AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking News: ಮಹಿಳೆಯ ಕಿವಿಯೊಳಗೆ ರಾತ್ರಿಯಿಡೀ ವಾಸವಿದ್ದ ಜೇಡರ ಹುಳು; ಅಪರೂಪದ ಕೇಸ್​ ಕಂಡು ವೈದ್ಯರಿಗೇ ಶಾಕ್!

ಕಿವಿಯೊಳಗೆ ಅಡಚಣೆಯಾಗುತ್ತಿದೆ ಎಂದು ಆಸ್ಪತ್ರೆಯಲ್ಲಿ ದಾಖಲಾದ ಮಹಿಳೆಯ ಸ್ಕ್ಯಾನಿಂಗ್ ರಿಪೋರ್ಟ್ ನೋಡಿ ವೈದ್ಯರೇ ಆಶ್ಚರ್ಯಗೊಂಡಿದ್ದಾರೆ. ಕಳೆದ ಒಂದು ದಿನದಿಂದಲೂ ಜೇಡರ ಹುಳು ಕಿವಿಯೊಳಗೆ ವಾಸವಾಗಿತ್ತು ಎಂಬ ವಿಷಯ ಕೇಳಿ ವೈದ್ಯರೇ ಶಾಕ್​ ಆಗಿದ್ದರು.

Shocking News: ಮಹಿಳೆಯ ಕಿವಿಯೊಳಗೆ ರಾತ್ರಿಯಿಡೀ ವಾಸವಿದ್ದ ಜೇಡರ ಹುಳು; ಅಪರೂಪದ ಕೇಸ್​ ಕಂಡು ವೈದ್ಯರಿಗೇ ಶಾಕ್!
ಮಹಿಳೆಯ ಕಿವಿಯೊಳಗೆ ರಾತ್ರಿಯಿಡೀ ವಾಸವಿದ್ದ ಜೇಡರ ಹುಳು
TV9 Web
| Edited By: |

Updated on: Oct 24, 2021 | 8:39 AM

Share

ಕಿವಿಯೊಳಗೆ ಏನಾದರೂ ಸಿಕ್ಕಿಕೊಂಡರೆ ಕಿರಿಕಿರಿ ಅನಿಸುವುದು ನಿಜ. ಅತ್ಯಂತ ಸೂಕ್ಷ್ಮ ಕಿವಿಯನ್ನು ಜೋಪಾನವಾಗಿ ನೋಡಿಕೊಳ್ಳುವುದು ಅಷ್ಟೇ ಮುಖ್ಯ. ಕಿವಿ ನೋವು, ಸೆಳೆತ ತಡೆಯಲಾರದಷ್ಟು ಸಂಕಟವನ್ನುಂಟು ಮಾಡುತ್ತದೆ. ಕಿವಿಯೊಳಗೆ ಅಡಚಣೆಯಾಗುತ್ತಿದೆ ಎಂದು ಆಸ್ಪತ್ರೆಯಲ್ಲಿ ದಾಖಲಾದ ಮಹಿಳೆಯ ಸ್ಕ್ಯಾನಿಂಗ್ ರಿಪೋರ್ಟ್ ನೋಡಿ ವೈದ್ಯರೇ ಆಶ್ಚರ್ಯಗೊಂಡಿದ್ದಾರೆ. ಮಹಿಳೆಯನ್ನು ಪರೀಕ್ಷಿಸಿದ ವೈದ್ಯರಿಗೆ, ಮಹಿಳೆಯ ಕಿವಿಯೊಳಗೆ ಜೇಡರ ಹುಳು ಇರುವುದು ಪತ್ತೆಯಾಗಿದೆ. ಕಳೆದ ಒಂದು ದಿನದಿಂದಲೂ ಜೇಡರ ಹುಳು ಕಿವಿಯೊಳಗೆ ವಾಸವಾಗಿತ್ತು ಎಂಬ ವಿಷಯ ವೈದ್ಯರಿಗೇ ಬೆರಗಾಗುವಂತೆ ಮಾಡಿದೆ.

ಚೀನಾದ ಮಹಿಳೆ ಹೆಸರು ಯೀ. ಇವರಿಗೆ ಕಿವಿಯೊಳಗೆ ಏನೋ ಅಡಗಿರುವಂತೆ ಅನಿಸುತ್ತಿತ್ತು. ಇತರರು ಮಾತನಾಡುವಾಗ ಕೇಳಿಸಿಕೊಳ್ಳಲು ಅಡಚಣೆಯಾಗುತ್ತಿತ್ತು. ಕಳೆದ ಒಂದು ದಿನದಿಂದ ಈ ಥರಹದ ಸಮಸ್ಯೆ ಕಾಡುತ್ತಿತ್ತು. ಬಳಿಕ ಅವರು ಆಸ್ಪತ್ರೆಗೆ ಪರೀಕ್ಷೆಗೆಂದು ಹೋಗಿದ್ದಾರೆ. ಅಲ್ಲಿ ವಿಷಯ ಬಯಲಾಗಿದೆ. ಕಿವಿಯೊಳಕ್ಕೆ ಜೇಡರ ಹುಳು ಒಂದು ದಿನದ ಹಿಂದಿನಿಂದ ವಾಸವಿತ್ತು ಎಂಬ ವಿಷಯ ಮಹಿಳೆಗೆ ಆಘಾತವನ್ನುಂಟು ಮಾಡಿದೆ ಎಂಬುದು ವರದಿಗಳಿಂದ ತಿಳಿದು ಬಂದಿದೆ.

ಚಿಕ್ಕದಾದ ವೈದ್ಯಕೀಯ ಕ್ಯಾಮರಾ ಬಳಸಿ ವೈದ್ಯರು ಮಹಿಳೆಯ ಕಿವಿಯನ್ನು ಪರೀಕ್ಷಿಸಿದ್ದಾರೆ. ಆ ವೇಳೆ ಜೇಡರ ಹುಳು ಕಿವಿಯೊಳಗೆ ಇರುವುದು ಪತ್ತೆಯಾಗಿದೆ. ಕಿವಿಯೊಳಕ್ಕೆ ಕ್ಯಾಮರಾ ಹೋಗುತ್ತಿದ್ದಂತೆಯೇ ಹತ್ತಿರಕ್ಕೆ ಬಂದಿದೆ. ಆ ಬಳಿಕ ವೈದ್ಯರು ಜೇಡರ ಹುಳುವನ್ನು ಹೊರ ತೆಗೆದಿದ್ದಾರೆ. ಜೇಡರ ಹುಳು ತುಂಬಾ ದೊಡ್ಡದಾಗಿತ್ತು ಜತೆಗೆ ಒಂದು ದಿನ ರಾತ್ರಿ ಪೂರ್ತಿ ಮಹಿಳೆಯ ಕಿವಿಯೊಳಗೆ ವಾಸವಿತ್ತು ಎಂದು ವೈದ್ಯರು ತಿಳಿಸಿದ್ದಾರೆ. ಎಲೆಕ್ಟ್ರಿಕ್ ಒಟೊಸ್ಕೋಪ್ ಬಳಸಿ ವೈದ್ಯರು ಹುಳುವನ್ನು ಹೊರತೆಗೆದಿದ್ದಾರೆ.

ಇದನ್ನೂ ಓದಿ:

Viral News: ಗಾಂಜಾ ಎಣ್ಣೆ ಶ್ವಾಸಕೋಶದ ಕ್ಯಾನ್ಸರ್ ಗುಣಪಡಿಸಲು ಸಹಾಯಕವೇ? ಇಲ್ಲಿದೆ ಇಂಟರೆಸ್ಟಿಂಗ್ ಸ್ಟೋರಿ

Shocking News: ಮೊಬೈಲ್ ನುಂಗಿದ ಮಹರಾಯ; 6 ತಿಂಗಳ ಬಳಿಕ ಆಪರೇಷನ್ ಮೂಲಕ ಹೊರತೆಗೆದ ವೈದ್ಯರು

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ