ರಯಾಣಿಕ ವಿಮಾನದಲ್ಲಿ ಹೇಗೆ ಮತ್ತು ಎಲ್ಲಿ ವಿವಸ್ತ್ರಗೊಂಡರು ಎಂಬುದು ಯಾರಿಗೂ ತಿಳಿದಿಲ್ಲ. ಜೂನ್ 14ರಂದು ಪರ್ತ್ ನ್ಯಾಯಾಲಯಕ್ಕೆ ಹಾಜರಾಗುವಂತೆ ಆ ವ್ಯಕ್ತಿಗೆ ಸಮನ್ಸ್ ನೀಡಲು ಪೊಲೀಸರು ಯೋಜಿಸಿದ್ದಾರೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಉತ್ತರ ಪ್ರದೇಶದಲ್ಲಿ ತರಬೇತಿ ವಿಮಾನ ಪತನ; ಮಹಿಳಾ ಪೈಲಟ್‌ಗೆ ಗಂಭೀರ ಗಾಯ
ಉತ್ತರ ಪ್ರದೇಶದಲ್ಲಿ ತರಬೇತಿ ವಿಮಾನ ಪತನ; ಮಹಿಳಾ ಪೈಲಟ್‌ಗೆ ಗಂಭೀರ ಗಾಯ
ಬೆಂಗಳೂರಿಗರ ಬಗ್ಗೆ ಸಚಿವ ಕೃಷ್ಣಭೈರೇಗೌಡರ ಅಂತರಾಳದ ನುಡಿಗಳು
ಬೆಂಗಳೂರಿಗರ ಬಗ್ಗೆ ಸಚಿವ ಕೃಷ್ಣಭೈರೇಗೌಡರ ಅಂತರಾಳದ ನುಡಿಗಳು
ವಿಜಯೇಂದ್ರನನ್ನು ಕಿತ್ತಾಕಿ: ಆಡಿಯೋ ವೈರಲ್ ಬಗ್ಗೆ ಸದಾನಂದಗೌಡ ಹೇಳಿದ್ದಿಷ್ಟು
ವಿಜಯೇಂದ್ರನನ್ನು ಕಿತ್ತಾಕಿ: ಆಡಿಯೋ ವೈರಲ್ ಬಗ್ಗೆ ಸದಾನಂದಗೌಡ ಹೇಳಿದ್ದಿಷ್ಟು
"ವಿಜಯೇಂದ್ರನನ್ನು ಕಿತ್ತು ಬಿಸಾಕಿ": ಬಿಜೆಪಿಯಲ್ಲಿ ಅಲ್ಲೋಲ ಕಲ್ಲೋಲ
ನಾಳೆಯಿಂದ SIR, ಮನೆಗೆ ಬರ್ತಾರೆ ಅಧಿಕಾರಿಗಳು: ನೀವೇನು ಮಾಡಬೇಕಾದ್ದೇನು ನೋಡಿ
ನಾಳೆಯಿಂದ SIR, ಮನೆಗೆ ಬರ್ತಾರೆ ಅಧಿಕಾರಿಗಳು: ನೀವೇನು ಮಾಡಬೇಕಾದ್ದೇನು ನೋಡಿ
ಮಂಗಳೂರಿನಲ್ಲಿ ಕೇರಳದ ಚಿನ್ನದ ವ್ಯಾಪಾರಿಯ ಸಿನೀಮಿಯ ದರೋಡೆ
ಮಂಗಳೂರಿನಲ್ಲಿ ಕೇರಳದ ಚಿನ್ನದ ವ್ಯಾಪಾರಿಯ ಸಿನೀಮಿಯ ದರೋಡೆ
ನಿವೃತ್ತ ಶಿಕ್ಷಕನಿಗೆ ಹೊಸ ಬೈಕ್ ಉಡುಗೊರೆ ನೀಡಿದ ಹಳೆಯ ವಿದ್ಯಾರ್ಥಿಗಳು!
ನಿವೃತ್ತ ಶಿಕ್ಷಕನಿಗೆ ಹೊಸ ಬೈಕ್ ಉಡುಗೊರೆ ನೀಡಿದ ಹಳೆಯ ವಿದ್ಯಾರ್ಥಿಗಳು!
ಲಗೇಜ್ ಬ್ಯಾಗ್‌ನಲ್ಲಿತ್ತು 21 ಕೋಟಿ ರೂ. ಮೌಲ್ಯದ ಡ್ರಗ್ಸ್!
ಲಗೇಜ್ ಬ್ಯಾಗ್‌ನಲ್ಲಿತ್ತು 21 ಕೋಟಿ ರೂ. ಮೌಲ್ಯದ ಡ್ರಗ್ಸ್!
ಸಿದ್ದು ಸೈಡ್​ಲೈನ್ ಆದ್ರಾ ಎಂದಿದ್ದಕ್ಕೆ ಸತೀಶ್ ಜಾರಕಿಹೊಳಿ ಮಾರ್ಮಿಕ ಮಾತು!
ಸಿದ್ದು ಸೈಡ್​ಲೈನ್ ಆದ್ರಾ ಎಂದಿದ್ದಕ್ಕೆ ಸತೀಶ್ ಜಾರಕಿಹೊಳಿ ಮಾರ್ಮಿಕ ಮಾತು!
ಉದ್ಯಮಿಯಿಂದ 1.05 ಕೋಟಿ ರೂ. ದರೋಡೆ ಕೇಸಲ್ಲಿ ಐವರ ಬಂಧನ
ಉದ್ಯಮಿಯಿಂದ 1.05 ಕೋಟಿ ರೂ. ದರೋಡೆ ಕೇಸಲ್ಲಿ ಐವರ ಬಂಧನ