AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking News: ವಿಮಾನದೊಳಗೆ ಬೆತ್ತಲೆಯಾಗಿ ಓಡಿದ ಪ್ರಯಾಣಿಕ; ಆಮೇಲೇನಾಯ್ತು?

ಆಕಾಶದಲ್ಲಿ ಹಾರುತ್ತಿದ್ದ ವಿಮಾನದಲ್ಲಿ ಪ್ರಯಾಣಿಕರೊಬ್ಬರು ನಗ್ನವಾಗಿ ಓಡಾಡಿದ ಆಘಾತಕಾರಿ ಘಟನೆ ನಡೆದಿದೆ. ಇದರಿಂದಾಗಿ ವಿಮಾನದಲ್ಲಿದ್ದ ಪ್ರಯಾಣಿಕರು ಮುಜುಗರಪಡುವಂತಾಯಿತು. ವಿಮಾನದಲ್ಲಿದ್ದ ಗಗನಸಖಿಯರು ಕೂಡ ಕೆಲಕಾಲ ಆಘಾತಕ್ಕೀಡಾದರು. ಈ ಘಟನೆ ನಡೆದಿದ್ದು ಎಲ್ಲಿ? ಆತ ಹಾಗೆ ಬಟ್ಟೆ ಬಿಚ್ಚಿ ಓಡಾಡಿದ್ದು ಏಕೆ? ಎಂಬ ಕುರಿತು ಮಾಹಿತಿ ಇಲ್ಲಿದೆ.

Shocking News: ವಿಮಾನದೊಳಗೆ ಬೆತ್ತಲೆಯಾಗಿ ಓಡಿದ ಪ್ರಯಾಣಿಕ; ಆಮೇಲೇನಾಯ್ತು?
ವಿಮಾನ
ಸುಷ್ಮಾ ಚಕ್ರೆ
|

Updated on: May 29, 2024 | 8:14 AM

Share

ಮೆಲ್ಬೋರ್ನ್: ಪಶ್ಚಿಮ ಕರಾವಳಿಯ ಪರ್ತ್‌ನಿಂದ ಪೂರ್ವ ಕರಾವಳಿಯ ಮೆಲ್ಬೋರ್ನ್‌ಗೆ ಸೋಮವಾರ ಸಂಜೆ ಸಂಚರಿಸುತ್ತಿದ್ದ ಆಸ್ಟ್ರೇಲಿಯಾ ಮೂಲದ ವರ್ಜಿನ್ ಆಸ್ಟ್ರೇಲಿಯಾ ವಿಮಾನದಲ್ಲಿ (Virgin Australia Airplane) ಪ್ರಯಾಣಿಕರೊಬ್ಬರು ಬೆತ್ತಲೆಯಾಗಿ ಓಡಾಡಿರುವ ವಿಚಿತ್ರ ಘಟನೆ (Shocking News) ನಡೆದಿದೆ. ಈ ಘಟನೆಯಿಂದಾಗಿ ವಿಮಾನದ ಹಾರಾಟ 30 ನಿಮಿಷಗಳಷ್ಟು ವಿಳಂಬವಾಯಿತು.

ಆಸ್ಟ್ರೇಲಿಯಾದಿಂದ ಬಂದ ದೇಶೀಯ ವಿಮಾನದಲ್ಲಿ ನಗ್ನವಾಗಿ ಓಡಿದ ಪ್ರಯಾಣಿಕ ಗಗನಸಖಿಯನ್ನು ಕೆಳಗಿಳಿಸಿ ವಿಮಾನವನ್ನು ಅನಿಯಂತ್ರಿತ ಲ್ಯಾಂಡಿಂಗ್ ಮಾಡಲು ಒತ್ತಾಯಿಸಿದ್ದರಿಂದ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ನಂತರ ಪೊಲೀಸರು ಈ ಘಟನೆಗೆ ಸಂಬಂಧಿಸಿದಂತೆ ಇಂದು ಒಬ್ಬ ವ್ಯಕ್ತಿಯನ್ನು ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ.

ಇದನ್ನೂ ಓದಿ: Viral Video: ಟ್ರಾಫಿಕ್​ನಲ್ಲೇ ರಸ್ತೆಯ ಡಿವೈಡರ್ ಮೇಲೆ ಬೈಕ್ ಓಡಿಸಿದ ಯುವಕ; ಭಯಾನಕ ವಿಡಿಯೋ ವೈರಲ್

ಪ್ರಯಾಣಿಕರೊಬ್ಬರ ವಿಚಿತ್ರ ವರ್ತನೆಯಿಂದ ವಿಮಾನವು ಪರ್ತ್ ಏರ್‌ಪೋರ್ಟ್‌ಗೆ ಹಿಂತಿರುಗುವಂತಾಯಿತು ಎಂದು ಏರ್‌ಲೈನ್ ಹೇಳಿಕೆ ತಿಳಿಸಿದೆ.

ಆಸ್ಟ್ರೇಲಿಯನ್ ಫೆಡರಲ್ ಪೋಲೀಸ್‌ನ ಅಧಿಕಾರಿಗಳು ವಿಮಾನಕ್ಕಾಗಿ ಕಾಯುತ್ತಿದ್ದರು. ಈ ಘಟನೆಗೆ ಸಂಬಂಧಿಸಿದಂತೆ ಒಬ್ಬ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತ ತಾನು ಪ್ರಯಾಣಿಸುತ್ತಿದ್ದ ವಿಮಾನದಲ್ಲಿ ಬೆತ್ತಲೆಯಾಗಿ ಓಡಿದ್ದು ಮಾತ್ರವಲ್ಲದೆ ವಿಮಾನದ ಸಿಬ್ಬಂದಿಯನ್ನು ನೆಲಕ್ಕೆ ಕೆಡವಿದ್ದನು. ವಿಮಾನವನ್ನು ಮಧ್ಯದಲ್ಲಿಯೇ ಹಿಂತಿರುಗಿಸುವಂತೆ ಒತ್ತಾಯಿಸಿದ್ದನು ಎಂದು ತಿಳಿಸಿದ್ದಾರೆ.

ಪೊಲೀಸ್ ಹೇಳಿಕೆಯ ಪ್ರಕಾರ, “ಆ ವ್ಯಕ್ತಿಯನ್ನು ಆಸ್ಪತ್ರೆಗೆ ವರ್ಗಾಯಿಸಲಾಯಿತು. ಆ ಪ್ರಯಾಣಿಕ ವಿಮಾನದಲ್ಲಿ ಹೇಗೆ ಮತ್ತು ಎಲ್ಲಿ ವಿವಸ್ತ್ರಗೊಂಡರು ಎಂಬುದು ಯಾರಿಗೂ ತಿಳಿದಿಲ್ಲ. ಜೂನ್ 14ರಂದು ಪರ್ತ್ ನ್ಯಾಯಾಲಯಕ್ಕೆ ಹಾಜರಾಗುವಂತೆ ಆ ವ್ಯಕ್ತಿಗೆ ಸಮನ್ಸ್ ನೀಡಲು ಪೊಲೀಸರು ಯೋಜಿಸಿದ್ದಾರೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ