AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking News: ಕಪಿಚೇಷ್ಟೆಯಿಂದ ಕಂಗಾಲು; ಎಮರ್ಜೆನ್ಸಿ ಕಾಲ್ ಬಂತೆಂದು ಝೂಗೆ ಓಡೋಡಿ ಬಂದ ಪೊಲೀಸರಿಗೆ ಶಾಕ್!

ಅಮೆರಿಕಾದ ಸ್ಯಾನ್ ಲೂಯಿಸ್ ಒಬಿಸ್ಪೊ ಕೌಂಟಿ ಶೆರಿಫ್ ಕಚೇರಿಗೆ ಕಳೆದ ಶನಿವಾರ ರಾತ್ರಿ ತುರ್ತು ಕರೆ ಬಂದಿತ್ತು. ಆ ಫೋನ್ ಕರೆಯನ್ನು ಸ್ವೀಕರಿಸುವಷ್ಟರಲ್ಲಿ ಕರೆಯ ಸಂಪರ್ಕ ಕಡಿತಗೊಂಡಿತ್ತು.

Shocking News: ಕಪಿಚೇಷ್ಟೆಯಿಂದ ಕಂಗಾಲು; ಎಮರ್ಜೆನ್ಸಿ ಕಾಲ್ ಬಂತೆಂದು ಝೂಗೆ ಓಡೋಡಿ ಬಂದ ಪೊಲೀಸರಿಗೆ ಶಾಕ್!
ಕೋತಿImage Credit source: Live Mint
TV9 Web
| Edited By: |

Updated on:Aug 18, 2022 | 6:18 PM

Share

ಕ್ಯಾಲಿಫೋರ್ನಿಯಾ: ಮಂಗನಿಂದಲೇ ಮಾನವ ಎಂಬುದು ಈಗಾಗಲೇ ಸಾಬೀತಾಗಿರುವ ವಿಚಾರ. ಕೋತಿಗಳು ಸಾಮಾನ್ಯವಾಗಿ ಮನುಷ್ಯರ ವರ್ತನೆಯನ್ನು ಅನುಕರಿಸುತ್ತವೆ. ಕೋತಿಗಳು ಎಲ್ಲವನ್ನೂ ವೇಗವಾಗಿ ಕಲಿಯುತ್ತವೆ ಮತ್ತು ಮನುಷ್ಯರನ್ನು ಗಮನಿಸುವುದರ ಮೂಲಕ ಅನೇಕ ವಿಷಯಗಳ ಬಗ್ಗೆ ತಿಳಿದುಕೊಳ್ಳುತ್ತವೆ. ಕೋತಿ ಆಕಸ್ಮಿಕವಾಗಿ 911 ನಂಬರ್​ಗೆ ಕರೆ ಮಾಡಿತ್ತು. ಆಗ ಪೊಲೀಸರು ಝೂನಿಂದ ಎಮರ್ಜೆನ್ಸಿ ನಂಬರ್​ಗೆ ಫೋನ್ ಬಂದಿದೆ ಎಂದು ಝೂನತ್ತ ಓಡಿಬಂದರು. ಆಗ ಇದೆಲ್ಲ ಕೋತಿಯ ತರಲೆ ಕೆಲಸ ಎಂಬುದು ತಿಳಿದು ಪೊಲೀಸರು ಶಾಕ್ ಆಗಿದ್ದಾರೆ.

ಅಮೆರಿಕಾದ ಸ್ಯಾನ್ ಲೂಯಿಸ್ ಒಬಿಸ್ಪೊ ಕೌಂಟಿ ಶೆರಿಫ್ ಕಚೇರಿಗೆ ಕಳೆದ ಶನಿವಾರ ರಾತ್ರಿ ತುರ್ತು ಕರೆ ಬಂದಿತ್ತು. ಆ ಫೋನ್ ಕರೆಯನ್ನು ಸ್ವೀಕರಿಸುವಷ್ಟರಲ್ಲಿ ಕರೆಯ ಸಂಪರ್ಕ ಕಡಿತಗೊಂಡಿತ್ತು. ಪೊಲೀಸರು ಮತ್ತೆ ಕರೆ ಮಾಡಲು ಮತ್ತು ಸಂದೇಶ ಕಳುಹಿಸಲು ಪ್ರಯತ್ನಿಸಿದರೂ ಆ ಕಡೆಯಿಂದ ಯಾವುದೇ ಪ್ರತಿಕ್ರಿಯೆ ಬರಲಿಲ್ಲ. ಹೀಗಾಗಿ, ಆ ಸ್ಥಳಕ್ಕೆ ಪೊಲೀಸ್ ತಂಡವನ್ನು ಕಳುಹಿಸಲಾಗಿತ್ತು.

ಇದನ್ನೂ ಓದಿ: Viral Video: ಸ್ವಾತಂತ್ರ್ಯೋತ್ಸವದ ವೇಳೆ ನಾಗಿಣಿ ಡ್ಯಾನ್ಸ್​ ಮಾಡಿದ ಪೊಲೀಸರ ವಿಡಿಯೋ ವೈರಲ್; ಆಮೇಲೇನಾಯ್ತು?

ವಿಳಾಸವು ಪಾಸೊ ರೋಬಲ್ಸ್ ಝೂ ಬಳಿ ತೋರಿಸಿತು. ಆದರೆ ಅಲ್ಲಿ ಯಾರೂ ಕರೆ ಮಾಡಲಿಲ್ಲ ಎಂದು ಅಲ್ಲಿನ ಸಿಬ್ಬಂದಿ ಹೇಳಿದರು. ಆಗ ಅಲ್ಲಿನ ಸಿಬ್ಬಂದಿ ರೂಟ್ ಎಂಬ ಹೆಸರಿನ ಕ್ಯಾಪುಚಿನ್ ಕೋತಿಯು ಗಾಲ್ಫ್ ಕಾರ್ಟ್‌ನಲ್ಲಿದ್ದ ಮೃಗಾಲಯದ ಸೆಲ್‌ಫೋನ್ ಹಿಡಿದುಕೊಂಡಿತ್ತು ಎಂಬ ವಿಷಯವನ್ನು ಹೇಳಿದರು. ಹೀಗಾಗಿ, ಆ ತುಂಟ ಕೋತಿಯೇ ಈ ಕೆಲಸ ಮಾಡಿದ್ದೆಂಬುದು ಪೊಲೀಸರಿಗೆ ಖಾತರಿಯಾಯಿತು.

ಕ್ಯಾಪುಚಿನ್ ಕೋತಿಗಳು ಬಹಳ ಚುರುಕಾಗಿರುತ್ತವೆ. ಅವು ಏನನ್ನಾದರೂ ಪಡೆದುಕೊಳ್ಳಲು ಸಿದ್ಧವಿರುತ್ತವೆ. ಆ ಕೋತಿ ತಾನೇ ಫೋನ್ ನಂಬರ್ ಡಯಲ್ ಮಾಡಲು ಪ್ರಾರಂಭಿಸಿತ್ತು ಎಂಬುದು ತನಿಖೆ ವೇಳೆ ಗೊತ್ತಾಗಿದೆ. ಇದುವರೆಗೂ ಆ ಕೋತಿ ಈ ರೀತಿಯ ಸಾಕಷ್ಟು ತರಲೆಗಳನ್ನು ಮಾಡಿದೆ ಎಂದು ಮೃಗಾಲಯದ ಸಿಬ್ಬಂದಿ ಹೇಳಿದ್ದಾರೆ.

ಇನ್ನಷ್ಟು ಟ್ರೆಂಡಿಂಗ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:17 pm, Thu, 18 August 22

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ