AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking News: ಆಸ್ಪತ್ರೆಯಲ್ಲಿ ಅತ್ತಿದ್ದಕ್ಕೆ 3,100 ರೂ. ಶುಲ್ಕ ವಿಧಿಸಿದ ವೈದ್ಯರು; ಬಿಲ್ ನೋಡಿ ಮಹಿಳೆ ಶಾಕ್

ಅಮೆರಿಕಾದ ವೈದ್ಯರ ಅಪಾಯಿಂಟ್‌ಮೆಂಟ್‌ನಲ್ಲಿ "ಅತ್ತಿದ್ದಕ್ಕಾಗಿ" ತನ್ನ ಸಹೋದರಿಗೆ ಸುಮಾರು 3,100 ರೂ. ವಿಧಿಸಲಾಗಿದೆ ಎಂದು ಅಮೆರಿಕಾದ ಮಹಿಳೆಯೊಬ್ಬರು ಇತ್ತೀಚೆಗೆ ಬಿಲ್​ನ ಫೋಟೋವೊಂದನ್ನು ಹಂಚಿಕೊಂಡಿದ್ದಾರೆ.

Shocking News: ಆಸ್ಪತ್ರೆಯಲ್ಲಿ ಅತ್ತಿದ್ದಕ್ಕೆ 3,100 ರೂ. ಶುಲ್ಕ ವಿಧಿಸಿದ ವೈದ್ಯರು; ಬಿಲ್ ನೋಡಿ ಮಹಿಳೆ ಶಾಕ್
ಬಿಲ್​Image Credit source: NDTV
TV9 Web
| Edited By: |

Updated on: May 19, 2022 | 6:40 PM

Share

ಒಮ್ಮೆ ಆಸ್ಪತ್ರೆಯ ಮೆಟ್ಟಿಲು ಹತ್ತಬೇಕೆಂದು ನಾಲ್ಕೈದು ಬಾರಿ ಪರ್ಸ್​ ಚೆಕ್ ಮಾಡಿಕೊಳ್ಳಬೇಕಾದ ಪರಿಸ್ಥಿತಿ ಈಗ ಬಂದಿದೆ. ಆಸ್ಪತ್ರೆಗಳಲ್ಲಿ ಸಣ್ಣ ಪುಟ್ಟ ಟೆಸ್ಟ್​ಗೂ ಸಾವಿರಾರು ರೂ. ಬಿಲ್ ಮಾಡುವವರಿದ್ದಾರೆ. ಇಲ್ಲೊಬ್ಬರು ಅಮೆರಿಕದ ವೈದ್ಯರು ತನ್ನ ರೋಗಿ ತನ್ನ ಬಳಿ ಬಂದಾಗ ಅತ್ತಿದ್ದಕ್ಕೂ ಬಿಲ್ (Hospital Bill) ಮಾಡಿದ್ದಾರೆ. ರೋಗಿ ಅತ್ತಿದ್ದಾಳೆ ಎಂಬ ಕಾರಣಕ್ಕೆ ಸುಮಾರು 3,100 ರೂ. ಬಿಲ್ ಮಾಡಿದ್ದಾರೆ. ಈ ಬಿಲ್​ನ ರಶೀದಿ ಇದೀಗ ಭಾರೀ ವೈರಲ್ ಆಗಿದೆ.

ಅಮೆರಿಕಾದ ವೈದ್ಯರ ಅಪಾಯಿಂಟ್‌ಮೆಂಟ್‌ನಲ್ಲಿ “ಅತ್ತಿದ್ದಕ್ಕಾಗಿ” ತನ್ನ ಸಹೋದರಿಗೆ ಸುಮಾರು 3,100 ರೂ. ವಿಧಿಸಲಾಗಿದೆ ಎಂದು ಅಮೆರಿಕಾದ ಮಹಿಳೆಯೊಬ್ಬರು ಇತ್ತೀಚೆಗೆ ಬಿಲ್​ನ ಫೋಟೋವೊಂದನ್ನು ಹಂಚಿಕೊಂಡಿದ್ದಾರೆ. ನನ್ನ ಸಹೋದರಿಗೆ “ಅಪರೂಪದ ಕಾಯಿಲೆ” ಇತ್ತು. ಆಕೆಯನ್ನು ನಾವು ವೈದ್ಯರ ಬಳಿ ಕರೆದುಕೊಂಡು ಹೋಗಿದ್ದೆವು. ಅಲ್ಲಿ ಆಕೆ ಭಾವುಕಳಾಗಿ ಕಣ್ಣೀರು ಹಾಕಿದಳು. ವೈದ್ಯರು ನೀಡಿರುವ ಬಿಲ್​ನಲ್ಲಿ ಬ್ರೀಫ್ ಎಮೋಷನ್/ ಬಿಹೇವಿಯರಲ್ ಅಸೆಸ್​ಮೆಂಟ್ ಎಂದು ನಮೂದಿಸಿ ಅದಕ್ಕೂ ಚಾರ್ಜ್ ಮಾಡಲಾಗಿದೆ.

ಬಿಲ್​ನಲ್ಲಿ ವೈದ್ಯರ ಭೇಟಿಯ ವಿವಿಧ ವೆಚ್ಚವು ಹೀಗಿದೆ. ದೃಷ್ಟಿ ಮೌಲ್ಯಮಾಪನ ಪರೀಕ್ಷೆ- 20 ಡಾಲರ್, ಹಿಮೋಗ್ಲೋಬಿನ್ ಪರೀಕ್ಷೆ- 15 ಡಾಲರ್, ಕ್ಯಾಪಿಲ್ಲರಿ ರಕ್ತ ಡ್ರಾ – 30 ಡಾಲರ್, ಆರೋಗ್ಯ ತಪಾಸಣೆ- 350 ಡಾಲರ್ ಮತ್ತು ಬ್ರೀಫ್ ಎಮೋಷನಲ್/ ಬಿಹೇವಿಯರಲ್ ಅಸೆಸ್​ಮೆಂಟ್​- 40 ಡಾಲರ್ ಶುಲ್ಕ ವಿಧಿಸಲಾಗಿದೆ.

ಇದನ್ನೂ ಓದಿ: Shocking News: ಮದುವೆ ಮಂಟಪದಲ್ಲೇ ವಧುವಿಗೆ ಶೂಟ್ ಮಾಡಿ ಕೊಂದ ಮಾಜಿ ಪ್ರಿಯಕರ!

ಈ ಬಿಲ್​ನ ಫೋಟೋಗೆ ಟ್ವಿಟ್ಟರ್​​ನಲ್ಲಿ 4,94,000ಕ್ಕೂ ಹೆಚ್ಚು ಲೈಕ್​ಗಳು ಮತ್ತು ಸಾವಿರಾರು ಕಾಮೆಂಟ್‌ಗಳು ಬಂದಿವೆ. ಇಂಟರ್ನೆಟ್ ಬಳಕೆದಾರರು ಅಧಿಕ ಶುಲ್ಕದ ವೈದ್ಯಕೀಯ ಬಿಲ್‌ಗಳೊಂದಿಗೆ ತಮ್ಮ ಸ್ವಂತ ಅನುಭವಗಳನ್ನು ಹಂಚಿಕೊಂಡಿದ್ದಾರೆ.

ಇನ್ನಷ್ಟು ಟ್ರೆಂಡಿಂಗ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ